Homeಮುಖಪುಟ‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

- Advertisement -
- Advertisement -

ಒಕ್ಕೂಟ ಸರ್ಕಾರವು ಬುಧವಾರವಷ್ಟೇ ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಹೆಸರನ್ನು ಬದಲಿಸಿದೆ. ಯೋಜನೆಗೆ ‘ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌’ ಯೋಜನೆ ಅಥವಾ ‘ಪಿಎಂ ಪೋಷಣ್‌’ ಎಂದು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಮೋದಿ ನೇತೃತ್ವದ ಬಿಜೆಪಿ ಪಕ್ಷವು ಒಕ್ಕೂಟ ಸರ್ಕಾರದಲ್ಲಿ ಅಧಿಕಾರ ಹಿಡಿದ ನಂತರ, ಈ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವಾರು ಯೋಜನೆಗಳ ಹೆಸರುಗಳನ್ನು ಬದಲಿಸಿದೆ. ಇದೀಗ, ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಈ ಪಟ್ಟಿಗೆ ಹೊಸದಾಗಿ ಸೇರಿಕೊಂಡಂತಾಗಿದೆ.

ಯೋಜನೆಯ ಅಡಿಯಲ್ಲಿ ‘ತಿಥಿ ಭೋಜನ’ ಎಂದು ಕರೆಯಲಾಗುವ ಕಾರ್ಯಕ್ರಮವೂ ಸೇರಿದ್ದು, ಈ ಬಗ್ಗೆ ನೆಟ್ಟಿಗರು ಒಕ್ಕೂಟ ಸರ್ಕಾರವನ್ನು ಮತ್ತು ಬಿಜೆಪಿ ಪ್ರತಿನಿಧಿಗಳನ್ನು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಪಿಎಂ ಪೋಷಣ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

ಪಿಎಂ ಪೋಷಣ್ ಅಡಿಯಲ್ಲಿ, ವ್ಯಕ್ತಿಗಳು ಅಥವಾ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಹಬ್ಬದೂಟವನ್ನು ನೀಡುವ ಕಾರ್ಯಕ್ರಮವಾಗಿದೆ ‘ತಿಥಿ ಭೋಜನ್’. ಇದರಲ್ಲಿ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವ, ಹಬ್ಬಗಳಂದು ಯಾವುದೇ ವ್ಯಕ್ತಿಗಳು ಮತ್ತು ಸಂಸ್ಥೆಗಳು ಮಕ್ಕಳಿಗೆ ಸಿಹಿತಿಂಡಿ, ಹಣ್ಣುಗಳು ಇತ್ಯಾದಿಗಳನ್ನು ವಿತರಿಸುವುದಾಗಿದೆ.

‘ತಿಥಿ ಭೋಜನ’ ಯೋಜನೆಯನ್ನು ಗುಜರಾತ್ ರಾಜ್ಯದಲ್ಲಿ ಮೊದಲು ಆರಂಭಿಸಲಾಗಿತ್ತು. ಗುಜರಾತ್‌ನಲ್ಲಿ ಈ ಯೋಜನೆ ಯಶಸ್ವಿಯಾದ ನಂತರ, ಒಕ್ಕೂಟ ಸರ್ಕಾರವು ಈ ಯೋಜನೆಯನ್ನು ಎಲ್ಲಾ ರಾಜ್ಯಗಳಲ್ಲಿ ಆರಂಭಿಸಲು ನಿರ್ದೇಶಿಸಿದೆ.

ಕನ್ನಡದಲ್ಲಿ ‘ತಿಥಿ ಭೋಜನ’ ಎಂದರೆ, ಸಾವು ನಡೆದ ಮನೆಯಲ್ಲಿ ಕೆಲವು ದಿನಗಳು ಕಳೆದು, ಧಾರ್ಮಿಕ ಆಚರಣೆಯೊಂದಿಗೆ ಬಂಧುಮಿತ್ರಾದಿಗಳನ್ನು ಕರೆದು ಊಟ ಹಾಕಿಸುವುದಾಗಿದೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಜನರು ಒಕ್ಕೂಟ ಸರ್ಕಾರವನ್ನು ಮತ್ತು ಬಿಜೆಪಿ ಪ್ರತಿನಿಧಿಗಳನ್ನು ವ್ಯಂಗ್ಯ ಮಾಡುತ್ತಿದ್ದಾರೆ.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಗೌತಮ್ ಮಾಚಯ್ಯ ಅವರು, “Tika ಉತ್ಸವದ ನಂತರ ಈಗ ತಿಥಿ ಭೋಜನ ಪ್ರಾರಂಭವಾಗಿದೆ. ದೇಶದ ವೈವಿಧ್ಯತೆಯನ್ನು ಮರೆತು ನೀವು ಒಂದು ಭಾಷೆಯನ್ನು ಮುಂದೆ ತಂದಾಗ ಇದು ಸಂಭವಿಸುತ್ತದೆ” ಎಂದು ಹೇಳಿದ್ದಾರೆ.

ಪಲ್ಲವಿ ಇಡೂರು ಅವರು, “ತಿಥಿ ಭೋಜನ, ಒಂದು ದೇಶ, ಒಂದು ಭಾಷೆಯ ಅಡ್ಡ ಪರಿಣಾಮ! ಮಧ್ಯಾಹ್ನದ ಊಟದ ಯೋಜನೆಯನ್ನು ಮರುನಾಮಕರಣ ಮಾಡಲಾಗಿದೆ. ಜೊತೆಗೆ ಅದರ ಪ್ಯಾಕೇಜ್ ಅನ್ನು ವಿಚಿತ್ರವಾದ ಹೆಸರುಗಳೊಂದಿಗೆ ಉಲ್ಲೇಖಿಸಲಾಗಿದೆ !” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ಆನಂದ ಗುಂಡುರಾವ್ ಅವರು, “Tika ಉತ್ಸವದಿಂದ ತಿಥಿ ಭೋಜನದವರೆಗೆ. ಕನ್ನಡ ಭಾಷೆಯಲ್ಲಿ ತಿಥಿ ಭೋಜನ ಎಂದರೆ ಶ್ರಾದ್ಧದ ಊಟಕ್ಕೆ ಸಮಾನವಾಗಿದೆ” ಎಂದು ಹೇಳಿದ್ದಾರೆ.

ಭರತ್ ಪಿ ಅವರು, “ವಾವ್ ಹಬ್ಬದ ದಿನ ‘ತಿಥಿ ಭೋಜನ’…! ಇದನ್ನು ಸಂಪ್ರದಾಯವಾದಿಗಳು ಒಪ್ಪುತ್ತಾರ. ಹುಚ್ಚರ ಸರ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮಚಂದ್ರ ಎಂ. ಅವರು, “Tika ಉತ್ಸವ ಆಯ್ತು, ಈಗ ತಿಥಿ ಭೋಜನ ಅಂತೆ. ಕನ್ನಡಿಗರದು ಎಂತಾ ಪುಣ್ಯ! ನಮ್ಮ ರಾಜ್ಯದ ನಾಯಕರಿಗೆ ಕನಿಷ್ಠ ನಾಡಿಗೆ ಇರಬೇಕಾದ ಸ್ವಾಯತ್ತತೆ ಬಗ್ಗೆ ಕಿಂಚಿತ್ತಾದರೂ ಅರಿವಿದಿಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...