Homeಮುಖಪುಟಕಾನೂನಿನ ದುರುಪಯೋಗ: ಸ್ಕ್ರೋಲ್.ಇನ್ ಸಂಪಾದಕರ ಮೇಲಿನ FIR ರದ್ಧತಿಗೆ ಅರ್ಜಿ

ಕಾನೂನಿನ ದುರುಪಯೋಗ: ಸ್ಕ್ರೋಲ್.ಇನ್ ಸಂಪಾದಕರ ಮೇಲಿನ FIR ರದ್ಧತಿಗೆ ಅರ್ಜಿ

ಈ ಎಫ್ಐಆರ್ ನೋಂದಣಿ ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಸಮನಾಗಿರುತ್ತದೆ. ಇದು ಸ್ವತಂತ್ರ ಪತ್ರಿಕೋದ್ಯಮವನ್ನು ಬೆದರಿಸುವ, ಮೌನಗೊಳಿಸುವ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ.

- Advertisement -
- Advertisement -

ಖ್ಯಾತ ಸುದ್ದಿ ಪೋರ್ಟಲ್ ಸ್ಕ್ರೋಲ್.ಇನ್ ಸಂಪಾದಕರಾದ ಸುಪ್ರಿಯಾ ಶರ್ಮಾ ಮತ್ತು ನರೇಶ್ ಫರ್ನಾಂಡಿಸ್ ಅವರು ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಾರಣಾಸಿ ಕ್ಷೇತ್ರದಲ್ಲಿ ದತ್ತು ಪಡೆದ ಡೊಮರಿ ಗ್ರಾಮದಲ್ಲಿನ ಜನರ ಕಳಪೆ ಜೀವನ ಪರಿಸ್ಥಿತಿಗಳನ್ನು ಚಿತ್ರಿಸುವ ಸುದ್ದಿ ವರದಿಯನ್ನು ದಿ ಸ್ಕ್ರೋಲ್ ಮಾಡಿತ್ತು. ಅದಕ್ಕಾಗಿ ಅದರ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.

“ತಮ್ಮ ವಿರುದ್ಧದ ಎಫ್ಐಆರ್ ಸಂಪೂರ್ಣವಾಗಿ ಸುಳ್ಳು, ದ್ವೇಷ ಪ್ರೇರಿತ, ದುರುದ್ದೇಶಪೂರಿತ ಮತ್ತು ಆಧಾರರಹಿತವಾಗಿದೆ. ಇದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ. ಇದು ಸ್ವತಂತ್ರ ಪತ್ರಕರ್ತರನ್ನು ಬೆದರಿಸುವ ಮತ್ತು ಕಿರುಕುಳ ನೀಡುವುದಾಗಿದೆ. ದುರ್ಬಲ ಜನರ ಜೀವನದ ಬಗ್ಗೆ ಸತ್ಯ ಮತ್ತು ಕಠೋರ ವಾಸ್ತವತೆಯನ್ನು ತಿಳಿಸುವ ವಿಮರ್ಶಾತ್ಮಕ ವರದಿ ಮಾಡುವ ಪತ್ರಿಕಾ ಸ್ವಾತಂತ್ರ್ಯವನ್ನು ತಡೆಯುವುದಕ್ಕಾಗಿ ಈ ದೂರು ನೀಡಲಾಗಿದೆ ಎಂದು ಅರ್ಜಿಯಲ್ಲಿ ಅವರು ಪ್ರತಿಪಾದಿಸಿದ್ದಾರೆ.

ತನ್ನ ವರದಿಯಲ್ಲಿ ಶರ್ಮಾ ಉಲ್ಲೇಖಿಸಿರುವ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಯುಪಿ ಪೊಲೀಸರು ವಾರಣಾಸಿ ಜಿಲ್ಲೆಯ ರಾಮನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 269, 501 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ದೂರು ನೀಡಿದ ಮಹಿಳೆಯು ವರದಿಯಲ್ಲಿ ತಮ್ಮ ಸಮುದಾಯವನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ಈ ಎಫ್ಐಆರ್ ನೋಂದಣಿ ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಸಮನಾಗಿರುತ್ತದೆ. ಇದು ಸ್ವತಂತ್ರ ಪತ್ರಿಕೋದ್ಯಮವನ್ನು ಬೆದರಿಸುವ, ಮೌನಗೊಳಿಸುವ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ. ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮವು ನ್ಯಾಯದ ಗಂಭೀರ ಅವಸಾನಕ್ಕೆ ಕಾರಣವಾಗುತ್ತದೆ ”ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ನೈಜ ಪತ್ರಿಕೋದ್ಯಮ ಅಭ್ಯಾಸದ ಭಾಗವಾಗಿ ಮಹಿಳೆಯೊಂದಿಗೆ ಸಂದರ್ಶನದ ರೆಕಾರ್ಡ್ ಮಾಡಿದ ಆಡಿಯೊವನ್ನು ಶರ್ಮಾ ಹೊಂದಿದ್ದಾರೆ, ಅವರು ಹೇಳಿದ್ದನ್ನು ಆಧರಿಸಿಯೇ ವರದಿ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಎಸ್‌ಸಿ / ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ನಿರಾಕರಿಸಿದ ಅರ್ಜಿದಾರರು ಸಮುದಾಯಕ್ಕೆ ಯಾವುದೇ ಉದ್ದೇಶಪೂರ್ವಕ ಅವಮಾನ ಅಥವಾ ನೋವುಂಟು ಮಾಡಿಲ್ಲ ಎಂದು ಹೇಳಿದ್ದಾರೆ.

ತಮ್ಮ ವಿರುದ್ಧ ಯಾವುದೇ ಪ್ರಥಮ ಪ್ರಕರಣವನ್ನು ದಾಖಲಿಸಲಾಗಿಲ್ಲ ಎಂದು ತಿಳಿಸಿ, ಅವರು ತಮ್ಮ ಬಂಧನವನ್ನು ತಡೆಹಿಡಿಯಲು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.


ತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...