Homeಅಂತರಾಷ್ಟ್ರೀಯಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

ಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

- Advertisement -
- Advertisement -

ಫೆ.14ರ ಪುಲ್ವಾಮಾ ದಾಳಿಯ ಕುರಿತು ಪೊಲೀಸರಿಗೆ, ಸೈನ್ಯಕ್ಕೆ ಸಾಕಷ್ಟು ಮುಂಚೆಯೇ ಮಾಹಿತಿ ಇತ್ತು ಎಂಬ ಸುದ್ದಿ ಈ ಮುಂಚೆಯೇ ಹರಿದಾಡಿತ್ತು. ಆದರೆ, ದಿ ಕ್ವಿಂಟ್ ವೆಬ್ ಪೋರ್ಟಲ್ ನಿರ್ದಿಷ್ಟವಾದ ದಾಖಲೆಗಳನ್ನು ಪಡೆದು ಅದು ನಿಜ ಎಂಬ ಆಘಾತಕಾರಿ ಸುದ್ದಿಯನ್ನು ಪ್ರಕಟಿಸಿದೆ. ‘ಹೊರಗಿನಿಂದ ಬಂದ ಭಯೋತ್ಪಾದಕರು’ ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶಕ್ಕೆ ಬಂದಿದ್ದಾರೆ ಮತ್ತು ಅವರು ಸದ್ಯದಲ್ಲೇ ಭಾರೀ ದೊಡ್ಡ ಆತ್ಮಹತ್ಯಾತ್ಮಕ ದಾಳಿ ನಡೆಸುವ ಸಾಧ್ಯತೆ ಇದೆ ಎಂಬುದು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಜನವರಿ 24ಕ್ಕೇ ಮಾಹಿತಿ ಇತ್ತು.
ಅಷ್ಟೇ ಅಲ್ಲ, ಯಾವ ಭಯೋತ್ಪಾದಕ ಗುಂಪಿನ ಸದಸ್ಯರು ಅವರು ಮತ್ತು ಅವರಿಗೆ ಆಶ್ರಯದಾತರು ಯಾರಿರಬಹುದು ಎಂಬ ಬಗ್ಗೆಯೂ ಅವರಿಗೆ ಮಾಹಿತಿ ಇತ್ತು. ಅದನ್ನು ಪರಿಶೀಲಿಸಿದ ಜಮ್ಮು ಕಾಶ್ಮೀರದ ಪೊಲೀಸರು ಜನವರಿ 31ರಂದು ಅಡಿಷನಲ್ ಜನರಲ್ ಆಫ್ ಪೊಲೀಸ್ ಡಾ.ಬಿ.ಶ್ರೀನಿವಾಸ್ ಅವರ ಮೂಲಕ ಸಿಆರ್‍ಪಿಎಫ್ ಮತ್ತಿತರ ಪೊಲೀಸ್ ಬಳಗಕ್ಕೆ ಸುದ್ದಿ ಮುಟ್ಟಿಸಿದ್ದಾರೆ.

ಇಂತಹ ಮಹತ್ವದ ಮಾಹಿತಿ ಬಂದಾಗ ಸಂಬಂಧಿಸಿದವರ ಬಂಧನ ಆಗುವವರೆಗೆ ಅಥವಾ ‘ಬೆದರಿಕೆಯ ನಿರ್ಮೂಲನೆ’ ಆಗುವವರೆಗೆ ಹೈ ಅಲರ್ಟ್ ಇರಬೇಕಿತ್ತು. ಹೈವೇಗಳ ಸುತ್ತ ಕಟ್ಟೆಚ್ಚರ ವಹಿಸಿ ನಮ್ಮ ದಳಗಳು ಸಂಚರಿಸುವ ಜಾಗದಲ್ಲಿ ಬೇರಾವುದೇ ವಾಹನಗಳಿಗೆ ಅವಕಾಶ ಇರಬಾರದಿತ್ತು. ಕಾರ್ಯಾಚರಣೆಗೆ ಹೆಚ್ಚಿನ ದಳಗಳನ್ನು ನಿಯೋಜಿಸಬೇಕಿತ್ತು. ಇವ್ಯಾವುವೂ ಆಗದೇ ನಮ್ಮ ರಕ್ಷಣಾ ಪಡೆಯ ಅಮೂಲ್ಯವಾದ ಜೀವಗಳನ್ನು ಬಲಿಕೊಟ್ಟಿದ್ದನ್ನು ಭಾರೀ ದೊಡ್ಡ ಇಂಟೆಲಿಜೆನ್ಸ್ ವೈಫಲ್ಯ ಎಂದೇ ಬಗೆಯಲಾಗುತ್ತದೆ.

ಇದಕ್ಕೆ ಇನ್ನೊಂದು ಕಾರಣವನ್ನೂ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ದಿ ಕ್ವಿಂಟ್ ವರದಿ ಮಾಡಿದೆ. ‘ಫೆ.9 ಮತ್ತು ಫೆ.11 ಅಫ್ಜಲ್‍ಗುರು ಮತ್ತು ಜೆಕೆಎಲ್‍ಎಫ್ ಸ್ಥಾಪಕ ಮಕ್ಬೂಲ್ ಬಟ್ ಅವರುಗಳನ್ನು ನೇಣಿಗೇರಿಸಿದ ದಿನಗಳು. ಹಾಗಾಗಿ ಅವರೆಡು ದಿನಗಳ ನಡುವೆ ಏನಾದರೂ ಆಗಬಹುದು ಎಂಬ ಎಚ್ಚರ ವಹಿಸಲಾಗಿತ್ತು. ಆಗ ಏನೂ ಆಗದಿದ್ದುದರಿಂದ ಎಲ್ಲರೂ ಸಡಿಲವಾದರು’. ಇಂತಹ ನಿರ್ಲಕ್ಷ್ಯದಿಂದ 40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಪ್ರಾಣ ತೆತ್ತಬೇಕಾಯಿತು ಎಂಬುದನ್ನು ಮರೆಯಲಾಗದು.

ಆದರೆ, ಇದರ ಹೊಣೆ ಹೊರುವವರು ಯಾರು ಎಂಬುದೇ ಪ್ರಶ್ನೆ. ಎಲ್ಲರೂ ಸಾಧನೆಗಳಿಗೆ ತಾವೇ ಕಾರಣರು ಎಂದು ಹೇಳಿಕೊಳ್ಳಲು ಮುಂದಾಗುತ್ತಿದ್ದಾರೆ, ವೈಫಲ್ಯಕ್ಕೆ ಮಾತ್ರ ಯಾರೂ ದಿಕ್ಕಿಲ್ಲದಂತಾಗಿದೆ. ಜಮ್ಮು ಕಾಶ್ಮೀರದಲ್ಲಿ ಇಂದು ಚುನಾಯಿತ ಸರ್ಕಾರವೂ ಇಲ್ಲ. ರಾಷ್ಟ್ರಪತಿ ಆಡಳಿತ ಇರುವುದರಿಂದ, ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರವೇ ಆಳ್ವಿಕೆ ನಡೆಸುತ್ತದೆ. ಇನ್ನು ಕೇಂದ್ರೀಯ ದಳಗಳೂ ಅವರ ವ್ಯಾಪ್ತಿಯಲ್ಲೇ ಬರುತ್ತವೆ. ಹೀಗಿರುವಾಗ ಗಂಭೀರ ಆತ್ಮಾವಲೋಕನಕ್ಕೆ ಮುಂದಾಗುವ ಕೆಲಸ ಕೇಂದ್ರದ್ದೇ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇಶದ ಜನರಿಗೆ ‘SIR, EVM, ECI’ಗಳಿಂದ ಸ್ವಾತಂತ್ರ್ಯ ಬೇಕಿದೆ: ಎದ್ದೇಳು ಕರ್ನಾಟಕ

ಬೆಂಗಳೂರು: ಭಾರತವು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ, ದೇಶದ ಪ್ರಜೆಗಳು ತಮ್ಮ ಅತಿ ಅಮೂಲ್ಯವಾದ ‘ಮತದಾನದ ಹಕ್ಕನ್ನು’ ಕಳೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಈ ದೇಶದ ಜನರಿಗೆ ಈಗ ‘SIR (ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ),...

ಹನೂರು | ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ : ಇಲಾಖೆಯಿಂದ ತಪ್ಪಾಗಿದೆ ಎಂದ ಸಚಿವ ಪುಟ್ಟರಂಗಶೆಟ್ಟಿ

ಅರಣ್ಯದಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ನಾಲ್ವರು ಮತ್ತು ಅರಣ್ಯ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಶನಿವಾರ...

ಪ್ರಧಾನಿ ಮೋದಿ ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಉಲ್ಟಾ, ಕಾಂಗ್ರೆಸ್ ವ್ಯಂಗ್ಯ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಬಣ್ಣಗಳ ಸರಣಿಯನ್ನು ಬೆಟ್ಟು ಮಾಡಿರುವ ಕಾಂಗ್ರೆಸ್ ಪಕ್ಷ, ಪ್ರಧಾನಿಯವರು ಭಾರತದ ಬದಲು ಐರ್ಲೆಂಡ್‌ನ ಸ್ವಾತಂತ್ರ್ಯ...

“ಹತಾಶೆಯ ಸ್ಪಷ್ಟ ಸಂಕೇತ” : ಪ್ರಧಾನಿ ಮೋದಿಯ ‘ದಿಮಾಗಿ ನಕ್ಸಲ್ಸ್’ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಪ್ರಧಾನಿ ಮೋದಿಯ 'ದಿಮಾಗಿ ನಕ್ಸಲ್ಸ್' (ಮಾನಸಿಕ ನಕ್ಸಲರು) ಹೇಳಿಕೆಗೆ ಶನಿವಾರ (ಆ.15) ತಿರುಗೇಟು ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು 'ಹತಾಶೆಯ ಸ್ಪಷ್ಟ ಸಂಕೇತ' ಎಂದು ತಿರುಗೇಟು ನೀಡಿದ್ದಾರೆ. ಮೋದಿಯವರು ಈ...

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...