HomeಮುಖಪುಟTik tok : ಮತ್ತೆ ಬಂದ ಟಿಕ್ ಟಾಕ್ ಆಪ್ ಸುತ್ತಾ ನಾವು ತಿಳಿದಿರಬೇಕಾದ ಸಂಗತಿಗಳು....

Tik tok : ಮತ್ತೆ ಬಂದ ಟಿಕ್ ಟಾಕ್ ಆಪ್ ಸುತ್ತಾ ನಾವು ತಿಳಿದಿರಬೇಕಾದ ಸಂಗತಿಗಳು….

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬಹಳಷ್ಟು ಯುವಕ ಯುವತಿಯರಿಗೆ ಚಿಕ್ಕಂದಿನಿಂದಲೂ ತಾವು ಸಿನೆಮಾ ನಟ ನಟಿಯರಾಗಬೇಕು, ಟಿವಿಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಹಂಬಲ, ಕನಸು ಇದ್ದೇ ಇರುತ್ತದೆ. ಆದರೆ ಸಾವಿರಕ್ಕೆ ಅಥವಾ ಲಕ್ಷಕ್ಕೆ ಒಬ್ಬರು ಮಾತ್ರ ಆ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಾಗುವುದು ವಾಸ್ತವದ ಸಂಗತಿ. ಇನ್ನುಳಿದವರ ಕೊರಗು ನಿವಾರಿಸಲು ಒಂದು ಮಟ್ಟಿಗೆ ಸಹಾಯ ಮಾಡಿದ್ದು ಫೇಸ್‍ಬುಕ್ ಮತ್ತು ವಾಟ್ಸಾಪ್. ತಮಗನ್ನಿಸಿದ್ದನ್ನು ಬರೆಯುವ, ವಿಡಿಯೊ ಮಾಡಿ ಅಪ್ ಲೋಡ್ ಮಾಡಲು ಅವಕಾಶ ಇದರಿಂದ ಸಿಕ್ಕಿತ್ತು. ಆದರೆ ಯಾವಾಗ ಟಿಕ್ ಟಾಪ್ ಆಪ್ ಬಂದಿತ್ತೋ ಹಲವಾರು ಜನ ತಮ್ಮ ಕನಸನ್ನು ನನಸು ಮಾಡಿಕೊಂಡರು. ಈ ಆಪ್ ಮೂಲಕ ಅಭಿನಯಿಸಿ, ನೃತ್ಯ ಮಾಡಿ ಅದನ್ನು ಸಾವಿರಾರು ಜನಕ್ಕೆ ತೋರಿಸಿ ಸಂತೃಪ್ತಿಪಟ್ಟುಕೊಂಡರು. ಅಂತಹ ಆಪ್ ಅನ್ನು ನಿಷೇಧಿಸಬೇಕೆನ್ನುವ ಮೂಲಕ ಸಾವಿರಾರು ಯುವನಜನರಿಗೆ ದಿಢೀರ್ ಶಾಕ್ ನೀಡಲಾಗಿತ್ತು.

20ಕೋಟಿಗೂ ಹೆಚ್ಚು ಜನ ಬಳಸುವ ಟಿಕ್ ಟಾಕ್ ಎಂಬ ಮನರಂಜನಾ ಆಪ್ ಬ್ಯಾನ್ ಆಗಿದೆ ಎಂಬ ಸುದ್ದಿ ಕೆಲ ದಿನಗಳ ಹಿಂದೆ ಹರಿದಾಡುತ್ತಿತ್ತು. ಆಪಲ್ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇಸ್ಟೋರ್‍ನಲ್ಲಿ ರದ್ದಾಗಿ ಡೌನ್‍ಲೋಡ್ ಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಈಗ ಈ ಆಪ್ ಮತ್ತೆ ಗೂಗಲ್ ಪ್ಲೇಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‍ನಲ್ಲಿ ಕಾಣಿಸಿಕೊಂಡಿದ್ದು ಡೌನ್‍ಲೋಡ್‍ಗೆ ಲಭ್ಯವಾಗಿದೆ.

ಆರಂಭದಲ್ಲಿ ಡಬ್‍ಸ್ಮ್ಯಾಷ್ ಎಂದು ಕರೆಯಲ್ಪಡುತ್ತಿದ್ದ ಈ ಆಪ್ ನಂತರ ಮ್ಯುಸಿಕಲಿ ಎಂದಾಗಿತ್ತು. ಕೊನೆಗೆ ಟಿಕ್ ಟಾಕ್ ಎಂದು ಬದಲಿಸಕೊಂಡಮೇಲೆ ಸಾಕಷ್ಟು ಜನಪ್ರಿಯತೆಯ ಜೊತೆಗೆ ಕೋಟ್ಯಾಂತರ ಜನರು ಡೌನ್‍ಲೋಡ್ ಮಾಡಿಕೊಂಡು ಬಳಸಲು ಆರಂಭಿಸಿದ್ದರು. ಮಿಮಿಕ್ರಿಯಿಂದ ಆರಂಭವಾದು ಇದು ದೊಡ್ಡ ಸ್ಟಾರ್ ನಟನನ್ನು ಅನುಸರಿಲು ಬಳುಸತ್ತಿದ್ದರು. ಡಬ್‍ಸ್ಮ್ಯಾಷ್ ಮಾಡುವ ಮೂಲಕ ಇಷ್ಟ ಪಟ್ಟ ನಟನ ಅಭಿನಯವನ್ನು ನಕಲು ಮಾಡುವುದು, ಅವರ ಧ್ವನಿಗೆ ಇವರು ಅಭಿನಯಿಸಲು ಶುರು ಮಾಡಿದಾಗ ಇದು ಹೊಸ ರೀತಿಯ ಅಲೆಯನ್ನು ಮೂಡಿಸಿತ್ತು. ಈಗ ಅದೇ ರೀತಿಯ ಹಲವಾರು ಆಪ್ ಬಂದಿದ್ದು ಅದರಲ್ಲಿ ಟಿಕ್ ಟಾಕ್ ಮೇಲುಗೈ ಸಾಧಿಸಿದೆ.

ಮುಖ್ಯವಾಗಿ ಯುವಜನರು ಮತ್ತು ಸ್ಥಳೀಯ ಭಾಷಿಕರ ಮನಸ್ಥಿತಿಯನ್ನು ಅಧ್ಯಯನ ಮಾಡಿ ಆಪ್ ಡೆವಲಪ್ ಮಾಡಿದಂತಿದೆ. ಹಲವು ಸಿನಿಮಾದ ಸಣ್ಣ ದೃಶ್ಯಗಳ ವಾಯ್ಸ್‍ಗೆ ತಮ್ಮ ಅಭಿನಯ ಸೇರಿಸಿ ಚಿಕ್ಕ ವಿಡಿಯೋಗಳನ್ನು ತಯಾರಿಸಿ ಹರಿಯಬಿಡುವುದು, ತಾವೇ ಖುದ್ದಾಗಿ ತಮಾಷೆಯ ಪ್ರಸಂಗಗಳನ್ನು ಅಭಿನಯಿಸಿ ರೆಕಾರ್ಡ್ ಮಾಡುವುದು, ಡ್ಯಾನ್ಸ್‍ಗಳನ್ನು ಮಾಡುವುದು, ಟ್ರೋಲ್ ಮಾಡುವುದು ಸೇರಿದಂತೆ ಹತ್ತು ಹಲವು ಸಣ್ಣ ವಿಡಿಯೋಗಳು ಟಿಕ್ ಟಾಕ್‍ನಲ್ಲಿ ಹರಿದಾಡಿದ್ದವು. ಕಾಲಕ್ಕೆ ತಕ್ಕಂತೆ ಒಂದು ವಿಡಿಯೋ ನೀಡಿ ಅದೇ ಮಾದರಿಯ ವಿಡಿಯೋ ಮಾಡಿ ಕಳಿಸುವಂತೆ ಚಾಲೆಂಜ್ ನೀಡಿ ಈ ಆಪ್‍ನ ಪ್ರಿಯರು ಇದರಲ್ಲೇ ಗಿರಕಿ ಹೊಡೆಯುವ ಹಾಗೆ ನೋಡಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಒಬ್ಬ ಯುವಕ ಚಾಕುವಿನಿಂದ ಕತ್ತು ಕುಯ್ದುಕೊಳ್ಳುವಂತೆ ಅಭಿನಯಿಸಲು ಹೋಗಿ ನಿಜವಾಗಿಯೂ ಕತ್ತು ಕುಯ್ದುಕೊಂಡುಬಿಟ್ಟ ವಿಡಿಯೋ ವೈರಲ್ ಆಗಿತ್ತು. ಇಂತಹ ಅತಿರೇಕವಾದಂತಹ ವ್ಯಕ್ತಿಗಳಿಂದಲೇ ಟಿಕ್ ಟಾಕ್ ಬ್ಯಾನ್ ಆಗುವ ಹಂತಕ್ಕೆ ತಲುಪಿತ್ತು.

ಎಲ್ಲಾ ವಯೋಮಾನದವರು ಸಹ ಬೇಸರ ಕಳೆಯಲು, ಟೈಮ್ ಪಾಸ್ ಮಾಡಲು ಟಕ್ ಟಾಕ್ ಬಳಸಿದರೆ ಬಹುಪಾಲು ಯುವ ಜನಾಂಗ ಇದರ ದಾಸರಂದತ್ತಿದೆ. ‘ಯಾವಾಗ ನೋಡಿದರೂ ಟಿಕ್ ಟಾಕ್‍ನಲ್ಲೇ ಮುಳುಗಿರುತ್ತೀಯಲ್ಲ’ ಎಂಬ ಟೀಕೆ ಎಲ್ಲಾ ಕಡೆ ಸಹಜವಾಗಿ ಕೇಳಿ ಬರುತ್ತಿದೆ. ಈ ಆಪ್ ಜನರಿಗೆ ಅತಿ ಹೆಚ್ಚು ಮನರಂಜನೆ ನೀಡಿದ್ದು ಎಷ್ಟು ನಿಜವೋ, ಅಷ್ಟೇ ಪ್ರಮಾಣದಲ್ಲಿ ಅವರನ್ನು ಸೋಮಾರಿಗಳನ್ನಾಗಿಯೂ ಮಾಡಿತ್ತು.
ಈ ಆಪ್‍ನ ಅನುಕೂಲ ಮತ್ತು ಅನಾನುಕೂಲಗಳನ್ನು ನೋಡಿದರೆ, ಮೊದಲನೇಯದಾಗಿ ಆ ಆಪ್ ಬಳಸಿ ಸಾವಿರಾರು ಜನ ತಮ್ಮ ಸೃಜನಶೀಲತೆಯನ್ನು ಬಹಿರಂಗಪಡಿಸಿದ್ದರು. ಅದರಲ್ಲಿನ ಒಂದೊಂದು ಚಿಕ್ಕ ವಿಡಿಯೋ ಸಹ ವಾವ್ ಅನ್ನಿಸುವಷ್ಟರ ಮಟ್ಟಿಗೆ ಹೊಸತನದಿಂದ ಕೂಡಿ ಎಲ್ಲರನ್ನು ನಗಿಸುತ್ತಿದ್ದವು. ಇದರ ಮೂಲಕ ತಮ್ಮ ಸಾಮಥ್ರ್ಯದ ಅರಿವು ಪಡೆಯುತ್ತಿದ್ದ ಬಹಳಷ್ಟು ಜನ ನಾವು ಏನಾದರೂ ಸಾಧಿಸಬಹುದೆಂಬ ಪ್ರೇರಣೆ ಪಡೆದುದ್ದು ನಿಜ. ಆದರೆ ಇದು ಸ್ವಂತಿಕೆಯನ್ನು ಹಾಳು ಮಾಡುತ್ತಿದೆ, ಗೀಳು ಹುಟ್ಟಿಸಿತ್ತಿದೆ, ಕೆಟ್ಟ ಸಂದೇಶ, ಅತಿರೇಕದ ಸಂದೇಶಗಳು ನುಸುಳುತ್ತಿವೆ ಎಂಬ ಅಪವಾದಗಳು ಇದಕ್ಕಿದ್ದವು.

ಮಧುರೈನ ವಕೀಲ ಮುತ್ತುಕುಮಾರ್‍ರವರು ಈ ಆಪ್‍ನಿಂದ ಅಶ್ಲೀಲತೆ ಮತ್ತು ಅವಘಡ ಸಂಭವಿಸುತ್ತಿದೆ ಎಂದು ಆರೋಪಿಸಿ ಮದ್ರಾಸ್ ಹೈಕೋರ್ಟ್‍ನಲ್ಲಿ ದಾವೆ ಹೂಡಿದ್ದರು. ಕೋರ್ಟ್ ಆಪ್‍ಗೆ ತಡೆನೀಡಿತು. ತದನಂತರ ಟಿಕ್ ಟಾಕ್ ನಿರ್ವಹಿಸುವ ಚೀನಾ ಮೂಲದ ಬೈಟ್‍ಡ್ಯಾನ್ಸ್ ಕಂಪನಿ ಸುಪ್ರೀಂ ಕೋರ್ಟ್ ಮೆಟ್ಟೆಲೇರಿದರೂ ಫಲ ಸಿಗದೇ ಅನಿವಾರ್ಯವಾಗಿ ಆಪಲ್ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇಸ್ಟೋರ್‍ನಿಂದ ಈ ಆಪ್‍ಅನ್ನು ತೆಗೆಯಬೇಕಾಗಿತ್ತು. ಆಗಲೂ ಡೌನ್‍ಲೋಡ್ ಮಾಡಿಕೊಳ್ಳಲು ಆಗುತ್ತಿರಲಿಲ್ಲವಾದರೂ ಅಷ್ಟರಲ್ಲಾಗಲೇ ಡೌನ್‍ಲೋಡ್ ಮಾಡಿರುವವರು ಬಳಸಬಹುದಿತ್ತು ಮಾತ್ರವಲ್ಲ ಶೇರ್‍ಇಟ್ ಮತ್ತಿತ್ತರ ಆಪ್‍ಗಳ ಮೂಲಕ ಪರಸ್ಪರ ಕಳಿಸಿಕೊಳ್ಳಬಹುದಿತ್ತು.

ಆದರೆ ಈಗ ಕಂಪನಿಯು ಮದ್ರಾಸ್ ಹೈಕೋರ್ಟ್‍ನಲ್ಲಿ ಇದರಿಂದ ಸಾಮಾಜಿಕ ವಾತಾವರಣ ಹಾಳಾಗುತ್ತಿಲ್ಲವೆಂದು ಮನವರಿಕೆ ಮಾಡಿಕೊಟ್ಟ ಪರಿಣಾಮ ಮದ್ರಾಸ್ ಹೈಕೋರ್ಟ್ ನಿಷೇಧ ತೆರವುಗೊಳಿಸಿದೆ. ಇದರಿಂದ ಈ ಆಪ್ ಮತ್ತೆ ಗೂಗಲ್ ಪ್ಲೇಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‍ಗೆ ಲಗ್ಗೆ ಇಟ್ಟಿದೆ.

ಆಳುವ ಸರ್ಕಾರಗಳ ಬಳಿ ಇಂತಹ ಆಪ್ ಗಳು ಹೊಂದಿರಬೇಕಾದ ಮಾನದಂಡಗಳು ಕುರಿತು ಸ್ಪಷ್ಟ ನೀತಿ ಇಲ್ಲ. ಈ ಕುರಿತು ಗಂಭೀರವಾಗಿ ಯೋಚಿಸಿ ತಜ್ಞರನ್ನು ಒಳಗೊಂಡು ನೀತಿಗಳನ್ನು ರೂಪಿಸಬೇಕಿದೆ. ಅದೇ ರೀತಿ ಈ ಥರದ ಕಂಪನಿಗಳು ಸಹ ಅತಿರೇಕ ಮೀರದ ಹಾಗೆ ತಾವೇ ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆಯೂ ಇದೆ.

2014ರಲ್ಲಿ ಆರಂಭಗೊಂಡಿದ್ದ ಈ ಕಂಪನಿ 5 ವರ್ಷಗಳಲ್ಲಿ ಬಹಳ ದೊಡ್ಡ ಮಟ್ಟಕ್ಕೆ ಬೆಳೆದಿದೆ. ಈ ಆಪ್ ಬಳಸಿ ತಮ್ಮ ಸೃಜನಶೀಲತೆ ಬಳಸಿ ವಿಡಿಯೋ ಮಾಡಿದ ಹಲವಾರು ಯುವಕ ಯುವತಿಯರು ರಾತ್ರೋ ರಾತ್ರಿ ಸ್ಟಾರ್‍ಗಳಾಗಿದ್ದಾರೆ. ಸೆಲೆಬ್ರಿಟಿಗಳಂತೆ ಹಲವು ಕಾರ್ಯಕ್ರಮಗಳಿಗೆ ಈಗಾಗಲೇ ಅತಿಥಿಗಳು ಆಗಿದ್ದಾರೆ. ಸಾಮಾಜಿಕ ಜಾಗೃತಿ ಮೂಡಿಸಲು ಸಹ ಕೆಲವು ಜನ ಈ ಆಪ್ ಬಳಸಿದ್ದಾರೆ. ಇನ್ನು ಮುಂದೆಯು ಯುವಜನರು ಇದನ್ನು ಹೆಚ್ಚು ಹೆಚ್ಚು ಸಮಾಜಮುಖಿ ಚಟುವಟಿಕೆಗಳಿಗೆ ಇದನ್ನು ಬಳಸಿದರೆ ಒಳ್ಳೇಯದು. ಅದರ ಜೊತೆಗೇ ಇದರಲ್ಲೇ ಮುಳುಗಿ ಹೋಗದೆ, ಇದರಿಂದ ಒಂದಷ್ಟು ರಿಲ್ಯಾಕ್ಸ್ ಪಡೆಯುವುದರ ಜೊತೆಗೆ ತಮ್ಮ ಭವಿಷ್ಯವನ್ನು ಉತ್ತಮಪಡಿಸಿಕೊಳ್ಳುವ ಕಡೆ ಗಮನ ನೀಡಬೇಕೆಂದು ನಾವು ಆಶಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...