Homeಅಂತರಾಷ್ಟ್ರೀಯಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

ಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

- Advertisement -
- Advertisement -

ಫೆ.14ರ ಪುಲ್ವಾಮಾ ದಾಳಿಯ ಕುರಿತು ಪೊಲೀಸರಿಗೆ, ಸೈನ್ಯಕ್ಕೆ ಸಾಕಷ್ಟು ಮುಂಚೆಯೇ ಮಾಹಿತಿ ಇತ್ತು ಎಂಬ ಸುದ್ದಿ ಈ ಮುಂಚೆಯೇ ಹರಿದಾಡಿತ್ತು. ಆದರೆ, ದಿ ಕ್ವಿಂಟ್ ವೆಬ್ ಪೋರ್ಟಲ್ ನಿರ್ದಿಷ್ಟವಾದ ದಾಖಲೆಗಳನ್ನು ಪಡೆದು ಅದು ನಿಜ ಎಂಬ ಆಘಾತಕಾರಿ ಸುದ್ದಿಯನ್ನು ಪ್ರಕಟಿಸಿದೆ. ‘ಹೊರಗಿನಿಂದ ಬಂದ ಭಯೋತ್ಪಾದಕರು’ ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶಕ್ಕೆ ಬಂದಿದ್ದಾರೆ ಮತ್ತು ಅವರು ಸದ್ಯದಲ್ಲೇ ಭಾರೀ ದೊಡ್ಡ ಆತ್ಮಹತ್ಯಾತ್ಮಕ ದಾಳಿ ನಡೆಸುವ ಸಾಧ್ಯತೆ ಇದೆ ಎಂಬುದು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಜನವರಿ 24ಕ್ಕೇ ಮಾಹಿತಿ ಇತ್ತು.
ಅಷ್ಟೇ ಅಲ್ಲ, ಯಾವ ಭಯೋತ್ಪಾದಕ ಗುಂಪಿನ ಸದಸ್ಯರು ಅವರು ಮತ್ತು ಅವರಿಗೆ ಆಶ್ರಯದಾತರು ಯಾರಿರಬಹುದು ಎಂಬ ಬಗ್ಗೆಯೂ ಅವರಿಗೆ ಮಾಹಿತಿ ಇತ್ತು. ಅದನ್ನು ಪರಿಶೀಲಿಸಿದ ಜಮ್ಮು ಕಾಶ್ಮೀರದ ಪೊಲೀಸರು ಜನವರಿ 31ರಂದು ಅಡಿಷನಲ್ ಜನರಲ್ ಆಫ್ ಪೊಲೀಸ್ ಡಾ.ಬಿ.ಶ್ರೀನಿವಾಸ್ ಅವರ ಮೂಲಕ ಸಿಆರ್‍ಪಿಎಫ್ ಮತ್ತಿತರ ಪೊಲೀಸ್ ಬಳಗಕ್ಕೆ ಸುದ್ದಿ ಮುಟ್ಟಿಸಿದ್ದಾರೆ.

ಇಂತಹ ಮಹತ್ವದ ಮಾಹಿತಿ ಬಂದಾಗ ಸಂಬಂಧಿಸಿದವರ ಬಂಧನ ಆಗುವವರೆಗೆ ಅಥವಾ ‘ಬೆದರಿಕೆಯ ನಿರ್ಮೂಲನೆ’ ಆಗುವವರೆಗೆ ಹೈ ಅಲರ್ಟ್ ಇರಬೇಕಿತ್ತು. ಹೈವೇಗಳ ಸುತ್ತ ಕಟ್ಟೆಚ್ಚರ ವಹಿಸಿ ನಮ್ಮ ದಳಗಳು ಸಂಚರಿಸುವ ಜಾಗದಲ್ಲಿ ಬೇರಾವುದೇ ವಾಹನಗಳಿಗೆ ಅವಕಾಶ ಇರಬಾರದಿತ್ತು. ಕಾರ್ಯಾಚರಣೆಗೆ ಹೆಚ್ಚಿನ ದಳಗಳನ್ನು ನಿಯೋಜಿಸಬೇಕಿತ್ತು. ಇವ್ಯಾವುವೂ ಆಗದೇ ನಮ್ಮ ರಕ್ಷಣಾ ಪಡೆಯ ಅಮೂಲ್ಯವಾದ ಜೀವಗಳನ್ನು ಬಲಿಕೊಟ್ಟಿದ್ದನ್ನು ಭಾರೀ ದೊಡ್ಡ ಇಂಟೆಲಿಜೆನ್ಸ್ ವೈಫಲ್ಯ ಎಂದೇ ಬಗೆಯಲಾಗುತ್ತದೆ.

ಇದಕ್ಕೆ ಇನ್ನೊಂದು ಕಾರಣವನ್ನೂ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ದಿ ಕ್ವಿಂಟ್ ವರದಿ ಮಾಡಿದೆ. ‘ಫೆ.9 ಮತ್ತು ಫೆ.11 ಅಫ್ಜಲ್‍ಗುರು ಮತ್ತು ಜೆಕೆಎಲ್‍ಎಫ್ ಸ್ಥಾಪಕ ಮಕ್ಬೂಲ್ ಬಟ್ ಅವರುಗಳನ್ನು ನೇಣಿಗೇರಿಸಿದ ದಿನಗಳು. ಹಾಗಾಗಿ ಅವರೆಡು ದಿನಗಳ ನಡುವೆ ಏನಾದರೂ ಆಗಬಹುದು ಎಂಬ ಎಚ್ಚರ ವಹಿಸಲಾಗಿತ್ತು. ಆಗ ಏನೂ ಆಗದಿದ್ದುದರಿಂದ ಎಲ್ಲರೂ ಸಡಿಲವಾದರು’. ಇಂತಹ ನಿರ್ಲಕ್ಷ್ಯದಿಂದ 40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಪ್ರಾಣ ತೆತ್ತಬೇಕಾಯಿತು ಎಂಬುದನ್ನು ಮರೆಯಲಾಗದು.

ಆದರೆ, ಇದರ ಹೊಣೆ ಹೊರುವವರು ಯಾರು ಎಂಬುದೇ ಪ್ರಶ್ನೆ. ಎಲ್ಲರೂ ಸಾಧನೆಗಳಿಗೆ ತಾವೇ ಕಾರಣರು ಎಂದು ಹೇಳಿಕೊಳ್ಳಲು ಮುಂದಾಗುತ್ತಿದ್ದಾರೆ, ವೈಫಲ್ಯಕ್ಕೆ ಮಾತ್ರ ಯಾರೂ ದಿಕ್ಕಿಲ್ಲದಂತಾಗಿದೆ. ಜಮ್ಮು ಕಾಶ್ಮೀರದಲ್ಲಿ ಇಂದು ಚುನಾಯಿತ ಸರ್ಕಾರವೂ ಇಲ್ಲ. ರಾಷ್ಟ್ರಪತಿ ಆಡಳಿತ ಇರುವುದರಿಂದ, ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರವೇ ಆಳ್ವಿಕೆ ನಡೆಸುತ್ತದೆ. ಇನ್ನು ಕೇಂದ್ರೀಯ ದಳಗಳೂ ಅವರ ವ್ಯಾಪ್ತಿಯಲ್ಲೇ ಬರುತ್ತವೆ. ಹೀಗಿರುವಾಗ ಗಂಭೀರ ಆತ್ಮಾವಲೋಕನಕ್ಕೆ ಮುಂದಾಗುವ ಕೆಲಸ ಕೇಂದ್ರದ್ದೇ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...