Homeಮುಖಪುಟನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ

ನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ

- Advertisement -
- Advertisement -

ಕೋವಿಡ್ ಹೊಸ ಅಲೆ ತೀವ್ರವಾಗುತ್ತಿರುವ ಈ ಸಂದರ್ಭದಲ್ಲಿ ಈ ವಾರ ನಡೆದ ಕೆಲವು ಸನ್ನಿವೇಶಗಳನ್ನು ಗಮನಿಸೋಣ. ಇಲ್ಲಿ ಎರಡು ಹೈಕೋರ್ಟ್‌ಗಳ ಆದೇಶಗಳು ತದ್ವಿರುದ್ಧವಾಗಿವೆ. ಮುಖ್ಯವಾಹಿನಿ ಮೀಡಿಯಾಗಳು ಪಕ್ಷಪಾತ ಮಾಡುತ್ತಿದೆ. ಈ ಎಲ್ಲದರ ಮಧ್ಯೆ ಕೋವಿಡ್ ದಿನಕ್ಕೆ 2 ಲಕ್ಷ ಜನರನ್ನು ಸೋಂಕಿಸುತ್ತಿದೆ.

ದೆಹಲಿ ಹೈಕೋರ್ಟ್
ಸೋಮವಾರ ಏಪ್ರಿಲ್ 12
ದೆಹಲಿ ವಕ್ಫ್ ಮಂಡಳಿ: ನಿಜಾಮುದ್ದೀನ್ ಮರ್ಕಾಜ್‌ನಲ್ಲಿ ದಿನಕ್ಕೆ 5 ಸಲ ನಮಾಜ್ ಮಾಡಲು ಅವಕಾಶ ನೀಡಿ. ಪ್ರತಿ ಸಲಕ್ಕೆ 50 ಜನರಿಗೆ ಮಾತ್ರ ಅವಕಾಶ ಕೊಡಿ.

ಕೇಂದ್ರ ಸರ್ಕಾರ: ನಮಾಜಿಗೆ ಅನುಮತಿಸಬಹುದು.

ಮಂಗಳವಾರ ಏಪ್ರಿಲ್ 13
ಕೇಂದ್ರ ಸರ್ಕಾರ: ದೆಹಲಿ ವಿಪತ್ತು ನಿರ್ವಹಣಾ ಕಾಯ್ದೆ ಜಾರಿಯಲ್ಲಿ ಇರುವ ಕಾರಣ ನಮಾಜಿಗೆ ಅನುಮತಿ ನೀಡಲಾಗದು. ಹೆಚ್ಚೆಂದರೆ 20 ಜನರು ಪ್ರಾರ್ಥನೆ ಮಾಡಬಹುದು.

ಹೈಕೋರ್ಟ್: ಹರಿದ್ವಾರದಲ್ಲಿೆಲ್ಲ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಕುಂಭಮೇಳ ನಡೆಯುತ್ತಿದೆ. ಇಲ್ಲಿ ನೀವು ಧಾರ್ಮಿಕ ಸಭೆಯೊಂದಕ್ಕೆ 20 ಜನರಿಗಷ್ಟೇ ಅವಕಾಶ ಎನ್ನುತ್ತೀದ್ದೀರಾ? ಎಲ್ಲ ಧಾರ್ಮಿಕ ಸ್ಥಳ, ಸಭೆಗಳಿಗೂ ನೀವು ವಿಧಿಸಿರುವ ನಿರ್ಬಂಧಗಳ ಅಫಿಡವಿಟ್ ಸಲ್ಲಿಸಿ.

ಕೇಂದ್ರ ಸರ್ಕಾರದ ಪಕ್ಷಪಾತಿ ನಿಲುವುಗಳನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ನಿಜಾಮುದ್ದೀನ್ ಮರ್ಕಾಜ್ ಮಸೀದಿಯಲ್ಲಿ ದಿನಕ್ಕೆ 5 ಬಾರಿ ನಮಾಜ್ ಮಾಡಲು, ಪ್ರತಿ ಸಲ 50 ಜನ ನಮಾಜ್ ಮಾಡಲು ಅನುಮತಿ ನೀಡಿದೆ.

ಬಾಂಬೆ ಹೈಕೋರ್ಟ್
ದೆಹಲಿ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುವ ಸಂದರ್ಭದಲ್ಲೇ ಬಾಂಬೆ ಹೈಕೋರ್ಟಿನಲ್ಲಿ ಇದೇ ವಿಷಯವಾಗಿ ಒಂದು ವಿಚಾರಣೆ ನಡೆದು ವ್ಯತಿರಿಕ್ತ ತೀರ್ಪು ಹೊರ ಬಂದಿದೆ. ಮುಂಬೈನ ಜುಮ್ಮಾ ಮಸೀದಿ ಟ್ರಸ್ಟ್‌ನವರು, 50 ಜನರಿಗಾದರೂ ನಮಾಜ್ ಮಾಡಲು ಅವಕಾಶ ಕೊಡಿ, ದಿನಕ್ಕೆ ಹೀಗೆ ನಾಲ್ಕೈದು ಬಾರಿ ನಮಾಜ್ ಏರ್ಪಡಿಸುತ್ತೇವೆ. ನಮ್ಮ ಮಸೀದಿ ಆವರಣ ಒಂದು ಎಕರೆಯಷ್ಟು ವಿಶಾಲವಾಗಿದ್ದು 50 ಜನ ಅಲ್ಲಿ ಸೇರಿದರೆ ತೊಂದರೆಯಾಗುವುದಿಲ್ಲ ಎಂದು ಅರ್ಜಿ ಸಲ್ಲಿಸಿತ್ತು.

ಜನರ ಆರೋಗ್ಯ ಮುಖ್ಯ ಎಂದ ಬಾಂಬೆ ಹೈಕೋರ್ಟ್ ನಮಾಜಿಗೆ ಅನುಮತಿ ನಿರಾಕರಿಸಿತು. ಆ ಹೊತ್ತಿನಲ್ಲಿ ಕುಂಭಮೇಳದಲ್ಲಿ ಲಕ್ಷಾಂತರ ಜನ ನೀರಿನಲ್ಲಿ ಮುಳುಗಿ ಏಳುತ್ತಿದ್ದರು!

ಮೀಡಿಯಾ ಪಕ್ಷಪಾತ

ಕಳೆದ ವರ್ಷ ಆಗಿನ್ನೂ ಕೊವಿಡ್ ಹರಡಲು ಶುರುವಾದ ಸಮಯದಲ್ಲಿ ದೆಹಲಿಯ ನಿಜಾಮುದೀನ್ ಮರ್ಕಾಜ್ ಮಸೀದಿಯಲ್ಲಿ ನಡೆದ ತಬ್ಲಿಗಿ ಸಮಾವೇಶದಲ್ಲಿನ ಹಲವರಿಗೆ ಕೊವಿಡ್ ಕಾಣಿಸಿಕೊಂಡಿತ್ತು. ಸಮಾವೇಶದಲ್ಲಿ ಪಾಲ್ಗೊಂಡವರು ದೇಶದ ಬೇರೆ ಬೇರೆ ಭಾಗಗಳಿಗೆ ತೆರಳಿದ ನಂತರ ಅಲ್ಲಿ ಕೆಲವರಿಗೆ ಕೊವಿಡ್ ತಗುಲಿತ್ತು. ಆಗ ಮೀಡಿಯಾ ಪಾಲಿಗೆ ಕೊರೋನಾ ವೈರಸ್ ತಬ್ಲಿಗಿ ಆಗಿತ್ತು.

ಈಗ ಅದೇ ಮುಖ್ಯವಾಹಿನಿ ಮಾಧ್ಯಮಗಳಿಗೆ ಕುಂಭಮೇಳ ಮಾತ್ರ ಭಕ್ತಿಭಾವದ ಪ್ರತೀಕ. ಆಗ ದಿನಕ್ಕೆ ಸಾವಿರ ಲೆಕ್ಕದಲ್ಲಿ ಕೇಸುಗಳಿದ್ದವು, ಈಗ ದಿನಕ್ಕೆ ಲಕ್ಷಗಳ ಲೆಕ್ಕದಲ್ಲಿ ಕೇಸುಗಳಿವೆ. ಆದರೆ ಯಾರನ್ನು ಓಲೈಸಲು ಈ ಮೀಡಿಯಾಗಳು ಕುಂಭಮೇಳದ ವರದಿಯನ್ನು ಭಕ್ತಿಭಾವದಿಂದ ವರದಿ ಮಾಡುತ್ತಿವೆ.?

ಆಳುವ ಪಕ್ಷ

ಇಲ್ಲಿ ನೆನಪಿಡಬೇಕಾದದ್ದು, ಈಗ ಆಳುತ್ತಿರುವ ಸರ್ಕಾರದ ಮೂಲ ತಳಹದಿಯೇ ವೈದಿಕ ಪುನರುತ್ಥಾನ. ಈ ದೇಶದ ಬಹುಸಂಖ್ಯಾತರಾದ ದಲಿತರು, ಹಿಂದುಳಿದವರ ಸಣ್ಣಪುಟ್ಟ ಜಾತ್ರೆಗಳಿಗೂ ನಿಷೇಧ ಹೇರಲಾಗಿದೆ. (ಆರೋಗ್ಯದ ದೃಷ್ಟಿಯಿಂದ ಇದು ಒಳ್ಳೆಯದೇ ಎಂಬುದು ಬೇರೆ ಚರ್ಚೆಯ ವಿಷಯ)…. ಮುಸ್ಲಿಮರು 50 ಜನ ಸೇರಿ ರಂಜಾನ್ ಪ್ರಾರ್ಥನೆ ಮಾಡುವುದನ್ನು ವಿರೋಧಿಸುವ ಸರ್ಕಾರ, ವೈದಿಕರು, ಕ್ಷತ್ರಿಯರು ಮತ್ತು ವೈಶ್ಯರೇ ಹೆಚ್ಚಾಗಿ ಪಾಲ್ಗೊಳ್ಳುವ ಕುಂಭಮೇಳಕ್ಕೆ ಅನುಮತಿ ನೀಡಿದೆ. ಈ ಮೇಲ್‌ಸ್ಥರದ ಹಿಂದೂಗಳು ಸತ್ರೂ ಪರವಾಗಿಲ್ಲ, ತನಗೆ ರಾಜಕೀಯ ಲಾಭ (ಮುಖ್ಯವಾಗಿ ಬಂಗಾಳದಲ್ಲಿ) ಆಗಬೇಕು ಎಂಬುದೇ ಸರ್ಕಾರದ ಉದ್ದೇಶವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕುಂಭಮೇಳದ 30 ಸಾಧುಗಳಿಗೆ ಕೊರೊನಾ ಪಾಸಿಟಿವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಸ್ವಾಮಿ…….
    ಹಿಂದೂಗಳು ಅಂಧ ಭಕ್ತರು ಅವರು ಮೂರ್ತಿ ಪೂಜೆ ನಂಬುತ್ತಾರೆ ನದಿ ಯಲ್ಲಿ ಮಿಂದೇಳುವ ಕಾರ್ಯಕ್ಕೆ ಪುಣ್ಯ ಎಂದು ಭಾವಿಸುತ್ತಾರೆ ಅದಕ್ಕೆ ಮಂದಿರ, ದೇವಸ್ಥಾನಗಳು ಇರುವ ಕಡೆ ಸಾವಿರಾರು ಜನ ಸೇರುತ್ತಾರೆ …..
    ಆದರೆ ತೀರ ಬುದ್ದಿವಂತರಾದ ಇಸ್ಲಾಂ ಭಾಂದವರು ಅವರ ಖುರಾನ್ ನಲ್ಲಿ ಹೇಳಿರುವ ಪ್ರಕಾರ ದಿನದಲ್ಲಿ ಐದು ಬಾರಿ ನಮಾಜ್ ಮಾಡಲು ಯಾವುದೇ ಕಟ್ಟಡದ ಮೂರ್ತಿ ಯ ಅವಶ್ಯಕತೆ ಇಲ್ಲ ಅಲ್ಲವೇ ಮನೆಯಲ್ಲೇ ಕೂತು ಐವತ್ತು ಬಾರಿ ನಮಾಜ್ ಮಾಡಲು ಆಕ್ಷೇಪ ಇಲ್ಲಾ ಅಲ್ಲವೇ……
    ನವಿಲನ್ನು ನೋಡಿ ಪುಕ್ಕ ಕಿತ್ತುಕೊಳ್ಳುವ ಅವಶ್ಯಕತೆ ಏನಿದೆ….
    ನಾನು ಸಾಮಾನ್ಯ ಪ್ರಜೆ …….ನನ್ನ ಬರಹ ಸರಿ ಅನಿಸಿದರೆ ದಯವಿಟ್ಟು ಒಂದಷ್ಟು ದುಡ್ಡು ಕಳಿಸಿ ……

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...