Homeಅಂತರಾಷ್ಟ್ರೀಯಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

ಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

- Advertisement -
- Advertisement -

ಫೆ.14ರ ಪುಲ್ವಾಮಾ ದಾಳಿಯ ಕುರಿತು ಪೊಲೀಸರಿಗೆ, ಸೈನ್ಯಕ್ಕೆ ಸಾಕಷ್ಟು ಮುಂಚೆಯೇ ಮಾಹಿತಿ ಇತ್ತು ಎಂಬ ಸುದ್ದಿ ಈ ಮುಂಚೆಯೇ ಹರಿದಾಡಿತ್ತು. ಆದರೆ, ದಿ ಕ್ವಿಂಟ್ ವೆಬ್ ಪೋರ್ಟಲ್ ನಿರ್ದಿಷ್ಟವಾದ ದಾಖಲೆಗಳನ್ನು ಪಡೆದು ಅದು ನಿಜ ಎಂಬ ಆಘಾತಕಾರಿ ಸುದ್ದಿಯನ್ನು ಪ್ರಕಟಿಸಿದೆ. ‘ಹೊರಗಿನಿಂದ ಬಂದ ಭಯೋತ್ಪಾದಕರು’ ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶಕ್ಕೆ ಬಂದಿದ್ದಾರೆ ಮತ್ತು ಅವರು ಸದ್ಯದಲ್ಲೇ ಭಾರೀ ದೊಡ್ಡ ಆತ್ಮಹತ್ಯಾತ್ಮಕ ದಾಳಿ ನಡೆಸುವ ಸಾಧ್ಯತೆ ಇದೆ ಎಂಬುದು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಜನವರಿ 24ಕ್ಕೇ ಮಾಹಿತಿ ಇತ್ತು.
ಅಷ್ಟೇ ಅಲ್ಲ, ಯಾವ ಭಯೋತ್ಪಾದಕ ಗುಂಪಿನ ಸದಸ್ಯರು ಅವರು ಮತ್ತು ಅವರಿಗೆ ಆಶ್ರಯದಾತರು ಯಾರಿರಬಹುದು ಎಂಬ ಬಗ್ಗೆಯೂ ಅವರಿಗೆ ಮಾಹಿತಿ ಇತ್ತು. ಅದನ್ನು ಪರಿಶೀಲಿಸಿದ ಜಮ್ಮು ಕಾಶ್ಮೀರದ ಪೊಲೀಸರು ಜನವರಿ 31ರಂದು ಅಡಿಷನಲ್ ಜನರಲ್ ಆಫ್ ಪೊಲೀಸ್ ಡಾ.ಬಿ.ಶ್ರೀನಿವಾಸ್ ಅವರ ಮೂಲಕ ಸಿಆರ್‍ಪಿಎಫ್ ಮತ್ತಿತರ ಪೊಲೀಸ್ ಬಳಗಕ್ಕೆ ಸುದ್ದಿ ಮುಟ್ಟಿಸಿದ್ದಾರೆ.

ಇಂತಹ ಮಹತ್ವದ ಮಾಹಿತಿ ಬಂದಾಗ ಸಂಬಂಧಿಸಿದವರ ಬಂಧನ ಆಗುವವರೆಗೆ ಅಥವಾ ‘ಬೆದರಿಕೆಯ ನಿರ್ಮೂಲನೆ’ ಆಗುವವರೆಗೆ ಹೈ ಅಲರ್ಟ್ ಇರಬೇಕಿತ್ತು. ಹೈವೇಗಳ ಸುತ್ತ ಕಟ್ಟೆಚ್ಚರ ವಹಿಸಿ ನಮ್ಮ ದಳಗಳು ಸಂಚರಿಸುವ ಜಾಗದಲ್ಲಿ ಬೇರಾವುದೇ ವಾಹನಗಳಿಗೆ ಅವಕಾಶ ಇರಬಾರದಿತ್ತು. ಕಾರ್ಯಾಚರಣೆಗೆ ಹೆಚ್ಚಿನ ದಳಗಳನ್ನು ನಿಯೋಜಿಸಬೇಕಿತ್ತು. ಇವ್ಯಾವುವೂ ಆಗದೇ ನಮ್ಮ ರಕ್ಷಣಾ ಪಡೆಯ ಅಮೂಲ್ಯವಾದ ಜೀವಗಳನ್ನು ಬಲಿಕೊಟ್ಟಿದ್ದನ್ನು ಭಾರೀ ದೊಡ್ಡ ಇಂಟೆಲಿಜೆನ್ಸ್ ವೈಫಲ್ಯ ಎಂದೇ ಬಗೆಯಲಾಗುತ್ತದೆ.

ಇದಕ್ಕೆ ಇನ್ನೊಂದು ಕಾರಣವನ್ನೂ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ದಿ ಕ್ವಿಂಟ್ ವರದಿ ಮಾಡಿದೆ. ‘ಫೆ.9 ಮತ್ತು ಫೆ.11 ಅಫ್ಜಲ್‍ಗುರು ಮತ್ತು ಜೆಕೆಎಲ್‍ಎಫ್ ಸ್ಥಾಪಕ ಮಕ್ಬೂಲ್ ಬಟ್ ಅವರುಗಳನ್ನು ನೇಣಿಗೇರಿಸಿದ ದಿನಗಳು. ಹಾಗಾಗಿ ಅವರೆಡು ದಿನಗಳ ನಡುವೆ ಏನಾದರೂ ಆಗಬಹುದು ಎಂಬ ಎಚ್ಚರ ವಹಿಸಲಾಗಿತ್ತು. ಆಗ ಏನೂ ಆಗದಿದ್ದುದರಿಂದ ಎಲ್ಲರೂ ಸಡಿಲವಾದರು’. ಇಂತಹ ನಿರ್ಲಕ್ಷ್ಯದಿಂದ 40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಪ್ರಾಣ ತೆತ್ತಬೇಕಾಯಿತು ಎಂಬುದನ್ನು ಮರೆಯಲಾಗದು.

ಆದರೆ, ಇದರ ಹೊಣೆ ಹೊರುವವರು ಯಾರು ಎಂಬುದೇ ಪ್ರಶ್ನೆ. ಎಲ್ಲರೂ ಸಾಧನೆಗಳಿಗೆ ತಾವೇ ಕಾರಣರು ಎಂದು ಹೇಳಿಕೊಳ್ಳಲು ಮುಂದಾಗುತ್ತಿದ್ದಾರೆ, ವೈಫಲ್ಯಕ್ಕೆ ಮಾತ್ರ ಯಾರೂ ದಿಕ್ಕಿಲ್ಲದಂತಾಗಿದೆ. ಜಮ್ಮು ಕಾಶ್ಮೀರದಲ್ಲಿ ಇಂದು ಚುನಾಯಿತ ಸರ್ಕಾರವೂ ಇಲ್ಲ. ರಾಷ್ಟ್ರಪತಿ ಆಡಳಿತ ಇರುವುದರಿಂದ, ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರವೇ ಆಳ್ವಿಕೆ ನಡೆಸುತ್ತದೆ. ಇನ್ನು ಕೇಂದ್ರೀಯ ದಳಗಳೂ ಅವರ ವ್ಯಾಪ್ತಿಯಲ್ಲೇ ಬರುತ್ತವೆ. ಹೀಗಿರುವಾಗ ಗಂಭೀರ ಆತ್ಮಾವಲೋಕನಕ್ಕೆ ಮುಂದಾಗುವ ಕೆಲಸ ಕೇಂದ್ರದ್ದೇ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...