Homeಮುಖಪುಟಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

ಇಂದು ಚಂದ್ರಗ್ರಹಣ 2019: ತಿಳಿಯಬೇಕಾದ ವಿಷಯಗಳು

- Advertisement -
- Advertisement -

ಇಂದು ರಾತ್ರಿ ಸಂಭವಿಸಲಿರುವ ಖಂಡಗ್ರಾಸ, ಅಂದರೆ, ಭಾಗಶಃ ಚಂದ್ರಗ್ರಹಣ ಉತ್ತರ ಅಮೆರಿಕವನ್ನು ಹೊರತುಪಡಿಸಿ ಬಹುತೇಕ ಎಲ್ಲಾ ದೇಶಗಳಲ್ಲಿ ಗೋಚರಿಸಲಿದೆ. ಇಲ್ಲಿ ನೀವು 2019ರ ಚಂದ್ರಗಹಣದ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಅತ್ಯಗತ್ಯ ಅಂಶಗಳಿವೆ.

ಇಂದಿನ ಚಂದ್ರಗ್ರಹಣವನ್ನು ಮೋಡಗಳು ಅವಕಾಶ ಕೊಟ್ಟರೆ ಭಾರತದಾದ್ಯಂತ ಕಾಣಬಹುದು. ಇದು ಭಾರತದಲ್ಲಿ 2019ರ ಕೊನೆಯ ಚಂದ್ರಗಹಣ. ಇದು ಮಧ್ಯರಾತ್ರಿ ಕಳೆದ ಸ್ವಲ್ಪವೇ ಹೊತ್ತಿನಲ್ಲಿ ಆರಂಭವಾಗಿ, ಬೆಳಗ್ಗಿನ ಜಾವದ ತನಕ ಮುಂದುವರಿಯಲಿದೆ.

ಚಂದ್ರಗ್ರಹಣದ ಸಮಯ

ಜುಲೈ 17, 2017ರ ರಾತ್ರಿ 12.13ಕ್ಕೆ ಗ್ರಹಣದ ಆರಂಭ. 3.00 ಗಂಟೆಯ ಹೊತ್ತಿಗೆ ಗರಿಷ್ಟ ಪ್ರಮಾಣವನ್ನು ತಲುಪಲಿದೆ. 1.31ರ ಹೊತ್ತಿಗೆ ಅದು ಹಿಂದೆ ಸರಿಯಲು ಆರಂಭವಾಗಿ  ಖಂಡ ಅಥವಾ ಭಾಗಶಃ (Partial) ಗ್ರಹಣವಾಗಲಿದೆ. ಆ ಬಳಿಕ  ಅದು 4.29ರ ತನಕ ಹಿಂದೆ ಸರಿಯುತ್ತಾ ನಂತರ  Penumbra ಎಂದು ಕರೆಯಲ್ಪಡುವ ಹಂತಕ್ಕೆ ತಲಪುತ್ತದೆ. ಅದು ಅಂತಿಮವಾಗಿ 5.47ಕ್ಕೆ ಕೊನೆಗೊಳ್ಳುತ್ತದೆ. ಇಡೀ ಗ್ರಹಣವು 5 ಗಂಟೆ 34 ನಿಮಿಷಗಳ ಕಾಲ ಇದ್ದು, ಭಾಗಶಃ ಗ್ರಹಣವು 2 ಗಂಟೆ 58 ನಿಮಿಷಗಳ ಕಾಲ ಇರಲಿದೆ.

149 ವರ್ಷಗಳ ನಂತರದ ಕಾಕತಾಳೀಯ

ಈ ಚಂದ್ರಗ್ರಹಣ ಕೆಲವರಿಗೆ ಮಹತ್ವದ್ದು ಏಕೆಂದರೆ, 149 ವರ್ಷಗಳ ನಂತರ ಅದು ಕೆಲವು ಭಾರತೀಯರು ಮಹತ್ವದ್ದೆಂದು ನಂಬುವ ಗುರು ಪೂರ್ಣಿಮಾದ ದಿನ ಬರುತ್ತದೆ. ಚಂದ್ರಗ್ರಹಣವು ಗರಿಷ್ಟ ಪ್ರಮಾಣ ತಲಪಿದಾಗ, ಭೂಮಿಯ ನೆರಳು ಅರ್ಧ ಭಾಗದಷ್ಟು ಚಂದ್ರನನ್ನು ಆವರಿಸಲಿದೆ. ಇದು ಈ ವರ್ಷ ಭಾರತದಲ್ಲಿ ಕೊನೆಯ ಚಂದ್ರಗ್ರಹಣವಾಗಿದೆ. ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ಗ್ರಹಣವನ್ನು ಪೂರ್ಣಾಣಾವಧಿ ಅಂದರೆ, ಆರಂಭದಿಂದ ಅಂತ್ಯದ ವರೆಗೆ ಕಾಣಬಹುದು.

ಚಂದ್ರಗ್ರಹಣವನ್ನು ನೋಡುವುದು ಹೇಗೆ?

ಚಂದ್ರಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡಬಹುದು. ಆದರೆ, ಸೂರ್ಯಗ್ರಹಣವನ್ನು ಬರಿಗಣ್ಣಿನಲ್ಲಿಯೇ ನೋಡುವುದು ಕುರುಡುತನಕ್ಕೆ ಕಾರಣವಾಗುತ್ತದೆ. ಚಂದ್ರಗ್ರಹಣ ನೋಡಲು ಯಾವುದೇ ಭಯ ಅಗತ್ಯವಿಲ್ಲ.

ಮೂಢನಂಬಿಕೆ ಬೇಡ!

ಚಂದ್ರ, ಭೂಮಿ, ಸೂರ್ಯ ಹೆಚ್ಚು ಕಡಿಮೆ ಎಂದೇ ರೇಖೆಗೆ ಬಂದಾಗ ಚಂದ್ರಗ್ರಹಣ ಸಂಭವಿಸುತ್ತದೆ. ಚಂದ್ರ ಮತ್ತು ಸೂರ್ಯನ ನಡುವೆ ಭೂಮಿ ಬರುವುದರಿಂದ ಭೂಮಿಯ ನೆರಳು ಚಂದ್ರನ ಮೇಲೆ ಹಾದುಹೋಗುತ್ತದೆ. ಈ ಕಾರಣದಿಂದಲೇ ಚಂದ್ರಗ್ರಹಣ ಹುಣ್ಣಿಮೆ ದಿನ ಮತ್ತು ಸೂರ್ಯಗ್ರಹಣ ಅಮವಾಸ್ಯೆಯ ದಿನ ಮಾತ್ರ ಸಂಭವಿಸುತ್ತದೆ. ಅದೇ ರೀತಿಯಲ್ಲಿ ಸೂರ್ಯ ಮತ್ತು ಭೂಮಿಯ ನಡುವೆ ಒಂದೇ ರೇಖೆಯಲ್ಲಿ ಚಂದ್ರ ಹಾದುಹೋದರೆ, ಅದು ಸೂರ್ಯನನ್ನು ಮರೆಮಾಚಿ ಸೂರ್ಯಗ್ರಹಣ ಸಂಭವಿಸುತ್ತದೆ. ಮೂರೂ ನಿಖರವಾಗಿ ಒಂದೇ ರೇಖೆಯಲ್ಲಿದ್ದರೆ ಖಗ್ರಾಸ ಅಥವಾ ಸಂಪೂರ್ಣ ಗ್ರಹಣಗಳೂ, ಸ್ವಲ್ಪ ವ್ಯತ್ಯಾಸವಿದ್ದರೆ ಖಂಡ ಅಥವಾ ಭಾಗಶಃ ಗ್ರಹಣಗಳು ಸಂಭವಿಸುತ್ತವೆ. ಚಂದ್ರಗ್ರಹಣವು ಒಂದು ಸಾಮಾನ್ಯ ಖಗೋಳ ಪ್ರಕ್ರಿಯೆಯಾಗಿದ್ದು, ಅದನ್ನು ನೋಡುವುದರಿಂದಲಾಗಲೀ ಆ ಹೊತ್ತಿಗೆ ಆಹಾರ ಸೇವಿಸುವುದರಿಂದಲಾಗಲೀ ಯಾವುದೇ ಹಾನಿ ಇಲ್ಲ ಎಂದು ವಿಜ್ಞಾನಿಗಳು ಖಚಿತಪಡಿಸುತ್ತಾರೆ.

ಇದೇ ವೇಳೆ ಇಂದು ಗ್ರಹಣದ ಕುರಿತು ಇರುವ ಮೂಢನಂಬಿಕೆಯನ್ನು ಹೋಗಲಾಡಿಸಲು ಮಾನವ ಬಂಧುತ್ವ ವೇದಿಕೆಯು ‘ಗ್ರಹಣ ಸಂಭ್ರಮ’ ಹೆಸರಿನಲ್ಲಿ ಹಲವು ಜಿಲ್ಲೆಗಳಲ್ಲಿ ಸಾಮೂಹಿಕ ಭೋಜನ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಮುಂದಿನ ಗ್ರಹಣ

ಮುಂದಿನ ಕಿರು ಗ್ರಹಣವು ಜನವರಿ 10, 2020ರಂದು ನಡೆಯಲಿದೆ. ಅದೇ ವರ್ಷ ಕೆಲವು ಚಿಕ್ಕ ಗ್ರಹಣಗಳು ನಡೆಯಲಿದ್ದು, ಭಾರತದಲ್ಲಿ ಗೋಚರವಾಗವು. ಮುಂದಿನ ಭಾಗಶಃ (ಖಂಡಗ್ರಾಸ) ಚಂದ್ರಗ್ರಹಣವು ನವೆಂಬರ್ 19, 2021ರಲ್ಲಿ, ಮತ್ತು ಖಗ್ರಾಸ ಅಂದರೆ, ಪೂರ್ಣ ಚಂದ್ರಗ್ರಹಣವು ಮೇ 26, 2021ರಂದು ಸಂಭವಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...