Homeಮುಖಪುಟವಾಕ್‌ ಸ್ವಾತಂತ್ರ್ಯ ಹತ್ತಿಕ್ಕಲು ನ್ಯಾಯಾಂಗ ನಿಂದನೆ ಕಾನೂನಿನ ದುರುಪಯೋಗ: ಪ್ರಶಾಂತ್‌ ಭೂಷಣ್

ವಾಕ್‌ ಸ್ವಾತಂತ್ರ್ಯ ಹತ್ತಿಕ್ಕಲು ನ್ಯಾಯಾಂಗ ನಿಂದನೆ ಕಾನೂನಿನ ದುರುಪಯೋಗ: ಪ್ರಶಾಂತ್‌ ಭೂಷಣ್

ಹಲವು ದೇಶಗಳಲ್ಲಿ ಈ ಕಾನೂನನ್ನು ರದ್ದುಪಡಿಸಲಾಗಿದೆ. ಭಾರತದಂತಹ ಕೆಲವು ದೇಶಗಳಲ್ಲಿ ಮಾತ್ರ ಮುಂದುವರಿಸಲಾಗಿದೆ ಎಂದು ಭೂಷಣ್ ಹೇಳಿದ್ದಾರೆ.

- Advertisement -
- Advertisement -

ವಾಕ್‌ ಸ್ವಾತಂತ್ಯ್ರ ಮತ್ತು ನ್ಯಾಯಾಂಗದ ಬಗ್ಗೆಗಿನ ಚರ್ಚೆಯನ್ನು ಹತ್ತಿಕ್ಕಲು ನ್ಯಾಯಾಂಗ ನಿಂದನೆ ಕಾನೂನಿನನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಈ ವಾರ ಸುಪ್ರೀಂ ಕೋರ್ಟ್‌ ಪ್ರಶಾಂತ್‌ ಭೂಷಣ್ ಅವರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಒಂದು ರೂಪಾಯಿ ಶಿಕ್ಷೆ ವಿಧಿಸಿತ್ತು. ಈ ಪ್ರಕರಣ ರಾಷ್ಟ್ರಾದ್ಯಂತ ಗಮನ ಸೆಳೆದಿತ್ತು.

ಓದಿ: ಪ್ರಶಾಂತ್ ಭೂಷಣ್‌ಗೆ 1 ರೂ ದಂಡ ಅಥವಾ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂ

ಕ್ಲಬ್ ಆಫ್ ಸೌತ್ ಏಷ್ಯಾ ಆಯೋಜಿಸಿದ್ದ “ವಾಕ್ ಸ್ವಾತಂತ್ರ್ಯ ಮತ್ತು ಭಾರತೀಯ ನ್ಯಾಯಾಂಗ” ಎಂಬ ವೆಬಿನಾರ್‌ನಲ್ಲಿ ಅವರು ಮಾತನಾಡಿದ ಅವರು, ನ್ಯಾಯಾಂಗ ನಿಂದನೆ ಕಾನೂನಿನ ಅಧಿಕಾರದ ವ್ಯಾಪ್ತಿಯು ಅತ್ಯಂತ ಅಪಾಯಕಾರಿಯಾಗಿದ್ದು ಅದನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

“ಪ್ರಜಾಪ್ರಭುತ್ವದಲ್ಲಿರುವ ಪ್ರತಿಯೊಬ್ಬ ನಾಗರಿಕರು, ನ್ಯಾಯಾಂಗ ವ್ಯವಸ್ಥೆ ಮತ್ತು ಸುಪ್ರೀಂ ಕೋರ್ಟ್‌ನ ಕೆಲಸಗಳ ಬಗ್ಗೆ ಮುಕ್ತವಾಗಿ ಮಾತನಾಡುವುದು ಅಗತ್ಯ. ಆದರೆ ದುರದೃಷ್ಟವಶಾತ್ ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ನಮ್ಮ ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರದ ಪ್ರಭಾವ ಹೆಚ್ಚುತ್ತಿದೆ

“ಇದು ಬಹಳ ಅಪಾಯಕಾರಿ ನ್ಯಾಯವ್ಯಾಪ್ತಿಯಾಗಿದ್ದು, ಇದರಲ್ಲಿ ನ್ಯಾಯಾಧೀಶರು ತಮ್ಮದೇ ಆದ ಹಿತಾಸಕ್ತಿಯಿಂದ ವರ್ತಿಸುತ್ತಾರೆ. ಅದಕ್ಕಾಗಿಯೇ ಹಲವು ದೇಶಗಳಲ್ಲಿ ಈ ಕಾನೂನನ್ನು ರದ್ದುಪಡಿಸಲಾಗಿದೆ. ಭಾರತದಂತಹ ಕೆಲವು ದೇಶಗಳಲ್ಲಿ ಮಾತ್ರ ಮುಂದುವರಿಸಲಾಗಿದೆ” ಎಂದು ಅವರು ಅಭಿಪ್ರಾಯಪಟ್ಟರು.

ಖ್ಯಾತ ಲೇಖಕಿ ಅರುಂಧತಿ ರಾಯ್ ಕೂಡ ಈ ಸಂದರ್ಭದಲ್ಲಿ ಮಾತನಾಡುತ್ತಾ, ವಾಕ್‌ ಸ್ವಾತಂತ್ಯ್ರದ ಹಕ್ಕು ಪ್ರಜಾಪ್ರಭುತ್ವದ ಅತ್ಯಂತ ಮೂಲಭೂತ ಅಂಶ ಎಂದು ಹೇಳಿದರು.

ನ್ಯಾಯಾಂಗವು ನ್ಯಾಯಾಂಗ ನಿಂದನೆ ಕಾನೂನನ್ನು ರದ್ದುಗೊಳಿಸುತ್ತದೆ ಎಂದು ನಿರೀಕ್ಷಿಸಲಾಗುವುದಿಲ್ಲ. ನಾಗರಿಕರು ಜವಾಬ್ದಾರಿಯುತವಾಗಿ ಮಾತನಾಡುವ ಮೂಲಕ ಅದನ್ನು ಅನಗತ್ಯವಾಗಿಸಲು ಪ್ರಯತ್ನಿಸಬೇಕಾಗುತ್ತದೆ ಎಂದು ರಾಯ್ ಹೇಳಿದರು.


ಇದನ್ನೂ ಓದಿ: ಪ್ಲೇಗ್ ವೇಳೆ ವೇಶ್ಯೆಯರು & ಯಹೂದಿಗಳನ್ನು ಬಲಿಪಶು ಮಾಡಲಾಗಿತ್ತು! ಕೊರೋನ ವೇಳೆಯಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...