Homeಕರ್ನಾಟಕಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ...

ಶಾಸಕಿ ಕರೆಮ್ಮ ನಾಯಕರಿಗೆ ನಿಂದನೆ; ಬಿಜೆಪಿ ಮಾಜಿ ಎಂಎಲ್‌ಎಯ ಸಹೋದರ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ದೇವದುರ್ಗ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರೆಮ್ಮ ಜಿ ನಾಯಕ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರ ಸಹೋದರ ಸೇರಿ ಎಂಟು ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ.

ದೇವದುರ್ಗ ತಾಲೂಕಿನ ಆಲದಮರ ತಾಂಡಾದಲ್ಲಿ ಭಾನುವಾರ ಲೈನ್‌ಮನ್ ವಿರೂಪಾಕ್ಷ ಮೃತಪಟ್ಟ ಸ್ಥಳಕ್ಕೆ ಶಾಸಕಿ ಕರೆಮ್ಮ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿಯ ಮುಖಂಡರು ಶಾಸಕಿಯನ್ನು ಅಶ್ಲೀಲ ಪದಗಳಿಂದ ನಿಂದಿಸಿದ್ದರು.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಬಿಜೆಪಿ ಮುಖಂಡರನ್ನು ಬಂಧಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

ಪೊಲೀಸರ ವೈಫಲ್ಯದಿಂದ ಇಂತಹ ಘಟನೆ ನಡೆಯುತ್ತಿವೆ. ಶಾಸಕಿ ಕರೆಮ್ಮ ಅವರಿಗೆ ರಕ್ಷಣೆ ಇಲ್ಲ. ಇನ್‌ಸ್ಪೆಕ್ಟರ್‌ ಹೊಸಕೆರಪ್ಪ ತಾಲೂಕಿನಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ. ಇನ್‌ಸ್ಪೆಕ್ಟರ್‌ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜೆಡಿಎಸ್‌ ಮುಖಂಡ ಬಸವರಾಜ ನಾಯಕ ಕೊತ್ತದೊಡ್ಡಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿರ್ದೇಶನ ನೀಡಿದ ನಂತರ ಇನ್‌ಸ್ಪೆಕ್ಟರ್‌ ಹೊಸಕೇರಪ್ಪ ಅವರು ಬಿಜೆಪಿಯ ಮಾಜಿ ಶಾಸಕ ಕೆ ಶಿವನಗೌಡ ಸಹೋದರ ಭಗವಂತ್ರಾಯ ನಾಯಕ ಸೇರಿದಂತೆ ಎಂಟು ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳನ್ನು 24 ಗಂಟೆಯ ಒಳಗೆ ಬಂಧಿಸದಿದ್ದರೆ ಠಾಣೆಗೆ ಮತ್ತೆ ಮುತ್ತಿಗೆ ಹಾಕಲಾಗುವುದು ಎಂದು ಜೆಡಿಎಸ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಹೋರಾಟದ ಹಿನ್ನೆಲೆಯವರಾದ ಕರೆಮ್ಮ, ಪ್ರಭಾವಿ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕರನ್ನು ಸೋಲಿಸಿ ಗಮನ ಸೆಳೆದಿದ್ದಾರೆ. 2005ರಲ್ಲಿ ಗ್ರಾಮ ಪಂಚಾಯತಿ ಚುನಾವಣೆಯ ಮೂಲಕ ರಾಜಕೀಯ ಪ್ರವೇಶ ಮಾಡಿ ಹೋರಾಟದ ಮೂಲಕ ಗುರುತಿಸಿಕೊಂಡಿರುವ ಕರೆಮ್ಮ ಈಗ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.

ಇದನ್ನೂ ಓದಿರಿ: ಜನ ಮೆಚ್ಚಿದ ನಾಯಕಿ, ಹೋರಾಟಗಾರ್ತಿ ಕರೆಮ್ಮ ಜಿ.ನಾಯಕ

2018ರ ವಿಧಾನಸಭೆ ಚುನಾವಣೆಗೆ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾದರು. ಕ್ಷೇತ್ರದಲ್ಲಿ ಇದನ್ನು ಗಮನಿಸಿದ ಬಿಜೆಪಿಯ ಕೆ.ಶಿವನಗೌಡ ನಾಯಕ ಅವರು ಹಣಬಲವನ್ನು ಬಳಸಿ ಟಿಕೆಟನ್ನು ಕರೆಮ್ಮ ಅವರಿಗೆ ತಪ್ಪಿಸಿ, ತಮ್ಮ ಸಂಬಂಧಿಕರಾದ ವೆಂಕಟೇಶ್ ಪೂಜಾರಿ ಎನ್ನುವ ವ್ಯಕ್ತಿಗೆ ಕೊಡಿಸಿದ್ದರು. ಅ ನಂತರ ಟಿಕೆಟ್‌ ವಂಚಿತರಾದ ಕರೆಮ್ಮ ಜನಾಭಿಪ್ರಾಯವನ್ನು ಪಡೆದು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು 26,000 ಮತಗಳನ್ನು ಪಡೆಯುವ ಮೂಲಕ ಮೂರನೆಯ ಸ್ಥಾನಕ್ಕಿಳಿದು ಸೋಲು ಕಂಡಿದ್ದರು.

ಸೋತರೂ ಧೃತಿಗೆಡದ ಗಟ್ಟಿಗಿತ್ತಿ ದಿಟ್ಟ ಮಹಿಳೆಯಾದ ಹಳ್ಳಿಗಾಡಿನ ಕರೆಮ್ಮ, ಮತ್ತೆ ಜನರ ಬಳಿಗೆ ಹೋಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತ ಸಣ್ಣಪುಟ್ಟ ಕೆಲಸಗಳಿಗೆ ಬೆನ್ನುಲುಬಾಗಿ ನಿಂತು ಕಳೆದ ಐದು ವರ್ಷ ಕ್ಷೇತ್ರದಲ್ಲಿ ವಿರೋಧ ಪಕ್ಷದ ರೀತಿಯಲ್ಲಿ ಹಾಲಿ ಶಾಸಕರ ವಿರುದ್ಧ ದನಿ ಎತ್ತುವ ಮೂಲಕ ಅಪಾರ ಜನರ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ಗಳಿಸಿಕೊಂಡು ಜನರ ಮನಸ್ಸನ್ನು ಗೆದ್ದರು.

ಸಾಮಾನ್ಯ ಬಡ ಕುಟುಂಬದಲ್ಲಿ ಜನಿಸಿ ಶಾಸಕರಾಗಿದ್ದು ಯಾರದ್ದೋ ಬೆಂಬಲದಿಂದಲ್ಲ, ಸತತ 8 ವರ್ಷಗಳಿಂದ ಕ್ಷೇತ್ರದ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದರ ಪರಿಣಾಮ. 200 ಹಳ್ಳಿಗಳ ಜನ ಊರಿನ ಮಗಳೆಂದು ಹಾರೈಸಿ, ಸನ್ಮಾನಿಸಿ, ಉಡಿ ತುಂಬಿ ಹಾರೈಸಿದ್ದು, ಜೊತೆಗೆ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಜನರ ಸಮಸ್ಯೆಗಳನ್ನ ಆಲಿಸಿದ್ದು ಗೆಲುವಿಗೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...