Homeಮುಖಪುಟನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ

ನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ

- Advertisement -
- Advertisement -

ಕೋವಿಡ್ ಹೊಸ ಅಲೆ ತೀವ್ರವಾಗುತ್ತಿರುವ ಈ ಸಂದರ್ಭದಲ್ಲಿ ಈ ವಾರ ನಡೆದ ಕೆಲವು ಸನ್ನಿವೇಶಗಳನ್ನು ಗಮನಿಸೋಣ. ಇಲ್ಲಿ ಎರಡು ಹೈಕೋರ್ಟ್‌ಗಳ ಆದೇಶಗಳು ತದ್ವಿರುದ್ಧವಾಗಿವೆ. ಮುಖ್ಯವಾಹಿನಿ ಮೀಡಿಯಾಗಳು ಪಕ್ಷಪಾತ ಮಾಡುತ್ತಿದೆ. ಈ ಎಲ್ಲದರ ಮಧ್ಯೆ ಕೋವಿಡ್ ದಿನಕ್ಕೆ 2 ಲಕ್ಷ ಜನರನ್ನು ಸೋಂಕಿಸುತ್ತಿದೆ.

ದೆಹಲಿ ಹೈಕೋರ್ಟ್
ಸೋಮವಾರ ಏಪ್ರಿಲ್ 12
ದೆಹಲಿ ವಕ್ಫ್ ಮಂಡಳಿ: ನಿಜಾಮುದ್ದೀನ್ ಮರ್ಕಾಜ್‌ನಲ್ಲಿ ದಿನಕ್ಕೆ 5 ಸಲ ನಮಾಜ್ ಮಾಡಲು ಅವಕಾಶ ನೀಡಿ. ಪ್ರತಿ ಸಲಕ್ಕೆ 50 ಜನರಿಗೆ ಮಾತ್ರ ಅವಕಾಶ ಕೊಡಿ.

ಕೇಂದ್ರ ಸರ್ಕಾರ: ನಮಾಜಿಗೆ ಅನುಮತಿಸಬಹುದು.

ಮಂಗಳವಾರ ಏಪ್ರಿಲ್ 13
ಕೇಂದ್ರ ಸರ್ಕಾರ: ದೆಹಲಿ ವಿಪತ್ತು ನಿರ್ವಹಣಾ ಕಾಯ್ದೆ ಜಾರಿಯಲ್ಲಿ ಇರುವ ಕಾರಣ ನಮಾಜಿಗೆ ಅನುಮತಿ ನೀಡಲಾಗದು. ಹೆಚ್ಚೆಂದರೆ 20 ಜನರು ಪ್ರಾರ್ಥನೆ ಮಾಡಬಹುದು.

ಹೈಕೋರ್ಟ್: ಹರಿದ್ವಾರದಲ್ಲಿೆಲ್ಲ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಕುಂಭಮೇಳ ನಡೆಯುತ್ತಿದೆ. ಇಲ್ಲಿ ನೀವು ಧಾರ್ಮಿಕ ಸಭೆಯೊಂದಕ್ಕೆ 20 ಜನರಿಗಷ್ಟೇ ಅವಕಾಶ ಎನ್ನುತ್ತೀದ್ದೀರಾ? ಎಲ್ಲ ಧಾರ್ಮಿಕ ಸ್ಥಳ, ಸಭೆಗಳಿಗೂ ನೀವು ವಿಧಿಸಿರುವ ನಿರ್ಬಂಧಗಳ ಅಫಿಡವಿಟ್ ಸಲ್ಲಿಸಿ.

ಕೇಂದ್ರ ಸರ್ಕಾರದ ಪಕ್ಷಪಾತಿ ನಿಲುವುಗಳನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ನಿಜಾಮುದ್ದೀನ್ ಮರ್ಕಾಜ್ ಮಸೀದಿಯಲ್ಲಿ ದಿನಕ್ಕೆ 5 ಬಾರಿ ನಮಾಜ್ ಮಾಡಲು, ಪ್ರತಿ ಸಲ 50 ಜನ ನಮಾಜ್ ಮಾಡಲು ಅನುಮತಿ ನೀಡಿದೆ.

ಬಾಂಬೆ ಹೈಕೋರ್ಟ್
ದೆಹಲಿ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುವ ಸಂದರ್ಭದಲ್ಲೇ ಬಾಂಬೆ ಹೈಕೋರ್ಟಿನಲ್ಲಿ ಇದೇ ವಿಷಯವಾಗಿ ಒಂದು ವಿಚಾರಣೆ ನಡೆದು ವ್ಯತಿರಿಕ್ತ ತೀರ್ಪು ಹೊರ ಬಂದಿದೆ. ಮುಂಬೈನ ಜುಮ್ಮಾ ಮಸೀದಿ ಟ್ರಸ್ಟ್‌ನವರು, 50 ಜನರಿಗಾದರೂ ನಮಾಜ್ ಮಾಡಲು ಅವಕಾಶ ಕೊಡಿ, ದಿನಕ್ಕೆ ಹೀಗೆ ನಾಲ್ಕೈದು ಬಾರಿ ನಮಾಜ್ ಏರ್ಪಡಿಸುತ್ತೇವೆ. ನಮ್ಮ ಮಸೀದಿ ಆವರಣ ಒಂದು ಎಕರೆಯಷ್ಟು ವಿಶಾಲವಾಗಿದ್ದು 50 ಜನ ಅಲ್ಲಿ ಸೇರಿದರೆ ತೊಂದರೆಯಾಗುವುದಿಲ್ಲ ಎಂದು ಅರ್ಜಿ ಸಲ್ಲಿಸಿತ್ತು.

ಜನರ ಆರೋಗ್ಯ ಮುಖ್ಯ ಎಂದ ಬಾಂಬೆ ಹೈಕೋರ್ಟ್ ನಮಾಜಿಗೆ ಅನುಮತಿ ನಿರಾಕರಿಸಿತು. ಆ ಹೊತ್ತಿನಲ್ಲಿ ಕುಂಭಮೇಳದಲ್ಲಿ ಲಕ್ಷಾಂತರ ಜನ ನೀರಿನಲ್ಲಿ ಮುಳುಗಿ ಏಳುತ್ತಿದ್ದರು!

ಮೀಡಿಯಾ ಪಕ್ಷಪಾತ

ಕಳೆದ ವರ್ಷ ಆಗಿನ್ನೂ ಕೊವಿಡ್ ಹರಡಲು ಶುರುವಾದ ಸಮಯದಲ್ಲಿ ದೆಹಲಿಯ ನಿಜಾಮುದೀನ್ ಮರ್ಕಾಜ್ ಮಸೀದಿಯಲ್ಲಿ ನಡೆದ ತಬ್ಲಿಗಿ ಸಮಾವೇಶದಲ್ಲಿನ ಹಲವರಿಗೆ ಕೊವಿಡ್ ಕಾಣಿಸಿಕೊಂಡಿತ್ತು. ಸಮಾವೇಶದಲ್ಲಿ ಪಾಲ್ಗೊಂಡವರು ದೇಶದ ಬೇರೆ ಬೇರೆ ಭಾಗಗಳಿಗೆ ತೆರಳಿದ ನಂತರ ಅಲ್ಲಿ ಕೆಲವರಿಗೆ ಕೊವಿಡ್ ತಗುಲಿತ್ತು. ಆಗ ಮೀಡಿಯಾ ಪಾಲಿಗೆ ಕೊರೋನಾ ವೈರಸ್ ತಬ್ಲಿಗಿ ಆಗಿತ್ತು.

ಈಗ ಅದೇ ಮುಖ್ಯವಾಹಿನಿ ಮಾಧ್ಯಮಗಳಿಗೆ ಕುಂಭಮೇಳ ಮಾತ್ರ ಭಕ್ತಿಭಾವದ ಪ್ರತೀಕ. ಆಗ ದಿನಕ್ಕೆ ಸಾವಿರ ಲೆಕ್ಕದಲ್ಲಿ ಕೇಸುಗಳಿದ್ದವು, ಈಗ ದಿನಕ್ಕೆ ಲಕ್ಷಗಳ ಲೆಕ್ಕದಲ್ಲಿ ಕೇಸುಗಳಿವೆ. ಆದರೆ ಯಾರನ್ನು ಓಲೈಸಲು ಈ ಮೀಡಿಯಾಗಳು ಕುಂಭಮೇಳದ ವರದಿಯನ್ನು ಭಕ್ತಿಭಾವದಿಂದ ವರದಿ ಮಾಡುತ್ತಿವೆ.?

ಆಳುವ ಪಕ್ಷ

ಇಲ್ಲಿ ನೆನಪಿಡಬೇಕಾದದ್ದು, ಈಗ ಆಳುತ್ತಿರುವ ಸರ್ಕಾರದ ಮೂಲ ತಳಹದಿಯೇ ವೈದಿಕ ಪುನರುತ್ಥಾನ. ಈ ದೇಶದ ಬಹುಸಂಖ್ಯಾತರಾದ ದಲಿತರು, ಹಿಂದುಳಿದವರ ಸಣ್ಣಪುಟ್ಟ ಜಾತ್ರೆಗಳಿಗೂ ನಿಷೇಧ ಹೇರಲಾಗಿದೆ. (ಆರೋಗ್ಯದ ದೃಷ್ಟಿಯಿಂದ ಇದು ಒಳ್ಳೆಯದೇ ಎಂಬುದು ಬೇರೆ ಚರ್ಚೆಯ ವಿಷಯ)…. ಮುಸ್ಲಿಮರು 50 ಜನ ಸೇರಿ ರಂಜಾನ್ ಪ್ರಾರ್ಥನೆ ಮಾಡುವುದನ್ನು ವಿರೋಧಿಸುವ ಸರ್ಕಾರ, ವೈದಿಕರು, ಕ್ಷತ್ರಿಯರು ಮತ್ತು ವೈಶ್ಯರೇ ಹೆಚ್ಚಾಗಿ ಪಾಲ್ಗೊಳ್ಳುವ ಕುಂಭಮೇಳಕ್ಕೆ ಅನುಮತಿ ನೀಡಿದೆ. ಈ ಮೇಲ್‌ಸ್ಥರದ ಹಿಂದೂಗಳು ಸತ್ರೂ ಪರವಾಗಿಲ್ಲ, ತನಗೆ ರಾಜಕೀಯ ಲಾಭ (ಮುಖ್ಯವಾಗಿ ಬಂಗಾಳದಲ್ಲಿ) ಆಗಬೇಕು ಎಂಬುದೇ ಸರ್ಕಾರದ ಉದ್ದೇಶವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕುಂಭಮೇಳದ 30 ಸಾಧುಗಳಿಗೆ ಕೊರೊನಾ ಪಾಸಿಟಿವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಸ್ವಾಮಿ…….
    ಹಿಂದೂಗಳು ಅಂಧ ಭಕ್ತರು ಅವರು ಮೂರ್ತಿ ಪೂಜೆ ನಂಬುತ್ತಾರೆ ನದಿ ಯಲ್ಲಿ ಮಿಂದೇಳುವ ಕಾರ್ಯಕ್ಕೆ ಪುಣ್ಯ ಎಂದು ಭಾವಿಸುತ್ತಾರೆ ಅದಕ್ಕೆ ಮಂದಿರ, ದೇವಸ್ಥಾನಗಳು ಇರುವ ಕಡೆ ಸಾವಿರಾರು ಜನ ಸೇರುತ್ತಾರೆ …..
    ಆದರೆ ತೀರ ಬುದ್ದಿವಂತರಾದ ಇಸ್ಲಾಂ ಭಾಂದವರು ಅವರ ಖುರಾನ್ ನಲ್ಲಿ ಹೇಳಿರುವ ಪ್ರಕಾರ ದಿನದಲ್ಲಿ ಐದು ಬಾರಿ ನಮಾಜ್ ಮಾಡಲು ಯಾವುದೇ ಕಟ್ಟಡದ ಮೂರ್ತಿ ಯ ಅವಶ್ಯಕತೆ ಇಲ್ಲ ಅಲ್ಲವೇ ಮನೆಯಲ್ಲೇ ಕೂತು ಐವತ್ತು ಬಾರಿ ನಮಾಜ್ ಮಾಡಲು ಆಕ್ಷೇಪ ಇಲ್ಲಾ ಅಲ್ಲವೇ……
    ನವಿಲನ್ನು ನೋಡಿ ಪುಕ್ಕ ಕಿತ್ತುಕೊಳ್ಳುವ ಅವಶ್ಯಕತೆ ಏನಿದೆ….
    ನಾನು ಸಾಮಾನ್ಯ ಪ್ರಜೆ …….ನನ್ನ ಬರಹ ಸರಿ ಅನಿಸಿದರೆ ದಯವಿಟ್ಟು ಒಂದಷ್ಟು ದುಡ್ಡು ಕಳಿಸಿ ……

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...