Homeಮುಖಪುಟನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ

ನಮಾಜು, ತಬ್ಲಿಗಿ, ಕುಂಭಮೇಳ ಕುರಿತು ಕೋರ್ಟು ಮತ್ತು ಮಾಧ್ಯಮಗಳ ವರ್ತನೆ

- Advertisement -
- Advertisement -

ಕೋವಿಡ್ ಹೊಸ ಅಲೆ ತೀವ್ರವಾಗುತ್ತಿರುವ ಈ ಸಂದರ್ಭದಲ್ಲಿ ಈ ವಾರ ನಡೆದ ಕೆಲವು ಸನ್ನಿವೇಶಗಳನ್ನು ಗಮನಿಸೋಣ. ಇಲ್ಲಿ ಎರಡು ಹೈಕೋರ್ಟ್‌ಗಳ ಆದೇಶಗಳು ತದ್ವಿರುದ್ಧವಾಗಿವೆ. ಮುಖ್ಯವಾಹಿನಿ ಮೀಡಿಯಾಗಳು ಪಕ್ಷಪಾತ ಮಾಡುತ್ತಿದೆ. ಈ ಎಲ್ಲದರ ಮಧ್ಯೆ ಕೋವಿಡ್ ದಿನಕ್ಕೆ 2 ಲಕ್ಷ ಜನರನ್ನು ಸೋಂಕಿಸುತ್ತಿದೆ.

ದೆಹಲಿ ಹೈಕೋರ್ಟ್
ಸೋಮವಾರ ಏಪ್ರಿಲ್ 12
ದೆಹಲಿ ವಕ್ಫ್ ಮಂಡಳಿ: ನಿಜಾಮುದ್ದೀನ್ ಮರ್ಕಾಜ್‌ನಲ್ಲಿ ದಿನಕ್ಕೆ 5 ಸಲ ನಮಾಜ್ ಮಾಡಲು ಅವಕಾಶ ನೀಡಿ. ಪ್ರತಿ ಸಲಕ್ಕೆ 50 ಜನರಿಗೆ ಮಾತ್ರ ಅವಕಾಶ ಕೊಡಿ.

ಕೇಂದ್ರ ಸರ್ಕಾರ: ನಮಾಜಿಗೆ ಅನುಮತಿಸಬಹುದು.

ಮಂಗಳವಾರ ಏಪ್ರಿಲ್ 13
ಕೇಂದ್ರ ಸರ್ಕಾರ: ದೆಹಲಿ ವಿಪತ್ತು ನಿರ್ವಹಣಾ ಕಾಯ್ದೆ ಜಾರಿಯಲ್ಲಿ ಇರುವ ಕಾರಣ ನಮಾಜಿಗೆ ಅನುಮತಿ ನೀಡಲಾಗದು. ಹೆಚ್ಚೆಂದರೆ 20 ಜನರು ಪ್ರಾರ್ಥನೆ ಮಾಡಬಹುದು.

ಹೈಕೋರ್ಟ್: ಹರಿದ್ವಾರದಲ್ಲಿೆಲ್ಲ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿ ಕುಂಭಮೇಳ ನಡೆಯುತ್ತಿದೆ. ಇಲ್ಲಿ ನೀವು ಧಾರ್ಮಿಕ ಸಭೆಯೊಂದಕ್ಕೆ 20 ಜನರಿಗಷ್ಟೇ ಅವಕಾಶ ಎನ್ನುತ್ತೀದ್ದೀರಾ? ಎಲ್ಲ ಧಾರ್ಮಿಕ ಸ್ಥಳ, ಸಭೆಗಳಿಗೂ ನೀವು ವಿಧಿಸಿರುವ ನಿರ್ಬಂಧಗಳ ಅಫಿಡವಿಟ್ ಸಲ್ಲಿಸಿ.

ಕೇಂದ್ರ ಸರ್ಕಾರದ ಪಕ್ಷಪಾತಿ ನಿಲುವುಗಳನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ನಿಜಾಮುದ್ದೀನ್ ಮರ್ಕಾಜ್ ಮಸೀದಿಯಲ್ಲಿ ದಿನಕ್ಕೆ 5 ಬಾರಿ ನಮಾಜ್ ಮಾಡಲು, ಪ್ರತಿ ಸಲ 50 ಜನ ನಮಾಜ್ ಮಾಡಲು ಅನುಮತಿ ನೀಡಿದೆ.

ಬಾಂಬೆ ಹೈಕೋರ್ಟ್
ದೆಹಲಿ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುವ ಸಂದರ್ಭದಲ್ಲೇ ಬಾಂಬೆ ಹೈಕೋರ್ಟಿನಲ್ಲಿ ಇದೇ ವಿಷಯವಾಗಿ ಒಂದು ವಿಚಾರಣೆ ನಡೆದು ವ್ಯತಿರಿಕ್ತ ತೀರ್ಪು ಹೊರ ಬಂದಿದೆ. ಮುಂಬೈನ ಜುಮ್ಮಾ ಮಸೀದಿ ಟ್ರಸ್ಟ್‌ನವರು, 50 ಜನರಿಗಾದರೂ ನಮಾಜ್ ಮಾಡಲು ಅವಕಾಶ ಕೊಡಿ, ದಿನಕ್ಕೆ ಹೀಗೆ ನಾಲ್ಕೈದು ಬಾರಿ ನಮಾಜ್ ಏರ್ಪಡಿಸುತ್ತೇವೆ. ನಮ್ಮ ಮಸೀದಿ ಆವರಣ ಒಂದು ಎಕರೆಯಷ್ಟು ವಿಶಾಲವಾಗಿದ್ದು 50 ಜನ ಅಲ್ಲಿ ಸೇರಿದರೆ ತೊಂದರೆಯಾಗುವುದಿಲ್ಲ ಎಂದು ಅರ್ಜಿ ಸಲ್ಲಿಸಿತ್ತು.

ಜನರ ಆರೋಗ್ಯ ಮುಖ್ಯ ಎಂದ ಬಾಂಬೆ ಹೈಕೋರ್ಟ್ ನಮಾಜಿಗೆ ಅನುಮತಿ ನಿರಾಕರಿಸಿತು. ಆ ಹೊತ್ತಿನಲ್ಲಿ ಕುಂಭಮೇಳದಲ್ಲಿ ಲಕ್ಷಾಂತರ ಜನ ನೀರಿನಲ್ಲಿ ಮುಳುಗಿ ಏಳುತ್ತಿದ್ದರು!

ಮೀಡಿಯಾ ಪಕ್ಷಪಾತ

ಕಳೆದ ವರ್ಷ ಆಗಿನ್ನೂ ಕೊವಿಡ್ ಹರಡಲು ಶುರುವಾದ ಸಮಯದಲ್ಲಿ ದೆಹಲಿಯ ನಿಜಾಮುದೀನ್ ಮರ್ಕಾಜ್ ಮಸೀದಿಯಲ್ಲಿ ನಡೆದ ತಬ್ಲಿಗಿ ಸಮಾವೇಶದಲ್ಲಿನ ಹಲವರಿಗೆ ಕೊವಿಡ್ ಕಾಣಿಸಿಕೊಂಡಿತ್ತು. ಸಮಾವೇಶದಲ್ಲಿ ಪಾಲ್ಗೊಂಡವರು ದೇಶದ ಬೇರೆ ಬೇರೆ ಭಾಗಗಳಿಗೆ ತೆರಳಿದ ನಂತರ ಅಲ್ಲಿ ಕೆಲವರಿಗೆ ಕೊವಿಡ್ ತಗುಲಿತ್ತು. ಆಗ ಮೀಡಿಯಾ ಪಾಲಿಗೆ ಕೊರೋನಾ ವೈರಸ್ ತಬ್ಲಿಗಿ ಆಗಿತ್ತು.

ಈಗ ಅದೇ ಮುಖ್ಯವಾಹಿನಿ ಮಾಧ್ಯಮಗಳಿಗೆ ಕುಂಭಮೇಳ ಮಾತ್ರ ಭಕ್ತಿಭಾವದ ಪ್ರತೀಕ. ಆಗ ದಿನಕ್ಕೆ ಸಾವಿರ ಲೆಕ್ಕದಲ್ಲಿ ಕೇಸುಗಳಿದ್ದವು, ಈಗ ದಿನಕ್ಕೆ ಲಕ್ಷಗಳ ಲೆಕ್ಕದಲ್ಲಿ ಕೇಸುಗಳಿವೆ. ಆದರೆ ಯಾರನ್ನು ಓಲೈಸಲು ಈ ಮೀಡಿಯಾಗಳು ಕುಂಭಮೇಳದ ವರದಿಯನ್ನು ಭಕ್ತಿಭಾವದಿಂದ ವರದಿ ಮಾಡುತ್ತಿವೆ.?

ಆಳುವ ಪಕ್ಷ

ಇಲ್ಲಿ ನೆನಪಿಡಬೇಕಾದದ್ದು, ಈಗ ಆಳುತ್ತಿರುವ ಸರ್ಕಾರದ ಮೂಲ ತಳಹದಿಯೇ ವೈದಿಕ ಪುನರುತ್ಥಾನ. ಈ ದೇಶದ ಬಹುಸಂಖ್ಯಾತರಾದ ದಲಿತರು, ಹಿಂದುಳಿದವರ ಸಣ್ಣಪುಟ್ಟ ಜಾತ್ರೆಗಳಿಗೂ ನಿಷೇಧ ಹೇರಲಾಗಿದೆ. (ಆರೋಗ್ಯದ ದೃಷ್ಟಿಯಿಂದ ಇದು ಒಳ್ಳೆಯದೇ ಎಂಬುದು ಬೇರೆ ಚರ್ಚೆಯ ವಿಷಯ)…. ಮುಸ್ಲಿಮರು 50 ಜನ ಸೇರಿ ರಂಜಾನ್ ಪ್ರಾರ್ಥನೆ ಮಾಡುವುದನ್ನು ವಿರೋಧಿಸುವ ಸರ್ಕಾರ, ವೈದಿಕರು, ಕ್ಷತ್ರಿಯರು ಮತ್ತು ವೈಶ್ಯರೇ ಹೆಚ್ಚಾಗಿ ಪಾಲ್ಗೊಳ್ಳುವ ಕುಂಭಮೇಳಕ್ಕೆ ಅನುಮತಿ ನೀಡಿದೆ. ಈ ಮೇಲ್‌ಸ್ಥರದ ಹಿಂದೂಗಳು ಸತ್ರೂ ಪರವಾಗಿಲ್ಲ, ತನಗೆ ರಾಜಕೀಯ ಲಾಭ (ಮುಖ್ಯವಾಗಿ ಬಂಗಾಳದಲ್ಲಿ) ಆಗಬೇಕು ಎಂಬುದೇ ಸರ್ಕಾರದ ಉದ್ದೇಶವೇ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕುಂಭಮೇಳದ 30 ಸಾಧುಗಳಿಗೆ ಕೊರೊನಾ ಪಾಸಿಟಿವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜ ಸ್ವಾಮಿ…….
    ಹಿಂದೂಗಳು ಅಂಧ ಭಕ್ತರು ಅವರು ಮೂರ್ತಿ ಪೂಜೆ ನಂಬುತ್ತಾರೆ ನದಿ ಯಲ್ಲಿ ಮಿಂದೇಳುವ ಕಾರ್ಯಕ್ಕೆ ಪುಣ್ಯ ಎಂದು ಭಾವಿಸುತ್ತಾರೆ ಅದಕ್ಕೆ ಮಂದಿರ, ದೇವಸ್ಥಾನಗಳು ಇರುವ ಕಡೆ ಸಾವಿರಾರು ಜನ ಸೇರುತ್ತಾರೆ …..
    ಆದರೆ ತೀರ ಬುದ್ದಿವಂತರಾದ ಇಸ್ಲಾಂ ಭಾಂದವರು ಅವರ ಖುರಾನ್ ನಲ್ಲಿ ಹೇಳಿರುವ ಪ್ರಕಾರ ದಿನದಲ್ಲಿ ಐದು ಬಾರಿ ನಮಾಜ್ ಮಾಡಲು ಯಾವುದೇ ಕಟ್ಟಡದ ಮೂರ್ತಿ ಯ ಅವಶ್ಯಕತೆ ಇಲ್ಲ ಅಲ್ಲವೇ ಮನೆಯಲ್ಲೇ ಕೂತು ಐವತ್ತು ಬಾರಿ ನಮಾಜ್ ಮಾಡಲು ಆಕ್ಷೇಪ ಇಲ್ಲಾ ಅಲ್ಲವೇ……
    ನವಿಲನ್ನು ನೋಡಿ ಪುಕ್ಕ ಕಿತ್ತುಕೊಳ್ಳುವ ಅವಶ್ಯಕತೆ ಏನಿದೆ….
    ನಾನು ಸಾಮಾನ್ಯ ಪ್ರಜೆ …….ನನ್ನ ಬರಹ ಸರಿ ಅನಿಸಿದರೆ ದಯವಿಟ್ಟು ಒಂದಷ್ಟು ದುಡ್ಡು ಕಳಿಸಿ ……

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...