Homeಕರ್ನಾಟಕಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ...

ಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ದೇವದುರ್ಗ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರೆಮ್ಮ ಜಿ ನಾಯಕ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರ ಸಹೋದರ ಸೇರಿ ಎಂಟು ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ.

ದೇವದುರ್ಗ ತಾಲೂಕಿನ ಆಲದಮರ ತಾಂಡಾದಲ್ಲಿ ಭಾನುವಾರ ಲೈನ್‌ಮನ್ ವಿರೂಪಾಕ್ಷ ಮೃತಪಟ್ಟ ಸ್ಥಳಕ್ಕೆ ಶಾಸಕಿ ಕರೆಮ್ಮ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿಯ ಮುಖಂಡರು ಶಾಸಕಿಯನ್ನು ಅಶ್ಲೀಲ ಪದಗಳಿಂದ ನಿಂದಿಸಿದ್ದರು.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

ಪೊಲೀಸರ ವೈಫಲ್ಯದಿಂದ ಇಂತಹ ಘಟನೆ ನಡೆಯುತ್ತಿವೆ. ಶಾಸಕಿ ಕರೆಮ್ಮ ಅವರಿಗೆ ರಕ್ಷಣೆ ಇಲ್ಲ. ಇನ್‌ಸ್ಪೆಕ್ಟರ್‌ ಹೊಸಕೆರಪ್ಪ ತಾಲೂಕಿನಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಇನ್‌ಸ್ಪೆಕ್ಟರ್‌ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜೆಡಿಎಸ್‌ ಮುಖಂಡ ಬಸವರಾಜ ನಾಯಕ ಕೊತ್ತದೊಡ್ಡಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿರ್ದೇಶನ ನೀಡಿದ ನಂತರ ಇನ್‌ಸ್ಪೆಕ್ಟರ್‌ ಹೊಸಕೇರಪ್ಪ ಅವರು ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ಸಹೋದರ ಭಗವಂತ್ರಾಯ ನಾಯಕ ಸೇರಿದಂತೆ ಎಂಟು ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳನ್ನು 24 ಗಂಟೆಯ ಒಳಗೆ ಬಂಧಿಸದಿದ್ದರೆ ಠಾಣೆಗೆ ಮತ್ತೆ ಮುತ್ತಿಗೆ ಹಾಕಲಾಗುವುದು ಎಂದು ಜೆಡಿಎಸ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಹೋರಾಟದ ಹಿನ್ನೆಲೆಯವರಾದ ಕರೆಮ್ಮ, ಪ್ರಭಾವಿ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕರನ್ನು ಸೋಲಿಸಿ ಗಮನ ಸೆಳೆದಿದ್ದಾರೆ. 2005ರಲ್ಲಿ ಗ್ರಾಮ ಪಂಚಾಯತಿ ಚುನಾವಣೆಯ ಮೂಲಕ ರಾಜಕೀಯ ಪ್ರವೇಶ ಮಾಡಿ ಹೋರಾಟದ ಮೂಲಕ ಗುರುತಿಸಿಕೊಂಡಿರುವ ಕರೆಮ್ಮ ಈಗ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.

ಇದನ್ನೂ ಓದಿರಿ: ಜನ ಮೆಚ್ಚಿದ ನಾಯಕಿ, ಹೋರಾಟಗಾರ್ತಿ ಕರೆಮ್ಮ ಜಿ.ನಾಯಕ

2018ರ ವಿಧಾನಸಭೆ ಚುನಾವಣೆಗೆ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾದರು. ಕ್ಷೇತ್ರದಲ್ಲಿ ಇದನ್ನು ಗಮನಿಸಿದ ಬಿಜೆಪಿಯ ಕೆ.ಶಿವನಗೌಡ ನಾಯಕ ಅವರು ಹಣಬಲವನ್ನು ಬಳಸಿ ಟಿಕೆಟನ್ನು ಕರೆಮ್ಮ ಅವರಿಗೆ ತಪ್ಪಿಸಿ, ತಮ್ಮ ಸಂಬಂಧಿಕರಾದ ವೆಂಕಟೇಶ್ ಪೂಜಾರಿ ಎನ್ನುವ ವ್ಯಕ್ತಿಗೆ ಕೊಡಿಸಿದ್ದರು. ಅ ನಂತರ ಟಿಕೆಟ್‌ ವಂಚಿತರಾದ ಕರೆಮ್ಮ ಜನಾಭಿಪ್ರಾಯವನ್ನು ಪಡೆದು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು 26,000 ಮತಗಳನ್ನು ಪಡೆಯುವ ಮೂಲಕ ಮೂರನೆಯ ಸ್ಥಾನಕ್ಕಿಳಿದು ಸೋಲು ಕಂಡಿದ್ದರು.

ಸೋತರೂ ಧೃತಿಗೆಡದ ಗಟ್ಟಿಗಿತ್ತಿ ದಿಟ್ಟ ಮಹಿಳೆಯಾದ ಹಳ್ಳಿಗಾಡಿನ ಕರೆಮ್ಮ, ಮತ್ತೆ ಜನರ ಬಳಿಗೆ ಹೋಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತ ಸಣ್ಣಪುಟ್ಟ ಕೆಲಸಗಳಿಗೆ ಬೆನ್ನುಲುಬಾಗಿ ನಿಂತು ಕಳೆದ ಐದು ವರ್ಷ ಕ್ಷೇತ್ರದಲ್ಲಿ ವಿರೋಧ ಪಕ್ಷದ ರೀತಿಯಲ್ಲಿ ಹಾಲಿ ಶಾಸಕರ ವಿರುದ್ಧ ದನಿ ಎತ್ತುವ ಮೂಲಕ ಅಪಾರ ಜನರ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ಗಳಿಸಿಕೊಂಡು ಜನರ ಮನಸ್ಸನ್ನು ಗೆದ್ದರು.

ಸಾಮಾನ್ಯ ಬಡ ಕುಟುಂಬದಲ್ಲಿ ಜನಿಸಿ ಶಾಸಕರಾಗಿದ್ದು ಯಾರದ್ದೋ ಬೆಂಬಲದಿಂದಲ್ಲ, ಸತತ 8 ವರ್ಷಗಳಿಂದ ಕ್ಷೇತ್ರದ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದರ ಪರಿಣಾಮ. 200 ಹಳ್ಳಿಗಳ ಜನ ಊರಿನ ಮಗಳೆಂದು ಹಾರೈಸಿ, ಸನ್ಮಾನಿಸಿ, ಉಡಿ ತುಂಬಿ ಹಾರೈಸಿದ್ದು, ಜೊತೆಗೆ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಜನರ ಸಮಸ್ಯೆಗಳನ್ನ ಆಲಿಸಿದ್ದು ಗೆಲುವಿಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...