Homeಮುಖಪುಟಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ ಎಂದು ಪತ್ರಕರ್ತ ರಕ್ಷಿತ್ ಸಿಂಗ ಆರೋಪಿಸಿದ್ದರು.

- Advertisement -
- Advertisement -

“ನನ್ನ ಹೆತ್ತವರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನನ್ನ ಶಿಕ್ಷಣಕ್ಕಾಗಿ ಖರ್ಚು ಮಾಡಿದರು. ನಾನು ಈ (ಪತ್ರಿಕಾ) ವೃತ್ತಿಯನ್ನು ಆರಿಸಿಕೊಂಡೆ. ಯಾಕೆ ಎಂದು ನಿಮಗೆ ತಿಳಿದಿದೆಯೇ? ಏಕೆಂದರೆ ನಾನು ಸತ್ಯವನ್ನು ಹೇಳಲು ಬಯಸಿದ್ದೆ” ಎಂದು ಮೀರತ್ ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ರಕ್ಷಿತ್ ಸಿಂಗ್ ಹೇಳಿದ್ದಾರೆ.

ಐತಿಹಾಸಿಕ ರೈತ ಹೋರಾಟವನ್ನು ಬೆಂಬಲಿಸಿ ಫೆಬ್ರವರಿ 27 ರಂದು ಮೀರತ್‌ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ಸುಮಾರು 5,000 ಜನರು ಒಟ್ಟುಗೂಡಿದ್ದರು. ಈ ಸಭೆಯಲ್ಲಿ ಮಾತನಾಡಿದ ರಕ್ಷಿತ್ ಸಿಂಗ್, “ಸುದ್ದಿ ವಾಹಿನಿಗಳು ಸತ್ಯವನ್ನು, ನಿಜವಾದ ಸುದ್ದಿಯನ್ನು ತೋರಿಸುವುದನ್ನು ನಿಲ್ಲಿಸಿವೆ. ಅವು ಕೇವಲ ಸುಳ್ಳು ಹೇಳುತ್ತಿವೆ. ಸತ್ಯವನ್ನು ತೋರಿಸದಿರುವುದು ಸಹ ಸುಳ್ಳಿಗೆ ಸಮ. ನಾನು ಈ ಸುಳ್ಳಿಗೆ ವಿರೋಧಿಯಾಗಿದ್ದೇನೆ, ಹಾಗಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಆಕ್ರೋಶಗೊಂಡರು. ನಂತರ ಎಬಿಪಿ ಲಾಂಛನವಿರುವ ಮೈಕ್ ತೆಗೆದು ಎಸೆದು, ಈಗಲೇ ಈ ವಾಹಿನಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದರು.

“ಎಬಿಪಿ ನ್ಯೂಸ್ ಸತ್ಯವನ್ನು ಹೇಳಲು ಬಯಸುತ್ತಿಲ್ಲ. ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ” ಎಂದು ಕಿಡಿಕಾರಿದರು. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಶರವೇಗದಲ್ಲಿ ವೈರಲ್ ಆಗಿತ್ತು.

ಮೀರತ್‌ನಲ್ಲಿನ ಕಿಸಾನ್ ಮಹಾಪಂಚಾಯತ್ ಅನ್ನು ರಾಷ್ಟ್ರೀಯ ಲೋಕ ದಳ ಪಕ್ಷದವರು ಆಯೋಜಿಸಿದ್ದರು. ಇದರ ಉಪಾಧ್ಯಕ್ಷ ಜಯಂತ್ ಚೌಧರಿ ರಕ್ಷಿತ್ ರಾಜೀನಾಮೆ ಘೋಷಿಸುವಾಗ ಅಲ್ಲಿಯೇ ಇದ್ದರು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ರಕ್ಷಿತ್ 15 ವರ್ಷಗಳಿಂದ ಪತ್ರಕರ್ತರಾಗಿದ್ದು, ಎಬಿಪಿ ನ್ಯೂಸ್‌ಗೆ ಸೇರುವ ಮೊದಲು ದೈನಿಕ್ ಭಾಸ್ಕರ್ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ನಂತರ ಎಬಿಪಿ ನ್ಯೂಸ್‌ ಸೇರಿ ಪಶ್ಚಿಮ ಉತ್ತರಪ್ರದೇಶದ ಭಾಗದ ವರದಿಗಳನ್ನು ಮಾಡುತ್ತಿದ್ದರು.

ನ್ಯೂಸ್‌ಲಾಂಡ್ರಿಯೊಂದಿಗೆ ಮಾತನಾಡಿದ ರಕ್ಷಿತ್, “ಸುದ್ದಿ ಮಾಧ್ಯಮಗಳ ಒಟ್ಟಾರೆ ಪರಿಸ್ಥಿತಿ ನನ್ನ ಈ ಹತಾಶೆಗೆ ಕಾರಣವಾಗಿದ್ದು, ಇದು ರಾಜೀನಾಮೆ ನೀಡಲು ನನ್ನನ್ನು ಪ್ರೇರೇಪಿಸಿತು. ಈ ಘಟನೆಯ ನಂತರ ನನ್ನನ್ನು ಯಾರೂ ಕೆಲಸಕ್ಕೆ ಸೇರಿಸಿಕೊಳ್ಳುವುದಿಲ್ಲ. ಆದರೆ ಪತ್ರಿಕಾ ವೃತ್ತಿಯನ್ನು ಮುಂದುವರೆಸುತ್ತೇನೆ” ಎಂದು ಹೇಳಿದರು. ಆದರೆ ಈ ವೇದಿಕೆಯನ್ನು ಯಾಕೆ ಆಯ್ಕೆ ಮಾಡಿಕೊಂಡರು ಎಂಬುವುದರ ಬಗ್ಗೆ ರಕ್ಷಿತ್ ಸುಳಿವು ನೀಡಲಿಲ್ಲ.

ರಕ್ಷಿತ್ ಸಿಂಗ್ ರಾಜೀನಾಮೆ ಘೋಷಿಸಿದರು ಸಹ ಇನ್ನೂ ಔಪಚಾರಿಕವಾಗಿ ತನ್ನ ರಾಜೀನಾಮೆಯನ್ನು ನೀಡಿಲ್ಲ.

ಈ ಕುರಿತು ಪ್ರತಿಕ್ರಿಯಿಸಿದ ಎಬಿಪಿ ನ್ಯೂಸ್, “ನಾವು ಉನ್ನತ ಮಟ್ಟದ ನೈತಿಕ ಪತ್ರಿಕೋದ್ಯಮದಲ್ಲಿ ನಂಬಿಕೆ ಇರಿಸಿದ್ದೇವೆ. ಇದರ ಆಧಾರದಲ್ಲಿ ನಮ್ಮ ವರದಿಗಾರರಿಗೆ ನಿಷ್ಪಕ್ಷಪಾತತೆಯಿಂದಿರಲು ಆದೇಶ ನೀಡಿದ್ದೇವೆ. ಸ್ವಾತಂತ್ರ್ಯ, ನ್ಯಾಯ, ನೆಲದ ಕಾನೂನು, ಪತ್ರಿಕೋದ್ಯಮದ ನಿಯಮ ಮತ್ತು ಸಂಪಾದಕೀಯ ತತ್ವಗಳಿಗೆ ಕಟ್ಟುನಿಟ್ಟಾಗಿ ನಡೆದುಕೊಳ್ಳುವಂತೆ ಹೇಳಿತ್ತೇವೆ. ಸತ್ಯವನ್ನು ಆಧರಿಸಿದ ವರದಿಗಾರಿಕೆ ಯಾವಾಗಲೂ ನಮ್ಮ ಸಂಸ್ಥೆಯ ಕೇಂದ್ರವಾಗಿದೆ. ನಮ್ಮ ವರದಿಗಾರರೊಬ್ಬರು ನಮ್ಮ ಬ್ರ್ಯಾಂಡ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಸಂಸ್ಥೆಯ ಬಗ್ಗೆ ಸುಳ್ಳು ಹೇಳಿದ್ದಾರೆ ಎಂಬುದನ್ನು ಕೇಳಿ ಆಘಾತವಾಗಿದೆ” ಎಂದು ದೂರಿದ್ದಾರೆ.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ರಕ್ಷಿತ್ ಸಿಂಗ್ ಅವರೊಂದಿಗೆ ಕೆಲಸ ಮಾಡಿದ ಸಹೋದ್ಯೋಗಿಗಳನ್ನು ಮಾತನಾಡಿಸಿದಾಗ, ಅವರೂ ಕೂಡ ರಕ್ಷಿತ್ ಅವರ ಆರೋಪಗಳನ್ನು ದೃಢಪಡಿಸಿದ್ದಾರೆ. ಆದರೆ ಭಯದಿಂದ ಯಾರೂ ಕೂಡ ಹೆಸರು ಹೇಳಲಿಲ್ಲ ಎಂದು ನ್ಯೂಸ್‌ಲಾಂಡ್ರಿಯು ವರದಿ ಮಾಡಿದೆ.

ರಕ್ಷಿತ್ ಅವರ ರಾಜೀನಾಮೆ ಮತ್ತು ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಹಲವಾರು ರಾಜಕೀಯ ನಾಯಕರು ರಾಜೀನಾಮೆ ನೀಡಿದ್ದಾರೆ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಮೈತ್ರಿಯಿಂದ ಹೊರಬಂದಿವೆ.

ಕಳೆದ 95 ದಿನಗಳಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಹೋರಾಟ ಮಾಡುತ್ತಿರುವವರು ರೈತರಲ್ಲ; ಖಲೀಸ್ತಾನಿಗಳು, ಭಯೋತ್ಪಾದಕರು, ನಕ್ಸಲರು ಎಂದು ಮುಂತಾಗಿ ಬಿಂಬಿಸಿ ಕೆಲವು ಮಾಧ್ಯಮಗಳಿಂದ ವರದಿ ಮಾಡಿಸಲಾಗುತ್ತಿದೆ. ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಿಸಲಾಗುತ್ತಿದೆ. ಆದರೆ ಇದಾವುದಕ್ಕೂ ಮಣಿಯದ ರೈತರು ತಮ್ಮ ಬೇಡಿಕೆಯೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...