Homeಮುಖಪುಟ‘ಮಾರಿ ಸೆಲ್ವರಾಜ್‌‌’ ಸಿನಿಮಾಗಳಲ್ಲಿನ ರೂಪಕಗಳ ಸುತ್ತ...

‘ಮಾರಿ ಸೆಲ್ವರಾಜ್‌‌’ ಸಿನಿಮಾಗಳಲ್ಲಿನ ರೂಪಕಗಳ ಸುತ್ತ…

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ಕನ್ನಡದ ‘ಚಾರ್ಲಿ’ ಸಿನಿಮಾಕ್ಕೆ ಭಾರೀ ಜನಸ್ಪಂದನೆ ಮೂಡಿ ಬಂತು. ‘ಚಾರ್ಲಿ’ ಎಂಬ ನಾಯಿಯ ಸುತ್ತ ಹೆಣೆದ ಈ ಸಿನಿಮಾವನ್ನು ನೋಡಿ ಅನೇಕರು ಭಾವುಕರಾದರು. ಇದನ್ನೆಲ್ಲ ನೋಡುತ್ತಿದ್ದಾಗ, ‘ಚಾರ್ಲಿ’ ಎಂಬ ನಾಯಿ ಮಾರಾಟದ ಸರಕಾಗಿದೆ ಎನಿಸುತ್ತಿತ್ತು. ‘ಚಾರ್ಲಿ’ ಎಂಬ ನಾಯಿಯ ಕಥೆಗೆ ಜನ ನೀಡುತ್ತಿದ್ದ ವಿಪರೀತ ಸ್ಪಂದನೆಯ ನಡುವೆ- ‘ಕರುಪ್ಪಿ’ ಎಂಬ ನಾಯಿ ತೀವ್ರವಾಗಿ ಕಾಡತೊಡಗಿತ್ತು.

ಯಾವುದು ಉತ್ತಮ ಕಲಾಕೃತಿ? ಅದರ ಲಕ್ಷಣಗಳೇನು? ಎಂಬ ಪ್ರಶ್ನೆಗಳು ಇಂದು ಮೊನ್ನೆಯದ್ದಲ್ಲ. ಪ್ರತಿಯೊಂದು ಕಲಾ ಮಾಧ್ಯಮವು ತನ್ನದೇ ಆದ ಪರಿಭಾಷೆಗಳನ್ನು, ಕಲಾಭಿವ್ಯಕ್ತಿಯ ದಾರಿಗಳನ್ನು ಹೊಂದಿದ್ದರೂ ಕಲಾ ಮೀಮಾಂಸೆಯ ಒಟ್ಟು ಉದ್ದೇಶ- ರಸಾನುಭವ, ಅನುಭೂತಿ. ನಮ್ಮನ್ನು ಇನ್ನಿಲ್ಲದಂತೆ ಕಾಡುವ, ಪದಗಳಲ್ಲಿ ವಿವರಿಸಲಾಗದ ಅವ್ಯಕ್ತ ಭಾವನೆಗಳನ್ನು ಸೃಷ್ಟಿಸುವ ಮಾಧ್ಯಮಗಳನ್ನು- ಉತ್ತಮ ಕಲಾಕೃತಿ ಎನ್ನಬಹುದೇನೋ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳಿನ ಮಾರಿ ಸೆಲ್ವರಾಜ್ ಸಿನಿಮಾಗಳ ಕುರಿತು ಧ್ಯಾನಿಸುತ್ತಾ ಹೋದಂತೆ ಕಲಾ ಮೀಮಾಂಸೆಯ ಪರಿಭಾಷೆಗಳನ್ನೂ ಪಕ್ಕದಲ್ಲಿಟ್ಟು ನೋಡುವುದು ಅನಿವಾರ್ಯವಾಗುತ್ತದೆ. ಸೆಲ್ವರಾಜ್‌ ದೃಶ್ಯ ಕಲಾ ಮಾಧ್ಯಮದಲ್ಲಿ ಕ್ರಿಯಾಶೀಲವಾಗಿರುವ ಸೃಜನಶೀಲ ವ್ಯಕ್ತಿ. ಅವರ ಸಿನಿಮಾಗಳು ಮೂರರಲ್ಲಿ ಮತ್ತೊಂದಾಗದೆ ವಿಶಿಷ್ಟ ಸಾಂಸ್ಕೃತಿಕ ಅಭಿವ್ಯಕ್ತಿಯಾಗಿಯೂ, ವಿನೂತನ ಪ್ರತಿರೋಧದ ಹೆಜ್ಜೆಗಳಾಗಿಯೂ ದಾಖಲಾಗುತ್ತಿವೆ.

ನಿರ್ದೇಶಕ ಮಾರಿ ಸೆಲ್ವರಾಜ್‌

ಸಾಹಿತಿ ದೇವನೂರ ಮಹಾದೇವ ಅವರ ಮಾತಿಗಳಿಗೆ ಹೆಚ್ಚು ತೂಕ ಏಕೆ? ಎಂದು ಪ್ರಶ್ನಿಸಿಕೊಂಡರೆ, ಅವರು ಯಾವುದಾದರೂ ವಿದ್ಯಮಾನಕ್ಕೆ ಪ್ರತಿಕ್ರಿಯೆ ನೀಡುವಾಗ ಬಳಸುವ ರೂಪಕತೆಗಳೇ ಇದಕ್ಕೆ ಕಾರಣವೆಂದು  ಹೇಳಿಬಿಡಬಹುದು. ಯಾರಿಗೂ ಹೊಳೆಯದ ರೂಪಕಗಳು ದೇವನೂರರಲ್ಲಿ ಮೂಡುತ್ತವೆ. ಅವರ ಪ್ರತಿಕ್ರಿಯೆಗಳು ಸಾಂಸ್ಕೃತಿಕ ಇತಿಹಾಸಕ್ಕೆ ತಳುಕುಹಾಕಿಕೊಂಡು ಸೃಜನಶೀಲವಾಗಿರುತ್ತವೆ. ಮಾರಿ ಸೆಲ್ವರಾಜ್‌ ಅವರ ಕಲಾಕೃತಿಗಳಿಗೂ ಇದೇ ಮಾತು ಅನ್ವಯಿಸಬಹುದೇನೋ.

ಮಾರಿ ಸೆಲ್ವರಾಜ್ ನಿರ್ದೇಶಿಸಿರುವ ‘ಪರಿಯೇರುಮ್ ಪೆರುಮಾಳ್‌- ಬಿ.ಎ. ಬಿ.ಎಲ್‌’, ‘ಕರ್ಣನ್‌’ ಸಿನಿಮಾಗಳಲ್ಲಿ ಬಳಕೆಯಾಗಿರುವ ರೂಪಕಗಳನ್ನು ಸೂಕ್ಷ್ಮವಾಗಿ ಗಮನಿಸುತ್ತ ಹೋದರೆ ಮಾತುಗಳಲ್ಲಿ ವಿವರಿಸಲಾಗದ ಅನುಭೂತಿ ನಮ್ಮದಾಗುತ್ತದೆ. ‘ಪರಿಯೇರುಮ್‌ ಪರುಮಾಳ್‌’ (ಕುದುರೆಯೇರಿ ಬರುವ ಪೆರುಮಾಳ್‌) ಎಂಬುದೇ ಒಂದು ರೀತಿಯ ರೂಪಕ. ‘ಕರ್ಣನ್‌’- ಸಿನಿಮಾವಂತೂ ಹೆಸರು ಮತ್ತು ಅದಕ್ಕಂಟಿದ ಜಾತಿ ಐಡೆಂಟಿಗಳ ಕುರಿತು ಢಾಳಾಗಿ ಚರ್ಚಿಸುತ್ತದೆ.

‘ಪರಿಯೇರುಮ್‌ ಪೆರುಮಾಳ್‌’ ರೂಪಕಗಳು

ಸೆಲ್ವರಾಜ್‌ ಅವರ ಸಿನಿಮಾಗಳಲ್ಲಿ ಹಲವು ರೂಪಕಗಳು ಅಲ್ಲಲ್ಲಿ ಬಳಕೆಯಾದರೂ ಪ್ರಧಾನ ರೂಪಕವೊಂದು ಇಡೀ ಸಿನಿಮಾದುದ್ದಕ್ಕೂ ಹರಿಯುವುದನ್ನು ಕಾಣಬಹುದು. ಪರಿಯೇರುಮ್‌ ಪೆರುಮಾಳ್‌ನಲ್ಲಿ ‘ಕರುಪ್ಪಿ’ (ಕಪ್ಪು ನಾಯಿ) ಪ್ರಧಾನ ರೂಪಕವಾಗಿದೆ. ಕಾರಣವಿಲ್ಲದೆ ಕೊಲೆಯಾಗುವ ಮುಗ್ಧ ಜನರ ಪ್ರತಿನಿಧಿಯಾಗಿ ‘ಕರುಪ್ಪಿ’ ನಿಲ್ಲುತ್ತದೆ. ಇಲ್ಲಿ ಕೊಲೆಯಾಗಿದ್ದು ‘ಕರುಪ್ಪಿ’ಯೋ ‘ಕಥಾನಾಯಕ’ನೋ ಎಂಬ ದುಗುಡವನ್ನು ಕಥೆಯ ಆರಂಭದಲ್ಲೇ ನಿರ್ದೇಶಕ ಬಿಟ್ಟು ಹೊರಡುತ್ತಾರೆ.

ಜಾತಿ ಕಾರಣಕ್ಕೆ ದೌರ್ಜನ್ಯಕ್ಕೊಳಗಾಗುವ, ಆದರೆ ತನ್ನ ಗೆಳತಿಗೆ ಈ ಕಾರಣವನ್ನು ಕೊನೆಯವರೆಗೂ ಹೇಳದೇ ಇರುವ ‘ಕಥಾನಾಯಕ’ ಯಾರಿಗೂ ಕೇಡು ಬಯಸದ ಮುಗ್ಧ ಜೀವಿ. ಗೆಳತಿ ಮುನಿಸಿಕೊಂಡು ಕ್ಲಾಸ್‌ ರೂಮ್‌ನಿಂದ ಹೊರ ನಡೆದಾಗ, ಅನಾಥನಂತೆ ಕುಳಿತ ಪೆರುಮಾಳ್‌ ಹತ್ತಿರ ಧಾವಿಸುತ್ತಾ ಬರುವ ‘ಕರುಪ್ಪಿ’ ಒಂದು ಅಮೂರ್ತ ಕಲ್ಪನೆ. ‘ನಾಯಾರ್‌’ ಹಾಡಿನಲ್ಲಿ ತೋರಿಸಲಾಗುವ ಕ್ರಿಮಿ, ಕೀಟ, ಗಾಯಗೊಂಡ ನಾಯಿ, ಹಾವು, ಚೇಳು- ಇವೆಲ್ಲವೂ ಕಥಾ ನಾಯಕನ ತಬ್ಬಲಿತನವನ್ನು ತೀವ್ರವಾಗಿ ತೋರಿಸುವ ರೂಪಕಗಳು.

ಜಾತಿಯ ಕಾರಣಕ್ಕೆ ಮಾರ್ಯಾದೆ ಹತ್ಯೆಗಳನ್ನು ಮಾಡುತ್ತ ಬರುತ್ತಿರುವ ಮುದುಕ, ಕೊನೆಗೆ ಪೆರುಮಾಳ್‌ನನ್ನು ಕೂಡ ಹೊಡೆದು ರೈಲಿನ ಕಂಬಿಯ ಮೇಲೆ ಮಲಗಿಸಿರುತ್ತಾನೆ. ಸಾವಿನ ದವಡೆಯಲ್ಲಿ ಮಲಗಿರುವ ಆತನತ್ತ ಓಡೋಡಿ ಬರುವ ನೀಲಿ ಬಣ್ಣದ ನಾಯಿ- ತೀವ್ರವಾಗಿ ಕಾಡುತ್ತದೆ. ಸಿನಿಮಾದ ಆರಂಭದಲ್ಲಿ ಕರುಪ್ಪಿಯನ್ನು ರೈಲಿನ ಅಳಿಗೆ ಕಟ್ಟಿ ಕೊಲ್ಲಲಾಗಿರುತ್ತದೆ. ಕರುಪ್ಪಿಯಂತೆಯೇ ಪೆರುಮಾಳ್‌ನನ್ನು ಕೊಲ್ಲಲು ಯತ್ನಿಸುವ ದೃಶ್ಯ ಹಾಗೂ ಎಚ್ಚರದ ಸೂಚಕವಾಗಿ ಓಡೋಡಿ ಬರುವ ಕರುಪ್ಪಿ- ನಮ್ಮನ್ನು ಸದಾ ಕಾಡುವ ರೂಪಕಗಳು.

‘ಕರ್ಣನ್‌’ ರೂಪಕಗಳು

ತುಳುನಾಡಿನ ದಲಿತ ಆತ್ಮಕಥೆಗಳನ್ನು ‘ಪಾಡ್ದನಾಗಳು’ ಎಂದು ಕರೆಯಲಾಗಿದೆ. ಇಲ್ಲಿನ ಭೂತಗಳನ್ನು ದಲಿತ ಪೂರ್ವಜರು ಎಂದು ಗುರುತಿಸಲಾಗಿದೆ. ಇಂತಹದ್ದೇ ದೈವ ಕಲ್ಪನೆಯನ್ನು ‘ಕರ್ಣನ್‌’ ಸಿನಿಮಾದಲ್ಲಿ ತರಲಾಗಿದೆ. ಇಡೀ ಸಿನಿಮಾದುದ್ದಕ್ಕೂ ಚಲಿಸುವ ಪ್ರಧಾನ ರೂಪಕವಿದು. ನಡು ರಸ್ತೆಯಲ್ಲಿ ವಾಹನಗಳ ಮಧ್ಯೆ ಬಿದ್ದು ಹೊರಳಾಗಿ, ಯಾರ ಸಹಾಯವೂ ಸಿಗದೆ ಸಾವಿಗೀಡಾದ ಮಗು- ದೈವ ರೂಪ ಪಡೆಯುತ್ತದೆ. ದಲಿತರು ವಾಸವಿರುವ ಈ ಊರಿನ ಮುಂದೆ ಬಸ್‌ ನಿಲ್ಲಿಸದೆ ಇರುವುದು ಕ್ರಾಂತಿಯ ಮೂಲ. ಜಾತಿ ವಾದಿಗಳ ಅಸಹನೆ, ಕಿರುಕುಳ ಎಲ್ಲವನ್ನೂ ಪ್ರಶ್ನಿಸಿ, ಇಡೀ ವ್ಯವಸ್ಥೆಗೆ ಪ್ರತಿರೋಧ ತೋರುವಾಗಲೆಲ್ಲ- ಆ ದೈವದ ರೂಪ ತೆರೆಯ ಮೇಲೆ ಬಂದು ಖುಷಿಪಟ್ಟು ಹೋಗುತ್ತದೆ. ಬಸ್ಸನ್ನು ಛಿದ್ರ ಛಿದ್ರ ಮಾಡಿದಾಗ, ಇಡೀ ಊರೇ ಒಂದಾಗಿ ಹೋರಾಟಕ್ಕೆ ಸಜ್ಜಾದಾಗ, ಕಥಾ ನಾಯಕ ಕತ್ತಿ ಹಿಡಿದು ಕುದುರೆ ಏರಿ ಬರುವ ಮುನ್ನ… ಹೀಗೆ ಅನೇಕ ಸಂದರ್ಭಗಳಲ್ಲಿ ಈ ದೈವ ಪ್ರವೇಶಿಸುತ್ತದೆ.

ಬಸ್‌ ನಿಲ್ಲಿಸದ ರಸ್ತೆಯಲ್ಲಿ ಮೆರವಣಿಗೆ ಮಾಡುತ್ತ, ಆನೆ ಮೇಲೆ ಏರಿ ಬರುವ ಊರಿನ ಜನ, ಜನಜಂಗುಳಿಯನ್ನು ಹಾದಿಹೋಗಲಾರದೆ ನಿಂತಿರುವ ವಾಹನಗಳು, ತಲೆ ಇಲ್ಲದ ಬುದ್ಧನ ವಿಗ್ರಹ, ಬುದ್ಧನ ಶಿರದ ಮೇಲೆ ಉದಯಿಸಿದಂತೆ ಭಾಸವಾಗುವ ಸೂರ್ಯ, ಕಾಲಿಗೆ ಕಟ್ಟು ಬಿಗಿದ ಕತ್ತೆ ಕುಂಟುತ್ತಾ ನಡೆಯುವುದು, ದೇವರ ಕತ್ತಿ, ಕೋಳಿ ಮರಿಗಳನ್ನು ಕದ್ದು ಹೊತ್ತುಯ್ಯುವ ರಣಹದ್ದು, ಪ್ರತಿರೋಧದ ಸೂಚಕವಾಗಿ ಕತ್ತೆಯ ಕಾಲಿನ ಕಟ್ಟು ಬಿಚ್ಚುವುದು… ಹೀಗೆ ಅನೇಕ ರೂಪಕಗಳನ್ನು ಕರ್ಣನ್‌ನಲ್ಲಿ ಬಳಸಲಾಗಿದೆ.

ತಲೆಗೆ ಮುಂಡಾಸು ಕಟ್ಟಿ ಮಾತನಾಡಿದ ಕಾರಣಕ್ಕೆ ಕೋಪಾದ್ರಿಕ್ತನಾದ ಪೊಲೀಸ್‌ ಅಧಿಕಾರಿ, ವಯಸ್ಸಾದವರನ್ನು ಥಳಿಸುವುದು, ಪತಂಗವೊಂದು ಆ ಭೀಕರ ದೃಶ್ಯಗಳ ಸುತ್ತ ಹಾರಾಡುವುದು, ವಿಷಯ ತಿಳಿದ ಊರಿನ ಜನ ಪೊಲೀಸ್‌ ಠಾಣೆಗೆ ನುಗ್ಗಿ ಪ್ರತಿರೋಧ ತೋರುವಾಗ ಬಾಬಾ ಸಾಹೇಬರ ಫೋಟೋಕ್ಕೆ ಕೈ ತಗುಲಿ, ಆ ಫೋಟೋ ಅತ್ತಂದಿತ್ತ ಅಲ್ಲಾಡುವುದು- ಇವೆಲ್ಲವೂ ವಿಶಿಷ್ಟ ಅನುಭೂತಿಯನ್ನು ಕಟ್ಟಿಕೊಡುತ್ತವೆ.

ಮಾರಿ ಸೆಲ್ವರಾಜ್‌ ಕಥೆಯನ್ನು ಕೇವಲ ಕಥೆಯಾಗಿ ಹೇಳುವುದಿಲ್ಲ. ಹಲವು ರೂಪಕಗಳನ್ನು ತನ್ನ ಸಿನಿಮಾಗಳಲ್ಲಿ ಸಶಕ್ತವಾಗಿ ಬಳಸುತ್ತಾ ಹೋಗುತ್ತಾರೆ. ಸಿನಿಮಾದಲ್ಲಿ ಇಡೀ ಕಥೆಗೆ ಒಂದು ತೂಕವಿದ್ದರೆ, ಅದರ ಅಂದವನ್ನು ಹೆಚ್ಚಿಸುವ ರೂಪಕಗಳಿಗೆ ಮತ್ತೊಂದು ತೂಕವಿರುತ್ತದೆ.

ಇದನ್ನೂ ಓದಿರಿ: ದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?

ಸಂತೋಷ್‌ ನಾರಾಯಣ್ ಸಂಗೀತ

ಮುಖ್ಯವಾಗಿ ಮತ್ತೊಂದು ವಿಷಯವನ್ನು ಇಲ್ಲಿ ಪ್ರಸ್ತಾಪಿಸಲೇಬೇಕು. ‘ಪರಿಯೇರುಮ್ ಪೆರುಮಾಳ್‌’ ಮತ್ತು ‘ಕರ್ಣನ್‌’ ಸಿನಿಮಾಕ್ಕೆ ಸಂತೋಷ್ ನಾರಾಯಣ್‌ ನೀಡಿರುವ ಸಂಗೀತದಿಂದಾಗಿ ರೂಪಕಗಳ ಕಲಾತ್ಮಕತೆ ಹೆಚ್ಚಿದೆ. ಸೆಲ್ವರಾಜ್‌ ಅವರ ದೃಶ್ಯಗಳ ತೀವ್ರತೆಯನ್ನು ಇಮ್ಮಡಿಗೊಳಿಸುವಲ್ಲಿ ಸಂತೋಷ್ ನಾರಾಯಣ್ ಅವರ ಸಂಗೀತವೂ ಬಹುಮುಖ್ಯ ಪಾತ್ರ ವಹಿಸಿದೆ. ಸಾಂಸ್ಕೃತಿಕ ಬೆಸುಗೆಯನ್ನು ಒಳಗೊಂಡ ಕಥನದೊಳಗೆ ದೇಸಿ ಹಾಗೂ ರ್‍ಯಾಪ್‌‌ ಮಿಶ್ರಿತ ಸಂಗೀತವನ್ನು ಸಂತೋಷ್ ನಾರಾಯಣ್‌ ರಚಿಸಿದ್ದಾರೆ. ಪರಿಯೇರು‌ಮ್‌ ಪೆರುಮಾಳ್‌ನ ‘ಕರುಪ್ಪಿ’, ‘ನಾಯಾರ್‌‌’ ಹಾಡುಗಳು, ‘ಕರ್ಣನ್‌’ನ ‘ಮಂಜನೆತ್ತಿ’, ‘ಕಂಡವರ ಸೊಲ್ಲುಂಗ’, ‘ಉತ್ರಾದಿಂಗ ಯಪ್ಪೊ’ ಹಾಡುಗಳು ಸೆಲ್ವರಾಜ್ ಅವರ ಆಶಯವನ್ನು ಗಟ್ಟಿಗೊಳಿಸಿವೆ.

ಕೊನೆಯದಾಗಿ, ‘ಚಾರ್ಲಿ’ ಥರದ ಮಧ್ಯಮ ವರ್ಗ ಕೇಂದ್ರಿತ ನಾಯಿ ಕಥೆಯಲ್ಲಿ ರೂಪಕತೆಯನ್ನು ಹುಡುಕಬಾರದು. ಭಾವುಕತೆಯೇ ಬಂಡವಾಳವಾಗುವ ಸಿನಿಮಾಗಳಲ್ಲಿ ಕಲಾತ್ಮಕತೆಯನ್ನು, ದಟ್ಟ ಅನುಭೂತಿಯನ್ನು ನಿರೀಕ್ಷಿಸಲಾಗದು ಎಂಬುದು ನಿಜ. ಆದರೆ ಸಿನಿಮಾವೊಂದು ಅಷ್ಟೇ ಆಗಿ ನಿಲ್ಲಬಾರದೆಂಬುದು ಇಲ್ಲಿನ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....