HomeಮುಖಪುಟTik tok : ಮತ್ತೆ ಬಂದ ಟಿಕ್ ಟಾಕ್ ಆಪ್ ಸುತ್ತಾ ನಾವು ತಿಳಿದಿರಬೇಕಾದ ಸಂಗತಿಗಳು....

Tik tok : ಮತ್ತೆ ಬಂದ ಟಿಕ್ ಟಾಕ್ ಆಪ್ ಸುತ್ತಾ ನಾವು ತಿಳಿದಿರಬೇಕಾದ ಸಂಗತಿಗಳು….

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬಹಳಷ್ಟು ಯುವಕ ಯುವತಿಯರಿಗೆ ಚಿಕ್ಕಂದಿನಿಂದಲೂ ತಾವು ಸಿನೆಮಾ ನಟ ನಟಿಯರಾಗಬೇಕು, ಟಿವಿಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಹಂಬಲ, ಕನಸು ಇದ್ದೇ ಇರುತ್ತದೆ. ಆದರೆ ಸಾವಿರಕ್ಕೆ ಅಥವಾ ಲಕ್ಷಕ್ಕೆ ಒಬ್ಬರು ಮಾತ್ರ ಆ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಾಗುವುದು ವಾಸ್ತವದ ಸಂಗತಿ. ಇನ್ನುಳಿದವರ ಕೊರಗು ನಿವಾರಿಸಲು ಒಂದು ಮಟ್ಟಿಗೆ ಸಹಾಯ ಮಾಡಿದ್ದು ಫೇಸ್‍ಬುಕ್ ಮತ್ತು ವಾಟ್ಸಾಪ್. ತಮಗನ್ನಿಸಿದ್ದನ್ನು ಬರೆಯುವ, ವಿಡಿಯೊ ಮಾಡಿ ಅಪ್ ಲೋಡ್ ಮಾಡಲು ಅವಕಾಶ ಇದರಿಂದ ಸಿಕ್ಕಿತ್ತು. ಆದರೆ ಯಾವಾಗ ಟಿಕ್ ಟಾಪ್ ಆಪ್ ಬಂದಿತ್ತೋ ಹಲವಾರು ಜನ ತಮ್ಮ ಕನಸನ್ನು ನನಸು ಮಾಡಿಕೊಂಡರು. ಈ ಆಪ್ ಮೂಲಕ ಅಭಿನಯಿಸಿ, ನೃತ್ಯ ಮಾಡಿ ಅದನ್ನು ಸಾವಿರಾರು ಜನಕ್ಕೆ ತೋರಿಸಿ ಸಂತೃಪ್ತಿಪಟ್ಟುಕೊಂಡರು. ಅಂತಹ ಆಪ್ ಅನ್ನು ನಿಷೇಧಿಸಬೇಕೆನ್ನುವ ಮೂಲಕ ಸಾವಿರಾರು ಯುವನಜನರಿಗೆ ದಿಢೀರ್ ಶಾಕ್ ನೀಡಲಾಗಿತ್ತು.

20ಕೋಟಿಗೂ ಹೆಚ್ಚು ಜನ ಬಳಸುವ ಟಿಕ್ ಟಾಕ್ ಎಂಬ ಮನರಂಜನಾ ಆಪ್ ಬ್ಯಾನ್ ಆಗಿದೆ ಎಂಬ ಸುದ್ದಿ ಕೆಲ ದಿನಗಳ ಹಿಂದೆ ಹರಿದಾಡುತ್ತಿತ್ತು. ಆಪಲ್ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇಸ್ಟೋರ್‍ನಲ್ಲಿ ರದ್ದಾಗಿ ಡೌನ್‍ಲೋಡ್ ಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಈಗ ಈ ಆಪ್ ಮತ್ತೆ ಗೂಗಲ್ ಪ್ಲೇಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‍ನಲ್ಲಿ ಕಾಣಿಸಿಕೊಂಡಿದ್ದು ಡೌನ್‍ಲೋಡ್‍ಗೆ ಲಭ್ಯವಾಗಿದೆ.

ಆರಂಭದಲ್ಲಿ ಡಬ್‍ಸ್ಮ್ಯಾಷ್ ಎಂದು ಕರೆಯಲ್ಪಡುತ್ತಿದ್ದ ಈ ಆಪ್ ನಂತರ ಮ್ಯುಸಿಕಲಿ ಎಂದಾಗಿತ್ತು. ಕೊನೆಗೆ ಟಿಕ್ ಟಾಕ್ ಎಂದು ಬದಲಿಸಕೊಂಡಮೇಲೆ ಸಾಕಷ್ಟು ಜನಪ್ರಿಯತೆಯ ಜೊತೆಗೆ ಕೋಟ್ಯಾಂತರ ಜನರು ಡೌನ್‍ಲೋಡ್ ಮಾಡಿಕೊಂಡು ಬಳಸಲು ಆರಂಭಿಸಿದ್ದರು. ಮಿಮಿಕ್ರಿಯಿಂದ ಆರಂಭವಾದು ಇದು ದೊಡ್ಡ ಸ್ಟಾರ್ ನಟನನ್ನು ಅನುಸರಿಲು ಬಳುಸತ್ತಿದ್ದರು. ಡಬ್‍ಸ್ಮ್ಯಾಷ್ ಮಾಡುವ ಮೂಲಕ ಇಷ್ಟ ಪಟ್ಟ ನಟನ ಅಭಿನಯವನ್ನು ನಕಲು ಮಾಡುವುದು, ಅವರ ಧ್ವನಿಗೆ ಇವರು ಅಭಿನಯಿಸಲು ಶುರು ಮಾಡಿದಾಗ ಇದು ಹೊಸ ರೀತಿಯ ಅಲೆಯನ್ನು ಮೂಡಿಸಿತ್ತು. ಈಗ ಅದೇ ರೀತಿಯ ಹಲವಾರು ಆಪ್ ಬಂದಿದ್ದು ಅದರಲ್ಲಿ ಟಿಕ್ ಟಾಕ್ ಮೇಲುಗೈ ಸಾಧಿಸಿದೆ.

ಮುಖ್ಯವಾಗಿ ಯುವಜನರು ಮತ್ತು ಸ್ಥಳೀಯ ಭಾಷಿಕರ ಮನಸ್ಥಿತಿಯನ್ನು ಅಧ್ಯಯನ ಮಾಡಿ ಆಪ್ ಡೆವಲಪ್ ಮಾಡಿದಂತಿದೆ. ಹಲವು ಸಿನಿಮಾದ ಸಣ್ಣ ದೃಶ್ಯಗಳ ವಾಯ್ಸ್‍ಗೆ ತಮ್ಮ ಅಭಿನಯ ಸೇರಿಸಿ ಚಿಕ್ಕ ವಿಡಿಯೋಗಳನ್ನು ತಯಾರಿಸಿ ಹರಿಯಬಿಡುವುದು, ತಾವೇ ಖುದ್ದಾಗಿ ತಮಾಷೆಯ ಪ್ರಸಂಗಗಳನ್ನು ಅಭಿನಯಿಸಿ ರೆಕಾರ್ಡ್ ಮಾಡುವುದು, ಡ್ಯಾನ್ಸ್‍ಗಳನ್ನು ಮಾಡುವುದು, ಟ್ರೋಲ್ ಮಾಡುವುದು ಸೇರಿದಂತೆ ಹತ್ತು ಹಲವು ಸಣ್ಣ ವಿಡಿಯೋಗಳು ಟಿಕ್ ಟಾಕ್‍ನಲ್ಲಿ ಹರಿದಾಡಿದ್ದವು. ಕಾಲಕ್ಕೆ ತಕ್ಕಂತೆ ಒಂದು ವಿಡಿಯೋ ನೀಡಿ ಅದೇ ಮಾದರಿಯ ವಿಡಿಯೋ ಮಾಡಿ ಕಳಿಸುವಂತೆ ಚಾಲೆಂಜ್ ನೀಡಿ ಈ ಆಪ್‍ನ ಪ್ರಿಯರು ಇದರಲ್ಲೇ ಗಿರಕಿ ಹೊಡೆಯುವ ಹಾಗೆ ನೋಡಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಒಬ್ಬ ಯುವಕ ಚಾಕುವಿನಿಂದ ಕತ್ತು ಕುಯ್ದುಕೊಳ್ಳುವಂತೆ ಅಭಿನಯಿಸಲು ಹೋಗಿ ನಿಜವಾಗಿಯೂ ಕತ್ತು ಕುಯ್ದುಕೊಂಡುಬಿಟ್ಟ ವಿಡಿಯೋ ವೈರಲ್ ಆಗಿತ್ತು. ಇಂತಹ ಅತಿರೇಕವಾದಂತಹ ವ್ಯಕ್ತಿಗಳಿಂದಲೇ ಟಿಕ್ ಟಾಕ್ ಬ್ಯಾನ್ ಆಗುವ ಹಂತಕ್ಕೆ ತಲುಪಿತ್ತು.

ಎಲ್ಲಾ ವಯೋಮಾನದವರು ಸಹ ಬೇಸರ ಕಳೆಯಲು, ಟೈಮ್ ಪಾಸ್ ಮಾಡಲು ಟಕ್ ಟಾಕ್ ಬಳಸಿದರೆ ಬಹುಪಾಲು ಯುವ ಜನಾಂಗ ಇದರ ದಾಸರಂದತ್ತಿದೆ. ‘ಯಾವಾಗ ನೋಡಿದರೂ ಟಿಕ್ ಟಾಕ್‍ನಲ್ಲೇ ಮುಳುಗಿರುತ್ತೀಯಲ್ಲ’ ಎಂಬ ಟೀಕೆ ಎಲ್ಲಾ ಕಡೆ ಸಹಜವಾಗಿ ಕೇಳಿ ಬರುತ್ತಿದೆ. ಈ ಆಪ್ ಜನರಿಗೆ ಅತಿ ಹೆಚ್ಚು ಮನರಂಜನೆ ನೀಡಿದ್ದು ಎಷ್ಟು ನಿಜವೋ, ಅಷ್ಟೇ ಪ್ರಮಾಣದಲ್ಲಿ ಅವರನ್ನು ಸೋಮಾರಿಗಳನ್ನಾಗಿಯೂ ಮಾಡಿತ್ತು.
ಈ ಆಪ್‍ನ ಅನುಕೂಲ ಮತ್ತು ಅನಾನುಕೂಲಗಳನ್ನು ನೋಡಿದರೆ, ಮೊದಲನೇಯದಾಗಿ ಆ ಆಪ್ ಬಳಸಿ ಸಾವಿರಾರು ಜನ ತಮ್ಮ ಸೃಜನಶೀಲತೆಯನ್ನು ಬಹಿರಂಗಪಡಿಸಿದ್ದರು. ಅದರಲ್ಲಿನ ಒಂದೊಂದು ಚಿಕ್ಕ ವಿಡಿಯೋ ಸಹ ವಾವ್ ಅನ್ನಿಸುವಷ್ಟರ ಮಟ್ಟಿಗೆ ಹೊಸತನದಿಂದ ಕೂಡಿ ಎಲ್ಲರನ್ನು ನಗಿಸುತ್ತಿದ್ದವು. ಇದರ ಮೂಲಕ ತಮ್ಮ ಸಾಮಥ್ರ್ಯದ ಅರಿವು ಪಡೆಯುತ್ತಿದ್ದ ಬಹಳಷ್ಟು ಜನ ನಾವು ಏನಾದರೂ ಸಾಧಿಸಬಹುದೆಂಬ ಪ್ರೇರಣೆ ಪಡೆದುದ್ದು ನಿಜ. ಆದರೆ ಇದು ಸ್ವಂತಿಕೆಯನ್ನು ಹಾಳು ಮಾಡುತ್ತಿದೆ, ಗೀಳು ಹುಟ್ಟಿಸಿತ್ತಿದೆ, ಕೆಟ್ಟ ಸಂದೇಶ, ಅತಿರೇಕದ ಸಂದೇಶಗಳು ನುಸುಳುತ್ತಿವೆ ಎಂಬ ಅಪವಾದಗಳು ಇದಕ್ಕಿದ್ದವು.

ಮಧುರೈನ ವಕೀಲ ಮುತ್ತುಕುಮಾರ್‍ರವರು ಈ ಆಪ್‍ನಿಂದ ಅಶ್ಲೀಲತೆ ಮತ್ತು ಅವಘಡ ಸಂಭವಿಸುತ್ತಿದೆ ಎಂದು ಆರೋಪಿಸಿ ಮದ್ರಾಸ್ ಹೈಕೋರ್ಟ್‍ನಲ್ಲಿ ದಾವೆ ಹೂಡಿದ್ದರು. ಕೋರ್ಟ್ ಆಪ್‍ಗೆ ತಡೆನೀಡಿತು. ತದನಂತರ ಟಿಕ್ ಟಾಕ್ ನಿರ್ವಹಿಸುವ ಚೀನಾ ಮೂಲದ ಬೈಟ್‍ಡ್ಯಾನ್ಸ್ ಕಂಪನಿ ಸುಪ್ರೀಂ ಕೋರ್ಟ್ ಮೆಟ್ಟೆಲೇರಿದರೂ ಫಲ ಸಿಗದೇ ಅನಿವಾರ್ಯವಾಗಿ ಆಪಲ್ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇಸ್ಟೋರ್‍ನಿಂದ ಈ ಆಪ್‍ಅನ್ನು ತೆಗೆಯಬೇಕಾಗಿತ್ತು. ಆಗಲೂ ಡೌನ್‍ಲೋಡ್ ಮಾಡಿಕೊಳ್ಳಲು ಆಗುತ್ತಿರಲಿಲ್ಲವಾದರೂ ಅಷ್ಟರಲ್ಲಾಗಲೇ ಡೌನ್‍ಲೋಡ್ ಮಾಡಿರುವವರು ಬಳಸಬಹುದಿತ್ತು ಮಾತ್ರವಲ್ಲ ಶೇರ್‍ಇಟ್ ಮತ್ತಿತ್ತರ ಆಪ್‍ಗಳ ಮೂಲಕ ಪರಸ್ಪರ ಕಳಿಸಿಕೊಳ್ಳಬಹುದಿತ್ತು.

ಆದರೆ ಈಗ ಕಂಪನಿಯು ಮದ್ರಾಸ್ ಹೈಕೋರ್ಟ್‍ನಲ್ಲಿ ಇದರಿಂದ ಸಾಮಾಜಿಕ ವಾತಾವರಣ ಹಾಳಾಗುತ್ತಿಲ್ಲವೆಂದು ಮನವರಿಕೆ ಮಾಡಿಕೊಟ್ಟ ಪರಿಣಾಮ ಮದ್ರಾಸ್ ಹೈಕೋರ್ಟ್ ನಿಷೇಧ ತೆರವುಗೊಳಿಸಿದೆ. ಇದರಿಂದ ಈ ಆಪ್ ಮತ್ತೆ ಗೂಗಲ್ ಪ್ಲೇಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‍ಗೆ ಲಗ್ಗೆ ಇಟ್ಟಿದೆ.

ಆಳುವ ಸರ್ಕಾರಗಳ ಬಳಿ ಇಂತಹ ಆಪ್ ಗಳು ಹೊಂದಿರಬೇಕಾದ ಮಾನದಂಡಗಳು ಕುರಿತು ಸ್ಪಷ್ಟ ನೀತಿ ಇಲ್ಲ. ಈ ಕುರಿತು ಗಂಭೀರವಾಗಿ ಯೋಚಿಸಿ ತಜ್ಞರನ್ನು ಒಳಗೊಂಡು ನೀತಿಗಳನ್ನು ರೂಪಿಸಬೇಕಿದೆ. ಅದೇ ರೀತಿ ಈ ಥರದ ಕಂಪನಿಗಳು ಸಹ ಅತಿರೇಕ ಮೀರದ ಹಾಗೆ ತಾವೇ ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆಯೂ ಇದೆ.

2014ರಲ್ಲಿ ಆರಂಭಗೊಂಡಿದ್ದ ಈ ಕಂಪನಿ 5 ವರ್ಷಗಳಲ್ಲಿ ಬಹಳ ದೊಡ್ಡ ಮಟ್ಟಕ್ಕೆ ಬೆಳೆದಿದೆ. ಈ ಆಪ್ ಬಳಸಿ ತಮ್ಮ ಸೃಜನಶೀಲತೆ ಬಳಸಿ ವಿಡಿಯೋ ಮಾಡಿದ ಹಲವಾರು ಯುವಕ ಯುವತಿಯರು ರಾತ್ರೋ ರಾತ್ರಿ ಸ್ಟಾರ್‍ಗಳಾಗಿದ್ದಾರೆ. ಸೆಲೆಬ್ರಿಟಿಗಳಂತೆ ಹಲವು ಕಾರ್ಯಕ್ರಮಗಳಿಗೆ ಈಗಾಗಲೇ ಅತಿಥಿಗಳು ಆಗಿದ್ದಾರೆ. ಸಾಮಾಜಿಕ ಜಾಗೃತಿ ಮೂಡಿಸಲು ಸಹ ಕೆಲವು ಜನ ಈ ಆಪ್ ಬಳಸಿದ್ದಾರೆ. ಇನ್ನು ಮುಂದೆಯು ಯುವಜನರು ಇದನ್ನು ಹೆಚ್ಚು ಹೆಚ್ಚು ಸಮಾಜಮುಖಿ ಚಟುವಟಿಕೆಗಳಿಗೆ ಇದನ್ನು ಬಳಸಿದರೆ ಒಳ್ಳೇಯದು. ಅದರ ಜೊತೆಗೇ ಇದರಲ್ಲೇ ಮುಳುಗಿ ಹೋಗದೆ, ಇದರಿಂದ ಒಂದಷ್ಟು ರಿಲ್ಯಾಕ್ಸ್ ಪಡೆಯುವುದರ ಜೊತೆಗೆ ತಮ್ಮ ಭವಿಷ್ಯವನ್ನು ಉತ್ತಮಪಡಿಸಿಕೊಳ್ಳುವ ಕಡೆ ಗಮನ ನೀಡಬೇಕೆಂದು ನಾವು ಆಶಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...