Homeಮುಖಪುಟಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ, ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ದ ದೇಶದ ರಾಜಧಾನಿಯ ಗಡಿಗಳಲ್ಲಿ ರೈತರು ನಿರಂತರವಾಗಿ ಹೋರಾಡುತ್ತಿದ್ದಾರೆ. ಈ ನಡುವೆ ರಾಯಚೂರಿನಲ್ಲಿ ರಿಲಾಯನ್ಸ್ ಗ್ರೂಪ್ ಭತ್ತಕ್ಕೆ ಬೆಂಬಲ ಬೆಲೆಗಿಂತಲೂ ಹೆಚ್ಚಿನ ಬೆಲೆ ನೀಡಿ ಕೊಂಡುಕೊಂಡಿದೆ ಎಂಬ ಸುಳ್ಳು ಸುದ್ದಿ ಹರಡುತ್ತಿದೆ. ಈ ಹಿನ್ನಲೆಯಲ್ಲಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು “ಬೆಂಬಲ ಬೆಲೆ”ಗಳ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದ ಬರಹ ನಾನುಗೌರಿ.ಕಾಮ್ ಓದುಗರಿಗಾಗಿ…

ಅಂಬಾನಿ ಬಳಗ ಕರ್ನಾಟಕದಲ್ಲಿ ಒಂದು ಜಿಲ್ಲೆಯಲ್ಲಿ (ರಾಯಚೂರಿನ ಸಿಂಧನೂರಿನಲ್ಲಿ) ಕನಿಷ್ಠ ಬೆಂಬಲ ಬೆಲೆ (MSP)ಗಿಂತ ಕಿಂಚಿತ್ ಹೆಚ್ಚು (ಕ್ವಿಂಟಾಲಿಗೆ ನೂರು ರೂ. ಹೆಚ್ಚು) ಕೊಟ್ಟು ಭತ್ತ ಖರೀದಿಸಿರುವುದು, ಹೊಸ ಕೃಷಿ ಕಾನೂನುಗಳು ರೈತರ ಪರವಾಗಿರುವುದರ ದ್ಯೋತಕ ಎಂದು ಭಜನೆ ಶುರುವಾಗಿದೆ. ಈ ಮೂರ್ಖತನವನ್ನು ಅರ್ಥಮಾಡಿಕೊಳ್ಳುವುದು ಅಗತ್ಯ.

ಇದನ್ನೂ ಓದಿ: ಹಾಗಾದರೆ ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ಮೊದಲಿಗೆ, ಕನಿಷ್ಠ ಬೆಂಬಲ ಬೆಲೆ (MSP) ನಿರ್ಧಾರ ಹೇಗಾಗುತ್ತದೆ ತಿಳಿದುಕೊಳ್ಳಿ. ಅದನ್ನು ನಿರ್ಧರಿಸುವುದು ಕಮಿಷನ್‌ ಫಾರ್‌ ಅಗ್ರಿಕಲ್ಚರ್‌ ಕೋಸ್ಟ್‌ ಆಂಡ್ ಪ್ರೈಸ್ (CACP).

ಸ್ವಾಮಿನಾಥನ್ ಸಮಿತಿ ವರದಿಯ ಪ್ರಕಾರ ಒಂದು ಕೃಷಿ ಉತ್ಪಾದನೆಯ ವೆಚ್ಚ ನಿರ್ಧಾರಕ್ಕೆ ಮೂರು ಅಂಶಗಳಿವೆ:

  • A2► ಸಾಲ, ಗೊಬ್ಬರ,ಇಂಧನ, ಯಂತ್ರ, ನೀರಾವರಿ, ಭೂಮಿಯ ಲೀಸ್ ವೆಚ್ಚ… ಇತ್ಯಾದಿ ಕೈಯಿಂದಾದ ವೆಚ್ಚಗಳು.
  • A2+FL► ಕೈಯಿಂದಾದ ವೆಚ್ಚಗಳ ಜೊತೆ ರೈತನ ಮನೆಯವರು, ಕುಟುಂಬಿಕರು ನೀಡಿದ ಉಚಿತ ಶ್ರಮದ ಮೌಲ್ಯ.
  • C2► ಇದು ವಾಸ್ತವ ಉತ್ಪಾದನಾ ವೆಚ್ಚದ ಸಮಗ್ರ ಲೆಕ್ಕಾಚಾರ ( ವೆಚ್ಚಗಳ ಜೊತೆ ಬಾಡಿಗೆ, ಬಡ್ಡಿ, ಯಂತ್ರಗಳ ಸವಕಳಿ ಎಲ್ಲ ಸೇರಿ)

ಸ್ವಾಮಿನಾಥನ್ ಕಮಿಟಿ ಹೇಳಿದ್ದು► MSP = C2+ 50%of C2

ಆದರೆ, 2018-19 ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಉತ್ಪಾದನಾ ವೆಚ್ಚದ 1.5 ಪಾಲು MSP ಕೊಡುತ್ತೇವೆ ಎಂದು ಹೇಳಿತ್ತು. ಆದರೆ ಈ ಉತ್ಪಾದನಾ ವೆಚ್ಚದ ಲೆಕ್ಕಾಚಾರ ಹೇಗೆಂದು ಸ್ಪಷ್ಟಪಡಿಸಿರಲಿಲ್ಲ.

ಆದರೆ CACP ತಾನು ಅದನ್ನು ಲೆಕ್ಕ ಹಾಕಿದ್ದು ಹೀಗೆ ಎಂದು ಹೇಳಿಕೊಂಡಿದೆ ► 1.5 X A2+FL

ಅಂದರೆ, ಸರ್ಕಾರ C2 ಪರಿಗಣನೆಗೆ ತೆಗೆದುಕೊಂಡಿಲ್ಲ. ಅರ್ಥಾತ್, ಉತ್ಪಾದನೆಯ ಎಲ್ಲ ವೆಚ್ಚಗಳು ಇನ್ನೂ MSP ಯಲ್ಲಿ ಒಳಗೊಂಡಿಲ್ಲ.

ಇದನ್ನೂ ಓದಿ: ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ವಾಸ್ತವದಲ್ಲಿ ರೈತನ ಖರ್ಚುಗಳು ಎಷ್ಟಿರುತ್ತವೆ ಎಂದರೆ ಸರ್ಕಾರಿ ಲೆಕ್ಕಾಚಾರದ C2 ಗಿಂತ ಎರಡು ಮೂರು ಪಟ್ಟು ಹೆಚ್ಚಿರುತ್ತದೆ. ಹೆಚ್ಚಿನ ಅಧ್ಯಯನಗಳು ಇದನ್ನು ಬೊಟ್ಟು ಮಾಡುತ್ತವೆ. ಇದು ಹೇಗೆಂದರೆ ನಿಮ್ಮೂರಿನಲ್ಲಿ ಸರ್ಕಾರಿ ಕೃಷಿ ಮಜೂರಿ ದರ ಎಷ್ಟು- ಖಾಸಗಿ ಕೃಷಿ ಮಜೂರಿ ಎಷ್ಟು ಎಂದು ಲೆಕ್ಕ ಹಾಕಿಕೊಳ್ಳಿ. ಆ ವ್ಯತ್ಯಾಸ ಈ MSPಯಲ್ಲೂ ತೋರಬೇಕಲ್ಲವೆ?

ಹಾಗಿರುವಾಗ, ಅಂಬಾನಿಗಳು ಕ್ವಿಂಟಾಲಿಗೆ MSP ಮೇಲೆ ಅಂದಾಜು 100 ರೂಪಾಯಿ ಜಾಸ್ತಿ ಕೊಟ್ಟು ಭತ್ತ ಖರೀದಿಸಿದರು ಎಂದರೆ ಅದರಲ್ಲಿ ಸಂಭ್ರಮಿಸುವುದು ಏನಿದೆಯೋ ಕಾಣೆ. ನಾಳೆ ಇದೇ ಬೆಂಚ್ ಮಾರ್ಕ್ ಆಗತೊಡಗಿದರೆ, ಬಹುಬೇಗ ರೈತ ಕೃಷಿಯನ್ನು ಸೂಟುಬೂಟಿನವರಿಗೆ ಬಿಟ್ಟುಕೊಡಲೇಬೇಕಾದ ಸ್ಥಿತಿ ಬರುವುದರಲ್ಲಿ ಸಂಶಯ ಬೇಡ.

ಇದನ್ನೂ ಓದಿ: ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...