Homeಅಂತರಾಷ್ಟ್ರೀಯಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

ಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

- Advertisement -
- Advertisement -

ಫೆ.14ರ ಪುಲ್ವಾಮಾ ದಾಳಿಯ ಕುರಿತು ಪೊಲೀಸರಿಗೆ, ಸೈನ್ಯಕ್ಕೆ ಸಾಕಷ್ಟು ಮುಂಚೆಯೇ ಮಾಹಿತಿ ಇತ್ತು ಎಂಬ ಸುದ್ದಿ ಈ ಮುಂಚೆಯೇ ಹರಿದಾಡಿತ್ತು. ಆದರೆ, ದಿ ಕ್ವಿಂಟ್ ವೆಬ್ ಪೋರ್ಟಲ್ ನಿರ್ದಿಷ್ಟವಾದ ದಾಖಲೆಗಳನ್ನು ಪಡೆದು ಅದು ನಿಜ ಎಂಬ ಆಘಾತಕಾರಿ ಸುದ್ದಿಯನ್ನು ಪ್ರಕಟಿಸಿದೆ. ‘ಹೊರಗಿನಿಂದ ಬಂದ ಭಯೋತ್ಪಾದಕರು’ ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶಕ್ಕೆ ಬಂದಿದ್ದಾರೆ ಮತ್ತು ಅವರು ಸದ್ಯದಲ್ಲೇ ಭಾರೀ ದೊಡ್ಡ ಆತ್ಮಹತ್ಯಾತ್ಮಕ ದಾಳಿ ನಡೆಸುವ ಸಾಧ್ಯತೆ ಇದೆ ಎಂಬುದು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಜನವರಿ 24ಕ್ಕೇ ಮಾಹಿತಿ ಇತ್ತು.
ಅಷ್ಟೇ ಅಲ್ಲ, ಯಾವ ಭಯೋತ್ಪಾದಕ ಗುಂಪಿನ ಸದಸ್ಯರು ಅವರು ಮತ್ತು ಅವರಿಗೆ ಆಶ್ರಯದಾತರು ಯಾರಿರಬಹುದು ಎಂಬ ಬಗ್ಗೆಯೂ ಅವರಿಗೆ ಮಾಹಿತಿ ಇತ್ತು. ಅದನ್ನು ಪರಿಶೀಲಿಸಿದ ಜಮ್ಮು ಕಾಶ್ಮೀರದ ಪೊಲೀಸರು ಜನವರಿ 31ರಂದು ಅಡಿಷನಲ್ ಜನರಲ್ ಆಫ್ ಪೊಲೀಸ್ ಡಾ.ಬಿ.ಶ್ರೀನಿವಾಸ್ ಅವರ ಮೂಲಕ ಸಿಆರ್‍ಪಿಎಫ್ ಮತ್ತಿತರ ಪೊಲೀಸ್ ಬಳಗಕ್ಕೆ ಸುದ್ದಿ ಮುಟ್ಟಿಸಿದ್ದಾರೆ.

ಇಂತಹ ಮಹತ್ವದ ಮಾಹಿತಿ ಬಂದಾಗ ಸಂಬಂಧಿಸಿದವರ ಬಂಧನ ಆಗುವವರೆಗೆ ಅಥವಾ ‘ಬೆದರಿಕೆಯ ನಿರ್ಮೂಲನೆ’ ಆಗುವವರೆಗೆ ಹೈ ಅಲರ್ಟ್ ಇರಬೇಕಿತ್ತು. ಹೈವೇಗಳ ಸುತ್ತ ಕಟ್ಟೆಚ್ಚರ ವಹಿಸಿ ನಮ್ಮ ದಳಗಳು ಸಂಚರಿಸುವ ಜಾಗದಲ್ಲಿ ಬೇರಾವುದೇ ವಾಹನಗಳಿಗೆ ಅವಕಾಶ ಇರಬಾರದಿತ್ತು. ಕಾರ್ಯಾಚರಣೆಗೆ ಹೆಚ್ಚಿನ ದಳಗಳನ್ನು ನಿಯೋಜಿಸಬೇಕಿತ್ತು. ಇವ್ಯಾವುವೂ ಆಗದೇ ನಮ್ಮ ರಕ್ಷಣಾ ಪಡೆಯ ಅಮೂಲ್ಯವಾದ ಜೀವಗಳನ್ನು ಬಲಿಕೊಟ್ಟಿದ್ದನ್ನು ಭಾರೀ ದೊಡ್ಡ ಇಂಟೆಲಿಜೆನ್ಸ್ ವೈಫಲ್ಯ ಎಂದೇ ಬಗೆಯಲಾಗುತ್ತದೆ.

ಇದಕ್ಕೆ ಇನ್ನೊಂದು ಕಾರಣವನ್ನೂ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ದಿ ಕ್ವಿಂಟ್ ವರದಿ ಮಾಡಿದೆ. ‘ಫೆ.9 ಮತ್ತು ಫೆ.11 ಅಫ್ಜಲ್‍ಗುರು ಮತ್ತು ಜೆಕೆಎಲ್‍ಎಫ್ ಸ್ಥಾಪಕ ಮಕ್ಬೂಲ್ ಬಟ್ ಅವರುಗಳನ್ನು ನೇಣಿಗೇರಿಸಿದ ದಿನಗಳು. ಹಾಗಾಗಿ ಅವರೆಡು ದಿನಗಳ ನಡುವೆ ಏನಾದರೂ ಆಗಬಹುದು ಎಂಬ ಎಚ್ಚರ ವಹಿಸಲಾಗಿತ್ತು. ಆಗ ಏನೂ ಆಗದಿದ್ದುದರಿಂದ ಎಲ್ಲರೂ ಸಡಿಲವಾದರು’. ಇಂತಹ ನಿರ್ಲಕ್ಷ್ಯದಿಂದ 40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಪ್ರಾಣ ತೆತ್ತಬೇಕಾಯಿತು ಎಂಬುದನ್ನು ಮರೆಯಲಾಗದು.

ಆದರೆ, ಇದರ ಹೊಣೆ ಹೊರುವವರು ಯಾರು ಎಂಬುದೇ ಪ್ರಶ್ನೆ. ಎಲ್ಲರೂ ಸಾಧನೆಗಳಿಗೆ ತಾವೇ ಕಾರಣರು ಎಂದು ಹೇಳಿಕೊಳ್ಳಲು ಮುಂದಾಗುತ್ತಿದ್ದಾರೆ, ವೈಫಲ್ಯಕ್ಕೆ ಮಾತ್ರ ಯಾರೂ ದಿಕ್ಕಿಲ್ಲದಂತಾಗಿದೆ. ಜಮ್ಮು ಕಾಶ್ಮೀರದಲ್ಲಿ ಇಂದು ಚುನಾಯಿತ ಸರ್ಕಾರವೂ ಇಲ್ಲ. ರಾಷ್ಟ್ರಪತಿ ಆಡಳಿತ ಇರುವುದರಿಂದ, ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರವೇ ಆಳ್ವಿಕೆ ನಡೆಸುತ್ತದೆ. ಇನ್ನು ಕೇಂದ್ರೀಯ ದಳಗಳೂ ಅವರ ವ್ಯಾಪ್ತಿಯಲ್ಲೇ ಬರುತ್ತವೆ. ಹೀಗಿರುವಾಗ ಗಂಭೀರ ಆತ್ಮಾವಲೋಕನಕ್ಕೆ ಮುಂದಾಗುವ ಕೆಲಸ ಕೇಂದ್ರದ್ದೇ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...