HomeಮುಖಪುಟTik tok : ಮತ್ತೆ ಬಂದ ಟಿಕ್ ಟಾಕ್ ಆಪ್ ಸುತ್ತಾ ನಾವು ತಿಳಿದಿರಬೇಕಾದ ಸಂಗತಿಗಳು....

Tik tok : ಮತ್ತೆ ಬಂದ ಟಿಕ್ ಟಾಕ್ ಆಪ್ ಸುತ್ತಾ ನಾವು ತಿಳಿದಿರಬೇಕಾದ ಸಂಗತಿಗಳು….

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬಹಳಷ್ಟು ಯುವಕ ಯುವತಿಯರಿಗೆ ಚಿಕ್ಕಂದಿನಿಂದಲೂ ತಾವು ಸಿನೆಮಾ ನಟ ನಟಿಯರಾಗಬೇಕು, ಟಿವಿಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಹಂಬಲ, ಕನಸು ಇದ್ದೇ ಇರುತ್ತದೆ. ಆದರೆ ಸಾವಿರಕ್ಕೆ ಅಥವಾ ಲಕ್ಷಕ್ಕೆ ಒಬ್ಬರು ಮಾತ್ರ ಆ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವಾಗುವುದು ವಾಸ್ತವದ ಸಂಗತಿ. ಇನ್ನುಳಿದವರ ಕೊರಗು ನಿವಾರಿಸಲು ಒಂದು ಮಟ್ಟಿಗೆ ಸಹಾಯ ಮಾಡಿದ್ದು ಫೇಸ್‍ಬುಕ್ ಮತ್ತು ವಾಟ್ಸಾಪ್. ತಮಗನ್ನಿಸಿದ್ದನ್ನು ಬರೆಯುವ, ವಿಡಿಯೊ ಮಾಡಿ ಅಪ್ ಲೋಡ್ ಮಾಡಲು ಅವಕಾಶ ಇದರಿಂದ ಸಿಕ್ಕಿತ್ತು. ಆದರೆ ಯಾವಾಗ ಟಿಕ್ ಟಾಪ್ ಆಪ್ ಬಂದಿತ್ತೋ ಹಲವಾರು ಜನ ತಮ್ಮ ಕನಸನ್ನು ನನಸು ಮಾಡಿಕೊಂಡರು. ಈ ಆಪ್ ಮೂಲಕ ಅಭಿನಯಿಸಿ, ನೃತ್ಯ ಮಾಡಿ ಅದನ್ನು ಸಾವಿರಾರು ಜನಕ್ಕೆ ತೋರಿಸಿ ಸಂತೃಪ್ತಿಪಟ್ಟುಕೊಂಡರು. ಅಂತಹ ಆಪ್ ಅನ್ನು ನಿಷೇಧಿಸಬೇಕೆನ್ನುವ ಮೂಲಕ ಸಾವಿರಾರು ಯುವನಜನರಿಗೆ ದಿಢೀರ್ ಶಾಕ್ ನೀಡಲಾಗಿತ್ತು.

20ಕೋಟಿಗೂ ಹೆಚ್ಚು ಜನ ಬಳಸುವ ಟಿಕ್ ಟಾಕ್ ಎಂಬ ಮನರಂಜನಾ ಆಪ್ ಬ್ಯಾನ್ ಆಗಿದೆ ಎಂಬ ಸುದ್ದಿ ಕೆಲ ದಿನಗಳ ಹಿಂದೆ ಹರಿದಾಡುತ್ತಿತ್ತು. ಆಪಲ್ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇಸ್ಟೋರ್‍ನಲ್ಲಿ ರದ್ದಾಗಿ ಡೌನ್‍ಲೋಡ್ ಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಈಗ ಈ ಆಪ್ ಮತ್ತೆ ಗೂಗಲ್ ಪ್ಲೇಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‍ನಲ್ಲಿ ಕಾಣಿಸಿಕೊಂಡಿದ್ದು ಡೌನ್‍ಲೋಡ್‍ಗೆ ಲಭ್ಯವಾಗಿದೆ.

ಆರಂಭದಲ್ಲಿ ಡಬ್‍ಸ್ಮ್ಯಾಷ್ ಎಂದು ಕರೆಯಲ್ಪಡುತ್ತಿದ್ದ ಈ ಆಪ್ ನಂತರ ಮ್ಯುಸಿಕಲಿ ಎಂದಾಗಿತ್ತು. ಕೊನೆಗೆ ಟಿಕ್ ಟಾಕ್ ಎಂದು ಬದಲಿಸಕೊಂಡಮೇಲೆ ಸಾಕಷ್ಟು ಜನಪ್ರಿಯತೆಯ ಜೊತೆಗೆ ಕೋಟ್ಯಾಂತರ ಜನರು ಡೌನ್‍ಲೋಡ್ ಮಾಡಿಕೊಂಡು ಬಳಸಲು ಆರಂಭಿಸಿದ್ದರು. ಮಿಮಿಕ್ರಿಯಿಂದ ಆರಂಭವಾದು ಇದು ದೊಡ್ಡ ಸ್ಟಾರ್ ನಟನನ್ನು ಅನುಸರಿಲು ಬಳುಸತ್ತಿದ್ದರು. ಡಬ್‍ಸ್ಮ್ಯಾಷ್ ಮಾಡುವ ಮೂಲಕ ಇಷ್ಟ ಪಟ್ಟ ನಟನ ಅಭಿನಯವನ್ನು ನಕಲು ಮಾಡುವುದು, ಅವರ ಧ್ವನಿಗೆ ಇವರು ಅಭಿನಯಿಸಲು ಶುರು ಮಾಡಿದಾಗ ಇದು ಹೊಸ ರೀತಿಯ ಅಲೆಯನ್ನು ಮೂಡಿಸಿತ್ತು. ಈಗ ಅದೇ ರೀತಿಯ ಹಲವಾರು ಆಪ್ ಬಂದಿದ್ದು ಅದರಲ್ಲಿ ಟಿಕ್ ಟಾಕ್ ಮೇಲುಗೈ ಸಾಧಿಸಿದೆ.

ಮುಖ್ಯವಾಗಿ ಯುವಜನರು ಮತ್ತು ಸ್ಥಳೀಯ ಭಾಷಿಕರ ಮನಸ್ಥಿತಿಯನ್ನು ಅಧ್ಯಯನ ಮಾಡಿ ಆಪ್ ಡೆವಲಪ್ ಮಾಡಿದಂತಿದೆ. ಹಲವು ಸಿನಿಮಾದ ಸಣ್ಣ ದೃಶ್ಯಗಳ ವಾಯ್ಸ್‍ಗೆ ತಮ್ಮ ಅಭಿನಯ ಸೇರಿಸಿ ಚಿಕ್ಕ ವಿಡಿಯೋಗಳನ್ನು ತಯಾರಿಸಿ ಹರಿಯಬಿಡುವುದು, ತಾವೇ ಖುದ್ದಾಗಿ ತಮಾಷೆಯ ಪ್ರಸಂಗಗಳನ್ನು ಅಭಿನಯಿಸಿ ರೆಕಾರ್ಡ್ ಮಾಡುವುದು, ಡ್ಯಾನ್ಸ್‍ಗಳನ್ನು ಮಾಡುವುದು, ಟ್ರೋಲ್ ಮಾಡುವುದು ಸೇರಿದಂತೆ ಹತ್ತು ಹಲವು ಸಣ್ಣ ವಿಡಿಯೋಗಳು ಟಿಕ್ ಟಾಕ್‍ನಲ್ಲಿ ಹರಿದಾಡಿದ್ದವು. ಕಾಲಕ್ಕೆ ತಕ್ಕಂತೆ ಒಂದು ವಿಡಿಯೋ ನೀಡಿ ಅದೇ ಮಾದರಿಯ ವಿಡಿಯೋ ಮಾಡಿ ಕಳಿಸುವಂತೆ ಚಾಲೆಂಜ್ ನೀಡಿ ಈ ಆಪ್‍ನ ಪ್ರಿಯರು ಇದರಲ್ಲೇ ಗಿರಕಿ ಹೊಡೆಯುವ ಹಾಗೆ ನೋಡಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಒಬ್ಬ ಯುವಕ ಚಾಕುವಿನಿಂದ ಕತ್ತು ಕುಯ್ದುಕೊಳ್ಳುವಂತೆ ಅಭಿನಯಿಸಲು ಹೋಗಿ ನಿಜವಾಗಿಯೂ ಕತ್ತು ಕುಯ್ದುಕೊಂಡುಬಿಟ್ಟ ವಿಡಿಯೋ ವೈರಲ್ ಆಗಿತ್ತು. ಇಂತಹ ಅತಿರೇಕವಾದಂತಹ ವ್ಯಕ್ತಿಗಳಿಂದಲೇ ಟಿಕ್ ಟಾಕ್ ಬ್ಯಾನ್ ಆಗುವ ಹಂತಕ್ಕೆ ತಲುಪಿತ್ತು.

ಎಲ್ಲಾ ವಯೋಮಾನದವರು ಸಹ ಬೇಸರ ಕಳೆಯಲು, ಟೈಮ್ ಪಾಸ್ ಮಾಡಲು ಟಕ್ ಟಾಕ್ ಬಳಸಿದರೆ ಬಹುಪಾಲು ಯುವ ಜನಾಂಗ ಇದರ ದಾಸರಂದತ್ತಿದೆ. ‘ಯಾವಾಗ ನೋಡಿದರೂ ಟಿಕ್ ಟಾಕ್‍ನಲ್ಲೇ ಮುಳುಗಿರುತ್ತೀಯಲ್ಲ’ ಎಂಬ ಟೀಕೆ ಎಲ್ಲಾ ಕಡೆ ಸಹಜವಾಗಿ ಕೇಳಿ ಬರುತ್ತಿದೆ. ಈ ಆಪ್ ಜನರಿಗೆ ಅತಿ ಹೆಚ್ಚು ಮನರಂಜನೆ ನೀಡಿದ್ದು ಎಷ್ಟು ನಿಜವೋ, ಅಷ್ಟೇ ಪ್ರಮಾಣದಲ್ಲಿ ಅವರನ್ನು ಸೋಮಾರಿಗಳನ್ನಾಗಿಯೂ ಮಾಡಿತ್ತು.
ಈ ಆಪ್‍ನ ಅನುಕೂಲ ಮತ್ತು ಅನಾನುಕೂಲಗಳನ್ನು ನೋಡಿದರೆ, ಮೊದಲನೇಯದಾಗಿ ಆ ಆಪ್ ಬಳಸಿ ಸಾವಿರಾರು ಜನ ತಮ್ಮ ಸೃಜನಶೀಲತೆಯನ್ನು ಬಹಿರಂಗಪಡಿಸಿದ್ದರು. ಅದರಲ್ಲಿನ ಒಂದೊಂದು ಚಿಕ್ಕ ವಿಡಿಯೋ ಸಹ ವಾವ್ ಅನ್ನಿಸುವಷ್ಟರ ಮಟ್ಟಿಗೆ ಹೊಸತನದಿಂದ ಕೂಡಿ ಎಲ್ಲರನ್ನು ನಗಿಸುತ್ತಿದ್ದವು. ಇದರ ಮೂಲಕ ತಮ್ಮ ಸಾಮಥ್ರ್ಯದ ಅರಿವು ಪಡೆಯುತ್ತಿದ್ದ ಬಹಳಷ್ಟು ಜನ ನಾವು ಏನಾದರೂ ಸಾಧಿಸಬಹುದೆಂಬ ಪ್ರೇರಣೆ ಪಡೆದುದ್ದು ನಿಜ. ಆದರೆ ಇದು ಸ್ವಂತಿಕೆಯನ್ನು ಹಾಳು ಮಾಡುತ್ತಿದೆ, ಗೀಳು ಹುಟ್ಟಿಸಿತ್ತಿದೆ, ಕೆಟ್ಟ ಸಂದೇಶ, ಅತಿರೇಕದ ಸಂದೇಶಗಳು ನುಸುಳುತ್ತಿವೆ ಎಂಬ ಅಪವಾದಗಳು ಇದಕ್ಕಿದ್ದವು.

ಮಧುರೈನ ವಕೀಲ ಮುತ್ತುಕುಮಾರ್‍ರವರು ಈ ಆಪ್‍ನಿಂದ ಅಶ್ಲೀಲತೆ ಮತ್ತು ಅವಘಡ ಸಂಭವಿಸುತ್ತಿದೆ ಎಂದು ಆರೋಪಿಸಿ ಮದ್ರಾಸ್ ಹೈಕೋರ್ಟ್‍ನಲ್ಲಿ ದಾವೆ ಹೂಡಿದ್ದರು. ಕೋರ್ಟ್ ಆಪ್‍ಗೆ ತಡೆನೀಡಿತು. ತದನಂತರ ಟಿಕ್ ಟಾಕ್ ನಿರ್ವಹಿಸುವ ಚೀನಾ ಮೂಲದ ಬೈಟ್‍ಡ್ಯಾನ್ಸ್ ಕಂಪನಿ ಸುಪ್ರೀಂ ಕೋರ್ಟ್ ಮೆಟ್ಟೆಲೇರಿದರೂ ಫಲ ಸಿಗದೇ ಅನಿವಾರ್ಯವಾಗಿ ಆಪಲ್ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇಸ್ಟೋರ್‍ನಿಂದ ಈ ಆಪ್‍ಅನ್ನು ತೆಗೆಯಬೇಕಾಗಿತ್ತು. ಆಗಲೂ ಡೌನ್‍ಲೋಡ್ ಮಾಡಿಕೊಳ್ಳಲು ಆಗುತ್ತಿರಲಿಲ್ಲವಾದರೂ ಅಷ್ಟರಲ್ಲಾಗಲೇ ಡೌನ್‍ಲೋಡ್ ಮಾಡಿರುವವರು ಬಳಸಬಹುದಿತ್ತು ಮಾತ್ರವಲ್ಲ ಶೇರ್‍ಇಟ್ ಮತ್ತಿತ್ತರ ಆಪ್‍ಗಳ ಮೂಲಕ ಪರಸ್ಪರ ಕಳಿಸಿಕೊಳ್ಳಬಹುದಿತ್ತು.

ಆದರೆ ಈಗ ಕಂಪನಿಯು ಮದ್ರಾಸ್ ಹೈಕೋರ್ಟ್‍ನಲ್ಲಿ ಇದರಿಂದ ಸಾಮಾಜಿಕ ವಾತಾವರಣ ಹಾಳಾಗುತ್ತಿಲ್ಲವೆಂದು ಮನವರಿಕೆ ಮಾಡಿಕೊಟ್ಟ ಪರಿಣಾಮ ಮದ್ರಾಸ್ ಹೈಕೋರ್ಟ್ ನಿಷೇಧ ತೆರವುಗೊಳಿಸಿದೆ. ಇದರಿಂದ ಈ ಆಪ್ ಮತ್ತೆ ಗೂಗಲ್ ಪ್ಲೇಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‍ಗೆ ಲಗ್ಗೆ ಇಟ್ಟಿದೆ.

ಆಳುವ ಸರ್ಕಾರಗಳ ಬಳಿ ಇಂತಹ ಆಪ್ ಗಳು ಹೊಂದಿರಬೇಕಾದ ಮಾನದಂಡಗಳು ಕುರಿತು ಸ್ಪಷ್ಟ ನೀತಿ ಇಲ್ಲ. ಈ ಕುರಿತು ಗಂಭೀರವಾಗಿ ಯೋಚಿಸಿ ತಜ್ಞರನ್ನು ಒಳಗೊಂಡು ನೀತಿಗಳನ್ನು ರೂಪಿಸಬೇಕಿದೆ. ಅದೇ ರೀತಿ ಈ ಥರದ ಕಂಪನಿಗಳು ಸಹ ಅತಿರೇಕ ಮೀರದ ಹಾಗೆ ತಾವೇ ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆಯೂ ಇದೆ.

2014ರಲ್ಲಿ ಆರಂಭಗೊಂಡಿದ್ದ ಈ ಕಂಪನಿ 5 ವರ್ಷಗಳಲ್ಲಿ ಬಹಳ ದೊಡ್ಡ ಮಟ್ಟಕ್ಕೆ ಬೆಳೆದಿದೆ. ಈ ಆಪ್ ಬಳಸಿ ತಮ್ಮ ಸೃಜನಶೀಲತೆ ಬಳಸಿ ವಿಡಿಯೋ ಮಾಡಿದ ಹಲವಾರು ಯುವಕ ಯುವತಿಯರು ರಾತ್ರೋ ರಾತ್ರಿ ಸ್ಟಾರ್‍ಗಳಾಗಿದ್ದಾರೆ. ಸೆಲೆಬ್ರಿಟಿಗಳಂತೆ ಹಲವು ಕಾರ್ಯಕ್ರಮಗಳಿಗೆ ಈಗಾಗಲೇ ಅತಿಥಿಗಳು ಆಗಿದ್ದಾರೆ. ಸಾಮಾಜಿಕ ಜಾಗೃತಿ ಮೂಡಿಸಲು ಸಹ ಕೆಲವು ಜನ ಈ ಆಪ್ ಬಳಸಿದ್ದಾರೆ. ಇನ್ನು ಮುಂದೆಯು ಯುವಜನರು ಇದನ್ನು ಹೆಚ್ಚು ಹೆಚ್ಚು ಸಮಾಜಮುಖಿ ಚಟುವಟಿಕೆಗಳಿಗೆ ಇದನ್ನು ಬಳಸಿದರೆ ಒಳ್ಳೇಯದು. ಅದರ ಜೊತೆಗೇ ಇದರಲ್ಲೇ ಮುಳುಗಿ ಹೋಗದೆ, ಇದರಿಂದ ಒಂದಷ್ಟು ರಿಲ್ಯಾಕ್ಸ್ ಪಡೆಯುವುದರ ಜೊತೆಗೆ ತಮ್ಮ ಭವಿಷ್ಯವನ್ನು ಉತ್ತಮಪಡಿಸಿಕೊಳ್ಳುವ ಕಡೆ ಗಮನ ನೀಡಬೇಕೆಂದು ನಾವು ಆಶಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...