Homeಅಂತರಾಷ್ಟ್ರೀಯಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

ಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

- Advertisement -
- Advertisement -

ಫೆ.14ರ ಪುಲ್ವಾಮಾ ದಾಳಿಯ ಕುರಿತು ಪೊಲೀಸರಿಗೆ, ಸೈನ್ಯಕ್ಕೆ ಸಾಕಷ್ಟು ಮುಂಚೆಯೇ ಮಾಹಿತಿ ಇತ್ತು ಎಂಬ ಸುದ್ದಿ ಈ ಮುಂಚೆಯೇ ಹರಿದಾಡಿತ್ತು. ಆದರೆ, ದಿ ಕ್ವಿಂಟ್ ವೆಬ್ ಪೋರ್ಟಲ್ ನಿರ್ದಿಷ್ಟವಾದ ದಾಖಲೆಗಳನ್ನು ಪಡೆದು ಅದು ನಿಜ ಎಂಬ ಆಘಾತಕಾರಿ ಸುದ್ದಿಯನ್ನು ಪ್ರಕಟಿಸಿದೆ. ‘ಹೊರಗಿನಿಂದ ಬಂದ ಭಯೋತ್ಪಾದಕರು’ ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶಕ್ಕೆ ಬಂದಿದ್ದಾರೆ ಮತ್ತು ಅವರು ಸದ್ಯದಲ್ಲೇ ಭಾರೀ ದೊಡ್ಡ ಆತ್ಮಹತ್ಯಾತ್ಮಕ ದಾಳಿ ನಡೆಸುವ ಸಾಧ್ಯತೆ ಇದೆ ಎಂಬುದು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಜನವರಿ 24ಕ್ಕೇ ಮಾಹಿತಿ ಇತ್ತು.
ಅಷ್ಟೇ ಅಲ್ಲ, ಯಾವ ಭಯೋತ್ಪಾದಕ ಗುಂಪಿನ ಸದಸ್ಯರು ಅವರು ಮತ್ತು ಅವರಿಗೆ ಆಶ್ರಯದಾತರು ಯಾರಿರಬಹುದು ಎಂಬ ಬಗ್ಗೆಯೂ ಅವರಿಗೆ ಮಾಹಿತಿ ಇತ್ತು. ಅದನ್ನು ಪರಿಶೀಲಿಸಿದ ಜಮ್ಮು ಕಾಶ್ಮೀರದ ಪೊಲೀಸರು ಜನವರಿ 31ರಂದು ಅಡಿಷನಲ್ ಜನರಲ್ ಆಫ್ ಪೊಲೀಸ್ ಡಾ.ಬಿ.ಶ್ರೀನಿವಾಸ್ ಅವರ ಮೂಲಕ ಸಿಆರ್‍ಪಿಎಫ್ ಮತ್ತಿತರ ಪೊಲೀಸ್ ಬಳಗಕ್ಕೆ ಸುದ್ದಿ ಮುಟ್ಟಿಸಿದ್ದಾರೆ.

ಇಂತಹ ಮಹತ್ವದ ಮಾಹಿತಿ ಬಂದಾಗ ಸಂಬಂಧಿಸಿದವರ ಬಂಧನ ಆಗುವವರೆಗೆ ಅಥವಾ ‘ಬೆದರಿಕೆಯ ನಿರ್ಮೂಲನೆ’ ಆಗುವವರೆಗೆ ಹೈ ಅಲರ್ಟ್ ಇರಬೇಕಿತ್ತು. ಹೈವೇಗಳ ಸುತ್ತ ಕಟ್ಟೆಚ್ಚರ ವಹಿಸಿ ನಮ್ಮ ದಳಗಳು ಸಂಚರಿಸುವ ಜಾಗದಲ್ಲಿ ಬೇರಾವುದೇ ವಾಹನಗಳಿಗೆ ಅವಕಾಶ ಇರಬಾರದಿತ್ತು. ಕಾರ್ಯಾಚರಣೆಗೆ ಹೆಚ್ಚಿನ ದಳಗಳನ್ನು ನಿಯೋಜಿಸಬೇಕಿತ್ತು. ಇವ್ಯಾವುವೂ ಆಗದೇ ನಮ್ಮ ರಕ್ಷಣಾ ಪಡೆಯ ಅಮೂಲ್ಯವಾದ ಜೀವಗಳನ್ನು ಬಲಿಕೊಟ್ಟಿದ್ದನ್ನು ಭಾರೀ ದೊಡ್ಡ ಇಂಟೆಲಿಜೆನ್ಸ್ ವೈಫಲ್ಯ ಎಂದೇ ಬಗೆಯಲಾಗುತ್ತದೆ.

ಇದಕ್ಕೆ ಇನ್ನೊಂದು ಕಾರಣವನ್ನೂ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ದಿ ಕ್ವಿಂಟ್ ವರದಿ ಮಾಡಿದೆ. ‘ಫೆ.9 ಮತ್ತು ಫೆ.11 ಅಫ್ಜಲ್‍ಗುರು ಮತ್ತು ಜೆಕೆಎಲ್‍ಎಫ್ ಸ್ಥಾಪಕ ಮಕ್ಬೂಲ್ ಬಟ್ ಅವರುಗಳನ್ನು ನೇಣಿಗೇರಿಸಿದ ದಿನಗಳು. ಹಾಗಾಗಿ ಅವರೆಡು ದಿನಗಳ ನಡುವೆ ಏನಾದರೂ ಆಗಬಹುದು ಎಂಬ ಎಚ್ಚರ ವಹಿಸಲಾಗಿತ್ತು. ಆಗ ಏನೂ ಆಗದಿದ್ದುದರಿಂದ ಎಲ್ಲರೂ ಸಡಿಲವಾದರು’. ಇಂತಹ ನಿರ್ಲಕ್ಷ್ಯದಿಂದ 40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಪ್ರಾಣ ತೆತ್ತಬೇಕಾಯಿತು ಎಂಬುದನ್ನು ಮರೆಯಲಾಗದು.

ಆದರೆ, ಇದರ ಹೊಣೆ ಹೊರುವವರು ಯಾರು ಎಂಬುದೇ ಪ್ರಶ್ನೆ. ಎಲ್ಲರೂ ಸಾಧನೆಗಳಿಗೆ ತಾವೇ ಕಾರಣರು ಎಂದು ಹೇಳಿಕೊಳ್ಳಲು ಮುಂದಾಗುತ್ತಿದ್ದಾರೆ, ವೈಫಲ್ಯಕ್ಕೆ ಮಾತ್ರ ಯಾರೂ ದಿಕ್ಕಿಲ್ಲದಂತಾಗಿದೆ. ಜಮ್ಮು ಕಾಶ್ಮೀರದಲ್ಲಿ ಇಂದು ಚುನಾಯಿತ ಸರ್ಕಾರವೂ ಇಲ್ಲ. ರಾಷ್ಟ್ರಪತಿ ಆಡಳಿತ ಇರುವುದರಿಂದ, ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರವೇ ಆಳ್ವಿಕೆ ನಡೆಸುತ್ತದೆ. ಇನ್ನು ಕೇಂದ್ರೀಯ ದಳಗಳೂ ಅವರ ವ್ಯಾಪ್ತಿಯಲ್ಲೇ ಬರುತ್ತವೆ. ಹೀಗಿರುವಾಗ ಗಂಭೀರ ಆತ್ಮಾವಲೋಕನಕ್ಕೆ ಮುಂದಾಗುವ ಕೆಲಸ ಕೇಂದ್ರದ್ದೇ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಸಾಲಾ ಬಾಂಡ್ ಪ್ರಕರಣ : ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಶೋಕಾಸ್ ನೋಟಿಸ್ ನೀಡಿದ ಇಡಿ

ಕೆಐಐಎಫ್‌ಬಿ ಮಸಾಲಾ ಬಾಂಡ್ ಪ್ರಕರಣದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್, ಮಾಜಿ ಹಣಕಾಸು ಸಚಿವ ಥಾಮಸ್ ಐಸಾಕ್ ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೆ.ಎಂ ಅಬ್ರಹಾಂ ಅವರಿಗೆ ಜಾರಿ ನಿರ್ದೇಶನಾಲ 466 ಕೋಟಿ ರೂ.ಗಳ...

ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್

ಸೋಮವಾರ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ, ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ತುರ್ತು ಚರ್ಚೆ ನಡೆಸಬೇಕೆಂದು ಕೋರಿ ಕಾಂಗ್ರೆಸ್ ನಿಲುವಳಿ ಸೂಚನೆ...

ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಡಿಕ್ಕಿ:10ಕ್ಕೂ ಹೆಚ್ಚು ಜನರ ಸಾವು, 20 ಜನರಿಗೆ ಗಂಭೀರ ಗಾಯಗಳಾಗಿವೆ

ಚೆನ್ನೈ: ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿ, 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು...

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ...

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.  ನವೆಂಬರ್ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು...

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ: ಮನನೊಂದು 22 ವರ್ಷದ ಯುವತಿ ಆತ್ಮಹತ್ಯೆ 

ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂಜಿನಿಯರಿಂಗ್ ಪದವೀಧರೆ...

ಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ (ನ.28) ಪ್ರಮುಖ ಮಾವೋವಾದಿ ನಾಯಕ ವಿಕಾಸ್ ನಾಗಪುರೆ ಅಲಿಯಾಸ್ ನವಜ್ಯೋತ್ ಅಲಿಯಾಸ್ ಅನಂತ್ ಮತ್ತು ಇತರ 10 ಮಂದಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಅನಂತ್ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ...

ಎಸ್‌ಐಆರ್ : 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗಡುವು ವಿಸ್ತರಿಸಿದ ಚು. ಆಯೋಗ

ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)ಯಲ್ಲಿ ಮತದಾರರು ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವನ್ನು ಡಿಸೆಂಬರ್ 4 ರಿಂದ 11ಕ್ಕೆ ಚುನಾವಣಾ ಆಯೋಗ...

ಗೆಳತಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ವಿವಾಹ: 18ವರ್ಷದ ಪದವಿಪೂರ್ವ ವಿದ್ಯಾರ್ಥಿ ಆತ್ಮಹತ್ಯೆ

ತನ್ನ ಗೆಳತಿ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾದ ಕಾರಣ ನವೆಂಬರ್ 29, ಶನಿವಾರ ಹೈದರಾಬಾದ್‌ನಲ್ಲಿ ಪದವಿಪೂರ್ವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಸುರರಾಮ್ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು 18 ವರ್ಷದ ಅಭಿಲಾಷ್ ಎಂದು...

ಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

ಅರ್ಫಾಝ್ ಎಂಬ ಪತ್ರಕರ್ತನ ಮನೆಯನ್ನು ಆಡಳಿತ ಕೆಡವಿದಾಗ, ತನ್ನ ಜಾಗವನ್ನು ಉಡುಗೊರೆಯಾಗಿ ಕೊಟ್ಟ ಜಮ್ಮು ಕಾಶ್ಮೀರದ ಸಾಮಾಜಿಕ ಹೋರಾಟಗಾರ ಕುಲ್ದೀಪ್ ಶರ್ಮಾ ನಡೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಜಮ್ಮುವಿನ ಜ್ಯುವೆಲ್ ಪ್ರದೇಶದ ನಿವಾಸಿ...