Homeಮುಖಪುಟಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

ಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

- Advertisement -
- Advertisement -

ಇಂದು ರಾತ್ರಿ ಸಂಭವಿಸಲಿರುವ ಖಂಡಗ್ರಾಸ, ಅಂದರೆ, ಭಾಗಶಃ ಚಂದ್ರಗ್ರಹಣ ಉತ್ತರ ಅಮೆರಿಕವನ್ನು ಹೊರತುಪಡಿಸಿ ಬಹುತೇಕ ಎಲ್ಲಾ ದೇಶಗಳಲ್ಲಿ ಗೋಚರಿಸಲಿದೆ. ಇಲ್ಲಿ ನೀವು 2019ರ ಚಂದ್ರಗಹಣದ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಅತ್ಯಗತ್ಯ ಅಂಶಗಳಿವೆ.

ಇಂದಿನ ಚಂದ್ರಗ್ರಹಣವನ್ನು ಮೋಡಗಳು ಅವಕಾಶ ಕೊಟ್ಟರೆ ಭಾರತದಾದ್ಯಂತ ಕಾಣಬಹುದು. ಇದು ಭಾರತದಲ್ಲಿ 2019ರ ಕೊನೆಯ ಚಂದ್ರಗಹಣ. ಇದು ಮಧ್ಯರಾತ್ರಿ ಕಳೆದ ಸ್ವಲ್ಪವೇ ಹೊತ್ತಿನಲ್ಲಿ ಆರಂಭವಾಗಿ, ಬೆಳಗ್ಗಿನ ಜಾವದ ತನಕ ಮುಂದುವರಿಯಲಿದೆ.

ಚಂದ್ರಗ್ರಹಣದ ಸಮಯ

ಜುಲೈ 17, 2017ರ ರಾತ್ರಿ 12.13ಕ್ಕೆ ಗ್ರಹಣದ ಆರಂಭ. 3.00 ಗಂಟೆಯ ಹೊತ್ತಿಗೆ ಗರಿಷ್ಟ ಪ್ರಮಾಣವನ್ನು ತಲುಪಲಿದೆ. 1.31ರ ಹೊತ್ತಿಗೆ ಅದು ಹಿಂದೆ ಸರಿಯಲು ಆರಂಭವಾಗಿ  ಖಂಡ ಅಥವಾ ಭಾಗಶಃ (Partial) ಗ್ರಹಣವಾಗಲಿದೆ. ಆ ಬಳಿಕ  ಅದು 4.29ರ ತನಕ ಹಿಂದೆ ಸರಿಯುತ್ತಾ ನಂತರ  Penumbra ಎಂದು ಕರೆಯಲ್ಪಡುವ ಹಂತಕ್ಕೆ ತಲಪುತ್ತದೆ. ಅದು ಅಂತಿಮವಾಗಿ 5.47ಕ್ಕೆ ಕೊನೆಗೊಳ್ಳುತ್ತದೆ. ಇಡೀ ಗ್ರಹಣವು 5 ಗಂಟೆ 34 ನಿಮಿಷಗಳ ಕಾಲ ಇದ್ದು, ಭಾಗಶಃ ಗ್ರಹಣವು 2 ಗಂಟೆ 58 ನಿಮಿಷಗಳ ಕಾಲ ಇರಲಿದೆ.

149 ವರ್ಷಗಳ ನಂತರದ ಕಾಕತಾಳೀಯ

ಈ ಚಂದ್ರಗ್ರಹಣ ಕೆಲವರಿಗೆ ಮಹತ್ವದ್ದು ಏಕೆಂದರೆ, 149 ವರ್ಷಗಳ ನಂತರ ಅದು ಕೆಲವು ಭಾರತೀಯರು ಮಹತ್ವದ್ದೆಂದು ನಂಬುವ ಗುರು ಪೂರ್ಣಿಮಾದ ದಿನ ಬರುತ್ತದೆ. ಚಂದ್ರಗ್ರಹಣವು ಗರಿಷ್ಟ ಪ್ರಮಾಣ ತಲಪಿದಾಗ, ಭೂಮಿಯ ನೆರಳು ಅರ್ಧ ಭಾಗದಷ್ಟು ಚಂದ್ರನನ್ನು ಆವರಿಸಲಿದೆ. ಇದು ಈ ವರ್ಷ ಭಾರತದಲ್ಲಿ ಕೊನೆಯ ಚಂದ್ರಗ್ರಹಣವಾಗಿದೆ. ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ಗ್ರಹಣವನ್ನು ಪೂರ್ಣಾಣಾವಧಿ ಅಂದರೆ, ಆರಂಭದಿಂದ ಅಂತ್ಯದ ವರೆಗೆ ಕಾಣಬಹುದು.

ಚಂದ್ರಗ್ರಹಣವನ್ನು ನೋಡುವುದು ಹೇಗೆ?

ಚಂದ್ರಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡಬಹುದು. ಆದರೆ, ಸೂರ್ಯಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡುವುದು ಕುರುಡುತನಕ್ಕೆ ಕಾರಣವಾಗುತ್ತದೆ. ಚಂದ್ರಗ್ರಹಣ ನೋಡಲು ಯಾವುದೇ ಭಯ ಅಗತ್ಯವಿಲ್ಲ.

ಮೂಢನಂಬಿಕೆ ಬೇಡ!

ಚಂದ್ರ, ಭೂಮಿ, ಸೂರ್ಯ ಹೆಚ್ಚು ಕಡಿಮೆ ಎಂದೇ ರೇಖೆಗೆ ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಚಂದ್ರ ಮತ್ತು ಸೂರ್ಯನ ನಡುವೆ ಭೂಮಿ ಬರುವುದರಿಂದ ಭೂಮಿಯ ನೆರಳು ಚಂದ್ರನ ಮೇಲೆ ಹಾದುಹೋಗುತ್ತದೆ. ಈ ಕಾರಣದಿಂದಲೇ ಚಂದ್ರಗ್ರಹಣ ಹುಣ್ಣಿಮೆ ದಿನ ಮತ್ತು ಸೂರ್ಯಗ್ರಹಣ ಅಮವಾಸ್ಯೆಯ ದಿನ ಮಾತ್ರ ಸಂಭವಿಸುತ್ತದೆ. ಅದೇ ರೀತಿಯಲ್ಲಿ ಸೂರ್ಯ ಮತ್ತು ಭೂಮಿಯ ನಡುವೆ ಒಂದೇ ರೇಖೆಯಲ್ಲಿ ಚಂದ್ರ ಹಾದುಹೋದರೆ, ಅದು ಸೂರ್ಯನನ್ನು ಮರೆಮಾಚಿ ಸೂರ್ಯಗ್ರಹಣ ಸಂಭವಿಸುತ್ತದೆ. ಮೂರೂ ನಿಖರವಾಗಿ ಒಂದೇ ರೇಖೆಯಲ್ಲಿದ್ದರೆ ಖಗ್ರಾಸ ಅಥವಾ ಸಂಪೂರ್ಣ ಗ್ರಹಣಗಳೂ, ಸ್ವಲ್ಪ ವ್ಯತ್ಯಾಸವಿದ್ದರೆ ಖಂಡ ಅಥವಾ ಭಾಗಶಃ ಗ್ರಹಣಗಳು ಸಂಭವಿಸುತ್ತವೆ. ಚಂದ್ರಗ್ರಹಣವು ಒಂದು ಸಾಮಾನ್ಯ ಖಗೋಳ ಪ್ರಕ್ರಿಯೆಯಾಗಿದ್ದು, ಅದನ್ನು ನೋಡುವುದರಿಂದಲಾಗಲೀ ಆ ಹೊತ್ತಿಗೆ ಆಹಾರ ಸೇವಿಸುವುದರಿಂದಲಾಗಲೀ ಯಾವುದೇ ಹಾನಿ ಇಲ್ಲ ಎಂದು ವಿಜ್ಞಾನಿಗಳು ಖಚಿತಪಡಿಸುತ್ತಾರೆ.

ಇದೇ ವೇಳೆ ಇಂದು ಗ್ರಹಣದ ಕುರಿತು ಇರುವ ಮೂಢನಂಬಿಕೆಯನ್ನು ಹೋಗಲಾಡಿಸಲು ಮಾನವ ಬಂಧುತ್ವ ವೇದಿಕೆಯು ‘ಗ್ರಹಣ ಸಂಭ್ರಮ’ ಹೆಸರಿನಲ್ಲಿ ಹಲವು ಜಿಲ್ಲೆಗಳಲ್ಲಿ ಸಾಮೂಹಿಕ ಭೋಜನ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಮುಂದಿನ ಗ್ರಹಣ

ಮುಂದಿನ ಕಿರು ಗ್ರಹಣವು ಜನವರಿ 10, 2020ರಂದು ನಡೆಯಲಿದೆ. ಅದೇ ವರ್ಷ ಕೆಲವು ಚಿಕ್ಕ ಗ್ರಹಣಗಳು ನಡೆಯಲಿದ್ದು, ಭಾರತದಲ್ಲಿ ಗೋಚರವಾಗವು. ಮುಂದಿನ ಭಾಗಶಃ (ಖಂಡಗ್ರಾಸ) ಚಂದ್ರಗ್ರಹಣವು ನವೆಂಬರ್ 19, 2021ರಲ್ಲಿ, ಮತ್ತು ಖಗ್ರಾಸ ಅಂದರೆ, ಪೂರ್ಣ ಚಂದ್ರಗ್ರಹಣವು ಮೇ 26, 2021ರಂದು ಸಂಭವಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...