Homeಮುಖಪುಟಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ, ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದ ರಾಜಧಾನಿಯ ಗಡಿಗಳಲ್ಲಿ ರೈತರು ನಿರಂತರವಾಗಿ ಹೋರಾಡುತ್ತಿದ್ದಾರೆ. ಈ ನಡುವೆ ರಾಯಚೂರಿನಲ್ಲಿ ರಿಲಾಯನ್ಸ್ ಗ್ರೂಪ್ ಭತ್ತಕ್ಕೆ ಬೆಂಬಲ ಬೆಲೆಗಿಂತಲೂ ಹೆಚ್ಚಿನ ಬೆಲೆ ನೀಡಿ ಕೊಂಡುಕೊಂಡಿದೆ ಎಂಬ ಸುಳ್ಳು ಸುದ್ದಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು “ಬೆಂಬಲ ಬೆಲೆ”ಗಳ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದ ಬರಹ ನಾನುಗೌರಿ.ಕಾಮ್ ಓದುಗರಿಗಾಗಿ…

ಅಂಬಾನಿ ಬಳಗ ಕರ್ನಾಟಕದಲ್ಲಿ ಒಂದು ಜಿಲ್ಲೆಯಲ್ಲಿ (ರಾಯಚೂರಿನ ಸಿಂಧನೂರಿನಲ್ಲಿ) ಕನಿಷ್ಠ ಬೆಂಬಲ ಬೆಲೆ (MSP)ಗಿಂತ ಕಿಂಚಿತ್ ಹೆಚ್ಚು (ಕ್ವಿಂಟಾಲಿಗೆ ನೂರು ರೂ. ಹೆಚ್ಚು) ಕೊಟ್ಟು ಭತ್ತ ಖರೀದಿಸಿರುವುದು, ಹೊಸ ಕೃಷಿ ಕಾನೂನುಗಳು ರೈತರ ಪರವಾಗಿರುವುದರ ದ್ಯೋತಕ ಎಂದು ಭಜನೆ ಶುರುವಾಗಿದೆ. ಈ ಮೂರ್ಖತನವನ್ನು ಅರ್ಥಮಾಡಿಕೊಳ್ಳುವುದು ಅಗತ್ಯ.

ಇದನ್ನೂ ಓದಿ: ಹಾಗಾದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಮೊದಲಿಗೆ, ಕನಿಷ್ಠ ಬೆಂಬಲ ಬೆಲೆ (MSP) ನಿರ್ಧಾರ ಹೇಗಾಗುತ್ತದೆ ತಿಳಿದುಕೊಳ್ಳಿ. ಅದನ್ನು ನಿರ್ಧರಿಸುವುದು ಕಮಿಷನ್‌ ಫಾರ್‌ ಅಗ್ರಿಕಲ್ಚರ್‌ ಕೋಸ್ಟ್‌ ಆಂಡ್ ಪ್ರೈಸ್ (CACP).

ಸ್ವಾಮಿನಾಥನ್ ಸಮಿತಿ ವರದಿಯ ಪ್ರಕಾರ ಒಂದು ಕೃಷಿ ಉತ್ಪಾದನೆಯ ವೆಚ್ಚ ನಿರ್ಧಾರಕ್ಕೆ ಮೂರು ಅಂಶಗಳಿವೆ:

  • A2► ಸಾಲ, ಗೊಬ್ಬರ,ಇಂಧನ, ಯಂತ್ರ, ನೀರಾವರಿ, ಭೂಮಿಯ ಲೀಸ್ ವೆಚ್ಚ… ಇತ್ಯಾದಿ ಕೈಯಿಂದಾದ ವೆಚ್ಚಗಳು.
  • A2+FL► ಕೈಯಿಂದಾದ ವೆಚ್ಚಗಳ ಜೊತೆ ರೈತನ ಮನೆಯವರು, ಕುಟುಂಬಿಕರು ನೀಡಿದ ಉಚಿತ ಶ್ರಮದ ಮೌಲ್ಯ.
  • C2► ಇದು ವಾಸ್ತವ ಉತ್ಪಾದನಾ ವೆಚ್ಚದ ಸಮಗ್ರ ಲೆಕ್ಕಾಚಾರ ( ವೆಚ್ಚಗಳ ಜೊತೆ ಬಾಡಿಗೆ, ಬಡ್ಡಿ, ಯಂತ್ರಗಳ ಸವಕಳಿ ಎಲ್ಲ ಸೇರಿ)

ಸ್ವಾಮಿನಾಥನ್ ಕಮಿಟಿ ಹೇಳಿದ್ದು► MSP = C2+ 50%of C2

ಆದರೆ, 2018-19 ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಉತ್ಪಾದನಾ ವೆಚ್ಚದ 1.5 ಪಾಲು MSP ಕೊಡುತ್ತೇವೆ ಎಂದು ಹೇಳಿತ್ತು. ಆದರೆ ಈ ಉತ್ಪಾದನಾ ವೆಚ್ಚದ ಲೆಕ್ಕಾಚಾರ ಹೇಗೆಂದು ಸ್ಪಷ್ಟಪಡಿಸಿರಲಿಲ್ಲ.

ಆದರೆ CACP ತಾನು ಅದನ್ನು ಲೆಕ್ಕ ಹಾಕಿದ್ದು ಹೀಗೆ ಎಂದು ಹೇಳಿಕೊಂಡಿದೆ ► 1.5 X A2+FL

ಅಂದರೆ, ಸರ್ಕಾರ C2 ಪರಿಗಣನೆಗೆ ತೆಗೆದುಕೊಂಡಿಲ್ಲ. ಅರ್ಥಾತ್, ಉತ್ಪಾದನೆಯ ಎಲ್ಲ ವೆಚ್ಚಗಳು ಇನ್ನೂ MSP ಯಲ್ಲಿ ಒಳಗೊಂಡಿಲ್ಲ.

ಇದನ್ನೂ ಓದಿ: ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ವಾಸ್ತವದಲ್ಲಿ ರೈತನ ಖರ್ಚುಗಳು ಎಷ್ಟಿರುತ್ತವೆ ಎಂದರೆ ಸರ್ಕಾರಿ ಲೆಕ್ಕಾಚಾರದ C2 ಗಿಂತ ಎರಡು ಮೂರು ಪಟ್ಟು ಹೆಚ್ಚಿರುತ್ತದೆ. ಹೆಚ್ಚಿನ ಅಧ್ಯಯನಗಳು ಇದನ್ನು ಬೊಟ್ಟು ಮಾಡುತ್ತವೆ. ಇದು ಹೇಗೆಂದರೆ ನಿಮ್ಮೂರಿನಲ್ಲಿ ಸರ್ಕಾರಿ ಕೃಷಿ ಮಜೂರಿ ದರ ಎಷ್ಟು- ಖಾಸಗಿ ಕೃಷಿ ಮಜೂರಿ ಎಷ್ಟು ಎಂದು ಲೆಕ್ಕ ಹಾಕಿಕೊಳ್ಳಿ. ಆ ವ್ಯತ್ಯಾಸ ಈ MSPಯಲ್ಲೂ ತೋರಬೇಕಲ್ಲವೆ?

ಹಾಗಿರುವಾಗ, ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ ಕಾಣೆ. ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ.

ಇದನ್ನೂ ಓದಿ: ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...