Homeಅಂತರಾಷ್ಟ್ರೀಯಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

ಪುಲ್ವಾಮಾ ದಾಳಿಗೆ 3 ವಾರಗಳ ಮುಂಚೆಯೇ ಮಾಹಿತಿ ಸಿಕ್ಕಿದ್ದರೂ ನಿರ್ಲಕ್ಷಿಸಿದ ಆಡಳಿತ

- Advertisement -
- Advertisement -

ಫೆ.14ರ ಪುಲ್ವಾಮಾ ದಾಳಿಯ ಕುರಿತು ಪೊಲೀಸರಿಗೆ, ಸೈನ್ಯಕ್ಕೆ ಸಾಕಷ್ಟು ಮುಂಚೆಯೇ ಮಾಹಿತಿ ಇತ್ತು ಎಂಬ ಸುದ್ದಿ ಈ ಮುಂಚೆಯೇ ಹರಿದಾಡಿತ್ತು. ಆದರೆ, ದಿ ಕ್ವಿಂಟ್ ವೆಬ್ ಪೋರ್ಟಲ್ ನಿರ್ದಿಷ್ಟವಾದ ದಾಖಲೆಗಳನ್ನು ಪಡೆದು ಅದು ನಿಜ ಎಂಬ ಆಘಾತಕಾರಿ ಸುದ್ದಿಯನ್ನು ಪ್ರಕಟಿಸಿದೆ. ‘ಹೊರಗಿನಿಂದ ಬಂದ ಭಯೋತ್ಪಾದಕರು’ ಪುಲ್ವಾಮಾ ಜಿಲ್ಲೆಯ ಆವಂತಿಪುರ ಪ್ರದೇಶಕ್ಕೆ ಬಂದಿದ್ದಾರೆ ಮತ್ತು ಅವರು ಸದ್ಯದಲ್ಲೇ ಭಾರೀ ದೊಡ್ಡ ಆತ್ಮಹತ್ಯಾತ್ಮಕ ದಾಳಿ ನಡೆಸುವ ಸಾಧ್ಯತೆ ಇದೆ ಎಂಬುದು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಜನವರಿ 24ಕ್ಕೇ ಮಾಹಿತಿ ಇತ್ತು.
ಅಷ್ಟೇ ಅಲ್ಲ, ಯಾವ ಭಯೋತ್ಪಾದಕ ಗುಂಪಿನ ಸದಸ್ಯರು ಅವರು ಮತ್ತು ಅವರಿಗೆ ಆಶ್ರಯದಾತರು ಯಾರಿರಬಹುದು ಎಂಬ ಬಗ್ಗೆಯೂ ಅವರಿಗೆ ಮಾಹಿತಿ ಇತ್ತು. ಅದನ್ನು ಪರಿಶೀಲಿಸಿದ ಜಮ್ಮು ಕಾಶ್ಮೀರದ ಪೊಲೀಸರು ಜನವರಿ 31ರಂದು ಅಡಿಷನಲ್ ಜನರಲ್ ಆಫ್ ಪೊಲೀಸ್ ಡಾ.ಬಿ.ಶ್ರೀನಿವಾಸ್ ಅವರ ಮೂಲಕ ಸಿಆರ್‍ಪಿಎಫ್ ಮತ್ತಿತರ ಪೊಲೀಸ್ ಬಳಗಕ್ಕೆ ಸುದ್ದಿ ಮುಟ್ಟಿಸಿದ್ದಾರೆ.

ಇಂತಹ ಮಹತ್ವದ ಮಾಹಿತಿ ಬಂದಾಗ ಸಂಬಂಧಿಸಿದವರ ಬಂಧನ ಆಗುವವರೆಗೆ ಅಥವಾ ‘ಬೆದರಿಕೆಯ ನಿರ್ಮೂಲನೆ’ ಆಗುವವರೆಗೆ ಹೈ ಅಲರ್ಟ್ ಇರಬೇಕಿತ್ತು. ಹೈವೇಗಳ ಸುತ್ತ ಕಟ್ಟೆಚ್ಚರ ವಹಿಸಿ ನಮ್ಮ ದಳಗಳು ಸಂಚರಿಸುವ ಜಾಗದಲ್ಲಿ ಬೇರಾವುದೇ ವಾಹನಗಳಿಗೆ ಅವಕಾಶ ಇರಬಾರದಿತ್ತು. ಕಾರ್ಯಾಚರಣೆಗೆ ಹೆಚ್ಚಿನ ದಳಗಳನ್ನು ನಿಯೋಜಿಸಬೇಕಿತ್ತು. ಇವ್ಯಾವುವೂ ಆಗದೇ ನಮ್ಮ ರಕ್ಷಣಾ ಪಡೆಯ ಅಮೂಲ್ಯವಾದ ಜೀವಗಳನ್ನು ಬಲಿಕೊಟ್ಟಿದ್ದನ್ನು ಭಾರೀ ದೊಡ್ಡ ಇಂಟೆಲಿಜೆನ್ಸ್ ವೈಫಲ್ಯ ಎಂದೇ ಬಗೆಯಲಾಗುತ್ತದೆ.

ಇದಕ್ಕೆ ಇನ್ನೊಂದು ಕಾರಣವನ್ನೂ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ದಿ ಕ್ವಿಂಟ್ ವರದಿ ಮಾಡಿದೆ. ‘ಫೆ.9 ಮತ್ತು ಫೆ.11 ಅಫ್ಜಲ್‍ಗುರು ಮತ್ತು ಜೆಕೆಎಲ್‍ಎಫ್ ಸ್ಥಾಪಕ ಮಕ್ಬೂಲ್ ಬಟ್ ಅವರುಗಳನ್ನು ನೇಣಿಗೇರಿಸಿದ ದಿನಗಳು. ಹಾಗಾಗಿ ಅವರೆಡು ದಿನಗಳ ನಡುವೆ ಏನಾದರೂ ಆಗಬಹುದು ಎಂಬ ಎಚ್ಚರ ವಹಿಸಲಾಗಿತ್ತು. ಆಗ ಏನೂ ಆಗದಿದ್ದುದರಿಂದ ಎಲ್ಲರೂ ಸಡಿಲವಾದರು’. ಇಂತಹ ನಿರ್ಲಕ್ಷ್ಯದಿಂದ 40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಪ್ರಾಣ ತೆತ್ತಬೇಕಾಯಿತು ಎಂಬುದನ್ನು ಮರೆಯಲಾಗದು.

ಆದರೆ, ಇದರ ಹೊಣೆ ಹೊರುವವರು ಯಾರು ಎಂಬುದೇ ಪ್ರಶ್ನೆ. ಎಲ್ಲರೂ ಸಾಧನೆಗಳಿಗೆ ತಾವೇ ಕಾರಣರು ಎಂದು ಹೇಳಿಕೊಳ್ಳಲು ಮುಂದಾಗುತ್ತಿದ್ದಾರೆ, ವೈಫಲ್ಯಕ್ಕೆ ಮಾತ್ರ ಯಾರೂ ದಿಕ್ಕಿಲ್ಲದಂತಾಗಿದೆ. ಜಮ್ಮು ಕಾಶ್ಮೀರದಲ್ಲಿ ಇಂದು ಚುನಾಯಿತ ಸರ್ಕಾರವೂ ಇಲ್ಲ. ರಾಷ್ಟ್ರಪತಿ ಆಡಳಿತ ಇರುವುದರಿಂದ, ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರವೇ ಆಳ್ವಿಕೆ ನಡೆಸುತ್ತದೆ. ಇನ್ನು ಕೇಂದ್ರೀಯ ದಳಗಳೂ ಅವರ ವ್ಯಾಪ್ತಿಯಲ್ಲೇ ಬರುತ್ತವೆ. ಹೀಗಿರುವಾಗ ಗಂಭೀರ ಆತ್ಮಾವಲೋಕನಕ್ಕೆ ಮುಂದಾಗುವ ಕೆಲಸ ಕೇಂದ್ರದ್ದೇ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...