Homeಮುಖಪುಟಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

ಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

- Advertisement -
- Advertisement -

ಇಂದು ರಾತ್ರಿ ಸಂಭವಿಸಲಿರುವ ಖಂಡಗ್ರಾಸ, ಅಂದರೆ, ಭಾಗಶಃ ಚಂದ್ರಗ್ರಹಣ ಉತ್ತರ ಅಮೆರಿಕವನ್ನು ಹೊರತುಪಡಿಸಿ ಬಹುತೇಕ ಎಲ್ಲಾ ದೇಶಗಳಲ್ಲಿ ಗೋಚರಿಸಲಿದೆ. ಇಲ್ಲಿ ನೀವು 2019ರ ಚಂದ್ರಗಹಣದ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಅತ್ಯಗತ್ಯ ಅಂಶಗಳಿವೆ.

ಇಂದಿನ ಚಂದ್ರಗ್ರಹಣವನ್ನು ಮೋಡಗಳು ಅವಕಾಶ ಕೊಟ್ಟರೆ ಭಾರತದಾದ್ಯಂತ ಕಾಣಬಹುದು. ಇದು ಭಾರತದಲ್ಲಿ 2019ರ ಕೊನೆಯ ಚಂದ್ರಗಹಣ. ಇದು ಮಧ್ಯರಾತ್ರಿ ಕಳೆದ ಸ್ವಲ್ಪವೇ ಹೊತ್ತಿನಲ್ಲಿ ಆರಂಭವಾಗಿ, ಬೆಳಗ್ಗಿನ ಜಾವದ ತನಕ ಮುಂದುವರಿಯಲಿದೆ.

ಚಂದ್ರಗ್ರಹಣದ ಸಮಯ

ಜುಲೈ 17, 2017ರ ರಾತ್ರಿ 12.13ಕ್ಕೆ ಗ್ರಹಣದ ಆರಂಭ. 3.00 ಗಂಟೆಯ ಹೊತ್ತಿಗೆ ಗರಿಷ್ಟ ಪ್ರಮಾಣವನ್ನು ತಲುಪಲಿದೆ. 1.31ರ ಹೊತ್ತಿಗೆ ಅದು ಹಿಂದೆ ಸರಿಯಲು ಆರಂಭವಾಗಿ  ಖಂಡ ಅಥವಾ ಭಾಗಶಃ (Partial) ಗ್ರಹಣವಾಗಲಿದೆ. ಆ ಬಳಿಕ  ಅದು 4.29ರ ತನಕ ಹಿಂದೆ ಸರಿಯುತ್ತಾ ನಂತರ  Penumbra ಎಂದು ಕರೆಯಲ್ಪಡುವ ಹಂತಕ್ಕೆ ತಲಪುತ್ತದೆ. ಅದು ಅಂತಿಮವಾಗಿ 5.47ಕ್ಕೆ ಕೊನೆಗೊಳ್ಳುತ್ತದೆ. ಇಡೀ ಗ್ರಹಣವು 5 ಗಂಟೆ 34 ನಿಮಿಷಗಳ ಕಾಲ ಇದ್ದು, ಭಾಗಶಃ ಗ್ರಹಣವು 2 ಗಂಟೆ 58 ನಿಮಿಷಗಳ ಕಾಲ ಇರಲಿದೆ.

149 ವರ್ಷಗಳ ನಂತರದ ಕಾಕತಾಳೀಯ

ಈ ಚಂದ್ರಗ್ರಹಣ ಕೆಲವರಿಗೆ ಮಹತ್ವದ್ದು ಏಕೆಂದರೆ, 149 ವರ್ಷಗಳ ನಂತರ ಅದು ಕೆಲವು ಭಾರತೀಯರು ಮಹತ್ವದ್ದೆಂದು ನಂಬುವ ಗುರು ಪೂರ್ಣಿಮಾದ ದಿನ ಬರುತ್ತದೆ. ಚಂದ್ರಗ್ರಹಣವು ಗರಿಷ್ಟ ಪ್ರಮಾಣ ತಲಪಿದಾಗ, ಭೂಮಿಯ ನೆರಳು ಅರ್ಧ ಭಾಗದಷ್ಟು ಚಂದ್ರನನ್ನು ಆವರಿಸಲಿದೆ. ಇದು ಈ ವರ್ಷ ಭಾರತದಲ್ಲಿ ಕೊನೆಯ ಚಂದ್ರಗ್ರಹಣವಾಗಿದೆ. ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ಗ್ರಹಣವನ್ನು ಪೂರ್ಣಾಣಾವಧಿ ಅಂದರೆ, ಆರಂಭದಿಂದ ಅಂತ್ಯದ ವರೆಗೆ ಕಾಣಬಹುದು.

ಚಂದ್ರಗ್ರಹಣವನ್ನು ನೋಡುವುದು ಹೇಗೆ?

ಚಂದ್ರಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡಬಹುದು. ಆದರೆ, ಸೂರ್ಯಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡುವುದು ಕುರುಡುತನಕ್ಕೆ ಕಾರಣವಾಗುತ್ತದೆ. ಚಂದ್ರಗ್ರಹಣ ನೋಡಲು ಯಾವುದೇ ಭಯ ಅಗತ್ಯವಿಲ್ಲ.

ಮೂಢನಂಬಿಕೆ ಬೇಡ!

ಚಂದ್ರ, ಭೂಮಿ, ಸೂರ್ಯ ಹೆಚ್ಚು ಕಡಿಮೆ ಎಂದೇ ರೇಖೆಗೆ ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಚಂದ್ರ ಮತ್ತು ಸೂರ್ಯನ ನಡುವೆ ಭೂಮಿ ಬರುವುದರಿಂದ ಭೂಮಿಯ ನೆರಳು ಚಂದ್ರನ ಮೇಲೆ ಹಾದುಹೋಗುತ್ತದೆ. ಈ ಕಾರಣದಿಂದಲೇ ಚಂದ್ರಗ್ರಹಣ ಹುಣ್ಣಿಮೆ ದಿನ ಮತ್ತು ಸೂರ್ಯಗ್ರಹಣ ಅಮವಾಸ್ಯೆಯ ದಿನ ಮಾತ್ರ ಸಂಭವಿಸುತ್ತದೆ. ಅದೇ ರೀತಿಯಲ್ಲಿ ಸೂರ್ಯ ಮತ್ತು ಭೂಮಿಯ ನಡುವೆ ಒಂದೇ ರೇಖೆಯಲ್ಲಿ ಚಂದ್ರ ಹಾದುಹೋದರೆ, ಅದು ಸೂರ್ಯನನ್ನು ಮರೆಮಾಚಿ ಸೂರ್ಯಗ್ರಹಣ ಸಂಭವಿಸುತ್ತದೆ. ಮೂರೂ ನಿಖರವಾಗಿ ಒಂದೇ ರೇಖೆಯಲ್ಲಿದ್ದರೆ ಖಗ್ರಾಸ ಅಥವಾ ಸಂಪೂರ್ಣ ಗ್ರಹಣಗಳೂ, ಸ್ವಲ್ಪ ವ್ಯತ್ಯಾಸವಿದ್ದರೆ ಖಂಡ ಅಥವಾ ಭಾಗಶಃ ಗ್ರಹಣಗಳು ಸಂಭವಿಸುತ್ತವೆ. ಚಂದ್ರಗ್ರಹಣವು ಒಂದು ಸಾಮಾನ್ಯ ಖಗೋಳ ಪ್ರಕ್ರಿಯೆಯಾಗಿದ್ದು, ಅದನ್ನು ನೋಡುವುದರಿಂದಲಾಗಲೀ ಆ ಹೊತ್ತಿಗೆ ಆಹಾರ ಸೇವಿಸುವುದರಿಂದಲಾಗಲೀ ಯಾವುದೇ ಹಾನಿ ಇಲ್ಲ ಎಂದು ವಿಜ್ಞಾನಿಗಳು ಖಚಿತಪಡಿಸುತ್ತಾರೆ.

ಇದೇ ವೇಳೆ ಇಂದು ಗ್ರಹಣದ ಕುರಿತು ಇರುವ ಮೂಢನಂಬಿಕೆಯನ್ನು ಹೋಗಲಾಡಿಸಲು ಮಾನವ ಬಂಧುತ್ವ ವೇದಿಕೆಯು ‘ಗ್ರಹಣ ಸಂಭ್ರಮ’ ಹೆಸರಿನಲ್ಲಿ ಹಲವು ಜಿಲ್ಲೆಗಳಲ್ಲಿ ಸಾಮೂಹಿಕ ಭೋಜನ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಮುಂದಿನ ಗ್ರಹಣ

ಮುಂದಿನ ಕಿರು ಗ್ರಹಣವು ಜನವರಿ 10, 2020ರಂದು ನಡೆಯಲಿದೆ. ಅದೇ ವರ್ಷ ಕೆಲವು ಚಿಕ್ಕ ಗ್ರಹಣಗಳು ನಡೆಯಲಿದ್ದು, ಭಾರತದಲ್ಲಿ ಗೋಚರವಾಗವು. ಮುಂದಿನ ಭಾಗಶಃ (ಖಂಡಗ್ರಾಸ) ಚಂದ್ರಗ್ರಹಣವು ನವೆಂಬರ್ 19, 2021ರಲ್ಲಿ, ಮತ್ತು ಖಗ್ರಾಸ ಅಂದರೆ, ಪೂರ್ಣ ಚಂದ್ರಗ್ರಹಣವು ಮೇ 26, 2021ರಂದು ಸಂಭವಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...