Homeಮುಖಪುಟಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

ಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

- Advertisement -
- Advertisement -

ಇಂದು ರಾತ್ರಿ ಸಂಭವಿಸಲಿರುವ ಖಂಡಗ್ರಾಸ, ಅಂದರೆ, ಭಾಗಶಃ ಚಂದ್ರಗ್ರಹಣ ಉತ್ತರ ಅಮೆರಿಕವನ್ನು ಹೊರತುಪಡಿಸಿ ಬಹುತೇಕ ಎಲ್ಲಾ ದೇಶಗಳಲ್ಲಿ ಗೋಚರಿಸಲಿದೆ. ಇಲ್ಲಿ ನೀವು 2019ರ ಚಂದ್ರಗಹಣದ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಅತ್ಯಗತ್ಯ ಅಂಶಗಳಿವೆ.

ಇಂದಿನ ಚಂದ್ರಗ್ರಹಣವನ್ನು ಮೋಡಗಳು ಅವಕಾಶ ಕೊಟ್ಟರೆ ಭಾರತದಾದ್ಯಂತ ಕಾಣಬಹುದು. ಇದು ಭಾರತದಲ್ಲಿ 2019ರ ಕೊನೆಯ ಚಂದ್ರಗಹಣ. ಇದು ಮಧ್ಯರಾತ್ರಿ ಕಳೆದ ಸ್ವಲ್ಪವೇ ಹೊತ್ತಿನಲ್ಲಿ ಆರಂಭವಾಗಿ, ಬೆಳಗ್ಗಿನ ಜಾವದ ತನಕ ಮುಂದುವರಿಯಲಿದೆ.

ಚಂದ್ರಗ್ರಹಣದ ಸಮಯ

ಜುಲೈ 17, 2017ರ ರಾತ್ರಿ 12.13ಕ್ಕೆ ಗ್ರಹಣದ ಆರಂಭ. 3.00 ಗಂಟೆಯ ಹೊತ್ತಿಗೆ ಗರಿಷ್ಟ ಪ್ರಮಾಣವನ್ನು ತಲುಪಲಿದೆ. 1.31ರ ಹೊತ್ತಿಗೆ ಅದು ಹಿಂದೆ ಸರಿಯಲು ಆರಂಭವಾಗಿ  ಖಂಡ ಅಥವಾ ಭಾಗಶಃ (Partial) ಗ್ರಹಣವಾಗಲಿದೆ. ಆ ಬಳಿಕ  ಅದು 4.29ರ ತನಕ ಹಿಂದೆ ಸರಿಯುತ್ತಾ ನಂತರ  Penumbra ಎಂದು ಕರೆಯಲ್ಪಡುವ ಹಂತಕ್ಕೆ ತಲಪುತ್ತದೆ. ಅದು ಅಂತಿಮವಾಗಿ 5.47ಕ್ಕೆ ಕೊನೆಗೊಳ್ಳುತ್ತದೆ. ಇಡೀ ಗ್ರಹಣವು 5 ಗಂಟೆ 34 ನಿಮಿಷಗಳ ಕಾಲ ಇದ್ದು, ಭಾಗಶಃ ಗ್ರಹಣವು 2 ಗಂಟೆ 58 ನಿಮಿಷಗಳ ಕಾಲ ಇರಲಿದೆ.

149 ವರ್ಷಗಳ ನಂತರದ ಕಾಕತಾಳೀಯ

ಈ ಚಂದ್ರಗ್ರಹಣ ಕೆಲವರಿಗೆ ಮಹತ್ವದ್ದು ಏಕೆಂದರೆ, 149 ವರ್ಷಗಳ ನಂತರ ಅದು ಕೆಲವು ಭಾರತೀಯರು ಮಹತ್ವದ್ದೆಂದು ನಂಬುವ ಗುರು ಪೂರ್ಣಿಮಾದ ದಿನ ಬರುತ್ತದೆ. ಚಂದ್ರಗ್ರಹಣವು ಗರಿಷ್ಟ ಪ್ರಮಾಣ ತಲಪಿದಾಗ, ಭೂಮಿಯ ನೆರಳು ಅರ್ಧ ಭಾಗದಷ್ಟು ಚಂದ್ರನನ್ನು ಆವರಿಸಲಿದೆ. ಇದು ಈ ವರ್ಷ ಭಾರತದಲ್ಲಿ ಕೊನೆಯ ಚಂದ್ರಗ್ರಹಣವಾಗಿದೆ. ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ಗ್ರಹಣವನ್ನು ಪೂರ್ಣಾಣಾವಧಿ ಅಂದರೆ, ಆರಂಭದಿಂದ ಅಂತ್ಯದ ವರೆಗೆ ಕಾಣಬಹುದು.

ಚಂದ್ರಗ್ರಹಣವನ್ನು ನೋಡುವುದು ಹೇಗೆ?

ಚಂದ್ರಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡಬಹುದು. ಆದರೆ, ಸೂರ್ಯಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡುವುದು ಕುರುಡುತನಕ್ಕೆ ಕಾರಣವಾಗುತ್ತದೆ. ಚಂದ್ರಗ್ರಹಣ ನೋಡಲು ಯಾವುದೇ ಭಯ ಅಗತ್ಯವಿಲ್ಲ.

ಮೂಢನಂಬಿಕೆ ಬೇಡ!

ಚಂದ್ರ, ಭೂಮಿ, ಸೂರ್ಯ ಹೆಚ್ಚು ಕಡಿಮೆ ಎಂದೇ ರೇಖೆಗೆ ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಚಂದ್ರ ಮತ್ತು ಸೂರ್ಯನ ನಡುವೆ ಭೂಮಿ ಬರುವುದರಿಂದ ಭೂಮಿಯ ನೆರಳು ಚಂದ್ರನ ಮೇಲೆ ಹಾದುಹೋಗುತ್ತದೆ. ಈ ಕಾರಣದಿಂದಲೇ ಚಂದ್ರಗ್ರಹಣ ಹುಣ್ಣಿಮೆ ದಿನ ಮತ್ತು ಸೂರ್ಯಗ್ರಹಣ ಅಮವಾಸ್ಯೆಯ ದಿನ ಮಾತ್ರ ಸಂಭವಿಸುತ್ತದೆ. ಅದೇ ರೀತಿಯಲ್ಲಿ ಸೂರ್ಯ ಮತ್ತು ಭೂಮಿಯ ನಡುವೆ ಒಂದೇ ರೇಖೆಯಲ್ಲಿ ಚಂದ್ರ ಹಾದುಹೋದರೆ, ಅದು ಸೂರ್ಯನನ್ನು ಮರೆಮಾಚಿ ಸೂರ್ಯಗ್ರಹಣ ಸಂಭವಿಸುತ್ತದೆ. ಮೂರೂ ನಿಖರವಾಗಿ ಒಂದೇ ರೇಖೆಯಲ್ಲಿದ್ದರೆ ಖಗ್ರಾಸ ಅಥವಾ ಸಂಪೂರ್ಣ ಗ್ರಹಣಗಳೂ, ಸ್ವಲ್ಪ ವ್ಯತ್ಯಾಸವಿದ್ದರೆ ಖಂಡ ಅಥವಾ ಭಾಗಶಃ ಗ್ರಹಣಗಳು ಸಂಭವಿಸುತ್ತವೆ. ಚಂದ್ರಗ್ರಹಣವು ಒಂದು ಸಾಮಾನ್ಯ ಖಗೋಳ ಪ್ರಕ್ರಿಯೆಯಾಗಿದ್ದು, ಅದನ್ನು ನೋಡುವುದರಿಂದಲಾಗಲೀ ಆ ಹೊತ್ತಿಗೆ ಆಹಾರ ಸೇವಿಸುವುದರಿಂದಲಾಗಲೀ ಯಾವುದೇ ಹಾನಿ ಇಲ್ಲ ಎಂದು ವಿಜ್ಞಾನಿಗಳು ಖಚಿತಪಡಿಸುತ್ತಾರೆ.

ಇದೇ ವೇಳೆ ಇಂದು ಗ್ರಹಣದ ಕುರಿತು ಇರುವ ಮೂಢನಂಬಿಕೆಯನ್ನು ಹೋಗಲಾಡಿಸಲು ಮಾನವ ಬಂಧುತ್ವ ವೇದಿಕೆಯು ‘ಗ್ರಹಣ ಸಂಭ್ರಮ’ ಹೆಸರಿನಲ್ಲಿ ಹಲವು ಜಿಲ್ಲೆಗಳಲ್ಲಿ ಸಾಮೂಹಿಕ ಭೋಜನ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಮುಂದಿನ ಗ್ರಹಣ

ಮುಂದಿನ ಕಿರು ಗ್ರಹಣವು ಜನವರಿ 10, 2020ರಂದು ನಡೆಯಲಿದೆ. ಅದೇ ವರ್ಷ ಕೆಲವು ಚಿಕ್ಕ ಗ್ರಹಣಗಳು ನಡೆಯಲಿದ್ದು, ಭಾರತದಲ್ಲಿ ಗೋಚರವಾಗವು. ಮುಂದಿನ ಭಾಗಶಃ (ಖಂಡಗ್ರಾಸ) ಚಂದ್ರಗ್ರಹಣವು ನವೆಂಬರ್ 19, 2021ರಲ್ಲಿ, ಮತ್ತು ಖಗ್ರಾಸ ಅಂದರೆ, ಪೂರ್ಣ ಚಂದ್ರಗ್ರಹಣವು ಮೇ 26, 2021ರಂದು ಸಂಭವಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...