Homeಮುಖಪುಟಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯುತ್ತೇವೆ: ಟಿಎಂಸಿಯ ಅಚ್ಚರಿಯ ಹೇಳಿಕೆ

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯುತ್ತೇವೆ: ಟಿಎಂಸಿಯ ಅಚ್ಚರಿಯ ಹೇಳಿಕೆ

- Advertisement -
- Advertisement -

ಆಗಸ್ಟ್ 6 ರಂದು ನಡೆಯುವ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಟಿಎಂಸಿ ಪಕ್ಷವು ಮತದಾನದಿಂದ ದೂರ ಉಳಿಯುತ್ತದೆ ಎಂದು ಪಕ್ಷದ ಮುಖ್ಯಸ್ಥೆ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಉಪರಾಷ್ಟ್ರಪತಿ ಸ್ಥಾನಕ್ಕಾಗಿ ಬಿಜೆಪಿ ಪಕ್ಷವು ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ್ ದಂಖರ್‌ರವರನ್ನು ಕಣಕ್ಕಿಳಿಸಿದರೆ ವಿರೋಧ ಪಕ್ಷಗಳಿಂದ ಕಾಂಗ್ರೆಸ್ ಪಕ್ಷವು ಮಾರ್ಗರೇಟ್ ಆಳ್ವರನ್ನು ಕಣಕ್ಕಿಳಿಸಿತ್ತು.

ಇತ್ತೀಚೆಗೆ ಮಮತಾ ಬ್ಯಾನರ್ಜಿಯವರು ಡಾರ್ಜಲಿಂಗ್‌ನಲ್ಲಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಜಗದೀಪ್ ದಂಕರ್‌ರವರನ್ನು ಭೇಟಿ ಮಾಡಿದ್ದರು. ಅಲ್ಲಿ ದಂಖರ್‌ ತಮ್ಮನ್ನು ಬೆಂಬಲಿಸಲು ಮನವಿ ಮಾಡಿದ್ದರು ಎನ್ನಲಾಗಿದ್ದು, ಆ ಸಭೆಯ ನಂತರ ಈ ಆಶ್ಚರ್ಯಕರ ತೀರ್ಮಾನ ಬಂದಿದೆ.

ಇದುವರೆಗೂ ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ್ ದಂಖರ್ ಮತ್ತು ಸಿಎಂ ಮಮತಾ ಬ್ಯಾನರ್ಜಿ ನಡುವೆ ಬಹಳಷ್ಟು ಭಿನ್ನಾಭಿಪ್ರಾಯಗಳಿದ್ದವು. ಅವುಗಳನ್ನು ಇಬ್ಬರೂ ಹೊರಹಾಕುತ್ತಲೇ ಇದ್ದರು. ಈಗ ಅವರನ್ನು ಬೆಂಬಲಿಸಲು ಸಲುವಾಗಿ ಟಿಎಂಸಿ ಮತದಾನದಿಂದ ದೂರು ಉಳಿಯುತ್ತಿರುವುದು ಚರ್ಚೆಗೆ ಕಾರಣವಾಗಿದೆ.

ಇನ್ನೊಂದೆಡೆ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಯ ಅಭ್ಯರ್ಥಿಯ ಹುಡುಕಾಟದ ಪ್ರಕ್ರಿಯೆಯ ನೇತೃತ್ವವನ್ನು ಮಮತಾ ಬ್ಯಾನರ್ಜಿ ವಹಿಸಿದ್ದರು. ಕಡೆಗೂ ಪಕ್ಷದ ಯಶವಂತ್ ಸಿನ್ಹಾರವರೆ ಅಭ್ಯರ್ಥಿ ಆಗಿದ್ದರು. ಆರಂಭದಲ್ಲಿ ವಿರೋಧ ಪಕ್ಷಗಳೆಲ್ಲವೂ ಅವರನ್ನು ಬೆಂಬಲಿಸಿದ್ದವು. ಆದರೆ ಎನ್‌ಡಿಎ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮುರವನ್ನು ಘೋಷಿಸಿದ ನಂತರ ಶಿವಸೇನೆ, ಜೆಎಂಎಂ, ಜೆಡಿಎಸ್ ಸೇರಿದಂತೆ ಹಲವು ಪಕ್ಷಗಳು ತಮ್ಮ ಮನಸ್ಸು ಬದಲಿಸಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಿದ್ದವು. ಇದರಿಂದ ದ್ರೌಪದಿ ಮುರ್ಮು ಭಾರೀ ಅಂತರದಲ್ಲಿ ಗೆಲುವಿನ ಸನಿಹದಲ್ಲಿದ್ದಾರೆ. ಇದು ಸಹ ಟಿಎಂಸಿ ಮುನಿಸಿಗೆ ಕಾರಣವಾಗಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಫಲಿತಾಂಶ: ಸಂಸದರ ಮತಗಳಲ್ಲಿ ದ್ರೌಪದಿ ಮುರ್ಮುಗೆ 540 ಮತ, ಸಿನ್ಹಾಗೆ 208

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...