Homeಮುಖಪುಟಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

ಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

- Advertisement -
- Advertisement -

ಇಂದು ರಾತ್ರಿ ಸಂಭವಿಸಲಿರುವ ಖಂಡಗ್ರಾಸ, ಅಂದರೆ, ಭಾಗಶಃ ಚಂದ್ರಗ್ರಹಣ ಉತ್ತರ ಅಮೆರಿಕವನ್ನು ಹೊರತುಪಡಿಸಿ ಬಹುತೇಕ ಎಲ್ಲಾ ದೇಶಗಳಲ್ಲಿ ಗೋಚರಿಸಲಿದೆ. ಇಲ್ಲಿ ನೀವು 2019ರ ಚಂದ್ರಗಹಣದ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಅತ್ಯಗತ್ಯ ಅಂಶಗಳಿವೆ.

ಇಂದಿನ ಚಂದ್ರಗ್ರಹಣವನ್ನು ಮೋಡಗಳು ಅವಕಾಶ ಕೊಟ್ಟರೆ ಭಾರತದಾದ್ಯಂತ ಕಾಣಬಹುದು. ಇದು ಭಾರತದಲ್ಲಿ 2019ರ ಕೊನೆಯ ಚಂದ್ರಗಹಣ. ಇದು ಮಧ್ಯರಾತ್ರಿ ಕಳೆದ ಸ್ವಲ್ಪವೇ ಹೊತ್ತಿನಲ್ಲಿ ಆರಂಭವಾಗಿ, ಬೆಳಗ್ಗಿನ ಜಾವದ ತನಕ ಮುಂದುವರಿಯಲಿದೆ.

ಚಂದ್ರಗ್ರಹಣದ ಸಮಯ

ಜುಲೈ 17, 2017ರ ರಾತ್ರಿ 12.13ಕ್ಕೆ ಗ್ರಹಣದ ಆರಂಭ. 3.00 ಗಂಟೆಯ ಹೊತ್ತಿಗೆ ಗರಿಷ್ಟ ಪ್ರಮಾಣವನ್ನು ತಲುಪಲಿದೆ. 1.31ರ ಹೊತ್ತಿಗೆ ಅದು ಹಿಂದೆ ಸರಿಯಲು ಆರಂಭವಾಗಿ  ಖಂಡ ಅಥವಾ ಭಾಗಶಃ (Partial) ಗ್ರಹಣವಾಗಲಿದೆ. ಆ ಬಳಿಕ  ಅದು 4.29ರ ತನಕ ಹಿಂದೆ ಸರಿಯುತ್ತಾ ನಂತರ  Penumbra ಎಂದು ಕರೆಯಲ್ಪಡುವ ಹಂತಕ್ಕೆ ತಲಪುತ್ತದೆ. ಅದು ಅಂತಿಮವಾಗಿ 5.47ಕ್ಕೆ ಕೊನೆಗೊಳ್ಳುತ್ತದೆ. ಇಡೀ ಗ್ರಹಣವು 5 ಗಂಟೆ 34 ನಿಮಿಷಗಳ ಕಾಲ ಇದ್ದು, ಭಾಗಶಃ ಗ್ರಹಣವು 2 ಗಂಟೆ 58 ನಿಮಿಷಗಳ ಕಾಲ ಇರಲಿದೆ.

149 ವರ್ಷಗಳ ನಂತರದ ಕಾಕತಾಳೀಯ

ಈ ಚಂದ್ರಗ್ರಹಣ ಕೆಲವರಿಗೆ ಮಹತ್ವದ್ದು ಏಕೆಂದರೆ, 149 ವರ್ಷಗಳ ನಂತರ ಅದು ಕೆಲವು ಭಾರತೀಯರು ಮಹತ್ವದ್ದೆಂದು ನಂಬುವ ಗುರು ಪೂರ್ಣಿಮಾದ ದಿನ ಬರುತ್ತದೆ. ಚಂದ್ರಗ್ರಹಣವು ಗರಿಷ್ಟ ಪ್ರಮಾಣ ತಲಪಿದಾಗ, ಭೂಮಿಯ ನೆರಳು ಅರ್ಧ ಭಾಗದಷ್ಟು ಚಂದ್ರನನ್ನು ಆವರಿಸಲಿದೆ. ಇದು ಈ ವರ್ಷ ಭಾರತದಲ್ಲಿ ಕೊನೆಯ ಚಂದ್ರಗ್ರಹಣವಾಗಿದೆ. ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ಗ್ರಹಣವನ್ನು ಪೂರ್ಣಾಣಾವಧಿ ಅಂದರೆ, ಆರಂಭದಿಂದ ಅಂತ್ಯದ ವರೆಗೆ ಕಾಣಬಹುದು.

ಚಂದ್ರಗ್ರಹಣವನ್ನು ನೋಡುವುದು ಹೇಗೆ?

ಚಂದ್ರಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡಬಹುದು. ಆದರೆ, ಸೂರ್ಯಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡುವುದು ಕುರುಡುತನಕ್ಕೆ ಕಾರಣವಾಗುತ್ತದೆ. ಚಂದ್ರಗ್ರಹಣ ನೋಡಲು ಯಾವುದೇ ಭಯ ಅಗತ್ಯವಿಲ್ಲ.

ಮೂಢನಂಬಿಕೆ ಬೇಡ!

ಚಂದ್ರ, ಭೂಮಿ, ಸೂರ್ಯ ಹೆಚ್ಚು ಕಡಿಮೆ ಎಂದೇ ರೇಖೆಗೆ ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಚಂದ್ರ ಮತ್ತು ಸೂರ್ಯನ ನಡುವೆ ಭೂಮಿ ಬರುವುದರಿಂದ ಭೂಮಿಯ ನೆರಳು ಚಂದ್ರನ ಮೇಲೆ ಹಾದುಹೋಗುತ್ತದೆ. ಈ ಕಾರಣದಿಂದಲೇ ಚಂದ್ರಗ್ರಹಣ ಹುಣ್ಣಿಮೆ ದಿನ ಮತ್ತು ಸೂರ್ಯಗ್ರಹಣ ಅಮವಾಸ್ಯೆಯ ದಿನ ಮಾತ್ರ ಸಂಭವಿಸುತ್ತದೆ. ಅದೇ ರೀತಿಯಲ್ಲಿ ಸೂರ್ಯ ಮತ್ತು ಭೂಮಿಯ ನಡುವೆ ಒಂದೇ ರೇಖೆಯಲ್ಲಿ ಚಂದ್ರ ಹಾದುಹೋದರೆ, ಅದು ಸೂರ್ಯನನ್ನು ಮರೆಮಾಚಿ ಸೂರ್ಯಗ್ರಹಣ ಸಂಭವಿಸುತ್ತದೆ. ಮೂರೂ ನಿಖರವಾಗಿ ಒಂದೇ ರೇಖೆಯಲ್ಲಿದ್ದರೆ ಖಗ್ರಾಸ ಅಥವಾ ಸಂಪೂರ್ಣ ಗ್ರಹಣಗಳೂ, ಸ್ವಲ್ಪ ವ್ಯತ್ಯಾಸವಿದ್ದರೆ ಖಂಡ ಅಥವಾ ಭಾಗಶಃ ಗ್ರಹಣಗಳು ಸಂಭವಿಸುತ್ತವೆ. ಚಂದ್ರಗ್ರಹಣವು ಒಂದು ಸಾಮಾನ್ಯ ಖಗೋಳ ಪ್ರಕ್ರಿಯೆಯಾಗಿದ್ದು, ಅದನ್ನು ನೋಡುವುದರಿಂದಲಾಗಲೀ ಆ ಹೊತ್ತಿಗೆ ಆಹಾರ ಸೇವಿಸುವುದರಿಂದಲಾಗಲೀ ಯಾವುದೇ ಹಾನಿ ಇಲ್ಲ ಎಂದು ವಿಜ್ಞಾನಿಗಳು ಖಚಿತಪಡಿಸುತ್ತಾರೆ.

ಇದೇ ವೇಳೆ ಇಂದು ಗ್ರಹಣದ ಕುರಿತು ಇರುವ ಮೂಢನಂಬಿಕೆಯನ್ನು ಹೋಗಲಾಡಿಸಲು ಮಾನವ ಬಂಧುತ್ವ ವೇದಿಕೆಯು ‘ಗ್ರಹಣ ಸಂಭ್ರಮ’ ಹೆಸರಿನಲ್ಲಿ ಹಲವು ಜಿಲ್ಲೆಗಳಲ್ಲಿ ಸಾಮೂಹಿಕ ಭೋಜನ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಮುಂದಿನ ಗ್ರಹಣ

ಮುಂದಿನ ಕಿರು ಗ್ರಹಣವು ಜನವರಿ 10, 2020ರಂದು ನಡೆಯಲಿದೆ. ಅದೇ ವರ್ಷ ಕೆಲವು ಚಿಕ್ಕ ಗ್ರಹಣಗಳು ನಡೆಯಲಿದ್ದು, ಭಾರತದಲ್ಲಿ ಗೋಚರವಾಗವು. ಮುಂದಿನ ಭಾಗಶಃ (ಖಂಡಗ್ರಾಸ) ಚಂದ್ರಗ್ರಹಣವು ನವೆಂಬರ್ 19, 2021ರಲ್ಲಿ, ಮತ್ತು ಖಗ್ರಾಸ ಅಂದರೆ, ಪೂರ್ಣ ಚಂದ್ರಗ್ರಹಣವು ಮೇ 26, 2021ರಂದು ಸಂಭವಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...