Homeಮುಖಪುಟನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ

ನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ

- Advertisement -
- Advertisement -

ಕೋವಿಡ್ ಹೊಸ ಅಲೆ ತೀವ್ರವಾಗುತ್ತಿರುವ ಈ ಸಂದರ್ಭದಲ್ಲಿ ಈ ವಾರ ನಡೆದ ಕೆಲವು ಸನ್ನಿವೇಶಗಳನ್ನು ಗಮನಿಸೋಣ. ಇಲ್ಲಿ ಎರಡು ಹೈಕೋರ್ಟ್‌ಗಳ ಆದೇಶಗಳು ತದ್ವಿರುದ್ಧವಾಗಿವೆ. ಮುಖ್ಯವಾಹಿನಿ ಮೀಡಿಯಾಗಳು ಪಕ್ಷಪಾತ ಮಾಡುತ್ತಿದೆ. ಈ ಎಲ್ಲದರ ಮಧ್ಯೆ ಕೋವಿಡ್ ದಿನಕ್ಕೆ 2 ಲಕ್ಷ ಜನರನ್ನು ಸೋಂಕಿಸುತ್ತಿದೆ.

ದೆಹಲಿ ಹೈಕೋರ್ಟ್
ಸೋಮವಾರ ಏಪ್ರಿಲ್ 12
ದೆಹಲಿ ವಕ್ಫ್ ಮಂಡಳಿ: ನಿಜಾಮುದ್ದೀನ್ ಮರ್ಕಾಜ್‌ನಲ್ಲಿ ದಿನಕ್ಕೆ 5 ಸಲ ನಮಾಜ್ ಮಾಡಲು ಅವಕಾಶ ನೀಡಿ. ಪ್ರತಿ ಸಲಕ್ಕೆ 50 ಜನರಿಗೆ ಮಾತ್ರ ಅವಕಾಶ ಕೊಡಿ.

ಕೇಂದ್ರ ಸರ್ಕಾರ: ನಮಾಜಿಗೆ ಅನುಮತಿಸಬಹುದು.

ಮಂಗಳವಾರ ಏಪ್ರಿಲ್ 13
ಕೇಂದ್ರ ಸರ್ಕಾರ: ದೆಹಲಿ ವಿಪತ್ತು ನಿರ್ವಹಣಾ ಕಾಯ್ದೆ ಜಾರಿಯಲ್ಲಿ ಇರುವ ಕಾರಣ ನಮಾಜಿಗೆ ಅನುಮತಿ ನೀಡಲಾಗದು. ಹೆಚ್ಚೆಂದರೆ 20 ಜನರು ಪ್ರಾರ್ಥನೆ ಮಾಡಬಹುದು.

ಹೈಕೋರ್ಟ್: ಹರಿದ್ವಾರದಲ್ಲಿೆಲ್ಲ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಕುಂಭಮೇಳ ನಡೆಯುತ್ತಿದೆ. ಇಲ್ಲಿ ನೀವು ಧಾರ್ಮಿಕ ಸಭೆಯೊಂದಕ್ಕೆ 20 ಜನರಿಗಷ್ಟೇ ಅವಕಾಶ ಎನ್ನುತ್ತೀದ್ದೀರಾ? ಎಲ್ಲ ಧಾರ್ಮಿಕ ಸ್ಥಳ, ಸಭೆಗಳಿಗೂ ನೀವು ವಿಧಿಸಿರುವ ನಿರ್ಬಂಧಗಳ ಅಫಿಡವಿಟ್ ಸಲ್ಲಿಸಿ.

ಕೇಂದ್ರ ಸರ್ಕಾರದ ಪಕ್ಷಪಾತಿ ನಿಲುವುಗಳನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ನಿಜಾಮುದ್ದೀನ್ ಮರ್ಕಾಜ್ ಮಸೀದಿಯಲ್ಲಿ ದಿನಕ್ಕೆ 5 ಬಾರಿ ನಮಾಜ್ ಮಾಡಲು, ಪ್ರತಿ ಸಲ 50 ಜನ ನಮಾಜ್ ಮಾಡಲು ಅನುಮತಿ ನೀಡಿದೆ.

ಬಾಂಬೆ ಹೈಕೋರ್ಟ್
ದೆಹಲಿ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುವ ಸಂದರ್ಭದಲ್ಲೇ ಬಾಂಬೆ ಹೈಕೋರ್ಟಿನಲ್ಲಿ ಇದೇ ವಿಷಯವಾಗಿ ಒಂದು ವಿಚಾರಣೆ ನಡೆದು ವ್ಯತಿರಿಕ್ತ ತೀರ್ಪು ಹೊರ ಬಂದಿದೆ. ಮುಂಬೈನ ಜುಮ್ಮಾ ಮಸೀದಿ ಟ್ರಸ್ಟ್‌ನವರು, 50 ಜನರಿಗಾದರೂ ನಮಾಜ್ ಮಾಡಲು ಅವಕಾಶ ಕೊಡಿ, ದಿನಕ್ಕೆ ಹೀಗೆ ನಾಲ್ಕೈದು ಬಾರಿ ನಮಾಜ್ ಏರ್ಪಡಿಸುತ್ತೇವೆ. ನಮ್ಮ ಮಸೀದಿ ಆವರಣ ಒಂದು ಎಕರೆಯಷ್ಟು ವಿಶಾಲವಾಗಿದ್ದು 50 ಜನ ಅಲ್ಲಿ ಸೇರಿದರೆ ತೊಂದರೆಯಾಗುವುದಿಲ್ಲ ಎಂದು ಅರ್ಜಿ ಸಲ್ಲಿಸಿತ್ತು.

ಜನರ ಆರೋಗ್ಯ ಮುಖ್ಯ ಎಂದ ಬಾಂಬೆ ಹೈಕೋರ್ಟ್ ನಮಾಜಿಗೆ ಅನುಮತಿ ನಿರಾಕರಿಸಿತು. ಆ ಹೊತ್ತಿನಲ್ಲಿ ಕುಂಭಮೇಳದಲ್ಲಿ ಲಕ್ಷಾಂತರ ಜನ ನೀರಿನಲ್ಲಿ ಮುಳುಗಿ ಏಳುತ್ತಿದ್ದರು!

ಮೀಡಿಯಾ ಪಕ್ಷಪಾತ

ಕಳೆದ ವರ್ಷ ಆಗಿನ್ನೂ ಕೊವಿಡ್ ಹರಡಲು ಶುರುವಾದ ಸಮಯದಲ್ಲಿ ದೆಹಲಿಯ ನಿಜಾಮುದೀನ್ ಮರ್ಕಾಜ್ ಮಸೀದಿಯಲ್ಲಿ ನಡೆದ ತಬ್ಲಿಗಿ ಸಮಾವೇಶದಲ್ಲಿನ ಹಲವರಿಗೆ ಕೊವಿಡ್ ಕಾಣಿಸಿಕೊಂಡಿತ್ತು. ಸಮಾವೇಶದಲ್ಲಿ ಪಾಲ್ಗೊಂಡವರು ದೇಶದ ಬೇರೆ ಬೇರೆ ಭಾಗಗಳಿಗೆ ತೆರಳಿದ ನಂತರ ಅಲ್ಲಿ ಕೆಲವರಿಗೆ ಕೊವಿಡ್ ತಗುಲಿತ್ತು. ಆಗ ಮೀಡಿಯಾ ಪಾಲಿಗೆ ಕೊರೋನಾ ವೈರಸ್ ತಬ್ಲಿಗಿ ಆಗಿತ್ತು.

ಈಗ ಅದೇ ಮುಖ್ಯವಾಹಿನಿ ಮಾಧ್ಯಮಗಳಿಗೆ ಕುಂಭಮೇಳ ಮಾತ್ರ ಭಕ್ತಿಭಾವದ ಪ್ರತೀಕ. ಆಗ ದಿನಕ್ಕೆ ಸಾವಿರ ಲೆಕ್ಕದಲ್ಲಿ ಕೇಸುಗಳಿದ್ದವು, ಈಗ ದಿನಕ್ಕೆ ಲಕ್ಷಗಳ ಲೆಕ್ಕದಲ್ಲಿ ಕೇಸುಗಳಿವೆ. ಆದರೆ ಯಾರನ್ನು ಓಲೈಸಲು ಈ ಮೀಡಿಯಾಗಳು ಕುಂಭಮೇಳದ ವರದಿಯನ್ನು ಭಕ್ತಿಭಾವದಿಂದ ವರದಿ ಮಾಡುತ್ತಿವೆ.?

ಆಳುವ ಪಕ್ಷ

ಇಲ್ಲಿ ನೆನಪಿಡಬೇಕಾದದ್ದು, ಈಗ ಆಳುತ್ತಿರುವ ಸರ್ಕಾರದ ಮೂಲ ತಳಹದಿಯೇ ವೈದಿಕ ಪುನರುತ್ಥಾನ. ಈ ದೇಶದ ಬಹುಸಂಖ್ಯಾತರಾದ ದಲಿತರು, ಹಿಂದುಳಿದವರ ಸಣ್ಣಪುಟ್ಟ ಜಾತ್ರೆಗಳಿಗೂ ನಿಷೇಧ ಹೇರಲಾಗಿದೆ. (ಆರೋಗ್ಯದ ದೃಷ್ಟಿಯಿಂದ ಇದು ಒಳ್ಳೆಯದೇ ಎಂಬುದು ಬೇರೆ ಚರ್ಚೆಯ ವಿಷಯ)…. ಮುಸ್ಲಿಮರು 50 ಜನ ಸೇರಿ ರಂಜಾನ್ ಪ್ರಾರ್ಥನೆ ಮಾಡುವುದನ್ನು ವಿರೋಧಿಸುವ ಸರ್ಕಾರ, ವೈದಿಕರು, ಕ್ಷತ್ರಿಯರು ಮತ್ತು ವೈಶ್ಯರೇ ಹೆಚ್ಚಾಗಿ ಪಾಲ್ಗೊಳ್ಳುವ ಕುಂಭಮೇಳಕ್ಕೆ ಅನುಮತಿ ನೀಡಿದೆ. ಈ ಮೇಲ್‌ಸ್ಥರದ ಹಿಂದೂಗಳು ಸತ್ರೂ ಪರವಾಗಿಲ್ಲ, ತನಗೆ ರಾಜಕೀಯ ಲಾಭ (ಮುಖ್ಯವಾಗಿ ಬಂಗಾಳದಲ್ಲಿ) ಆಗಬೇಕು ಎಂಬುದೇ ಸರ್ಕಾರದ ಉದ್ದೇಶವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕುಂಭಮೇಳದ 30 ಸಾಧುಗಳಿಗೆ ಕೊರೊನಾ ಪಾಸಿಟಿವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಸ್ವಾಮಿ…….
    ಹಿಂದೂಗಳು ಅಂಧ ಭಕ್ತರು ಅವರು ಮೂರ್ತಿ ಪೂಜೆ ನಂಬುತ್ತಾರೆ ನದಿ ಯಲ್ಲಿ ಮಿಂದೇಳುವ ಕಾರ್ಯಕ್ಕೆ ಪುಣ್ಯ ಎಂದು ಭಾವಿಸುತ್ತಾರೆ ಅದಕ್ಕೆ ಮಂದಿರ, ದೇವಸ್ಥಾನಗಳು ಇರುವ ಕಡೆ ಸಾವಿರಾರು ಜನ ಸೇರುತ್ತಾರೆ …..
    ಆದರೆ ತೀರ ಬುದ್ದಿವಂತರಾದ ಇಸ್ಲಾಂ ಭಾಂದವರು ಅವರ ಖುರಾನ್ ನಲ್ಲಿ ಹೇಳಿರುವ ಪ್ರಕಾರ ದಿನದಲ್ಲಿ ಐದು ಬಾರಿ ನಮಾಜ್ ಮಾಡಲು ಯಾವುದೇ ಕಟ್ಟಡದ ಮೂರ್ತಿ ಯ ಅವಶ್ಯಕತೆ ಇಲ್ಲ ಅಲ್ಲವೇ ಮನೆಯಲ್ಲೇ ಕೂತು ಐವತ್ತು ಬಾರಿ ನಮಾಜ್ ಮಾಡಲು ಆಕ್ಷೇಪ ಇಲ್ಲಾ ಅಲ್ಲವೇ……
    ನವಿಲನ್ನು ನೋಡಿ ಪುಕ್ಕ ಕಿತ್ತುಕೊಳ್ಳುವ ಅವಶ್ಯಕತೆ ಏನಿದೆ….
    ನಾನು ಸಾಮಾನ್ಯ ಪ್ರಜೆ …….ನನ್ನ ಬರಹ ಸರಿ ಅನಿಸಿದರೆ ದಯವಿಟ್ಟು ಒಂದಷ್ಟು ದುಡ್ಡು ಕಳಿಸಿ ……

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...