Homeಮುಖಪುಟ‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

- Advertisement -
- Advertisement -

ಒಕ್ಕೂಟ ಸರ್ಕಾರವು ಬುಧವಾರವಷ್ಟೇ ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಹೆಸರನ್ನು ಬದಲಿಸಿದೆ. ಯೋಜನೆಗೆ ‘ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌’ ಯೋಜನೆ ಅಥವಾ ‘ಪಿಎಂ ಪೋಷಣ್‌’ ಎಂದು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಮೋದಿ ನೇತೃತ್ವದ ಬಿಜೆಪಿ ಪಕ್ಷವು ಒಕ್ಕೂಟ ಸರ್ಕಾರದಲ್ಲಿ ಅಧಿಕಾರ ಹಿಡಿದ ನಂತರ, ಈ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವಾರು ಯೋಜನೆಗಳ ಹೆಸರುಗಳನ್ನು ಬದಲಿಸಿದೆ. ಇದೀಗ, ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಈ ಪಟ್ಟಿಗೆ ಹೊಸದಾಗಿ ಸೇರಿಕೊಂಡಂತಾಗಿದೆ.

ಯೋಜನೆಯ ಅಡಿಯಲ್ಲಿ ‘ತಿಥಿ ಭೋಜನ’ ಎಂದು ಕರೆಯಲಾಗುವ ಕಾರ್ಯಕ್ರಮವೂ ಸೇರಿದ್ದು, ಈ ಬಗ್ಗೆ ನೆಟ್ಟಿಗರು ಒಕ್ಕೂಟ ಸರ್ಕಾರವನ್ನು ಮತ್ತು ಬಿಜೆಪಿ ಪ್ರತಿನಿಧಿಗಳನ್ನು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಪಿಎಂ ಪೋಷಣ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

ಪಿಎಂ ಪೋಷಣ್ ಅಡಿಯಲ್ಲಿ, ವ್ಯಕ್ತಿಗಳು ಅಥವಾ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಹಬ್ಬದೂಟವನ್ನು ನೀಡುವ ಕಾರ್ಯಕ್ರಮವಾಗಿದೆ ‘ತಿಥಿ ಭೋಜನ್’. ಇದರಲ್ಲಿ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವ, ಹಬ್ಬಗಳಂದು ಯಾವುದೇ ವ್ಯಕ್ತಿಗಳು ಮತ್ತು ಸಂಸ್ಥೆಗಳು ಮಕ್ಕಳಿಗೆ ಸಿಹಿತಿಂಡಿ, ಹಣ್ಣುಗಳು ಇತ್ಯಾದಿಗಳನ್ನು ವಿತರಿಸುವುದಾಗಿದೆ.

‘ತಿಥಿ ಭೋಜನ’ ಯೋಜನೆಯನ್ನು ಗುಜರಾತ್ ರಾಜ್ಯದಲ್ಲಿ ಮೊದಲು ಆರಂಭಿಸಲಾಗಿತ್ತು. ಗುಜರಾತ್‌ನಲ್ಲಿ ಈ ಯೋಜನೆ ಯಶಸ್ವಿಯಾದ ನಂತರ, ಒಕ್ಕೂಟ ಸರ್ಕಾರವು ಈ ಯೋಜನೆಯನ್ನು ಎಲ್ಲಾ ರಾಜ್ಯಗಳಲ್ಲಿ ಆರಂಭಿಸಲು ನಿರ್ದೇಶಿಸಿದೆ.

ಕನ್ನಡದಲ್ಲಿ ‘ತಿಥಿ ಭೋಜನ’ ಎಂದರೆ, ಸಾವು ನಡೆದ ಮನೆಯಲ್ಲಿ ಕೆಲವು ದಿನಗಳು ಕಳೆದು, ಧಾರ್ಮಿಕ ಆಚರಣೆಯೊಂದಿಗೆ ಬಂಧುಮಿತ್ರಾದಿಗಳನ್ನು ಕರೆದು ಊಟ ಹಾಕಿಸುವುದಾಗಿದೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಜನರು ಒಕ್ಕೂಟ ಸರ್ಕಾರವನ್ನು ಮತ್ತು ಬಿಜೆಪಿ ಪ್ರತಿನಿಧಿಗಳನ್ನು ವ್ಯಂಗ್ಯ ಮಾಡುತ್ತಿದ್ದಾರೆ.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಗೌತಮ್ ಮಾಚಯ್ಯ ಅವರು, “Tika ಉತ್ಸವದ ನಂತರ ಈಗ ತಿಥಿ ಭೋಜನ ಪ್ರಾರಂಭವಾಗಿದೆ. ದೇಶದ ವೈವಿಧ್ಯತೆಯನ್ನು ಮರೆತು ನೀವು ಒಂದು ಭಾಷೆಯನ್ನು ಮುಂದೆ ತಂದಾಗ ಇದು ಸಂಭವಿಸುತ್ತದೆ” ಎಂದು ಹೇಳಿದ್ದಾರೆ.

ಪಲ್ಲವಿ ಇಡೂರು ಅವರು, “ತಿಥಿ ಭೋಜನ, ಒಂದು ದೇಶ, ಒಂದು ಭಾಷೆಯ ಅಡ್ಡ ಪರಿಣಾಮ! ಮಧ್ಯಾಹ್ನದ ಊಟದ ಯೋಜನೆಯನ್ನು ಮರುನಾಮಕರಣ ಮಾಡಲಾಗಿದೆ. ಜೊತೆಗೆ ಅದರ ಪ್ಯಾಕೇಜ್ ಅನ್ನು ವಿಚಿತ್ರವಾದ ಹೆಸರುಗಳೊಂದಿಗೆ ಉಲ್ಲೇಖಿಸಲಾಗಿದೆ !” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ಆನಂದ ಗುಂಡುರಾವ್ ಅವರು, “Tika ಉತ್ಸವದಿಂದ ತಿಥಿ ಭೋಜನದವರೆಗೆ. ಕನ್ನಡ ಭಾಷೆಯಲ್ಲಿ ತಿಥಿ ಭೋಜನ ಎಂದರೆ ಶ್ರಾದ್ಧದ ಊಟಕ್ಕೆ ಸಮಾನವಾಗಿದೆ” ಎಂದು ಹೇಳಿದ್ದಾರೆ.

ಭರತ್ ಪಿ ಅವರು, “ವಾವ್ ಹಬ್ಬದ ದಿನ ‘ತಿಥಿ ಭೋಜನ’…! ಇದನ್ನು ಸಂಪ್ರದಾಯವಾದಿಗಳು ಒಪ್ಪುತ್ತಾರ. ಹುಚ್ಚರ ಸರ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮಚಂದ್ರ ಎಂ. ಅವರು, “Tika ಉತ್ಸವ ಆಯ್ತು, ಈಗ ತಿಥಿ ಭೋಜನ ಅಂತೆ. ಕನ್ನಡಿಗರದು ಎಂತಾ ಪುಣ್ಯ! ನಮ್ಮ ರಾಜ್ಯದ ನಾಯಕರಿಗೆ ಕನಿಷ್ಠ ನಾಡಿಗೆ ಇರಬೇಕಾದ ಸ್ವಾಯತ್ತತೆ ಬಗ್ಗೆ ಕಿಂಚಿತ್ತಾದರೂ ಅರಿವಿದಿಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...