Homeಮುಖಪುಟ‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

- Advertisement -
- Advertisement -

ಒಕ್ಕೂಟ ಸರ್ಕಾರವು ಬುಧವಾರವಷ್ಟೇ ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಹೆಸರನ್ನು ಬದಲಿಸಿದೆ. ಯೋಜನೆಗೆ ‘ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌’ ಯೋಜನೆ ಅಥವಾ ‘ಪಿಎಂ ಪೋಷಣ್‌’ ಎಂದು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಮೋದಿ ನೇತೃತ್ವದ ಬಿಜೆಪಿ ಪಕ್ಷವು ಒಕ್ಕೂಟ ಸರ್ಕಾರದಲ್ಲಿ ಅಧಿಕಾರ ಹಿಡಿದ ನಂತರ, ಈ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವಾರು ಯೋಜನೆಗಳ ಹೆಸರುಗಳನ್ನು ಬದಲಿಸಿದೆ. ಇದೀಗ, ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಈ ಪಟ್ಟಿಗೆ ಹೊಸದಾಗಿ ಸೇರಿಕೊಂಡಂತಾಗಿದೆ.

ಯೋಜನೆಯ ಅಡಿಯಲ್ಲಿ ‘ತಿಥಿ ಭೋಜನ’ ಎಂದು ಕರೆಯಲಾಗುವ ಕಾರ್ಯಕ್ರಮವೂ ಸೇರಿದ್ದು, ಈ ಬಗ್ಗೆ ನೆಟ್ಟಿಗರು ಒಕ್ಕೂಟ ಸರ್ಕಾರವನ್ನು ಮತ್ತು ಬಿಜೆಪಿ ಪ್ರತಿನಿಧಿಗಳನ್ನು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಪಿಎಂ ಪೋಷಣ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

ಪಿಎಂ ಪೋಷಣ್ ಅಡಿಯಲ್ಲಿ, ವ್ಯಕ್ತಿಗಳು ಅಥವಾ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಹಬ್ಬದೂಟವನ್ನು ನೀಡುವ ಕಾರ್ಯಕ್ರಮವಾಗಿದೆ ‘ತಿಥಿ ಭೋಜನ್’. ಇದರಲ್ಲಿ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವ, ಹಬ್ಬಗಳಂದು ಯಾವುದೇ ವ್ಯಕ್ತಿಗಳು ಮತ್ತು ಸಂಸ್ಥೆಗಳು ಮಕ್ಕಳಿಗೆ ಸಿಹಿತಿಂಡಿ, ಹಣ್ಣುಗಳು ಇತ್ಯಾದಿಗಳನ್ನು ವಿತರಿಸುವುದಾಗಿದೆ.

‘ತಿಥಿ ಭೋಜನ’ ಯೋಜನೆಯನ್ನು ಗುಜರಾತ್ ರಾಜ್ಯದಲ್ಲಿ ಮೊದಲು ಆರಂಭಿಸಲಾಗಿತ್ತು. ಗುಜರಾತ್‌ನಲ್ಲಿ ಈ ಯೋಜನೆ ಯಶಸ್ವಿಯಾದ ನಂತರ, ಒಕ್ಕೂಟ ಸರ್ಕಾರವು ಈ ಯೋಜನೆಯನ್ನು ಎಲ್ಲಾ ರಾಜ್ಯಗಳಲ್ಲಿ ಆರಂಭಿಸಲು ನಿರ್ದೇಶಿಸಿದೆ.

ಕನ್ನಡದಲ್ಲಿ ‘ತಿಥಿ ಭೋಜನ’ ಎಂದರೆ, ಸಾವು ನಡೆದ ಮನೆಯಲ್ಲಿ ಕೆಲವು ದಿನಗಳು ಕಳೆದು, ಧಾರ್ಮಿಕ ಆಚರಣೆಯೊಂದಿಗೆ ಬಂಧುಮಿತ್ರಾದಿಗಳನ್ನು ಕರೆದು ಊಟ ಹಾಕಿಸುವುದಾಗಿದೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಜನರು ಒಕ್ಕೂಟ ಸರ್ಕಾರವನ್ನು ಮತ್ತು ಬಿಜೆಪಿ ಪ್ರತಿನಿಧಿಗಳನ್ನು ವ್ಯಂಗ್ಯ ಮಾಡುತ್ತಿದ್ದಾರೆ.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಗೌತಮ್ ಮಾಚಯ್ಯ ಅವರು, “Tika ಉತ್ಸವದ ನಂತರ ಈಗ ತಿಥಿ ಭೋಜನ ಪ್ರಾರಂಭವಾಗಿದೆ. ದೇಶದ ವೈವಿಧ್ಯತೆಯನ್ನು ಮರೆತು ನೀವು ಒಂದು ಭಾಷೆಯನ್ನು ಮುಂದೆ ತಂದಾಗ ಇದು ಸಂಭವಿಸುತ್ತದೆ” ಎಂದು ಹೇಳಿದ್ದಾರೆ.

ಪಲ್ಲವಿ ಇಡೂರು ಅವರು, “ತಿಥಿ ಭೋಜನ, ಒಂದು ದೇಶ, ಒಂದು ಭಾಷೆಯ ಅಡ್ಡ ಪರಿಣಾಮ! ಮಧ್ಯಾಹ್ನದ ಊಟದ ಯೋಜನೆಯನ್ನು ಮರುನಾಮಕರಣ ಮಾಡಲಾಗಿದೆ. ಜೊತೆಗೆ ಅದರ ಪ್ಯಾಕೇಜ್ ಅನ್ನು ವಿಚಿತ್ರವಾದ ಹೆಸರುಗಳೊಂದಿಗೆ ಉಲ್ಲೇಖಿಸಲಾಗಿದೆ !” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ಆನಂದ ಗುಂಡುರಾವ್ ಅವರು, “Tika ಉತ್ಸವದಿಂದ ತಿಥಿ ಭೋಜನದವರೆಗೆ. ಕನ್ನಡ ಭಾಷೆಯಲ್ಲಿ ತಿಥಿ ಭೋಜನ ಎಂದರೆ ಶ್ರಾದ್ಧದ ಊಟಕ್ಕೆ ಸಮಾನವಾಗಿದೆ” ಎಂದು ಹೇಳಿದ್ದಾರೆ.

ಭರತ್ ಪಿ ಅವರು, “ವಾವ್ ಹಬ್ಬದ ದಿನ ‘ತಿಥಿ ಭೋಜನ’…! ಇದನ್ನು ಸಂಪ್ರದಾಯವಾದಿಗಳು ಒಪ್ಪುತ್ತಾರ. ಹುಚ್ಚರ ಸರ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮಚಂದ್ರ ಎಂ. ಅವರು, “Tika ಉತ್ಸವ ಆಯ್ತು, ಈಗ ತಿಥಿ ಭೋಜನ ಅಂತೆ. ಕನ್ನಡಿಗರದು ಎಂತಾ ಪುಣ್ಯ! ನಮ್ಮ ರಾಜ್ಯದ ನಾಯಕರಿಗೆ ಕನಿಷ್ಠ ನಾಡಿಗೆ ಇರಬೇಕಾದ ಸ್ವಾಯತ್ತತೆ ಬಗ್ಗೆ ಕಿಂಚಿತ್ತಾದರೂ ಅರಿವಿದಿಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...