Homeಮುಖಪುಟಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ ಎಂದು ಪತ್ರಕರ್ತ ರಕ್ಷಿತ್ ಸಿಂಗ ಆರೋಪಿಸಿದ್ದರು.

- Advertisement -
- Advertisement -

“ನನ್ನ ಹೆತ್ತವರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನನ್ನ ಶಿಕ್ಷಣಕ್ಕಾಗಿ ಖರ್ಚು ಮಾಡಿದರು. ನಾನು ಈ (ಪತ್ರಿಕಾ) ವೃತ್ತಿಯನ್ನು ಆರಿಸಿಕೊಂಡೆ. ಯಾಕೆ ಎಂದು ನಿಮಗೆ ತಿಳಿದಿದೆಯೇ? ಏಕೆಂದರೆ ನಾನು ಸತ್ಯವನ್ನು ಹೇಳಲು ಬಯಸಿದ್ದೆ” ಎಂದು ಮೀರತ್ ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ರಕ್ಷಿತ್ ಸಿಂಗ್ ಹೇಳಿದ್ದಾರೆ.

ಐತಿಹಾಸಿಕ ರೈತ ಹೋರಾಟವನ್ನು ಬೆಂಬಲಿಸಿ ಫೆಬ್ರವರಿ 27 ರಂದು ಮೀರತ್‌ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ಸುಮಾರು 5,000 ಜನರು ಒಟ್ಟುಗೂಡಿದ್ದರು. ಈ ಸಭೆಯಲ್ಲಿ ಮಾತನಾಡಿದ ರಕ್ಷಿತ್ ಸಿಂಗ್, “ಸುದ್ದಿ ವಾಹಿನಿಗಳು ಸತ್ಯವನ್ನು, ನಿಜವಾದ ಸುದ್ದಿಯನ್ನು ತೋರಿಸುವುದನ್ನು ನಿಲ್ಲಿಸಿವೆ. ಅವು ಕೇವಲ ಸುಳ್ಳು ಹೇಳುತ್ತಿವೆ. ಸತ್ಯವನ್ನು ತೋರಿಸದಿರುವುದು ಸಹ ಸುಳ್ಳಿಗೆ ಸಮ. ನಾನು ಈ ಸುಳ್ಳಿಗೆ ವಿರೋಧಿಯಾಗಿದ್ದೇನೆ, ಹಾಗಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಆಕ್ರೋಶಗೊಂಡರು. ನಂತರ ಎಬಿಪಿ ಲಾಂಛನವಿರುವ ಮೈಕ್ ತೆಗೆದು ಎಸೆದು, ಈಗಲೇ ಈ ವಾಹಿನಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದರು.

“ಎಬಿಪಿ ನ್ಯೂಸ್ ಸತ್ಯವನ್ನು ಹೇಳಲು ಬಯಸುತ್ತಿಲ್ಲ. ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ” ಎಂದು ಕಿಡಿಕಾರಿದರು. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಶರವೇಗದಲ್ಲಿ ವೈರಲ್ ಆಗಿತ್ತು.

ಮೀರತ್‌ನಲ್ಲಿನ ಕಿಸಾನ್ ಮಹಾಪಂಚಾಯತ್ ಅನ್ನು ರಾಷ್ಟ್ರೀಯ ಲೋಕ ದಳ ಪಕ್ಷದವರು ಆಯೋಜಿಸಿದ್ದರು. ಇದರ ಉಪಾಧ್ಯಕ್ಷ ಜಯಂತ್ ಚೌಧರಿ ರಕ್ಷಿತ್ ರಾಜೀನಾಮೆ ಘೋಷಿಸುವಾಗ ಅಲ್ಲಿಯೇ ಇದ್ದರು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ರಕ್ಷಿತ್ 15 ವರ್ಷಗಳಿಂದ ಪತ್ರಕರ್ತರಾಗಿದ್ದು, ಎಬಿಪಿ ನ್ಯೂಸ್‌ಗೆ ಸೇರುವ ಮೊದಲು ದೈನಿಕ್ ಭಾಸ್ಕರ್ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ನಂತರ ಎಬಿಪಿ ನ್ಯೂಸ್‌ ಸೇರಿ ಪಶ್ಚಿಮ ಉತ್ತರಪ್ರದೇಶದ ಭಾಗದ ವರದಿಗಳನ್ನು ಮಾಡುತ್ತಿದ್ದರು.

ನ್ಯೂಸ್‌ಲಾಂಡ್ರಿಯೊಂದಿಗೆ ಮಾತನಾಡಿದ ರಕ್ಷಿತ್, “ಸುದ್ದಿ ಮಾಧ್ಯಮಗಳ ಒಟ್ಟಾರೆ ಪರಿಸ್ಥಿತಿ ನನ್ನ ಈ ಹತಾಶೆಗೆ ಕಾರಣವಾಗಿದ್ದು, ಇದು ರಾಜೀನಾಮೆ ನೀಡಲು ನನ್ನನ್ನು ಪ್ರೇರೇಪಿಸಿತು. ಈ ಘಟನೆಯ ನಂತರ ನನ್ನನ್ನು ಯಾರೂ ಕೆಲಸಕ್ಕೆ ಸೇರಿಸಿಕೊಳ್ಳುವುದಿಲ್ಲ. ಆದರೆ ಪತ್ರಿಕಾ ವೃತ್ತಿಯನ್ನು ಮುಂದುವರೆಸುತ್ತೇನೆ” ಎಂದು ಹೇಳಿದರು. ಆದರೆ ಈ ವೇದಿಕೆಯನ್ನು ಯಾಕೆ ಆಯ್ಕೆ ಮಾಡಿಕೊಂಡರು ಎಂಬುವುದರ ಬಗ್ಗೆ ರಕ್ಷಿತ್ ಸುಳಿವು ನೀಡಲಿಲ್ಲ.

ರಕ್ಷಿತ್ ಸಿಂಗ್ ರಾಜೀನಾಮೆ ಘೋಷಿಸಿದರು ಸಹ ಇನ್ನೂ ಔಪಚಾರಿಕವಾಗಿ ತನ್ನ ರಾಜೀನಾಮೆಯನ್ನು ನೀಡಿಲ್ಲ.

ಈ ಕುರಿತು ಪ್ರತಿಕ್ರಿಯಿಸಿದ ಎಬಿಪಿ ನ್ಯೂಸ್, “ನಾವು ಉನ್ನತ ಮಟ್ಟದ ನೈತಿಕ ಪತ್ರಿಕೋದ್ಯಮದಲ್ಲಿ ನಂಬಿಕೆ ಇರಿಸಿದ್ದೇವೆ. ಇದರ ಆಧಾರದಲ್ಲಿ ನಮ್ಮ ವರದಿಗಾರರಿಗೆ ನಿಷ್ಪಕ್ಷಪಾತತೆಯಿಂದಿರಲು ಆದೇಶ ನೀಡಿದ್ದೇವೆ. ಸ್ವಾತಂತ್ರ್ಯ, ನ್ಯಾಯ, ನೆಲದ ಕಾನೂನು, ಪತ್ರಿಕೋದ್ಯಮದ ನಿಯಮ ಮತ್ತು ಸಂಪಾದಕೀಯ ತತ್ವಗಳಿಗೆ ಕಟ್ಟುನಿಟ್ಟಾಗಿ ನಡೆದುಕೊಳ್ಳುವಂತೆ ಹೇಳಿತ್ತೇವೆ. ಸತ್ಯವನ್ನು ಆಧರಿಸಿದ ವರದಿಗಾರಿಕೆ ಯಾವಾಗಲೂ ನಮ್ಮ ಸಂಸ್ಥೆಯ ಕೇಂದ್ರವಾಗಿದೆ. ನಮ್ಮ ವರದಿಗಾರರೊಬ್ಬರು ನಮ್ಮ ಬ್ರ್ಯಾಂಡ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಸಂಸ್ಥೆಯ ಬಗ್ಗೆ ಸುಳ್ಳು ಹೇಳಿದ್ದಾರೆ ಎಂಬುದನ್ನು ಕೇಳಿ ಆಘಾತವಾಗಿದೆ” ಎಂದು ದೂರಿದ್ದಾರೆ.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ರಕ್ಷಿತ್ ಸಿಂಗ್ ಅವರೊಂದಿಗೆ ಕೆಲಸ ಮಾಡಿದ ಸಹೋದ್ಯೋಗಿಗಳನ್ನು ಮಾತನಾಡಿಸಿದಾಗ, ಅವರೂ ಕೂಡ ರಕ್ಷಿತ್ ಅವರ ಆರೋಪಗಳನ್ನು ದೃಢಪಡಿಸಿದ್ದಾರೆ. ಆದರೆ ಭಯದಿಂದ ಯಾರೂ ಕೂಡ ಹೆಸರು ಹೇಳಲಿಲ್ಲ ಎಂದು ನ್ಯೂಸ್‌ಲಾಂಡ್ರಿಯು ವರದಿ ಮಾಡಿದೆ.

ರಕ್ಷಿತ್ ಅವರ ರಾಜೀನಾಮೆ ಮತ್ತು ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಹಲವಾರು ರಾಜಕೀಯ ನಾಯಕರು ರಾಜೀನಾಮೆ ನೀಡಿದ್ದಾರೆ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಮೈತ್ರಿಯಿಂದ ಹೊರಬಂದಿವೆ.

ಕಳೆದ 95 ದಿನಗಳಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಹೋರಾಟ ಮಾಡುತ್ತಿರುವವರು ರೈತರಲ್ಲ; ಖಲೀಸ್ತಾನಿಗಳು, ಭಯೋತ್ಪಾದಕರು, ನಕ್ಸಲರು ಎಂದು ಮುಂತಾಗಿ ಬಿಂಬಿಸಿ ಕೆಲವು ಮಾಧ್ಯಮಗಳಿಂದ ವರದಿ ಮಾಡಿಸಲಾಗುತ್ತಿದೆ. ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಿಸಲಾಗುತ್ತಿದೆ. ಆದರೆ ಇದಾವುದಕ್ಕೂ ಮಣಿಯದ ರೈತರು ತಮ್ಮ ಬೇಡಿಕೆಯೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...