Homeಕರ್ನಾಟಕಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ...

ಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ದೇವದುರ್ಗ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರೆಮ್ಮ ಜಿ ನಾಯಕ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರ ಸಹೋದರ ಸೇರಿ ಎಂಟು ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ.

ದೇವದುರ್ಗ ತಾಲೂಕಿನ ಆಲದಮರ ತಾಂಡಾದಲ್ಲಿ ಭಾನುವಾರ ಲೈನ್‌ಮನ್ ವಿರೂಪಾಕ್ಷ ಮೃತಪಟ್ಟ ಸ್ಥಳಕ್ಕೆ ಶಾಸಕಿ ಕರೆಮ್ಮ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿಯ ಮುಖಂಡರು ಶಾಸಕಿಯನ್ನು ಅಶ್ಲೀಲ ಪದಗಳಿಂದ ನಿಂದಿಸಿದ್ದರು.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

ಪೊಲೀಸರ ವೈಫಲ್ಯದಿಂದ ಇಂತಹ ಘಟನೆ ನಡೆಯುತ್ತಿವೆ. ಶಾಸಕಿ ಕರೆಮ್ಮ ಅವರಿಗೆ ರಕ್ಷಣೆ ಇಲ್ಲ. ಇನ್‌ಸ್ಪೆಕ್ಟರ್‌ ಹೊಸಕೆರಪ್ಪ ತಾಲೂಕಿನಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಇನ್‌ಸ್ಪೆಕ್ಟರ್‌ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜೆಡಿಎಸ್‌ ಮುಖಂಡ ಬಸವರಾಜ ನಾಯಕ ಕೊತ್ತದೊಡ್ಡಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿರ್ದೇಶನ ನೀಡಿದ ನಂತರ ಇನ್‌ಸ್ಪೆಕ್ಟರ್‌ ಹೊಸಕೇರಪ್ಪ ಅವರು ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ಸಹೋದರ ಭಗವಂತ್ರಾಯ ನಾಯಕ ಸೇರಿದಂತೆ ಎಂಟು ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳನ್ನು 24 ಗಂಟೆಯ ಒಳಗೆ ಬಂಧಿಸದಿದ್ದರೆ ಠಾಣೆಗೆ ಮತ್ತೆ ಮುತ್ತಿಗೆ ಹಾಕಲಾಗುವುದು ಎಂದು ಜೆಡಿಎಸ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಹೋರಾಟದ ಹಿನ್ನೆಲೆಯವರಾದ ಕರೆಮ್ಮ, ಪ್ರಭಾವಿ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕರನ್ನು ಸೋಲಿಸಿ ಗಮನ ಸೆಳೆದಿದ್ದಾರೆ. 2005ರಲ್ಲಿ ಗ್ರಾಮ ಪಂಚಾಯತಿ ಚುನಾವಣೆಯ ಮೂಲಕ ರಾಜಕೀಯ ಪ್ರವೇಶ ಮಾಡಿ ಹೋರಾಟದ ಮೂಲಕ ಗುರುತಿಸಿಕೊಂಡಿರುವ ಕರೆಮ್ಮ ಈಗ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.

ಇದನ್ನೂ ಓದಿರಿ: ಜನ ಮೆಚ್ಚಿದ ನಾಯಕಿ, ಹೋರಾಟಗಾರ್ತಿ ಕರೆಮ್ಮ ಜಿ.ನಾಯಕ

2018ರ ವಿಧಾನಸಭೆ ಚುನಾವಣೆಗೆ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾದರು. ಕ್ಷೇತ್ರದಲ್ಲಿ ಇದನ್ನು ಗಮನಿಸಿದ ಬಿಜೆಪಿಯ ಕೆ.ಶಿವನಗೌಡ ನಾಯಕ ಅವರು ಹಣಬಲವನ್ನು ಬಳಸಿ ಟಿಕೆಟನ್ನು ಕರೆಮ್ಮ ಅವರಿಗೆ ತಪ್ಪಿಸಿ, ತಮ್ಮ ಸಂಬಂಧಿಕರಾದ ವೆಂಕಟೇಶ್ ಪೂಜಾರಿ ಎನ್ನುವ ವ್ಯಕ್ತಿಗೆ ಕೊಡಿಸಿದ್ದರು. ಅ ನಂತರ ಟಿಕೆಟ್‌ ವಂಚಿತರಾದ ಕರೆಮ್ಮ ಜನಾಭಿಪ್ರಾಯವನ್ನು ಪಡೆದು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು 26,000 ಮತಗಳನ್ನು ಪಡೆಯುವ ಮೂಲಕ ಮೂರನೆಯ ಸ್ಥಾನಕ್ಕಿಳಿದು ಸೋಲು ಕಂಡಿದ್ದರು.

ಸೋತರೂ ಧೃತಿಗೆಡದ ಗಟ್ಟಿಗಿತ್ತಿ ದಿಟ್ಟ ಮಹಿಳೆಯಾದ ಹಳ್ಳಿಗಾಡಿನ ಕರೆಮ್ಮ, ಮತ್ತೆ ಜನರ ಬಳಿಗೆ ಹೋಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತ ಸಣ್ಣಪುಟ್ಟ ಕೆಲಸಗಳಿಗೆ ಬೆನ್ನುಲುಬಾಗಿ ನಿಂತು ಕಳೆದ ಐದು ವರ್ಷ ಕ್ಷೇತ್ರದಲ್ಲಿ ವಿರೋಧ ಪಕ್ಷದ ರೀತಿಯಲ್ಲಿ ಹಾಲಿ ಶಾಸಕರ ವಿರುದ್ಧ ದನಿ ಎತ್ತುವ ಮೂಲಕ ಅಪಾರ ಜನರ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ಗಳಿಸಿಕೊಂಡು ಜನರ ಮನಸ್ಸನ್ನು ಗೆದ್ದರು.

ಸಾಮಾನ್ಯ ಬಡ ಕುಟುಂಬದಲ್ಲಿ ಜನಿಸಿ ಶಾಸಕರಾಗಿದ್ದು ಯಾರದ್ದೋ ಬೆಂಬಲದಿಂದಲ್ಲ, ಸತತ 8 ವರ್ಷಗಳಿಂದ ಕ್ಷೇತ್ರದ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದರ ಪರಿಣಾಮ. 200 ಹಳ್ಳಿಗಳ ಜನ ಊರಿನ ಮಗಳೆಂದು ಹಾರೈಸಿ, ಸನ್ಮಾನಿಸಿ, ಉಡಿ ತುಂಬಿ ಹಾರೈಸಿದ್ದು, ಜೊತೆಗೆ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಜನರ ಸಮಸ್ಯೆಗಳನ್ನ ಆಲಿಸಿದ್ದು ಗೆಲುವಿಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....