Homeಮುಖಪುಟಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯುತ್ತೇವೆ: ಟಿಎಂಸಿಯ ಅಚ್ಚರಿಯ ಹೇಳಿಕೆ

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿಯುತ್ತೇವೆ: ಟಿಎಂಸಿಯ ಅಚ್ಚರಿಯ ಹೇಳಿಕೆ

- Advertisement -
- Advertisement -

ಆಗಸ್ಟ್ 6 ರಂದು ನಡೆಯುವ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಟಿಎಂಸಿ ಪಕ್ಷವು ಮತದಾನದಿಂದ ದೂರ ಉಳಿಯುತ್ತದೆ ಎಂದು ಪಕ್ಷದ ಮುಖ್ಯಸ್ಥೆ ಮತ್ತು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಉಪರಾಷ್ಟ್ರಪತಿ ಸ್ಥಾನಕ್ಕಾಗಿ ಬಿಜೆಪಿ ಪಕ್ಷವು ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ್ ದಂಖರ್‌ರವರನ್ನು ಕಣಕ್ಕಿಳಿಸಿದರೆ ವಿರೋಧ ಪಕ್ಷಗಳಿಂದ ಕಾಂಗ್ರೆಸ್ ಪಕ್ಷವು ಮಾರ್ಗರೇಟ್ ಆಳ್ವರನ್ನು ಕಣಕ್ಕಿಳಿಸಿತ್ತು.

ಇತ್ತೀಚೆಗೆ ಮಮತಾ ಬ್ಯಾನರ್ಜಿಯವರು ಡಾರ್ಜಲಿಂಗ್‌ನಲ್ಲಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಜಗದೀಪ್ ದಂಕರ್‌ರವರನ್ನು ಭೇಟಿ ಮಾಡಿದ್ದರು. ಅಲ್ಲಿ ದಂಖರ್‌ ತಮ್ಮನ್ನು ಬೆಂಬಲಿಸಲು ಮನವಿ ಮಾಡಿದ್ದರು ಎನ್ನಲಾಗಿದ್ದು, ಆ ಸಭೆಯ ನಂತರ ಈ ಆಶ್ಚರ್ಯಕರ ತೀರ್ಮಾನ ಬಂದಿದೆ.

ಇದುವರೆಗೂ ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ್ ದಂಖರ್ ಮತ್ತು ಸಿಎಂ ಮಮತಾ ಬ್ಯಾನರ್ಜಿ ನಡುವೆ ಬಹಳಷ್ಟು ಭಿನ್ನಾಭಿಪ್ರಾಯಗಳಿದ್ದವು. ಅವುಗಳನ್ನು ಇಬ್ಬರೂ ಹೊರಹಾಕುತ್ತಲೇ ಇದ್ದರು. ಈಗ ಅವರನ್ನು ಬೆಂಬಲಿಸಲು ಸಲುವಾಗಿ ಟಿಎಂಸಿ ಮತದಾನದಿಂದ ದೂರು ಉಳಿಯುತ್ತಿರುವುದು ಚರ್ಚೆಗೆ ಕಾರಣವಾಗಿದೆ.

ಇನ್ನೊಂದೆಡೆ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಯ ಅಭ್ಯರ್ಥಿಯ ಹುಡುಕಾಟದ ಪ್ರಕ್ರಿಯೆಯ ನೇತೃತ್ವವನ್ನು ಮಮತಾ ಬ್ಯಾನರ್ಜಿ ವಹಿಸಿದ್ದರು. ಕಡೆಗೂ ಪಕ್ಷದ ಯಶವಂತ್ ಸಿನ್ಹಾರವರೆ ಅಭ್ಯರ್ಥಿ ಆಗಿದ್ದರು. ಆರಂಭದಲ್ಲಿ ವಿರೋಧ ಪಕ್ಷಗಳೆಲ್ಲವೂ ಅವರನ್ನು ಬೆಂಬಲಿಸಿದ್ದವು. ಆದರೆ ಎನ್‌ಡಿಎ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮುರವನ್ನು ಘೋಷಿಸಿದ ನಂತರ ಶಿವಸೇನೆ, ಜೆಎಂಎಂ, ಜೆಡಿಎಸ್ ಸೇರಿದಂತೆ ಹಲವು ಪಕ್ಷಗಳು ತಮ್ಮ ಮನಸ್ಸು ಬದಲಿಸಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಿದ್ದವು. ಇದರಿಂದ ದ್ರೌಪದಿ ಮುರ್ಮು ಭಾರೀ ಅಂತರದಲ್ಲಿ ಗೆಲುವಿನ ಸನಿಹದಲ್ಲಿದ್ದಾರೆ. ಇದು ಸಹ ಟಿಎಂಸಿ ಮುನಿಸಿಗೆ ಕಾರಣವಾಗಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ ಫಲಿತಾಂಶ: ಸಂಸದರ ಮತಗಳಲ್ಲಿ ದ್ರೌಪದಿ ಮುರ್ಮುಗೆ 540 ಮತ, ಸಿನ್ಹಾಗೆ 208

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...