Homeಮುಖಪುಟಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

ಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

- Advertisement -
- Advertisement -

ಇಂದು ರಾತ್ರಿ ಸಂಭವಿಸಲಿರುವ ಖಂಡಗ್ರಾಸ, ಅಂದರೆ, ಭಾಗಶಃ ಚಂದ್ರಗ್ರಹಣ ಉತ್ತರ ಅಮೆರಿಕವನ್ನು ಹೊರತುಪಡಿಸಿ ಬಹುತೇಕ ಎಲ್ಲಾ ದೇಶಗಳಲ್ಲಿ ಗೋಚರಿಸಲಿದೆ. ಇಲ್ಲಿ ನೀವು 2019ರ ಚಂದ್ರಗಹಣದ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಅತ್ಯಗತ್ಯ ಅಂಶಗಳಿವೆ.

ಇಂದಿನ ಚಂದ್ರಗ್ರಹಣವನ್ನು ಮೋಡಗಳು ಅವಕಾಶ ಕೊಟ್ಟರೆ ಭಾರತದಾದ್ಯಂತ ಕಾಣಬಹುದು. ಇದು ಭಾರತದಲ್ಲಿ 2019ರ ಕೊನೆಯ ಚಂದ್ರಗಹಣ. ಇದು ಮಧ್ಯರಾತ್ರಿ ಕಳೆದ ಸ್ವಲ್ಪವೇ ಹೊತ್ತಿನಲ್ಲಿ ಆರಂಭವಾಗಿ, ಬೆಳಗ್ಗಿನ ಜಾವದ ತನಕ ಮುಂದುವರಿಯಲಿದೆ.

ಚಂದ್ರಗ್ರಹಣದ ಸಮಯ

ಜುಲೈ 17, 2017ರ ರಾತ್ರಿ 12.13ಕ್ಕೆ ಗ್ರಹಣದ ಆರಂಭ. 3.00 ಗಂಟೆಯ ಹೊತ್ತಿಗೆ ಗರಿಷ್ಟ ಪ್ರಮಾಣವನ್ನು ತಲುಪಲಿದೆ. 1.31ರ ಹೊತ್ತಿಗೆ ಅದು ಹಿಂದೆ ಸರಿಯಲು ಆರಂಭವಾಗಿ  ಖಂಡ ಅಥವಾ ಭಾಗಶಃ (Partial) ಗ್ರಹಣವಾಗಲಿದೆ. ಆ ಬಳಿಕ  ಅದು 4.29ರ ತನಕ ಹಿಂದೆ ಸರಿಯುತ್ತಾ ನಂತರ  Penumbra ಎಂದು ಕರೆಯಲ್ಪಡುವ ಹಂತಕ್ಕೆ ತಲಪುತ್ತದೆ. ಅದು ಅಂತಿಮವಾಗಿ 5.47ಕ್ಕೆ ಕೊನೆಗೊಳ್ಳುತ್ತದೆ. ಇಡೀ ಗ್ರಹಣವು 5 ಗಂಟೆ 34 ನಿಮಿಷಗಳ ಕಾಲ ಇದ್ದು, ಭಾಗಶಃ ಗ್ರಹಣವು 2 ಗಂಟೆ 58 ನಿಮಿಷಗಳ ಕಾಲ ಇರಲಿದೆ.

149 ವರ್ಷಗಳ ನಂತರದ ಕಾಕತಾಳೀಯ

ಈ ಚಂದ್ರಗ್ರಹಣ ಕೆಲವರಿಗೆ ಮಹತ್ವದ್ದು ಏಕೆಂದರೆ, 149 ವರ್ಷಗಳ ನಂತರ ಅದು ಕೆಲವು ಭಾರತೀಯರು ಮಹತ್ವದ್ದೆಂದು ನಂಬುವ ಗುರು ಪೂರ್ಣಿಮಾದ ದಿನ ಬರುತ್ತದೆ. ಚಂದ್ರಗ್ರಹಣವು ಗರಿಷ್ಟ ಪ್ರಮಾಣ ತಲಪಿದಾಗ, ಭೂಮಿಯ ನೆರಳು ಅರ್ಧ ಭಾಗದಷ್ಟು ಚಂದ್ರನನ್ನು ಆವರಿಸಲಿದೆ. ಇದು ಈ ವರ್ಷ ಭಾರತದಲ್ಲಿ ಕೊನೆಯ ಚಂದ್ರಗ್ರಹಣವಾಗಿದೆ. ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ಗ್ರಹಣವನ್ನು ಪೂರ್ಣಾಣಾವಧಿ ಅಂದರೆ, ಆರಂಭದಿಂದ ಅಂತ್ಯದ ವರೆಗೆ ಕಾಣಬಹುದು.

ಚಂದ್ರಗ್ರಹಣವನ್ನು ನೋಡುವುದು ಹೇಗೆ?

ಚಂದ್ರಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡಬಹುದು. ಆದರೆ, ಸೂರ್ಯಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡುವುದು ಕುರುಡುತನಕ್ಕೆ ಕಾರಣವಾಗುತ್ತದೆ. ಚಂದ್ರಗ್ರಹಣ ನೋಡಲು ಯಾವುದೇ ಭಯ ಅಗತ್ಯವಿಲ್ಲ.

ಮೂಢನಂಬಿಕೆ ಬೇಡ!

ಚಂದ್ರ, ಭೂಮಿ, ಸೂರ್ಯ ಹೆಚ್ಚು ಕಡಿಮೆ ಎಂದೇ ರೇಖೆಗೆ ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಚಂದ್ರ ಮತ್ತು ಸೂರ್ಯನ ನಡುವೆ ಭೂಮಿ ಬರುವುದರಿಂದ ಭೂಮಿಯ ನೆರಳು ಚಂದ್ರನ ಮೇಲೆ ಹಾದುಹೋಗುತ್ತದೆ. ಈ ಕಾರಣದಿಂದಲೇ ಚಂದ್ರಗ್ರಹಣ ಹುಣ್ಣಿಮೆ ದಿನ ಮತ್ತು ಸೂರ್ಯಗ್ರಹಣ ಅಮವಾಸ್ಯೆಯ ದಿನ ಮಾತ್ರ ಸಂಭವಿಸುತ್ತದೆ. ಅದೇ ರೀತಿಯಲ್ಲಿ ಸೂರ್ಯ ಮತ್ತು ಭೂಮಿಯ ನಡುವೆ ಒಂದೇ ರೇಖೆಯಲ್ಲಿ ಚಂದ್ರ ಹಾದುಹೋದರೆ, ಅದು ಸೂರ್ಯನನ್ನು ಮರೆಮಾಚಿ ಸೂರ್ಯಗ್ರಹಣ ಸಂಭವಿಸುತ್ತದೆ. ಮೂರೂ ನಿಖರವಾಗಿ ಒಂದೇ ರೇಖೆಯಲ್ಲಿದ್ದರೆ ಖಗ್ರಾಸ ಅಥವಾ ಸಂಪೂರ್ಣ ಗ್ರಹಣಗಳೂ, ಸ್ವಲ್ಪ ವ್ಯತ್ಯಾಸವಿದ್ದರೆ ಖಂಡ ಅಥವಾ ಭಾಗಶಃ ಗ್ರಹಣಗಳು ಸಂಭವಿಸುತ್ತವೆ. ಚಂದ್ರಗ್ರಹಣವು ಒಂದು ಸಾಮಾನ್ಯ ಖಗೋಳ ಪ್ರಕ್ರಿಯೆಯಾಗಿದ್ದು, ಅದನ್ನು ನೋಡುವುದರಿಂದಲಾಗಲೀ ಆ ಹೊತ್ತಿಗೆ ಆಹಾರ ಸೇವಿಸುವುದರಿಂದಲಾಗಲೀ ಯಾವುದೇ ಹಾನಿ ಇಲ್ಲ ಎಂದು ವಿಜ್ಞಾನಿಗಳು ಖಚಿತಪಡಿಸುತ್ತಾರೆ.

ಇದೇ ವೇಳೆ ಇಂದು ಗ್ರಹಣದ ಕುರಿತು ಇರುವ ಮೂಢನಂಬಿಕೆಯನ್ನು ಹೋಗಲಾಡಿಸಲು ಮಾನವ ಬಂಧುತ್ವ ವೇದಿಕೆಯು ‘ಗ್ರಹಣ ಸಂಭ್ರಮ’ ಹೆಸರಿನಲ್ಲಿ ಹಲವು ಜಿಲ್ಲೆಗಳಲ್ಲಿ ಸಾಮೂಹಿಕ ಭೋಜನ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಮುಂದಿನ ಗ್ರಹಣ

ಮುಂದಿನ ಕಿರು ಗ್ರಹಣವು ಜನವರಿ 10, 2020ರಂದು ನಡೆಯಲಿದೆ. ಅದೇ ವರ್ಷ ಕೆಲವು ಚಿಕ್ಕ ಗ್ರಹಣಗಳು ನಡೆಯಲಿದ್ದು, ಭಾರತದಲ್ಲಿ ಗೋಚರವಾಗವು. ಮುಂದಿನ ಭಾಗಶಃ (ಖಂಡಗ್ರಾಸ) ಚಂದ್ರಗ್ರಹಣವು ನವೆಂಬರ್ 19, 2021ರಲ್ಲಿ, ಮತ್ತು ಖಗ್ರಾಸ ಅಂದರೆ, ಪೂರ್ಣ ಚಂದ್ರಗ್ರಹಣವು ಮೇ 26, 2021ರಂದು ಸಂಭವಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...