Homeಅಂತರಾಷ್ಟ್ರೀಯಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

ಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

- Advertisement -
- Advertisement -

ಫೆ.14ರ ಪುಲ್ವಾಮಾ ದಾಳಿಯ ಕುರಿತು ಪೊಲೀಸರಿಗೆ, ಸೈನ್ಯಕ್ಕೆ ಸಾಕಷ್ಟು ಮುಂಚೆಯೇ ಮಾಹಿತಿ ಇತ್ತು ಎಂಬ ಸುದ್ದಿ ಈ ಮುಂಚೆಯೇ ಹರಿದಾಡಿತ್ತು. ಆದರೆ, ದಿ ಕ್ವಿಂಟ್ ವೆಬ್ ಪೋರ್ಟಲ್ ನಿರ್ದಿಷ್ಟವಾದ ದಾಖಲೆಗಳನ್ನು ಪಡೆದು ಅದು ನಿಜ ಎಂಬ ಆಘಾತಕಾರಿ ಸುದ್ದಿಯನ್ನು ಪ್ರಕಟಿಸಿದೆ. ‘ಹೊರಗಿನಿಂದ ಬಂದ ಭಯೋತ್ಪಾದಕರು’ ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶಕ್ಕೆ ಬಂದಿದ್ದಾರೆ ಮತ್ತು ಅವರು ಸದ್ಯದಲ್ಲೇ ಭಾರೀ ದೊಡ್ಡ ಆತ್ಮಹತ್ಯಾತ್ಮಕ ದಾಳಿ ನಡೆಸುವ ಸಾಧ್ಯತೆ ಇದೆ ಎಂಬುದು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಜನವರಿ 24ಕ್ಕೇ ಮಾಹಿತಿ ಇತ್ತು.
ಅಷ್ಟೇ ಅಲ್ಲ, ಯಾವ ಭಯೋತ್ಪಾದಕ ಗುಂಪಿನ ಸದಸ್ಯರು ಅವರು ಮತ್ತು ಅವರಿಗೆ ಆಶ್ರಯದಾತರು ಯಾರಿರಬಹುದು ಎಂಬ ಬಗ್ಗೆಯೂ ಅವರಿಗೆ ಮಾಹಿತಿ ಇತ್ತು. ಅದನ್ನು ಪರಿಶೀಲಿಸಿದ ಜಮ್ಮು ಕಾಶ್ಮೀರದ ಪೊಲೀಸರು ಜನವರಿ 31ರಂದು ಅಡಿಷನಲ್ ಜನರಲ್ ಆಫ್ ಪೊಲೀಸ್ ಡಾ.ಬಿ.ಶ್ರೀನಿವಾಸ್ ಅವರ ಮೂಲಕ ಸಿಆರ್‍ಪಿಎಫ್ ಮತ್ತಿತರ ಪೊಲೀಸ್ ಬಳಗಕ್ಕೆ ಸುದ್ದಿ ಮುಟ್ಟಿಸಿದ್ದಾರೆ.

ಇಂತಹ ಮಹತ್ವದ ಮಾಹಿತಿ ಬಂದಾಗ ಸಂಬಂಧಿಸಿದವರ ಬಂಧನ ಆಗುವವರೆಗೆ ಅಥವಾ ‘ಬೆದರಿಕೆಯ ನಿರ್ಮೂಲನೆ’ ಆಗುವವರೆಗೆ ಹೈ ಅಲರ್ಟ್ ಇರಬೇಕಿತ್ತು. ಹೈವೇಗಳ ಸುತ್ತ ಕಟ್ಟೆಚ್ಚರ ವಹಿಸಿ ನಮ್ಮ ದಳಗಳು ಸಂಚರಿಸುವ ಜಾಗದಲ್ಲಿ ಬೇರಾವುದೇ ವಾಹನಗಳಿಗೆ ಅವಕಾಶ ಇರಬಾರದಿತ್ತು. ಕಾರ್ಯಾಚರಣೆಗೆ ಹೆಚ್ಚಿನ ದಳಗಳನ್ನು ನಿಯೋಜಿಸಬೇಕಿತ್ತು. ಇವ್ಯಾವುವೂ ಆಗದೇ ನಮ್ಮ ರಕ್ಷಣಾ ಪಡೆಯ ಅಮೂಲ್ಯವಾದ ಜೀವಗಳನ್ನು ಬಲಿಕೊಟ್ಟಿದ್ದನ್ನು ಭಾರೀ ದೊಡ್ಡ ಇಂಟೆಲಿಜೆನ್ಸ್ ವೈಫಲ್ಯ ಎಂದೇ ಬಗೆಯಲಾಗುತ್ತದೆ.

ಇದಕ್ಕೆ ಇನ್ನೊಂದು ಕಾರಣವನ್ನೂ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ದಿ ಕ್ವಿಂಟ್ ವರದಿ ಮಾಡಿದೆ. ‘ಫೆ.9 ಮತ್ತು ಫೆ.11 ಅಫ್ಜಲ್‍ಗುರು ಮತ್ತು ಜೆಕೆಎಲ್‍ಎಫ್ ಸ್ಥಾಪಕ ಮಕ್ಬೂಲ್ ಬಟ್ ಅವರುಗಳನ್ನು ನೇಣಿಗೇರಿಸಿದ ದಿನಗಳು. ಹಾಗಾಗಿ ಅವರೆಡು ದಿನಗಳ ನಡುವೆ ಏನಾದರೂ ಆಗಬಹುದು ಎಂಬ ಎಚ್ಚರ ವಹಿಸಲಾಗಿತ್ತು. ಆಗ ಏನೂ ಆಗದಿದ್ದುದರಿಂದ ಎಲ್ಲರೂ ಸಡಿಲವಾದರು’. ಇಂತಹ ನಿರ್ಲಕ್ಷ್ಯದಿಂದ 40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಪ್ರಾಣ ತೆತ್ತಬೇಕಾಯಿತು ಎಂಬುದನ್ನು ಮರೆಯಲಾಗದು.

ಆದರೆ, ಇದರ ಹೊಣೆ ಹೊರುವವರು ಯಾರು ಎಂಬುದೇ ಪ್ರಶ್ನೆ. ಎಲ್ಲರೂ ಸಾಧನೆಗಳಿಗೆ ತಾವೇ ಕಾರಣರು ಎಂದು ಹೇಳಿಕೊಳ್ಳಲು ಮುಂದಾಗುತ್ತಿದ್ದಾರೆ, ವೈಫಲ್ಯಕ್ಕೆ ಮಾತ್ರ ಯಾರೂ ದಿಕ್ಕಿಲ್ಲದಂತಾಗಿದೆ. ಜಮ್ಮು ಕಾಶ್ಮೀರದಲ್ಲಿ ಇಂದು ಚುನಾಯಿತ ಸರ್ಕಾರವೂ ಇಲ್ಲ. ರಾಷ್ಟ್ರಪತಿ ಆಡಳಿತ ಇರುವುದರಿಂದ, ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರವೇ ಆಳ್ವಿಕೆ ನಡೆಸುತ್ತದೆ. ಇನ್ನು ಕೇಂದ್ರೀಯ ದಳಗಳೂ ಅವರ ವ್ಯಾಪ್ತಿಯಲ್ಲೇ ಬರುತ್ತವೆ. ಹೀಗಿರುವಾಗ ಗಂಭೀರ ಆತ್ಮಾವಲೋಕನಕ್ಕೆ ಮುಂದಾಗುವ ಕೆಲಸ ಕೇಂದ್ರದ್ದೇ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...