Homeಮುಖಪುಟನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ

ನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ

- Advertisement -
- Advertisement -

ಕೋವಿಡ್ ಹೊಸ ಅಲೆ ತೀವ್ರವಾಗುತ್ತಿರುವ ಈ ಸಂದರ್ಭದಲ್ಲಿ ಈ ವಾರ ನಡೆದ ಕೆಲವು ಸನ್ನಿವೇಶಗಳನ್ನು ಗಮನಿಸೋಣ. ಇಲ್ಲಿ ಎರಡು ಹೈಕೋರ್ಟ್‌ಗಳ ಆದೇಶಗಳು ತದ್ವಿರುದ್ಧವಾಗಿವೆ. ಮುಖ್ಯವಾಹಿನಿ ಮೀಡಿಯಾಗಳು ಪಕ್ಷಪಾತ ಮಾಡುತ್ತಿದೆ. ಈ ಎಲ್ಲದರ ಮಧ್ಯೆ ಕೋವಿಡ್ ದಿನಕ್ಕೆ 2 ಲಕ್ಷ ಜನರನ್ನು ಸೋಂಕಿಸುತ್ತಿದೆ.

ದೆಹಲಿ ಹೈಕೋರ್ಟ್
ಸೋಮವಾರ ಏಪ್ರಿಲ್ 12
ದೆಹಲಿ ವಕ್ಫ್ ಮಂಡಳಿ: ನಿಜಾಮುದ್ದೀನ್ ಮರ್ಕಾಜ್‌ನಲ್ಲಿ ದಿನಕ್ಕೆ 5 ಸಲ ನಮಾಜ್ ಮಾಡಲು ಅವಕಾಶ ನೀಡಿ. ಪ್ರತಿ ಸಲಕ್ಕೆ 50 ಜನರಿಗೆ ಮಾತ್ರ ಅವಕಾಶ ಕೊಡಿ.

ಕೇಂದ್ರ ಸರ್ಕಾರ: ನಮಾಜಿಗೆ ಅನುಮತಿಸಬಹುದು.

ಮಂಗಳವಾರ ಏಪ್ರಿಲ್ 13
ಕೇಂದ್ರ ಸರ್ಕಾರ: ದೆಹಲಿ ವಿಪತ್ತು ನಿರ್ವಹಣಾ ಕಾಯ್ದೆ ಜಾರಿಯಲ್ಲಿ ಇರುವ ಕಾರಣ ನಮಾಜಿಗೆ ಅನುಮತಿ ನೀಡಲಾಗದು. ಹೆಚ್ಚೆಂದರೆ 20 ಜನರು ಪ್ರಾರ್ಥನೆ ಮಾಡಬಹುದು.

ಹೈಕೋರ್ಟ್: ಹರಿದ್ವಾರದಲ್ಲಿೆಲ್ಲ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಕುಂಭಮೇಳ ನಡೆಯುತ್ತಿದೆ. ಇಲ್ಲಿ ನೀವು ಧಾರ್ಮಿಕ ಸಭೆಯೊಂದಕ್ಕೆ 20 ಜನರಿಗಷ್ಟೇ ಅವಕಾಶ ಎನ್ನುತ್ತೀದ್ದೀರಾ? ಎಲ್ಲ ಧಾರ್ಮಿಕ ಸ್ಥಳ, ಸಭೆಗಳಿಗೂ ನೀವು ವಿಧಿಸಿರುವ ನಿರ್ಬಂಧಗಳ ಅಫಿಡವಿಟ್ ಸಲ್ಲಿಸಿ.

ಕೇಂದ್ರ ಸರ್ಕಾರದ ಪಕ್ಷಪಾತಿ ನಿಲುವುಗಳನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ನಿಜಾಮುದ್ದೀನ್ ಮರ್ಕಾಜ್ ಮಸೀದಿಯಲ್ಲಿ ದಿನಕ್ಕೆ 5 ಬಾರಿ ನಮಾಜ್ ಮಾಡಲು, ಪ್ರತಿ ಸಲ 50 ಜನ ನಮಾಜ್ ಮಾಡಲು ಅನುಮತಿ ನೀಡಿದೆ.

ಬಾಂಬೆ ಹೈಕೋರ್ಟ್
ದೆಹಲಿ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುವ ಸಂದರ್ಭದಲ್ಲೇ ಬಾಂಬೆ ಹೈಕೋರ್ಟಿನಲ್ಲಿ ಇದೇ ವಿಷಯವಾಗಿ ಒಂದು ವಿಚಾರಣೆ ನಡೆದು ವ್ಯತಿರಿಕ್ತ ತೀರ್ಪು ಹೊರ ಬಂದಿದೆ. ಮುಂಬೈನ ಜುಮ್ಮಾ ಮಸೀದಿ ಟ್ರಸ್ಟ್‌ನವರು, 50 ಜನರಿಗಾದರೂ ನಮಾಜ್ ಮಾಡಲು ಅವಕಾಶ ಕೊಡಿ, ದಿನಕ್ಕೆ ಹೀಗೆ ನಾಲ್ಕೈದು ಬಾರಿ ನಮಾಜ್ ಏರ್ಪಡಿಸುತ್ತೇವೆ. ನಮ್ಮ ಮಸೀದಿ ಆವರಣ ಒಂದು ಎಕರೆಯಷ್ಟು ವಿಶಾಲವಾಗಿದ್ದು 50 ಜನ ಅಲ್ಲಿ ಸೇರಿದರೆ ತೊಂದರೆಯಾಗುವುದಿಲ್ಲ ಎಂದು ಅರ್ಜಿ ಸಲ್ಲಿಸಿತ್ತು.

ಜನರ ಆರೋಗ್ಯ ಮುಖ್ಯ ಎಂದ ಬಾಂಬೆ ಹೈಕೋರ್ಟ್ ನಮಾಜಿಗೆ ಅನುಮತಿ ನಿರಾಕರಿಸಿತು. ಆ ಹೊತ್ತಿನಲ್ಲಿ ಕುಂಭಮೇಳದಲ್ಲಿ ಲಕ್ಷಾಂತರ ಜನ ನೀರಿನಲ್ಲಿ ಮುಳುಗಿ ಏಳುತ್ತಿದ್ದರು!

ಮೀಡಿಯಾ ಪಕ್ಷಪಾತ

ಕಳೆದ ವರ್ಷ ಆಗಿನ್ನೂ ಕೊವಿಡ್ ಹರಡಲು ಶುರುವಾದ ಸಮಯದಲ್ಲಿ ದೆಹಲಿಯ ನಿಜಾಮುದೀನ್ ಮರ್ಕಾಜ್ ಮಸೀದಿಯಲ್ಲಿ ನಡೆದ ತಬ್ಲಿಗಿ ಸಮಾವೇಶದಲ್ಲಿನ ಹಲವರಿಗೆ ಕೊವಿಡ್ ಕಾಣಿಸಿಕೊಂಡಿತ್ತು. ಸಮಾವೇಶದಲ್ಲಿ ಪಾಲ್ಗೊಂಡವರು ದೇಶದ ಬೇರೆ ಬೇರೆ ಭಾಗಗಳಿಗೆ ತೆರಳಿದ ನಂತರ ಅಲ್ಲಿ ಕೆಲವರಿಗೆ ಕೊವಿಡ್ ತಗುಲಿತ್ತು. ಆಗ ಮೀಡಿಯಾ ಪಾಲಿಗೆ ಕೊರೋನಾ ವೈರಸ್ ತಬ್ಲಿಗಿ ಆಗಿತ್ತು.

ಈಗ ಅದೇ ಮುಖ್ಯವಾಹಿನಿ ಮಾಧ್ಯಮಗಳಿಗೆ ಕುಂಭಮೇಳ ಮಾತ್ರ ಭಕ್ತಿಭಾವದ ಪ್ರತೀಕ. ಆಗ ದಿನಕ್ಕೆ ಸಾವಿರ ಲೆಕ್ಕದಲ್ಲಿ ಕೇಸುಗಳಿದ್ದವು, ಈಗ ದಿನಕ್ಕೆ ಲಕ್ಷಗಳ ಲೆಕ್ಕದಲ್ಲಿ ಕೇಸುಗಳಿವೆ. ಆದರೆ ಯಾರನ್ನು ಓಲೈಸಲು ಈ ಮೀಡಿಯಾಗಳು ಕುಂಭಮೇಳದ ವರದಿಯನ್ನು ಭಕ್ತಿಭಾವದಿಂದ ವರದಿ ಮಾಡುತ್ತಿವೆ.?

ಆಳುವ ಪಕ್ಷ

ಇಲ್ಲಿ ನೆನಪಿಡಬೇಕಾದದ್ದು, ಈಗ ಆಳುತ್ತಿರುವ ಸರ್ಕಾರದ ಮೂಲ ತಳಹದಿಯೇ ವೈದಿಕ ಪುನರುತ್ಥಾನ. ಈ ದೇಶದ ಬಹುಸಂಖ್ಯಾತರಾದ ದಲಿತರು, ಹಿಂದುಳಿದವರ ಸಣ್ಣಪುಟ್ಟ ಜಾತ್ರೆಗಳಿಗೂ ನಿಷೇಧ ಹೇರಲಾಗಿದೆ. (ಆರೋಗ್ಯದ ದೃಷ್ಟಿಯಿಂದ ಇದು ಒಳ್ಳೆಯದೇ ಎಂಬುದು ಬೇರೆ ಚರ್ಚೆಯ ವಿಷಯ)…. ಮುಸ್ಲಿಮರು 50 ಜನ ಸೇರಿ ರಂಜಾನ್ ಪ್ರಾರ್ಥನೆ ಮಾಡುವುದನ್ನು ವಿರೋಧಿಸುವ ಸರ್ಕಾರ, ವೈದಿಕರು, ಕ್ಷತ್ರಿಯರು ಮತ್ತು ವೈಶ್ಯರೇ ಹೆಚ್ಚಾಗಿ ಪಾಲ್ಗೊಳ್ಳುವ ಕುಂಭಮೇಳಕ್ಕೆ ಅನುಮತಿ ನೀಡಿದೆ. ಈ ಮೇಲ್‌ಸ್ಥರದ ಹಿಂದೂಗಳು ಸತ್ರೂ ಪರವಾಗಿಲ್ಲ, ತನಗೆ ರಾಜಕೀಯ ಲಾಭ (ಮುಖ್ಯವಾಗಿ ಬಂಗಾಳದಲ್ಲಿ) ಆಗಬೇಕು ಎಂಬುದೇ ಸರ್ಕಾರದ ಉದ್ದೇಶವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕುಂಭಮೇಳದ 30 ಸಾಧುಗಳಿಗೆ ಕೊರೊನಾ ಪಾಸಿಟಿವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಸ್ವಾಮಿ…….
    ಹಿಂದೂಗಳು ಅಂಧ ಭಕ್ತರು ಅವರು ಮೂರ್ತಿ ಪೂಜೆ ನಂಬುತ್ತಾರೆ ನದಿ ಯಲ್ಲಿ ಮಿಂದೇಳುವ ಕಾರ್ಯಕ್ಕೆ ಪುಣ್ಯ ಎಂದು ಭಾವಿಸುತ್ತಾರೆ ಅದಕ್ಕೆ ಮಂದಿರ, ದೇವಸ್ಥಾನಗಳು ಇರುವ ಕಡೆ ಸಾವಿರಾರು ಜನ ಸೇರುತ್ತಾರೆ …..
    ಆದರೆ ತೀರ ಬುದ್ದಿವಂತರಾದ ಇಸ್ಲಾಂ ಭಾಂದವರು ಅವರ ಖುರಾನ್ ನಲ್ಲಿ ಹೇಳಿರುವ ಪ್ರಕಾರ ದಿನದಲ್ಲಿ ಐದು ಬಾರಿ ನಮಾಜ್ ಮಾಡಲು ಯಾವುದೇ ಕಟ್ಟಡದ ಮೂರ್ತಿ ಯ ಅವಶ್ಯಕತೆ ಇಲ್ಲ ಅಲ್ಲವೇ ಮನೆಯಲ್ಲೇ ಕೂತು ಐವತ್ತು ಬಾರಿ ನಮಾಜ್ ಮಾಡಲು ಆಕ್ಷೇಪ ಇಲ್ಲಾ ಅಲ್ಲವೇ……
    ನವಿಲನ್ನು ನೋಡಿ ಪುಕ್ಕ ಕಿತ್ತುಕೊಳ್ಳುವ ಅವಶ್ಯಕತೆ ಏನಿದೆ….
    ನಾನು ಸಾಮಾನ್ಯ ಪ್ರಜೆ …….ನನ್ನ ಬರಹ ಸರಿ ಅನಿಸಿದರೆ ದಯವಿಟ್ಟು ಒಂದಷ್ಟು ದುಡ್ಡು ಕಳಿಸಿ ……

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...