Homeಮುಖಪುಟಕಾನೂನಿನ ದುರುಪಯೋಗ: ಸ್ಕ್ರೋಲ್.ಇನ್ ಸಂಪಾದಕರ ಮೇಲಿನ FIR ರದ್ಧತಿಗೆ ಅರ್ಜಿ

ಕಾನೂನಿನ ದುರುಪಯೋಗ: ಸ್ಕ್ರೋಲ್.ಇನ್ ಸಂಪಾದಕರ ಮೇಲಿನ FIR ರದ್ಧತಿಗೆ ಅರ್ಜಿ

ಈ ಎಫ್ಐಆರ್ ನೋಂದಣಿ ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಸಮನಾಗಿರುತ್ತದೆ. ಇದು ಸ್ವತಂತ್ರ ಪತ್ರಿಕೋದ್ಯಮವನ್ನು ಬೆದರಿಸುವ, ಮೌನಗೊಳಿಸುವ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ.

- Advertisement -
- Advertisement -

ಖ್ಯಾತ ಸುದ್ದಿ ಪೋರ್ಟಲ್ ಸ್ಕ್ರೋಲ್.ಇನ್ ಸಂಪಾದಕರಾದ ಸುಪ್ರಿಯಾ ಶರ್ಮಾ ಮತ್ತು ನರೇಶ್ ಫರ್ನಾಂಡಿಸ್ ಅವರು ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಾರಣಾಸಿ ಕ್ಷೇತ್ರದಲ್ಲಿ ದತ್ತು ಪಡೆದ ಡೊಮರಿ ಗ್ರಾಮದಲ್ಲಿನ ಜನರ ಕಳಪೆ ಜೀವನ ಪರಿಸ್ಥಿತಿಗಳನ್ನು ಚಿತ್ರಿಸುವ ಸುದ್ದಿ ವರದಿಯನ್ನು ದಿ ಸ್ಕ್ರೋಲ್ ಮಾಡಿತ್ತು. ಅದಕ್ಕಾಗಿ ಅದರ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.

“ತಮ್ಮ ವಿರುದ್ಧದ ಎಫ್ಐಆರ್ ಸಂಪೂರ್ಣವಾಗಿ ಸುಳ್ಳು, ದ್ವೇಷ ಪ್ರೇರಿತ, ದುರುದ್ದೇಶಪೂರಿತ ಮತ್ತು ಆಧಾರರಹಿತವಾಗಿದೆ. ಇದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ. ಇದು ಸ್ವತಂತ್ರ ಪತ್ರಕರ್ತರನ್ನು ಬೆದರಿಸುವ ಮತ್ತು ಕಿರುಕುಳ ನೀಡುವುದಾಗಿದೆ. ದುರ್ಬಲ ಜನರ ಜೀವನದ ಬಗ್ಗೆ ಸತ್ಯ ಮತ್ತು ಕಠೋರ ವಾಸ್ತವತೆಯನ್ನು ತಿಳಿಸುವ ವಿಮರ್ಶಾತ್ಮಕ ವರದಿ ಮಾಡುವ ಪತ್ರಿಕಾ ಸ್ವಾತಂತ್ರ್ಯವನ್ನು ತಡೆಯುವುದಕ್ಕಾಗಿ ಈ ದೂರು ನೀಡಲಾಗಿದೆ ಎಂದು ಅರ್ಜಿಯಲ್ಲಿ ಅವರು ಪ್ರತಿಪಾದಿಸಿದ್ದಾರೆ.

ತನ್ನ ವರದಿಯಲ್ಲಿ ಶರ್ಮಾ ಉಲ್ಲೇಖಿಸಿರುವ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಯುಪಿ ಪೊಲೀಸರು ವಾರಣಾಸಿ ಜಿಲ್ಲೆಯ ರಾಮನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 269, 501 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ದೂರು ನೀಡಿದ ಮಹಿಳೆಯು ವರದಿಯಲ್ಲಿ ತಮ್ಮ ಸಮುದಾಯವನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ಈ ಎಫ್ಐಆರ್ ನೋಂದಣಿ ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಸಮನಾಗಿರುತ್ತದೆ. ಇದು ಸ್ವತಂತ್ರ ಪತ್ರಿಕೋದ್ಯಮವನ್ನು ಬೆದರಿಸುವ, ಮೌನಗೊಳಿಸುವ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ. ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮವು ನ್ಯಾಯದ ಗಂಭೀರ ಅವಸಾನಕ್ಕೆ ಕಾರಣವಾಗುತ್ತದೆ ”ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ನೈಜ ಪತ್ರಿಕೋದ್ಯಮ ಅಭ್ಯಾಸದ ಭಾಗವಾಗಿ ಮಹಿಳೆಯೊಂದಿಗೆ ಸಂದರ್ಶನದ ರೆಕಾರ್ಡ್ ಮಾಡಿದ ಆಡಿಯೊವನ್ನು ಶರ್ಮಾ ಹೊಂದಿದ್ದಾರೆ, ಅವರು ಹೇಳಿದ್ದನ್ನು ಆಧರಿಸಿಯೇ ವರದಿ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಎಸ್‌ಸಿ / ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ನಿರಾಕರಿಸಿದ ಅರ್ಜಿದಾರರು ಸಮುದಾಯಕ್ಕೆ ಯಾವುದೇ ಉದ್ದೇಶಪೂರ್ವಕ ಅವಮಾನ ಅಥವಾ ನೋವುಂಟು ಮಾಡಿಲ್ಲ ಎಂದು ಹೇಳಿದ್ದಾರೆ.

ತಮ್ಮ ವಿರುದ್ಧ ಯಾವುದೇ ಪ್ರಥಮ ಪ್ರಕರಣವನ್ನು ದಾಖಲಿಸಲಾಗಿಲ್ಲ ಎಂದು ತಿಳಿಸಿ, ಅವರು ತಮ್ಮ ಬಂಧನವನ್ನು ತಡೆಹಿಡಿಯಲು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.


ತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...