Homeಮುಖಪುಟಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ, ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದ ರಾಜಧಾನಿಯ ಗಡಿಗಳಲ್ಲಿ ರೈತರು ನಿರಂತರವಾಗಿ ಹೋರಾಡುತ್ತಿದ್ದಾರೆ. ಈ ನಡುವೆ ರಾಯಚೂರಿನಲ್ಲಿ ರಿಲಾಯನ್ಸ್ ಗ್ರೂಪ್ ಭತ್ತಕ್ಕೆ ಬೆಂಬಲ ಬೆಲೆಗಿಂತಲೂ ಹೆಚ್ಚಿನ ಬೆಲೆ ನೀಡಿ ಕೊಂಡುಕೊಂಡಿದೆ ಎಂಬ ಸುಳ್ಳು ಸುದ್ದಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು “ಬೆಂಬಲ ಬೆಲೆ”ಗಳ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದ ಬರಹ ನಾನುಗೌರಿ.ಕಾಮ್ ಓದುಗರಿಗಾಗಿ…

ಅಂಬಾನಿ ಬಳಗ ಕರ್ನಾಟಕದಲ್ಲಿ ಒಂದು ಜಿಲ್ಲೆಯಲ್ಲಿ (ರಾಯಚೂರಿನ ಸಿಂಧನೂರಿನಲ್ಲಿ) ಕನಿಷ್ಠ ಬೆಂಬಲ ಬೆಲೆ (MSP)ಗಿಂತ ಕಿಂಚಿತ್ ಹೆಚ್ಚು (ಕ್ವಿಂಟಾಲಿಗೆ ನೂರು ರೂ. ಹೆಚ್ಚು) ಕೊಟ್ಟು ಭತ್ತ ಖರೀದಿಸಿರುವುದು, ಹೊಸ ಕೃಷಿ ಕಾನೂನುಗಳು ರೈತರ ಪರವಾಗಿರುವುದರ ದ್ಯೋತಕ ಎಂದು ಭಜನೆ ಶುರುವಾಗಿದೆ. ಈ ಮೂರ್ಖತನವನ್ನು ಅರ್ಥಮಾಡಿಕೊಳ್ಳುವುದು ಅಗತ್ಯ.

ಇದನ್ನೂ ಓದಿ: ಹಾಗಾದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಮೊದಲಿಗೆ, ಕನಿಷ್ಠ ಬೆಂಬಲ ಬೆಲೆ (MSP) ನಿರ್ಧಾರ ಹೇಗಾಗುತ್ತದೆ ತಿಳಿದುಕೊಳ್ಳಿ. ಅದನ್ನು ನಿರ್ಧರಿಸುವುದು ಕಮಿಷನ್‌ ಫಾರ್‌ ಅಗ್ರಿಕಲ್ಚರ್‌ ಕೋಸ್ಟ್‌ ಆಂಡ್ ಪ್ರೈಸ್ (CACP).

ಸ್ವಾಮಿನಾಥನ್ ಸಮಿತಿ ವರದಿಯ ಪ್ರಕಾರ ಒಂದು ಕೃಷಿ ಉತ್ಪಾದನೆಯ ವೆಚ್ಚ ನಿರ್ಧಾರಕ್ಕೆ ಮೂರು ಅಂಶಗಳಿವೆ:

  • A2► ಸಾಲ, ಗೊಬ್ಬರ,ಇಂಧನ, ಯಂತ್ರ, ನೀರಾವರಿ, ಭೂಮಿಯ ಲೀಸ್ ವೆಚ್ಚ… ಇತ್ಯಾದಿ ಕೈಯಿಂದಾದ ವೆಚ್ಚಗಳು.
  • A2+FL► ಕೈಯಿಂದಾದ ವೆಚ್ಚಗಳ ಜೊತೆ ರೈತನ ಮನೆಯವರು, ಕುಟುಂಬಿಕರು ನೀಡಿದ ಉಚಿತ ಶ್ರಮದ ಮೌಲ್ಯ.
  • C2► ಇದು ವಾಸ್ತವ ಉತ್ಪಾದನಾ ವೆಚ್ಚದ ಸಮಗ್ರ ಲೆಕ್ಕಾಚಾರ ( ವೆಚ್ಚಗಳ ಜೊತೆ ಬಾಡಿಗೆ, ಬಡ್ಡಿ, ಯಂತ್ರಗಳ ಸವಕಳಿ ಎಲ್ಲ ಸೇರಿ)

ಸ್ವಾಮಿನಾಥನ್ ಕಮಿಟಿ ಹೇಳಿದ್ದು► MSP = C2+ 50%of C2

ಆದರೆ, 2018-19 ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಉತ್ಪಾದನಾ ವೆಚ್ಚದ 1.5 ಪಾಲು MSP ಕೊಡುತ್ತೇವೆ ಎಂದು ಹೇಳಿತ್ತು. ಆದರೆ ಈ ಉತ್ಪಾದನಾ ವೆಚ್ಚದ ಲೆಕ್ಕಾಚಾರ ಹೇಗೆಂದು ಸ್ಪಷ್ಟಪಡಿಸಿರಲಿಲ್ಲ.

ಆದರೆ CACP ತಾನು ಅದನ್ನು ಲೆಕ್ಕ ಹಾಕಿದ್ದು ಹೀಗೆ ಎಂದು ಹೇಳಿಕೊಂಡಿದೆ ► 1.5 X A2+FL

ಅಂದರೆ, ಸರ್ಕಾರ C2 ಪರಿಗಣನೆಗೆ ತೆಗೆದುಕೊಂಡಿಲ್ಲ. ಅರ್ಥಾತ್, ಉತ್ಪಾದನೆಯ ಎಲ್ಲ ವೆಚ್ಚಗಳು ಇನ್ನೂ MSP ಯಲ್ಲಿ ಒಳಗೊಂಡಿಲ್ಲ.

ಇದನ್ನೂ ಓದಿ: ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ವಾಸ್ತವದಲ್ಲಿ ರೈತನ ಖರ್ಚುಗಳು ಎಷ್ಟಿರುತ್ತವೆ ಎಂದರೆ ಸರ್ಕಾರಿ ಲೆಕ್ಕಾಚಾರದ C2 ಗಿಂತ ಎರಡು ಮೂರು ಪಟ್ಟು ಹೆಚ್ಚಿರುತ್ತದೆ. ಹೆಚ್ಚಿನ ಅಧ್ಯಯನಗಳು ಇದನ್ನು ಬೊಟ್ಟು ಮಾಡುತ್ತವೆ. ಇದು ಹೇಗೆಂದರೆ ನಿಮ್ಮೂರಿನಲ್ಲಿ ಸರ್ಕಾರಿ ಕೃಷಿ ಮಜೂರಿ ದರ ಎಷ್ಟು- ಖಾಸಗಿ ಕೃಷಿ ಮಜೂರಿ ಎಷ್ಟು ಎಂದು ಲೆಕ್ಕ ಹಾಕಿಕೊಳ್ಳಿ. ಆ ವ್ಯತ್ಯಾಸ ಈ MSPಯಲ್ಲೂ ತೋರಬೇಕಲ್ಲವೆ?

ಹಾಗಿರುವಾಗ, ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ ಕಾಣೆ. ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ.

ಇದನ್ನೂ ಓದಿ: ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...