Homeಮುಖಪುಟಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

ಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

- Advertisement -
- Advertisement -

ಇಂದು ರಾತ್ರಿ ಸಂಭವಿಸಲಿರುವ ಖಂಡಗ್ರಾಸ, ಅಂದರೆ, ಭಾಗಶಃ ಚಂದ್ರಗ್ರಹಣ ಉತ್ತರ ಅಮೆರಿಕವನ್ನು ಹೊರತುಪಡಿಸಿ ಬಹುತೇಕ ಎಲ್ಲಾ ದೇಶಗಳಲ್ಲಿ ಗೋಚರಿಸಲಿದೆ. ಇಲ್ಲಿ ನೀವು 2019ರ ಚಂದ್ರಗಹಣದ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಅತ್ಯಗತ್ಯ ಅಂಶಗಳಿವೆ.

ಇಂದಿನ ಚಂದ್ರಗ್ರಹಣವನ್ನು ಮೋಡಗಳು ಅವಕಾಶ ಕೊಟ್ಟರೆ ಭಾರತದಾದ್ಯಂತ ಕಾಣಬಹುದು. ಇದು ಭಾರತದಲ್ಲಿ 2019ರ ಕೊನೆಯ ಚಂದ್ರಗಹಣ. ಇದು ಮಧ್ಯರಾತ್ರಿ ಕಳೆದ ಸ್ವಲ್ಪವೇ ಹೊತ್ತಿನಲ್ಲಿ ಆರಂಭವಾಗಿ, ಬೆಳಗ್ಗಿನ ಜಾವದ ತನಕ ಮುಂದುವರಿಯಲಿದೆ.

ಚಂದ್ರಗ್ರಹಣದ ಸಮಯ

ಜುಲೈ 17, 2017ರ ರಾತ್ರಿ 12.13ಕ್ಕೆ ಗ್ರಹಣದ ಆರಂಭ. 3.00 ಗಂಟೆಯ ಹೊತ್ತಿಗೆ ಗರಿಷ್ಟ ಪ್ರಮಾಣವನ್ನು ತಲುಪಲಿದೆ. 1.31ರ ಹೊತ್ತಿಗೆ ಅದು ಹಿಂದೆ ಸರಿಯಲು ಆರಂಭವಾಗಿ  ಖಂಡ ಅಥವಾ ಭಾಗಶಃ (Partial) ಗ್ರಹಣವಾಗಲಿದೆ. ಆ ಬಳಿಕ  ಅದು 4.29ರ ತನಕ ಹಿಂದೆ ಸರಿಯುತ್ತಾ ನಂತರ  Penumbra ಎಂದು ಕರೆಯಲ್ಪಡುವ ಹಂತಕ್ಕೆ ತಲಪುತ್ತದೆ. ಅದು ಅಂತಿಮವಾಗಿ 5.47ಕ್ಕೆ ಕೊನೆಗೊಳ್ಳುತ್ತದೆ. ಇಡೀ ಗ್ರಹಣವು 5 ಗಂಟೆ 34 ನಿಮಿಷಗಳ ಕಾಲ ಇದ್ದು, ಭಾಗಶಃ ಗ್ರಹಣವು 2 ಗಂಟೆ 58 ನಿಮಿಷಗಳ ಕಾಲ ಇರಲಿದೆ.

149 ವರ್ಷಗಳ ನಂತರದ ಕಾಕತಾಳೀಯ

ಈ ಚಂದ್ರಗ್ರಹಣ ಕೆಲವರಿಗೆ ಮಹತ್ವದ್ದು ಏಕೆಂದರೆ, 149 ವರ್ಷಗಳ ನಂತರ ಅದು ಕೆಲವು ಭಾರತೀಯರು ಮಹತ್ವದ್ದೆಂದು ನಂಬುವ ಗುರು ಪೂರ್ಣಿಮಾದ ದಿನ ಬರುತ್ತದೆ. ಚಂದ್ರಗ್ರಹಣವು ಗರಿಷ್ಟ ಪ್ರಮಾಣ ತಲಪಿದಾಗ, ಭೂಮಿಯ ನೆರಳು ಅರ್ಧ ಭಾಗದಷ್ಟು ಚಂದ್ರನನ್ನು ಆವರಿಸಲಿದೆ. ಇದು ಈ ವರ್ಷ ಭಾರತದಲ್ಲಿ ಕೊನೆಯ ಚಂದ್ರಗ್ರಹಣವಾಗಿದೆ. ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ಗ್ರಹಣವನ್ನು ಪೂರ್ಣಾಣಾವಧಿ ಅಂದರೆ, ಆರಂಭದಿಂದ ಅಂತ್ಯದ ವರೆಗೆ ಕಾಣಬಹುದು.

ಚಂದ್ರಗ್ರಹಣವನ್ನು ನೋಡುವುದು ಹೇಗೆ?

ಚಂದ್ರಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡಬಹುದು. ಆದರೆ, ಸೂರ್ಯಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡುವುದು ಕುರುಡುತನಕ್ಕೆ ಕಾರಣವಾಗುತ್ತದೆ. ಚಂದ್ರಗ್ರಹಣ ನೋಡಲು ಯಾವುದೇ ಭಯ ಅಗತ್ಯವಿಲ್ಲ.

ಮೂಢನಂಬಿಕೆ ಬೇಡ!

ಚಂದ್ರ, ಭೂಮಿ, ಸೂರ್ಯ ಹೆಚ್ಚು ಕಡಿಮೆ ಎಂದೇ ರೇಖೆಗೆ ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಚಂದ್ರ ಮತ್ತು ಸೂರ್ಯನ ನಡುವೆ ಭೂಮಿ ಬರುವುದರಿಂದ ಭೂಮಿಯ ನೆರಳು ಚಂದ್ರನ ಮೇಲೆ ಹಾದುಹೋಗುತ್ತದೆ. ಈ ಕಾರಣದಿಂದಲೇ ಚಂದ್ರಗ್ರಹಣ ಹುಣ್ಣಿಮೆ ದಿನ ಮತ್ತು ಸೂರ್ಯಗ್ರಹಣ ಅಮವಾಸ್ಯೆಯ ದಿನ ಮಾತ್ರ ಸಂಭವಿಸುತ್ತದೆ. ಅದೇ ರೀತಿಯಲ್ಲಿ ಸೂರ್ಯ ಮತ್ತು ಭೂಮಿಯ ನಡುವೆ ಒಂದೇ ರೇಖೆಯಲ್ಲಿ ಚಂದ್ರ ಹಾದುಹೋದರೆ, ಅದು ಸೂರ್ಯನನ್ನು ಮರೆಮಾಚಿ ಸೂರ್ಯಗ್ರಹಣ ಸಂಭವಿಸುತ್ತದೆ. ಮೂರೂ ನಿಖರವಾಗಿ ಒಂದೇ ರೇಖೆಯಲ್ಲಿದ್ದರೆ ಖಗ್ರಾಸ ಅಥವಾ ಸಂಪೂರ್ಣ ಗ್ರಹಣಗಳೂ, ಸ್ವಲ್ಪ ವ್ಯತ್ಯಾಸವಿದ್ದರೆ ಖಂಡ ಅಥವಾ ಭಾಗಶಃ ಗ್ರಹಣಗಳು ಸಂಭವಿಸುತ್ತವೆ. ಚಂದ್ರಗ್ರಹಣವು ಒಂದು ಸಾಮಾನ್ಯ ಖಗೋಳ ಪ್ರಕ್ರಿಯೆಯಾಗಿದ್ದು, ಅದನ್ನು ನೋಡುವುದರಿಂದಲಾಗಲೀ ಆ ಹೊತ್ತಿಗೆ ಆಹಾರ ಸೇವಿಸುವುದರಿಂದಲಾಗಲೀ ಯಾವುದೇ ಹಾನಿ ಇಲ್ಲ ಎಂದು ವಿಜ್ಞಾನಿಗಳು ಖಚಿತಪಡಿಸುತ್ತಾರೆ.

ಇದೇ ವೇಳೆ ಇಂದು ಗ್ರಹಣದ ಕುರಿತು ಇರುವ ಮೂಢನಂಬಿಕೆಯನ್ನು ಹೋಗಲಾಡಿಸಲು ಮಾನವ ಬಂಧುತ್ವ ವೇದಿಕೆಯು ‘ಗ್ರಹಣ ಸಂಭ್ರಮ’ ಹೆಸರಿನಲ್ಲಿ ಹಲವು ಜಿಲ್ಲೆಗಳಲ್ಲಿ ಸಾಮೂಹಿಕ ಭೋಜನ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಮುಂದಿನ ಗ್ರಹಣ

ಮುಂದಿನ ಕಿರು ಗ್ರಹಣವು ಜನವರಿ 10, 2020ರಂದು ನಡೆಯಲಿದೆ. ಅದೇ ವರ್ಷ ಕೆಲವು ಚಿಕ್ಕ ಗ್ರಹಣಗಳು ನಡೆಯಲಿದ್ದು, ಭಾರತದಲ್ಲಿ ಗೋಚರವಾಗವು. ಮುಂದಿನ ಭಾಗಶಃ (ಖಂಡಗ್ರಾಸ) ಚಂದ್ರಗ್ರಹಣವು ನವೆಂಬರ್ 19, 2021ರಲ್ಲಿ, ಮತ್ತು ಖಗ್ರಾಸ ಅಂದರೆ, ಪೂರ್ಣ ಚಂದ್ರಗ್ರಹಣವು ಮೇ 26, 2021ರಂದು ಸಂಭವಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...