Homeಮುಖಪುಟ‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

‘Tika ಉತ್ಸವ’ ಆಯ್ತು, ಇನ್ನು ‘ತಿಥಿ ಭೋಜನ’!: ಬಿಸಿಯೂಟ ಹೆಸರು ಬದಲಾವಣೆ ಬಗ್ಗೆ ನೆಟ್ಟಿಗರು

- Advertisement -
- Advertisement -

ಒಕ್ಕೂಟ ಸರ್ಕಾರವು ಬುಧವಾರವಷ್ಟೇ ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಹೆಸರನ್ನು ಬದಲಿಸಿದೆ. ಯೋಜನೆಗೆ ‘ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌’ ಯೋಜನೆ ಅಥವಾ ‘ಪಿಎಂ ಪೋಷಣ್‌’ ಎಂದು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಮೋದಿ ನೇತೃತ್ವದ ಬಿಜೆಪಿ ಪಕ್ಷವು ಒಕ್ಕೂಟ ಸರ್ಕಾರದಲ್ಲಿ ಅಧಿಕಾರ ಹಿಡಿದ ನಂತರ, ಈ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವಾರು ಯೋಜನೆಗಳ ಹೆಸರುಗಳನ್ನು ಬದಲಿಸಿದೆ. ಇದೀಗ, ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಈ ಪಟ್ಟಿಗೆ ಹೊಸದಾಗಿ ಸೇರಿಕೊಂಡಂತಾಗಿದೆ.

ಯೋಜನೆಯ ಅಡಿಯಲ್ಲಿ ‘ತಿಥಿ ಭೋಜನ’ ಎಂದು ಕರೆಯಲಾಗುವ ಕಾರ್ಯಕ್ರಮವೂ ಸೇರಿದ್ದು, ಈ ಬಗ್ಗೆ ನೆಟ್ಟಿಗರು ಒಕ್ಕೂಟ ಸರ್ಕಾರವನ್ನು ಮತ್ತು ಬಿಜೆಪಿ ಪ್ರತಿನಿಧಿಗಳನ್ನು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಪಿಎಂ ಪೋಷಣ್’: ಬಿಸಿಯೂಟ ಯೋಜನೆಯ ಹೆಸರು ಬದಲಿಸಿದ ಒಕ್ಕೂಟ ಸರ್ಕಾರ!

ಪಿಎಂ ಪೋಷಣ್ ಅಡಿಯಲ್ಲಿ, ವ್ಯಕ್ತಿಗಳು ಅಥವಾ ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಹಬ್ಬದೂಟವನ್ನು ನೀಡುವ ಕಾರ್ಯಕ್ರಮವಾಗಿದೆ ‘ತಿಥಿ ಭೋಜನ್’. ಇದರಲ್ಲಿ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವ, ಹಬ್ಬಗಳಂದು ಯಾವುದೇ ವ್ಯಕ್ತಿಗಳು ಮತ್ತು ಸಂಸ್ಥೆಗಳು ಮಕ್ಕಳಿಗೆ ಸಿಹಿತಿಂಡಿ, ಹಣ್ಣುಗಳು ಇತ್ಯಾದಿಗಳನ್ನು ವಿತರಿಸುವುದಾಗಿದೆ.

‘ತಿಥಿ ಭೋಜನ’ ಯೋಜನೆಯನ್ನು ಗುಜರಾತ್ ರಾಜ್ಯದಲ್ಲಿ ಮೊದಲು ಆರಂಭಿಸಲಾಗಿತ್ತು. ಗುಜರಾತ್‌ನಲ್ಲಿ ಈ ಯೋಜನೆ ಯಶಸ್ವಿಯಾದ ನಂತರ, ಒಕ್ಕೂಟ ಸರ್ಕಾರವು ಈ ಯೋಜನೆಯನ್ನು ಎಲ್ಲಾ ರಾಜ್ಯಗಳಲ್ಲಿ ಆರಂಭಿಸಲು ನಿರ್ದೇಶಿಸಿದೆ.

ಕನ್ನಡದಲ್ಲಿ ‘ತಿಥಿ ಭೋಜನ’ ಎಂದರೆ, ಸಾವು ನಡೆದ ಮನೆಯಲ್ಲಿ ಕೆಲವು ದಿನಗಳು ಕಳೆದು, ಧಾರ್ಮಿಕ ಆಚರಣೆಯೊಂದಿಗೆ ಬಂಧುಮಿತ್ರಾದಿಗಳನ್ನು ಕರೆದು ಊಟ ಹಾಕಿಸುವುದಾಗಿದೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಜನರು ಒಕ್ಕೂಟ ಸರ್ಕಾರವನ್ನು ಮತ್ತು ಬಿಜೆಪಿ ಪ್ರತಿನಿಧಿಗಳನ್ನು ವ್ಯಂಗ್ಯ ಮಾಡುತ್ತಿದ್ದಾರೆ.

ಇದನ್ನೂ ಓದಿ: 5 ತಿಂಗಳಿಂದ ಬಾರದ ಗೌರವಧನ: ವೇತನ ಕೇಳಿದ ಬಿಸಿಯೂಟ ನೌಕರರ ಬಂಧನ

ಗೌತಮ್ ಮಾಚಯ್ಯ ಅವರು, “Tika ಉತ್ಸವದ ನಂತರ ಈಗ ತಿಥಿ ಭೋಜನ ಪ್ರಾರಂಭವಾಗಿದೆ. ದೇಶದ ವೈವಿಧ್ಯತೆಯನ್ನು ಮರೆತು ನೀವು ಒಂದು ಭಾಷೆಯನ್ನು ಮುಂದೆ ತಂದಾಗ ಇದು ಸಂಭವಿಸುತ್ತದೆ” ಎಂದು ಹೇಳಿದ್ದಾರೆ.

ಪಲ್ಲವಿ ಇಡೂರು ಅವರು, “ತಿಥಿ ಭೋಜನ, ಒಂದು ದೇಶ, ಒಂದು ಭಾಷೆಯ ಅಡ್ಡ ಪರಿಣಾಮ! ಮಧ್ಯಾಹ್ನದ ಊಟದ ಯೋಜನೆಯನ್ನು ಮರುನಾಮಕರಣ ಮಾಡಲಾಗಿದೆ. ಜೊತೆಗೆ ಅದರ ಪ್ಯಾಕೇಜ್ ಅನ್ನು ವಿಚಿತ್ರವಾದ ಹೆಸರುಗಳೊಂದಿಗೆ ಉಲ್ಲೇಖಿಸಲಾಗಿದೆ !” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ಆನಂದ ಗುಂಡುರಾವ್ ಅವರು, “Tika ಉತ್ಸವದಿಂದ ತಿಥಿ ಭೋಜನದವರೆಗೆ. ಕನ್ನಡ ಭಾಷೆಯಲ್ಲಿ ತಿಥಿ ಭೋಜನ ಎಂದರೆ ಶ್ರಾದ್ಧದ ಊಟಕ್ಕೆ ಸಮಾನವಾಗಿದೆ” ಎಂದು ಹೇಳಿದ್ದಾರೆ.

ಭರತ್ ಪಿ ಅವರು, “ವಾವ್ ಹಬ್ಬದ ದಿನ ‘ತಿಥಿ ಭೋಜನ’…! ಇದನ್ನು ಸಂಪ್ರದಾಯವಾದಿಗಳು ಒಪ್ಪುತ್ತಾರ. ಹುಚ್ಚರ ಸರ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮಚಂದ್ರ ಎಂ. ಅವರು, “Tika ಉತ್ಸವ ಆಯ್ತು, ಈಗ ತಿಥಿ ಭೋಜನ ಅಂತೆ. ಕನ್ನಡಿಗರದು ಎಂತಾ ಪುಣ್ಯ! ನಮ್ಮ ರಾಜ್ಯದ ನಾಯಕರಿಗೆ ಕನಿಷ್ಠ ನಾಡಿಗೆ ಇರಬೇಕಾದ ಸ್ವಾಯತ್ತತೆ ಬಗ್ಗೆ ಕಿಂಚಿತ್ತಾದರೂ ಅರಿವಿದಿಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಕ್ಷಯಪಾತ್ರ (ಇಸ್ಕಾನ್‌)ಗೆ ಹೊರಗುತ್ತಿಗೆಗೆ ವಿರೋಧ: ಶಾಲೆಗಳಲ್ಲಿಯೇ ಬಿಸಿಯೂಟ ತಯಾರಿಸಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...