Homeಮುಖಪುಟನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ

ನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ

- Advertisement -
- Advertisement -

ಕೋವಿಡ್ ಹೊಸ ಅಲೆ ತೀವ್ರವಾಗುತ್ತಿರುವ ಈ ಸಂದರ್ಭದಲ್ಲಿ ಈ ವಾರ ನಡೆದ ಕೆಲವು ಸನ್ನಿವೇಶಗಳನ್ನು ಗಮನಿಸೋಣ. ಇಲ್ಲಿ ಎರಡು ಹೈಕೋರ್ಟ್‌ಗಳ ಆದೇಶಗಳು ತದ್ವಿರುದ್ಧವಾಗಿವೆ. ಮುಖ್ಯವಾಹಿನಿ ಮೀಡಿಯಾಗಳು ಪಕ್ಷಪಾತ ಮಾಡುತ್ತಿದೆ. ಈ ಎಲ್ಲದರ ಮಧ್ಯೆ ಕೋವಿಡ್ ದಿನಕ್ಕೆ 2 ಲಕ್ಷ ಜನರನ್ನು ಸೋಂಕಿಸುತ್ತಿದೆ.

ದೆಹಲಿ ಹೈಕೋರ್ಟ್
ಸೋಮವಾರ ಏಪ್ರಿಲ್ 12
ದೆಹಲಿ ವಕ್ಫ್ ಮಂಡಳಿ: ನಿಜಾಮುದ್ದೀನ್ ಮರ್ಕಾಜ್‌ನಲ್ಲಿ ದಿನಕ್ಕೆ 5 ಸಲ ನಮಾಜ್ ಮಾಡಲು ಅವಕಾಶ ನೀಡಿ. ಪ್ರತಿ ಸಲಕ್ಕೆ 50 ಜನರಿಗೆ ಮಾತ್ರ ಅವಕಾಶ ಕೊಡಿ.

ಕೇಂದ್ರ ಸರ್ಕಾರ: ನಮಾಜಿಗೆ ಅನುಮತಿಸಬಹುದು.

ಮಂಗಳವಾರ ಏಪ್ರಿಲ್ 13
ಕೇಂದ್ರ ಸರ್ಕಾರ: ದೆಹಲಿ ವಿಪತ್ತು ನಿರ್ವಹಣಾ ಕಾಯ್ದೆ ಜಾರಿಯಲ್ಲಿ ಇರುವ ಕಾರಣ ನಮಾಜಿಗೆ ಅನುಮತಿ ನೀಡಲಾಗದು. ಹೆಚ್ಚೆಂದರೆ 20 ಜನರು ಪ್ರಾರ್ಥನೆ ಮಾಡಬಹುದು.

ಹೈಕೋರ್ಟ್: ಹರಿದ್ವಾರದಲ್ಲಿೆಲ್ಲ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಕುಂಭಮೇಳ ನಡೆಯುತ್ತಿದೆ. ಇಲ್ಲಿ ನೀವು ಧಾರ್ಮಿಕ ಸಭೆಯೊಂದಕ್ಕೆ 20 ಜನರಿಗಷ್ಟೇ ಅವಕಾಶ ಎನ್ನುತ್ತೀದ್ದೀರಾ? ಎಲ್ಲ ಧಾರ್ಮಿಕ ಸ್ಥಳ, ಸಭೆಗಳಿಗೂ ನೀವು ವಿಧಿಸಿರುವ ನಿರ್ಬಂಧಗಳ ಅಫಿಡವಿಟ್ ಸಲ್ಲಿಸಿ.

ಕೇಂದ್ರ ಸರ್ಕಾರದ ಪಕ್ಷಪಾತಿ ನಿಲುವುಗಳನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ನಿಜಾಮುದ್ದೀನ್ ಮರ್ಕಾಜ್ ಮಸೀದಿಯಲ್ಲಿ ದಿನಕ್ಕೆ 5 ಬಾರಿ ನಮಾಜ್ ಮಾಡಲು, ಪ್ರತಿ ಸಲ 50 ಜನ ನಮಾಜ್ ಮಾಡಲು ಅನುಮತಿ ನೀಡಿದೆ.

ಬಾಂಬೆ ಹೈಕೋರ್ಟ್
ದೆಹಲಿ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುವ ಸಂದರ್ಭದಲ್ಲೇ ಬಾಂಬೆ ಹೈಕೋರ್ಟಿನಲ್ಲಿ ಇದೇ ವಿಷಯವಾಗಿ ಒಂದು ವಿಚಾರಣೆ ನಡೆದು ವ್ಯತಿರಿಕ್ತ ತೀರ್ಪು ಹೊರ ಬಂದಿದೆ. ಮುಂಬೈನ ಜುಮ್ಮಾ ಮಸೀದಿ ಟ್ರಸ್ಟ್‌ನವರು, 50 ಜನರಿಗಾದರೂ ನಮಾಜ್ ಮಾಡಲು ಅವಕಾಶ ಕೊಡಿ, ದಿನಕ್ಕೆ ಹೀಗೆ ನಾಲ್ಕೈದು ಬಾರಿ ನಮಾಜ್ ಏರ್ಪಡಿಸುತ್ತೇವೆ. ನಮ್ಮ ಮಸೀದಿ ಆವರಣ ಒಂದು ಎಕರೆಯಷ್ಟು ವಿಶಾಲವಾಗಿದ್ದು 50 ಜನ ಅಲ್ಲಿ ಸೇರಿದರೆ ತೊಂದರೆಯಾಗುವುದಿಲ್ಲ ಎಂದು ಅರ್ಜಿ ಸಲ್ಲಿಸಿತ್ತು.

ಜನರ ಆರೋಗ್ಯ ಮುಖ್ಯ ಎಂದ ಬಾಂಬೆ ಹೈಕೋರ್ಟ್ ನಮಾಜಿಗೆ ಅನುಮತಿ ನಿರಾಕರಿಸಿತು. ಆ ಹೊತ್ತಿನಲ್ಲಿ ಕುಂಭಮೇಳದಲ್ಲಿ ಲಕ್ಷಾಂತರ ಜನ ನೀರಿನಲ್ಲಿ ಮುಳುಗಿ ಏಳುತ್ತಿದ್ದರು!

ಮೀಡಿಯಾ ಪಕ್ಷಪಾತ

ಕಳೆದ ವರ್ಷ ಆಗಿನ್ನೂ ಕೊವಿಡ್ ಹರಡಲು ಶುರುವಾದ ಸಮಯದಲ್ಲಿ ದೆಹಲಿಯ ನಿಜಾಮುದೀನ್ ಮರ್ಕಾಜ್ ಮಸೀದಿಯಲ್ಲಿ ನಡೆದ ತಬ್ಲಿಗಿ ಸಮಾವೇಶದಲ್ಲಿನ ಹಲವರಿಗೆ ಕೊವಿಡ್ ಕಾಣಿಸಿಕೊಂಡಿತ್ತು. ಸಮಾವೇಶದಲ್ಲಿ ಪಾಲ್ಗೊಂಡವರು ದೇಶದ ಬೇರೆ ಬೇರೆ ಭಾಗಗಳಿಗೆ ತೆರಳಿದ ನಂತರ ಅಲ್ಲಿ ಕೆಲವರಿಗೆ ಕೊವಿಡ್ ತಗುಲಿತ್ತು. ಆಗ ಮೀಡಿಯಾ ಪಾಲಿಗೆ ಕೊರೋನಾ ವೈರಸ್ ತಬ್ಲಿಗಿ ಆಗಿತ್ತು.

ಈಗ ಅದೇ ಮುಖ್ಯವಾಹಿನಿ ಮಾಧ್ಯಮಗಳಿಗೆ ಕುಂಭಮೇಳ ಮಾತ್ರ ಭಕ್ತಿಭಾವದ ಪ್ರತೀಕ. ಆಗ ದಿನಕ್ಕೆ ಸಾವಿರ ಲೆಕ್ಕದಲ್ಲಿ ಕೇಸುಗಳಿದ್ದವು, ಈಗ ದಿನಕ್ಕೆ ಲಕ್ಷಗಳ ಲೆಕ್ಕದಲ್ಲಿ ಕೇಸುಗಳಿವೆ. ಆದರೆ ಯಾರನ್ನು ಓಲೈಸಲು ಈ ಮೀಡಿಯಾಗಳು ಕುಂಭಮೇಳದ ವರದಿಯನ್ನು ಭಕ್ತಿಭಾವದಿಂದ ವರದಿ ಮಾಡುತ್ತಿವೆ.?

ಆಳುವ ಪಕ್ಷ

ಇಲ್ಲಿ ನೆನಪಿಡಬೇಕಾದದ್ದು, ಈಗ ಆಳುತ್ತಿರುವ ಸರ್ಕಾರದ ಮೂಲ ತಳಹದಿಯೇ ವೈದಿಕ ಪುನರುತ್ಥಾನ. ಈ ದೇಶದ ಬಹುಸಂಖ್ಯಾತರಾದ ದಲಿತರು, ಹಿಂದುಳಿದವರ ಸಣ್ಣಪುಟ್ಟ ಜಾತ್ರೆಗಳಿಗೂ ನಿಷೇಧ ಹೇರಲಾಗಿದೆ. (ಆರೋಗ್ಯದ ದೃಷ್ಟಿಯಿಂದ ಇದು ಒಳ್ಳೆಯದೇ ಎಂಬುದು ಬೇರೆ ಚರ್ಚೆಯ ವಿಷಯ)…. ಮುಸ್ಲಿಮರು 50 ಜನ ಸೇರಿ ರಂಜಾನ್ ಪ್ರಾರ್ಥನೆ ಮಾಡುವುದನ್ನು ವಿರೋಧಿಸುವ ಸರ್ಕಾರ, ವೈದಿಕರು, ಕ್ಷತ್ರಿಯರು ಮತ್ತು ವೈಶ್ಯರೇ ಹೆಚ್ಚಾಗಿ ಪಾಲ್ಗೊಳ್ಳುವ ಕುಂಭಮೇಳಕ್ಕೆ ಅನುಮತಿ ನೀಡಿದೆ. ಈ ಮೇಲ್‌ಸ್ಥರದ ಹಿಂದೂಗಳು ಸತ್ರೂ ಪರವಾಗಿಲ್ಲ, ತನಗೆ ರಾಜಕೀಯ ಲಾಭ (ಮುಖ್ಯವಾಗಿ ಬಂಗಾಳದಲ್ಲಿ) ಆಗಬೇಕು ಎಂಬುದೇ ಸರ್ಕಾರದ ಉದ್ದೇಶವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕುಂಭಮೇಳದ 30 ಸಾಧುಗಳಿಗೆ ಕೊರೊನಾ ಪಾಸಿಟಿವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಸ್ವಾಮಿ…….
    ಹಿಂದೂಗಳು ಅಂಧ ಭಕ್ತರು ಅವರು ಮೂರ್ತಿ ಪೂಜೆ ನಂಬುತ್ತಾರೆ ನದಿ ಯಲ್ಲಿ ಮಿಂದೇಳುವ ಕಾರ್ಯಕ್ಕೆ ಪುಣ್ಯ ಎಂದು ಭಾವಿಸುತ್ತಾರೆ ಅದಕ್ಕೆ ಮಂದಿರ, ದೇವಸ್ಥಾನಗಳು ಇರುವ ಕಡೆ ಸಾವಿರಾರು ಜನ ಸೇರುತ್ತಾರೆ …..
    ಆದರೆ ತೀರ ಬುದ್ದಿವಂತರಾದ ಇಸ್ಲಾಂ ಭಾಂದವರು ಅವರ ಖುರಾನ್ ನಲ್ಲಿ ಹೇಳಿರುವ ಪ್ರಕಾರ ದಿನದಲ್ಲಿ ಐದು ಬಾರಿ ನಮಾಜ್ ಮಾಡಲು ಯಾವುದೇ ಕಟ್ಟಡದ ಮೂರ್ತಿ ಯ ಅವಶ್ಯಕತೆ ಇಲ್ಲ ಅಲ್ಲವೇ ಮನೆಯಲ್ಲೇ ಕೂತು ಐವತ್ತು ಬಾರಿ ನಮಾಜ್ ಮಾಡಲು ಆಕ್ಷೇಪ ಇಲ್ಲಾ ಅಲ್ಲವೇ……
    ನವಿಲನ್ನು ನೋಡಿ ಪುಕ್ಕ ಕಿತ್ತುಕೊಳ್ಳುವ ಅವಶ್ಯಕತೆ ಏನಿದೆ….
    ನಾನು ಸಾಮಾನ್ಯ ಪ್ರಜೆ …….ನನ್ನ ಬರಹ ಸರಿ ಅನಿಸಿದರೆ ದಯವಿಟ್ಟು ಒಂದಷ್ಟು ದುಡ್ಡು ಕಳಿಸಿ ……

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...