Homeಕರ್ನಾಟಕಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ...

ಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ದೇವದುರ್ಗ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರೆಮ್ಮ ಜಿ ನಾಯಕ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರ ಸಹೋದರ ಸೇರಿ ಎಂಟು ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ.

ದೇವದುರ್ಗ ತಾಲೂಕಿನ ಆಲದಮರ ತಾಂಡಾದಲ್ಲಿ ಭಾನುವಾರ ಲೈನ್‌ಮನ್ ವಿರೂಪಾಕ್ಷ ಮೃತಪಟ್ಟ ಸ್ಥಳಕ್ಕೆ ಶಾಸಕಿ ಕರೆಮ್ಮ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿಯ ಮುಖಂಡರು ಶಾಸಕಿಯನ್ನು ಅಶ್ಲೀಲ ಪದಗಳಿಂದ ನಿಂದಿಸಿದ್ದರು.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

ಪೊಲೀಸರ ವೈಫಲ್ಯದಿಂದ ಇಂತಹ ಘಟನೆ ನಡೆಯುತ್ತಿವೆ. ಶಾಸಕಿ ಕರೆಮ್ಮ ಅವರಿಗೆ ರಕ್ಷಣೆ ಇಲ್ಲ. ಇನ್‌ಸ್ಪೆಕ್ಟರ್‌ ಹೊಸಕೆರಪ್ಪ ತಾಲೂಕಿನಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಇನ್‌ಸ್ಪೆಕ್ಟರ್‌ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜೆಡಿಎಸ್‌ ಮುಖಂಡ ಬಸವರಾಜ ನಾಯಕ ಕೊತ್ತದೊಡ್ಡಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿರ್ದೇಶನ ನೀಡಿದ ನಂತರ ಇನ್‌ಸ್ಪೆಕ್ಟರ್‌ ಹೊಸಕೇರಪ್ಪ ಅವರು ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ಸಹೋದರ ಭಗವಂತ್ರಾಯ ನಾಯಕ ಸೇರಿದಂತೆ ಎಂಟು ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳನ್ನು 24 ಗಂಟೆಯ ಒಳಗೆ ಬಂಧಿಸದಿದ್ದರೆ ಠಾಣೆಗೆ ಮತ್ತೆ ಮುತ್ತಿಗೆ ಹಾಕಲಾಗುವುದು ಎಂದು ಜೆಡಿಎಸ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಹೋರಾಟದ ಹಿನ್ನೆಲೆಯವರಾದ ಕರೆಮ್ಮ, ಪ್ರಭಾವಿ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕರನ್ನು ಸೋಲಿಸಿ ಗಮನ ಸೆಳೆದಿದ್ದಾರೆ. 2005ರಲ್ಲಿ ಗ್ರಾಮ ಪಂಚಾಯತಿ ಚುನಾವಣೆಯ ಮೂಲಕ ರಾಜಕೀಯ ಪ್ರವೇಶ ಮಾಡಿ ಹೋರಾಟದ ಮೂಲಕ ಗುರುತಿಸಿಕೊಂಡಿರುವ ಕರೆಮ್ಮ ಈಗ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.

ಇದನ್ನೂ ಓದಿರಿ: ಜನ ಮೆಚ್ಚಿದ ನಾಯಕಿ, ಹೋರಾಟಗಾರ್ತಿ ಕರೆಮ್ಮ ಜಿ.ನಾಯಕ

2018ರ ವಿಧಾನಸಭೆ ಚುನಾವಣೆಗೆ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾದರು. ಕ್ಷೇತ್ರದಲ್ಲಿ ಇದನ್ನು ಗಮನಿಸಿದ ಬಿಜೆಪಿಯ ಕೆ.ಶಿವನಗೌಡ ನಾಯಕ ಅವರು ಹಣಬಲವನ್ನು ಬಳಸಿ ಟಿಕೆಟನ್ನು ಕರೆಮ್ಮ ಅವರಿಗೆ ತಪ್ಪಿಸಿ, ತಮ್ಮ ಸಂಬಂಧಿಕರಾದ ವೆಂಕಟೇಶ್ ಪೂಜಾರಿ ಎನ್ನುವ ವ್ಯಕ್ತಿಗೆ ಕೊಡಿಸಿದ್ದರು. ಅ ನಂತರ ಟಿಕೆಟ್‌ ವಂಚಿತರಾದ ಕರೆಮ್ಮ ಜನಾಭಿಪ್ರಾಯವನ್ನು ಪಡೆದು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು 26,000 ಮತಗಳನ್ನು ಪಡೆಯುವ ಮೂಲಕ ಮೂರನೆಯ ಸ್ಥಾನಕ್ಕಿಳಿದು ಸೋಲು ಕಂಡಿದ್ದರು.

ಸೋತರೂ ಧೃತಿಗೆಡದ ಗಟ್ಟಿಗಿತ್ತಿ ದಿಟ್ಟ ಮಹಿಳೆಯಾದ ಹಳ್ಳಿಗಾಡಿನ ಕರೆಮ್ಮ, ಮತ್ತೆ ಜನರ ಬಳಿಗೆ ಹೋಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತ ಸಣ್ಣಪುಟ್ಟ ಕೆಲಸಗಳಿಗೆ ಬೆನ್ನುಲುಬಾಗಿ ನಿಂತು ಕಳೆದ ಐದು ವರ್ಷ ಕ್ಷೇತ್ರದಲ್ಲಿ ವಿರೋಧ ಪಕ್ಷದ ರೀತಿಯಲ್ಲಿ ಹಾಲಿ ಶಾಸಕರ ವಿರುದ್ಧ ದನಿ ಎತ್ತುವ ಮೂಲಕ ಅಪಾರ ಜನರ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ಗಳಿಸಿಕೊಂಡು ಜನರ ಮನಸ್ಸನ್ನು ಗೆದ್ದರು.

ಸಾಮಾನ್ಯ ಬಡ ಕುಟುಂಬದಲ್ಲಿ ಜನಿಸಿ ಶಾಸಕರಾಗಿದ್ದು ಯಾರದ್ದೋ ಬೆಂಬಲದಿಂದಲ್ಲ, ಸತತ 8 ವರ್ಷಗಳಿಂದ ಕ್ಷೇತ್ರದ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದರ ಪರಿಣಾಮ. 200 ಹಳ್ಳಿಗಳ ಜನ ಊರಿನ ಮಗಳೆಂದು ಹಾರೈಸಿ, ಸನ್ಮಾನಿಸಿ, ಉಡಿ ತುಂಬಿ ಹಾರೈಸಿದ್ದು, ಜೊತೆಗೆ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಜನರ ಸಮಸ್ಯೆಗಳನ್ನ ಆಲಿಸಿದ್ದು ಗೆಲುವಿಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...