Homeಅಂತರಾಷ್ಟ್ರೀಯಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

ಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

- Advertisement -
- Advertisement -

ಫೆ.14ರ ಪುಲ್ವಾಮಾ ದಾಳಿಯ ಕುರಿತು ಪೊಲೀಸರಿಗೆ, ಸೈನ್ಯಕ್ಕೆ ಸಾಕಷ್ಟು ಮುಂಚೆಯೇ ಮಾಹಿತಿ ಇತ್ತು ಎಂಬ ಸುದ್ದಿ ಈ ಮುಂಚೆಯೇ ಹರಿದಾಡಿತ್ತು. ಆದರೆ, ದಿ ಕ್ವಿಂಟ್ ವೆಬ್ ಪೋರ್ಟಲ್ ನಿರ್ದಿಷ್ಟವಾದ ದಾಖಲೆಗಳನ್ನು ಪಡೆದು ಅದು ನಿಜ ಎಂಬ ಆಘಾತಕಾರಿ ಸುದ್ದಿಯನ್ನು ಪ್ರಕಟಿಸಿದೆ. ‘ಹೊರಗಿನಿಂದ ಬಂದ ಭಯೋತ್ಪಾದಕರು’ ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶಕ್ಕೆ ಬಂದಿದ್ದಾರೆ ಮತ್ತು ಅವರು ಸದ್ಯದಲ್ಲೇ ಭಾರೀ ದೊಡ್ಡ ಆತ್ಮಹತ್ಯಾತ್ಮಕ ದಾಳಿ ನಡೆಸುವ ಸಾಧ್ಯತೆ ಇದೆ ಎಂಬುದು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಜನವರಿ 24ಕ್ಕೇ ಮಾಹಿತಿ ಇತ್ತು.
ಅಷ್ಟೇ ಅಲ್ಲ, ಯಾವ ಭಯೋತ್ಪಾದಕ ಗುಂಪಿನ ಸದಸ್ಯರು ಅವರು ಮತ್ತು ಅವರಿಗೆ ಆಶ್ರಯದಾತರು ಯಾರಿರಬಹುದು ಎಂಬ ಬಗ್ಗೆಯೂ ಅವರಿಗೆ ಮಾಹಿತಿ ಇತ್ತು. ಅದನ್ನು ಪರಿಶೀಲಿಸಿದ ಜಮ್ಮು ಕಾಶ್ಮೀರದ ಪೊಲೀಸರು ಜನವರಿ 31ರಂದು ಅಡಿಷನಲ್ ಜನರಲ್ ಆಫ್ ಪೊಲೀಸ್ ಡಾ.ಬಿ.ಶ್ರೀನಿವಾಸ್ ಅವರ ಮೂಲಕ ಸಿಆರ್‍ಪಿಎಫ್ ಮತ್ತಿತರ ಪೊಲೀಸ್ ಬಳಗಕ್ಕೆ ಸುದ್ದಿ ಮುಟ್ಟಿಸಿದ್ದಾರೆ.

ಇಂತಹ ಮಹತ್ವದ ಮಾಹಿತಿ ಬಂದಾಗ ಸಂಬಂಧಿಸಿದವರ ಬಂಧನ ಆಗುವವರೆಗೆ ಅಥವಾ ‘ಬೆದರಿಕೆಯ ನಿರ್ಮೂಲನೆ’ ಆಗುವವರೆಗೆ ಹೈ ಅಲರ್ಟ್ ಇರಬೇಕಿತ್ತು. ಹೈವೇಗಳ ಸುತ್ತ ಕಟ್ಟೆಚ್ಚರ ವಹಿಸಿ ನಮ್ಮ ದಳಗಳು ಸಂಚರಿಸುವ ಜಾಗದಲ್ಲಿ ಬೇರಾವುದೇ ವಾಹನಗಳಿಗೆ ಅವಕಾಶ ಇರಬಾರದಿತ್ತು. ಕಾರ್ಯಾಚರಣೆಗೆ ಹೆಚ್ಚಿನ ದಳಗಳನ್ನು ನಿಯೋಜಿಸಬೇಕಿತ್ತು. ಇವ್ಯಾವುವೂ ಆಗದೇ ನಮ್ಮ ರಕ್ಷಣಾ ಪಡೆಯ ಅಮೂಲ್ಯವಾದ ಜೀವಗಳನ್ನು ಬಲಿಕೊಟ್ಟಿದ್ದನ್ನು ಭಾರೀ ದೊಡ್ಡ ಇಂಟೆಲಿಜೆನ್ಸ್ ವೈಫಲ್ಯ ಎಂದೇ ಬಗೆಯಲಾಗುತ್ತದೆ.

ಇದಕ್ಕೆ ಇನ್ನೊಂದು ಕಾರಣವನ್ನೂ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ದಿ ಕ್ವಿಂಟ್ ವರದಿ ಮಾಡಿದೆ. ‘ಫೆ.9 ಮತ್ತು ಫೆ.11 ಅಫ್ಜಲ್‍ಗುರು ಮತ್ತು ಜೆಕೆಎಲ್‍ಎಫ್ ಸ್ಥಾಪಕ ಮಕ್ಬೂಲ್ ಬಟ್ ಅವರುಗಳನ್ನು ನೇಣಿಗೇರಿಸಿದ ದಿನಗಳು. ಹಾಗಾಗಿ ಅವರೆಡು ದಿನಗಳ ನಡುವೆ ಏನಾದರೂ ಆಗಬಹುದು ಎಂಬ ಎಚ್ಚರ ವಹಿಸಲಾಗಿತ್ತು. ಆಗ ಏನೂ ಆಗದಿದ್ದುದರಿಂದ ಎಲ್ಲರೂ ಸಡಿಲವಾದರು’. ಇಂತಹ ನಿರ್ಲಕ್ಷ್ಯದಿಂದ 40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಪ್ರಾಣ ತೆತ್ತಬೇಕಾಯಿತು ಎಂಬುದನ್ನು ಮರೆಯಲಾಗದು.

ಆದರೆ, ಇದರ ಹೊಣೆ ಹೊರುವವರು ಯಾರು ಎಂಬುದೇ ಪ್ರಶ್ನೆ. ಎಲ್ಲರೂ ಸಾಧನೆಗಳಿಗೆ ತಾವೇ ಕಾರಣರು ಎಂದು ಹೇಳಿಕೊಳ್ಳಲು ಮುಂದಾಗುತ್ತಿದ್ದಾರೆ, ವೈಫಲ್ಯಕ್ಕೆ ಮಾತ್ರ ಯಾರೂ ದಿಕ್ಕಿಲ್ಲದಂತಾಗಿದೆ. ಜಮ್ಮು ಕಾಶ್ಮೀರದಲ್ಲಿ ಇಂದು ಚುನಾಯಿತ ಸರ್ಕಾರವೂ ಇಲ್ಲ. ರಾಷ್ಟ್ರಪತಿ ಆಡಳಿತ ಇರುವುದರಿಂದ, ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರವೇ ಆಳ್ವಿಕೆ ನಡೆಸುತ್ತದೆ. ಇನ್ನು ಕೇಂದ್ರೀಯ ದಳಗಳೂ ಅವರ ವ್ಯಾಪ್ತಿಯಲ್ಲೇ ಬರುತ್ತವೆ. ಹೀಗಿರುವಾಗ ಗಂಭೀರ ಆತ್ಮಾವಲೋಕನಕ್ಕೆ ಮುಂದಾಗುವ ಕೆಲಸ ಕೇಂದ್ರದ್ದೇ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...