Homeಮುಖಪುಟಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ ಎಂದು ಪತ್ರಕರ್ತ ರಕ್ಷಿತ್ ಸಿಂಗ ಆರೋಪಿಸಿದ್ದರು.

- Advertisement -
- Advertisement -

“ನನ್ನ ಹೆತ್ತವರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನನ್ನ ಶಿಕ್ಷಣಕ್ಕಾಗಿ ಖರ್ಚು ಮಾಡಿದರು. ನಾನು ಈ (ಪತ್ರಿಕಾ) ವೃತ್ತಿಯನ್ನು ಆರಿಸಿಕೊಂಡೆ. ಯಾಕೆ ಎಂದು ನಿಮಗೆ ತಿಳಿದಿದೆಯೇ? ಏಕೆಂದರೆ ನಾನು ಸತ್ಯವನ್ನು ಹೇಳಲು ಬಯಸಿದ್ದೆ” ಎಂದು ಮೀರತ್ ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ರಕ್ಷಿತ್ ಸಿಂಗ್ ಹೇಳಿದ್ದಾರೆ.

ಐತಿಹಾಸಿಕ ರೈತ ಹೋರಾಟವನ್ನು ಬೆಂಬಲಿಸಿ ಫೆಬ್ರವರಿ 27 ರಂದು ಮೀರತ್‌ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ಸುಮಾರು 5,000 ಜನರು ಒಟ್ಟುಗೂಡಿದ್ದರು. ಈ ಸಭೆಯಲ್ಲಿ ಮಾತನಾಡಿದ ರಕ್ಷಿತ್ ಸಿಂಗ್, “ಸುದ್ದಿ ವಾಹಿನಿಗಳು ಸತ್ಯವನ್ನು, ನಿಜವಾದ ಸುದ್ದಿಯನ್ನು ತೋರಿಸುವುದನ್ನು ನಿಲ್ಲಿಸಿವೆ. ಅವು ಕೇವಲ ಸುಳ್ಳು ಹೇಳುತ್ತಿವೆ. ಸತ್ಯವನ್ನು ತೋರಿಸದಿರುವುದು ಸಹ ಸುಳ್ಳಿಗೆ ಸಮ. ನಾನು ಈ ಸುಳ್ಳಿಗೆ ವಿರೋಧಿಯಾಗಿದ್ದೇನೆ, ಹಾಗಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಆಕ್ರೋಶಗೊಂಡರು. ನಂತರ ಎಬಿಪಿ ಲಾಂಛನವಿರುವ ಮೈಕ್ ತೆಗೆದು ಎಸೆದು, ಈಗಲೇ ಈ ವಾಹಿನಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದರು.

“ಎಬಿಪಿ ನ್ಯೂಸ್ ಸತ್ಯವನ್ನು ಹೇಳಲು ಬಯಸುತ್ತಿಲ್ಲ. ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ” ಎಂದು ಕಿಡಿಕಾರಿದರು. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಶರವೇಗದಲ್ಲಿ ವೈರಲ್ ಆಗಿತ್ತು.

ಮೀರತ್‌ನಲ್ಲಿನ ಕಿಸಾನ್ ಮಹಾಪಂಚಾಯತ್ ಅನ್ನು ರಾಷ್ಟ್ರೀಯ ಲೋಕ ದಳ ಪಕ್ಷದವರು ಆಯೋಜಿಸಿದ್ದರು. ಇದರ ಉಪಾಧ್ಯಕ್ಷ ಜಯಂತ್ ಚೌಧರಿ ರಕ್ಷಿತ್ ರಾಜೀನಾಮೆ ಘೋಷಿಸುವಾಗ ಅಲ್ಲಿಯೇ ಇದ್ದರು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ರಕ್ಷಿತ್ 15 ವರ್ಷಗಳಿಂದ ಪತ್ರಕರ್ತರಾಗಿದ್ದು, ಎಬಿಪಿ ನ್ಯೂಸ್‌ಗೆ ಸೇರುವ ಮೊದಲು ದೈನಿಕ್ ಭಾಸ್ಕರ್ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ನಂತರ ಎಬಿಪಿ ನ್ಯೂಸ್‌ ಸೇರಿ ಪಶ್ಚಿಮ ಉತ್ತರಪ್ರದೇಶದ ಭಾಗದ ವರದಿಗಳನ್ನು ಮಾಡುತ್ತಿದ್ದರು.

ನ್ಯೂಸ್‌ಲಾಂಡ್ರಿಯೊಂದಿಗೆ ಮಾತನಾಡಿದ ರಕ್ಷಿತ್, “ಸುದ್ದಿ ಮಾಧ್ಯಮಗಳ ಒಟ್ಟಾರೆ ಪರಿಸ್ಥಿತಿ ನನ್ನ ಈ ಹತಾಶೆಗೆ ಕಾರಣವಾಗಿದ್ದು, ಇದು ರಾಜೀನಾಮೆ ನೀಡಲು ನನ್ನನ್ನು ಪ್ರೇರೇಪಿಸಿತು. ಈ ಘಟನೆಯ ನಂತರ ನನ್ನನ್ನು ಯಾರೂ ಕೆಲಸಕ್ಕೆ ಸೇರಿಸಿಕೊಳ್ಳುವುದಿಲ್ಲ. ಆದರೆ ಪತ್ರಿಕಾ ವೃತ್ತಿಯನ್ನು ಮುಂದುವರೆಸುತ್ತೇನೆ” ಎಂದು ಹೇಳಿದರು. ಆದರೆ ಈ ವೇದಿಕೆಯನ್ನು ಯಾಕೆ ಆಯ್ಕೆ ಮಾಡಿಕೊಂಡರು ಎಂಬುವುದರ ಬಗ್ಗೆ ರಕ್ಷಿತ್ ಸುಳಿವು ನೀಡಲಿಲ್ಲ.

ರಕ್ಷಿತ್ ಸಿಂಗ್ ರಾಜೀನಾಮೆ ಘೋಷಿಸಿದರು ಸಹ ಇನ್ನೂ ಔಪಚಾರಿಕವಾಗಿ ತನ್ನ ರಾಜೀನಾಮೆಯನ್ನು ನೀಡಿಲ್ಲ.

ಈ ಕುರಿತು ಪ್ರತಿಕ್ರಿಯಿಸಿದ ಎಬಿಪಿ ನ್ಯೂಸ್, “ನಾವು ಉನ್ನತ ಮಟ್ಟದ ನೈತಿಕ ಪತ್ರಿಕೋದ್ಯಮದಲ್ಲಿ ನಂಬಿಕೆ ಇರಿಸಿದ್ದೇವೆ. ಇದರ ಆಧಾರದಲ್ಲಿ ನಮ್ಮ ವರದಿಗಾರರಿಗೆ ನಿಷ್ಪಕ್ಷಪಾತತೆಯಿಂದಿರಲು ಆದೇಶ ನೀಡಿದ್ದೇವೆ. ಸ್ವಾತಂತ್ರ್ಯ, ನ್ಯಾಯ, ನೆಲದ ಕಾನೂನು, ಪತ್ರಿಕೋದ್ಯಮದ ನಿಯಮ ಮತ್ತು ಸಂಪಾದಕೀಯ ತತ್ವಗಳಿಗೆ ಕಟ್ಟುನಿಟ್ಟಾಗಿ ನಡೆದುಕೊಳ್ಳುವಂತೆ ಹೇಳಿತ್ತೇವೆ. ಸತ್ಯವನ್ನು ಆಧರಿಸಿದ ವರದಿಗಾರಿಕೆ ಯಾವಾಗಲೂ ನಮ್ಮ ಸಂಸ್ಥೆಯ ಕೇಂದ್ರವಾಗಿದೆ. ನಮ್ಮ ವರದಿಗಾರರೊಬ್ಬರು ನಮ್ಮ ಬ್ರ್ಯಾಂಡ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಸಂಸ್ಥೆಯ ಬಗ್ಗೆ ಸುಳ್ಳು ಹೇಳಿದ್ದಾರೆ ಎಂಬುದನ್ನು ಕೇಳಿ ಆಘಾತವಾಗಿದೆ” ಎಂದು ದೂರಿದ್ದಾರೆ.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ರಕ್ಷಿತ್ ಸಿಂಗ್ ಅವರೊಂದಿಗೆ ಕೆಲಸ ಮಾಡಿದ ಸಹೋದ್ಯೋಗಿಗಳನ್ನು ಮಾತನಾಡಿಸಿದಾಗ, ಅವರೂ ಕೂಡ ರಕ್ಷಿತ್ ಅವರ ಆರೋಪಗಳನ್ನು ದೃಢಪಡಿಸಿದ್ದಾರೆ. ಆದರೆ ಭಯದಿಂದ ಯಾರೂ ಕೂಡ ಹೆಸರು ಹೇಳಲಿಲ್ಲ ಎಂದು ನ್ಯೂಸ್‌ಲಾಂಡ್ರಿಯು ವರದಿ ಮಾಡಿದೆ.

ರಕ್ಷಿತ್ ಅವರ ರಾಜೀನಾಮೆ ಮತ್ತು ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಹಲವಾರು ರಾಜಕೀಯ ನಾಯಕರು ರಾಜೀನಾಮೆ ನೀಡಿದ್ದಾರೆ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಮೈತ್ರಿಯಿಂದ ಹೊರಬಂದಿವೆ.

ಕಳೆದ 95 ದಿನಗಳಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಹೋರಾಟ ಮಾಡುತ್ತಿರುವವರು ರೈತರಲ್ಲ; ಖಲೀಸ್ತಾನಿಗಳು, ಭಯೋತ್ಪಾದಕರು, ನಕ್ಸಲರು ಎಂದು ಮುಂತಾಗಿ ಬಿಂಬಿಸಿ ಕೆಲವು ಮಾಧ್ಯಮಗಳಿಂದ ವರದಿ ಮಾಡಿಸಲಾಗುತ್ತಿದೆ. ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಿಸಲಾಗುತ್ತಿದೆ. ಆದರೆ ಇದಾವುದಕ್ಕೂ ಮಣಿಯದ ರೈತರು ತಮ್ಮ ಬೇಡಿಕೆಯೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...