Homeಮುಖಪುಟಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ ಎಂದು ಪತ್ರಕರ್ತ ರಕ್ಷಿತ್ ಸಿಂಗ ಆರೋಪಿಸಿದ್ದರು.

- Advertisement -
- Advertisement -

“ನನ್ನ ಹೆತ್ತವರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನನ್ನ ಶಿಕ್ಷಣಕ್ಕಾಗಿ ಖರ್ಚು ಮಾಡಿದರು. ನಾನು ಈ (ಪತ್ರಿಕಾ) ವೃತ್ತಿಯನ್ನು ಆರಿಸಿಕೊಂಡೆ. ಯಾಕೆ ಎಂದು ನಿಮಗೆ ತಿಳಿದಿದೆಯೇ? ಏಕೆಂದರೆ ನಾನು ಸತ್ಯವನ್ನು ಹೇಳಲು ಬಯಸಿದ್ದೆ” ಎಂದು ಮೀರತ್ ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ರಕ್ಷಿತ್ ಸಿಂಗ್ ಹೇಳಿದ್ದಾರೆ.

ಐತಿಹಾಸಿಕ ರೈತ ಹೋರಾಟವನ್ನು ಬೆಂಬಲಿಸಿ ಫೆಬ್ರವರಿ 27 ರಂದು ಮೀರತ್‌ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ಸುಮಾರು 5,000 ಜನರು ಒಟ್ಟುಗೂಡಿದ್ದರು. ಈ ಸಭೆಯಲ್ಲಿ ಮಾತನಾಡಿದ ರಕ್ಷಿತ್ ಸಿಂಗ್, “ಸುದ್ದಿ ವಾಹಿನಿಗಳು ಸತ್ಯವನ್ನು, ನಿಜವಾದ ಸುದ್ದಿಯನ್ನು ತೋರಿಸುವುದನ್ನು ನಿಲ್ಲಿಸಿವೆ. ಅವು ಕೇವಲ ಸುಳ್ಳು ಹೇಳುತ್ತಿವೆ. ಸತ್ಯವನ್ನು ತೋರಿಸದಿರುವುದು ಸಹ ಸುಳ್ಳಿಗೆ ಸಮ. ನಾನು ಈ ಸುಳ್ಳಿಗೆ ವಿರೋಧಿಯಾಗಿದ್ದೇನೆ, ಹಾಗಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಆಕ್ರೋಶಗೊಂಡರು. ನಂತರ ಎಬಿಪಿ ಲಾಂಛನವಿರುವ ಮೈಕ್ ತೆಗೆದು ಎಸೆದು, ಈಗಲೇ ಈ ವಾಹಿನಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದರು.

“ಎಬಿಪಿ ನ್ಯೂಸ್ ಸತ್ಯವನ್ನು ಹೇಳಲು ಬಯಸುತ್ತಿಲ್ಲ. ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ” ಎಂದು ಕಿಡಿಕಾರಿದರು. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಶರವೇಗದಲ್ಲಿ ವೈರಲ್ ಆಗಿತ್ತು.

ಮೀರತ್‌ನಲ್ಲಿನ ಕಿಸಾನ್ ಮಹಾಪಂಚಾಯತ್ ಅನ್ನು ರಾಷ್ಟ್ರೀಯ ಲೋಕ ದಳ ಪಕ್ಷದವರು ಆಯೋಜಿಸಿದ್ದರು. ಇದರ ಉಪಾಧ್ಯಕ್ಷ ಜಯಂತ್ ಚೌಧರಿ ರಕ್ಷಿತ್ ರಾಜೀನಾಮೆ ಘೋಷಿಸುವಾಗ ಅಲ್ಲಿಯೇ ಇದ್ದರು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ರಕ್ಷಿತ್ 15 ವರ್ಷಗಳಿಂದ ಪತ್ರಕರ್ತರಾಗಿದ್ದು, ಎಬಿಪಿ ನ್ಯೂಸ್‌ಗೆ ಸೇರುವ ಮೊದಲು ದೈನಿಕ್ ಭಾಸ್ಕರ್ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ನಂತರ ಎಬಿಪಿ ನ್ಯೂಸ್‌ ಸೇರಿ ಪಶ್ಚಿಮ ಉತ್ತರಪ್ರದೇಶದ ಭಾಗದ ವರದಿಗಳನ್ನು ಮಾಡುತ್ತಿದ್ದರು.

ನ್ಯೂಸ್‌ಲಾಂಡ್ರಿಯೊಂದಿಗೆ ಮಾತನಾಡಿದ ರಕ್ಷಿತ್, “ಸುದ್ದಿ ಮಾಧ್ಯಮಗಳ ಒಟ್ಟಾರೆ ಪರಿಸ್ಥಿತಿ ನನ್ನ ಈ ಹತಾಶೆಗೆ ಕಾರಣವಾಗಿದ್ದು, ಇದು ರಾಜೀನಾಮೆ ನೀಡಲು ನನ್ನನ್ನು ಪ್ರೇರೇಪಿಸಿತು. ಈ ಘಟನೆಯ ನಂತರ ನನ್ನನ್ನು ಯಾರೂ ಕೆಲಸಕ್ಕೆ ಸೇರಿಸಿಕೊಳ್ಳುವುದಿಲ್ಲ. ಆದರೆ ಪತ್ರಿಕಾ ವೃತ್ತಿಯನ್ನು ಮುಂದುವರೆಸುತ್ತೇನೆ” ಎಂದು ಹೇಳಿದರು. ಆದರೆ ಈ ವೇದಿಕೆಯನ್ನು ಯಾಕೆ ಆಯ್ಕೆ ಮಾಡಿಕೊಂಡರು ಎಂಬುವುದರ ಬಗ್ಗೆ ರಕ್ಷಿತ್ ಸುಳಿವು ನೀಡಲಿಲ್ಲ.

ರಕ್ಷಿತ್ ಸಿಂಗ್ ರಾಜೀನಾಮೆ ಘೋಷಿಸಿದರು ಸಹ ಇನ್ನೂ ಔಪಚಾರಿಕವಾಗಿ ತನ್ನ ರಾಜೀನಾಮೆಯನ್ನು ನೀಡಿಲ್ಲ.

ಈ ಕುರಿತು ಪ್ರತಿಕ್ರಿಯಿಸಿದ ಎಬಿಪಿ ನ್ಯೂಸ್, “ನಾವು ಉನ್ನತ ಮಟ್ಟದ ನೈತಿಕ ಪತ್ರಿಕೋದ್ಯಮದಲ್ಲಿ ನಂಬಿಕೆ ಇರಿಸಿದ್ದೇವೆ. ಇದರ ಆಧಾರದಲ್ಲಿ ನಮ್ಮ ವರದಿಗಾರರಿಗೆ ನಿಷ್ಪಕ್ಷಪಾತತೆಯಿಂದಿರಲು ಆದೇಶ ನೀಡಿದ್ದೇವೆ. ಸ್ವಾತಂತ್ರ್ಯ, ನ್ಯಾಯ, ನೆಲದ ಕಾನೂನು, ಪತ್ರಿಕೋದ್ಯಮದ ನಿಯಮ ಮತ್ತು ಸಂಪಾದಕೀಯ ತತ್ವಗಳಿಗೆ ಕಟ್ಟುನಿಟ್ಟಾಗಿ ನಡೆದುಕೊಳ್ಳುವಂತೆ ಹೇಳಿತ್ತೇವೆ. ಸತ್ಯವನ್ನು ಆಧರಿಸಿದ ವರದಿಗಾರಿಕೆ ಯಾವಾಗಲೂ ನಮ್ಮ ಸಂಸ್ಥೆಯ ಕೇಂದ್ರವಾಗಿದೆ. ನಮ್ಮ ವರದಿಗಾರರೊಬ್ಬರು ನಮ್ಮ ಬ್ರ್ಯಾಂಡ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಸಂಸ್ಥೆಯ ಬಗ್ಗೆ ಸುಳ್ಳು ಹೇಳಿದ್ದಾರೆ ಎಂಬುದನ್ನು ಕೇಳಿ ಆಘಾತವಾಗಿದೆ” ಎಂದು ದೂರಿದ್ದಾರೆ.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ರಕ್ಷಿತ್ ಸಿಂಗ್ ಅವರೊಂದಿಗೆ ಕೆಲಸ ಮಾಡಿದ ಸಹೋದ್ಯೋಗಿಗಳನ್ನು ಮಾತನಾಡಿಸಿದಾಗ, ಅವರೂ ಕೂಡ ರಕ್ಷಿತ್ ಅವರ ಆರೋಪಗಳನ್ನು ದೃಢಪಡಿಸಿದ್ದಾರೆ. ಆದರೆ ಭಯದಿಂದ ಯಾರೂ ಕೂಡ ಹೆಸರು ಹೇಳಲಿಲ್ಲ ಎಂದು ನ್ಯೂಸ್‌ಲಾಂಡ್ರಿಯು ವರದಿ ಮಾಡಿದೆ.

ರಕ್ಷಿತ್ ಅವರ ರಾಜೀನಾಮೆ ಮತ್ತು ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಹಲವಾರು ರಾಜಕೀಯ ನಾಯಕರು ರಾಜೀನಾಮೆ ನೀಡಿದ್ದಾರೆ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಮೈತ್ರಿಯಿಂದ ಹೊರಬಂದಿವೆ.

ಕಳೆದ 95 ದಿನಗಳಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಹೋರಾಟ ಮಾಡುತ್ತಿರುವವರು ರೈತರಲ್ಲ; ಖಲೀಸ್ತಾನಿಗಳು, ಭಯೋತ್ಪಾದಕರು, ನಕ್ಸಲರು ಎಂದು ಮುಂತಾಗಿ ಬಿಂಬಿಸಿ ಕೆಲವು ಮಾಧ್ಯಮಗಳಿಂದ ವರದಿ ಮಾಡಿಸಲಾಗುತ್ತಿದೆ. ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಿಸಲಾಗುತ್ತಿದೆ. ಆದರೆ ಇದಾವುದಕ್ಕೂ ಮಣಿಯದ ರೈತರು ತಮ್ಮ ಬೇಡಿಕೆಯೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...