Homeಮುಖಪುಟಕಾನೂನಿನ ದುರುಪಯೋಗ: ಸ್ಕ್ರೋಲ್.ಇನ್ ಸಂಪಾದಕರ ಮೇಲಿನ FIR ರದ್ಧತಿಗೆ ಅರ್ಜಿ

ಕಾನೂನಿನ ದುರುಪಯೋಗ: ಸ್ಕ್ರೋಲ್.ಇನ್ ಸಂಪಾದಕರ ಮೇಲಿನ FIR ರದ್ಧತಿಗೆ ಅರ್ಜಿ

ಈ ಎಫ್ಐಆರ್ ನೋಂದಣಿ ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಸಮನಾಗಿರುತ್ತದೆ. ಇದು ಸ್ವತಂತ್ರ ಪತ್ರಿಕೋದ್ಯಮವನ್ನು ಬೆದರಿಸುವ, ಮೌನಗೊಳಿಸುವ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ.

- Advertisement -
- Advertisement -

ಖ್ಯಾತ ಸುದ್ದಿ ಪೋರ್ಟಲ್ ಸ್ಕ್ರೋಲ್.ಇನ್ ಸಂಪಾದಕರಾದ ಸುಪ್ರಿಯಾ ಶರ್ಮಾ ಮತ್ತು ನರೇಶ್ ಫರ್ನಾಂಡಿಸ್ ಅವರು ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಾರಣಾಸಿ ಕ್ಷೇತ್ರದಲ್ಲಿ ದತ್ತು ಪಡೆದ ಡೊಮರಿ ಗ್ರಾಮದಲ್ಲಿನ ಜನರ ಕಳಪೆ ಜೀವನ ಪರಿಸ್ಥಿತಿಗಳನ್ನು ಚಿತ್ರಿಸುವ ಸುದ್ದಿ ವರದಿಯನ್ನು ದಿ ಸ್ಕ್ರೋಲ್ ಮಾಡಿತ್ತು. ಅದಕ್ಕಾಗಿ ಅದರ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.

“ತಮ್ಮ ವಿರುದ್ಧದ ಎಫ್ಐಆರ್ ಸಂಪೂರ್ಣವಾಗಿ ಸುಳ್ಳು, ದ್ವೇಷ ಪ್ರೇರಿತ, ದುರುದ್ದೇಶಪೂರಿತ ಮತ್ತು ಆಧಾರರಹಿತವಾಗಿದೆ. ಇದು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ. ಇದು ಸ್ವತಂತ್ರ ಪತ್ರಕರ್ತರನ್ನು ಬೆದರಿಸುವ ಮತ್ತು ಕಿರುಕುಳ ನೀಡುವುದಾಗಿದೆ. ದುರ್ಬಲ ಜನರ ಜೀವನದ ಬಗ್ಗೆ ಸತ್ಯ ಮತ್ತು ಕಠೋರ ವಾಸ್ತವತೆಯನ್ನು ತಿಳಿಸುವ ವಿಮರ್ಶಾತ್ಮಕ ವರದಿ ಮಾಡುವ ಪತ್ರಿಕಾ ಸ್ವಾತಂತ್ರ್ಯವನ್ನು ತಡೆಯುವುದಕ್ಕಾಗಿ ಈ ದೂರು ನೀಡಲಾಗಿದೆ ಎಂದು ಅರ್ಜಿಯಲ್ಲಿ ಅವರು ಪ್ರತಿಪಾದಿಸಿದ್ದಾರೆ.

ತನ್ನ ವರದಿಯಲ್ಲಿ ಶರ್ಮಾ ಉಲ್ಲೇಖಿಸಿರುವ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಯುಪಿ ಪೊಲೀಸರು ವಾರಣಾಸಿ ಜಿಲ್ಲೆಯ ರಾಮನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 269, 501 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ದೂರು ನೀಡಿದ ಮಹಿಳೆಯು ವರದಿಯಲ್ಲಿ ತಮ್ಮ ಸಮುದಾಯವನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ಈ ಎಫ್ಐಆರ್ ನೋಂದಣಿ ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಸಮನಾಗಿರುತ್ತದೆ. ಇದು ಸ್ವತಂತ್ರ ಪತ್ರಿಕೋದ್ಯಮವನ್ನು ಬೆದರಿಸುವ, ಮೌನಗೊಳಿಸುವ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ. ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮವು ನ್ಯಾಯದ ಗಂಭೀರ ಅವಸಾನಕ್ಕೆ ಕಾರಣವಾಗುತ್ತದೆ ”ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ನೈಜ ಪತ್ರಿಕೋದ್ಯಮ ಅಭ್ಯಾಸದ ಭಾಗವಾಗಿ ಮಹಿಳೆಯೊಂದಿಗೆ ಸಂದರ್ಶನದ ರೆಕಾರ್ಡ್ ಮಾಡಿದ ಆಡಿಯೊವನ್ನು ಶರ್ಮಾ ಹೊಂದಿದ್ದಾರೆ, ಅವರು ಹೇಳಿದ್ದನ್ನು ಆಧರಿಸಿಯೇ ವರದಿ ಮಾಡಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಎಸ್‌ಸಿ / ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ನಿರಾಕರಿಸಿದ ಅರ್ಜಿದಾರರು ಸಮುದಾಯಕ್ಕೆ ಯಾವುದೇ ಉದ್ದೇಶಪೂರ್ವಕ ಅವಮಾನ ಅಥವಾ ನೋವುಂಟು ಮಾಡಿಲ್ಲ ಎಂದು ಹೇಳಿದ್ದಾರೆ.

ತಮ್ಮ ವಿರುದ್ಧ ಯಾವುದೇ ಪ್ರಥಮ ಪ್ರಕರಣವನ್ನು ದಾಖಲಿಸಲಾಗಿಲ್ಲ ಎಂದು ತಿಳಿಸಿ, ಅವರು ತಮ್ಮ ಬಂಧನವನ್ನು ತಡೆಹಿಡಿಯಲು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.


ತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...