Homeಕರ್ನಾಟಕನಟಿಯರ ವಿರುದ್ಧ ನಿಂದನಾತ್ಮಕ ಸುದ್ದಿ: ‘ಸುವರ್ಣ’ ಚಾನೆಲ್‌ ವಿರುದ್ಧ ಜನಾಕ್ರೋಶ

ನಟಿಯರ ವಿರುದ್ಧ ನಿಂದನಾತ್ಮಕ ಸುದ್ದಿ: ‘ಸುವರ್ಣ’ ಚಾನೆಲ್‌ ವಿರುದ್ಧ ಜನಾಕ್ರೋಶ

- Advertisement -
- Advertisement -

ಸುವರ್ಣ ಚಾನೆಲ್‌ನ ಸುದ್ದಿ ವೆಬ್‌ಸೈಟ್‌ನಲ್ಲಿ ಮಹಿಳೆಯರ ಕುರಿತು ಬರುತ್ತಿರುವ ನಿಂದನಾತ್ಮಕ ಸುದ್ದಿಗಳಿಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಟಿ ಸಂಜನಾ ಗಲ್ರಾನಿಯವರು ಸುವರ್ಣ ವಾಹಿನಿಗೆ ಕರೆ ಮಾಡಿ ಛೀ ಮಾರಿ ಹಾಕಿದ್ದರು. ಆಕ್ಷೇಪಾರ್ಹ ಸುದ್ದಿಗಳನ್ನು, ಊಹಾಪೋಹಗಳನ್ನು ಸುವರ್ಣ ಸುದ್ದಿ ವಾಹಿನಿ ಹರಡುತ್ತಿದೆ ಎಂದು ಆರೋಪಿಸಿದ್ದರು. ‘ಇನ್ನು ಮುಂದೆ ಸಂಜನಾ ಅವರಿಗೆ ಸಂಬಂಧಿಸಿದ ಸುದ್ದಿಗಳನ್ನು ಪ್ರಸಾರ ಮಾಡುವುದಿಲ್ಲ” ಎಂದು ಸವರ್ಣ ವಾಹಿನಿಯ ಸಿಬ್ಬಂದಿ ಸ್ಪಷ್ಟಪಡಿಸಿದ್ದರು. ಇಷ್ಟೆಲ್ಲ ಆದ ಮೇಲೂ ಸುವರ್ಣ ವೆಬ್‌ಸೈಟ್‌ನಲ್ಲಿ ನಟಿಯರ ಕುರಿತು, ಮಹಿಳೆಯರ ಕುರಿತು ಬರುತ್ತಿರುವ ತೃತೀಯ ದರ್ಜೆಯ ಸುದ್ದಿಗಳು ನಿಂತಿಲ್ಲ.

 ಇದನ್ನೂ ಓದಿರಿ:  ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

“ವಿಚ್ಛೇದನಾ ನಂತರ ಸಮಂತಾ ಗರ್ಭಿಣಿ; ಅಭಿಮಾನಿಗಳು ಶಾಕ್‌” ಎಂದು ಸವರ್ಣ ಇತ್ತೀಚೆಗೆ ವರದಿ ಮಾಡಿತ್ತು. ಅದಕ್ಕಿಂತ ಮತ್ತಷ್ಟು ವಿಕೃತವಾಗಿ ಮತ್ತೊಂದು ವರದಿ ಮಾಡಲಾಗಿದೆ. “ಬ್ರಾ ಧರಿಸದ ಮಲೈಕಾ ಮಾರ್ನಿಂಗ್ ವಾಕ್‌, ಕಾಲೆಳೆದ ನೆಟ್ಟಿಗರು” ಎಂದು ಹೆಲ್‌ಲೈನ್‌ನೊಂದಿಗೆ ಮಾಡಿರುವ ವರದಿ ಜನಾಕ್ರೊಶಕ್ಕೆ ಕಾರಣವಾಗಿದೆ.

ಚಿಂತಕ ನಾ.ದಿವಾಕರ್‌ ಅವರು ಈ ಕುರಿತು ಫೇಸ್‌ಬುಕ್‌ ಪೋಸ್ಟ್‌ ಮಾಡಿ, ಸುದ್ದಿ ವಾಹಿನಿಗಳ ನೈತಿಕ ಅಧಃಪಥನವನ್ನು ಪ್ರಶ್ನಿಸಿದ್ದಾರೆ.

“ಕೆಲವು ದಶಕಗಳ ಹಿಂದೆ ಪತ್ರಿಕಾ ರಂಗ ಇನ್ನೂ ತನ್ನ ಸ್ವಂತಿಕೆಯನ್ನು ಉಳಿಸಿಕೊಂಡಿದ್ದ ಕಾಲದಲ್ಲಿ, ಮಾಧ್ಯಮಗಳು ಮಾರುಕಟ್ಟೆಯ ಸರಕುಗಳನ್ನು ಮಾರಾಟ ಮಾಡುವ ಜಗುಲಿ ಕಟ್ಟೆಗಳಾಗಿಲ್ಲದಿದ್ದ ಕಾಲದಲ್ಲಿ, ಪತ್ರಿಕಾ ರಂಗ ಮತ್ತು ಮಾಧ್ಯಮಗಳಲ್ಲಿ ನೈತಿಕತೆ ಕೊಂಚ ಮಟ್ಟಿಗೆ ಕಾಣಬಹುದಾಗಿದ್ದ ಕಾಲದಲ್ಲಿ, ರತಿ ವಿಜ್ಞಾನ ಮುಂತಾದ ಅದೇ ತೆರನಾದ ಅಶ್ಲೀಲ ಪತ್ರಿಕೆಗಳು ಮಾರುಕಟ್ಟೆಗೆ ದಾಳಿ ಇಟ್ಟಿದ್ದವು. ಕೀಳು ಮಟ್ಟದ ಅಶ್ಲೀಲತೆ ಮತ್ತು ಅಸಭ್ಯ ಭಾಷೆಯ ಮೂಲಕ ಪಡ್ಡೆ ಹುಡುಗರನ್ನು ಆಕರ್ಷಿಸುತ್ತಿದ್ದ ಪತ್ರಿಕೆಗಳಿವು. ಅಯ್ಯೋ, ಪತ್ರಿಕಾರಂಗ ನೈತಿಕವಾಗಿ ಅಧೋಗತಿಗಿಳಿಯುತಿದೆ ಎಂಬ ಮಾತುಗಳು ಸಹಜವಾಗಿಯೇ ಕೇಳಿಬರುತ್ತಿದ್ದವು. ಆಗಲೂ ಸಹ ಮುಖ್ಯವಾಹಿನಿಯ ಪತ್ರಿಕೆಗಳು ತಮ್ಮ ಘನತೆ ಉಳಿಸಿಕೊಂಡು ಬಂದಿದ್ದವು” ಎಂದು ಅವರು ಹೇಳಿದ್ದಾರೆ.

ಮುಂದುವರಿದು, “ಈಗ, ಡಿಜಿಟಲ್ ವಿದ್ಯುನ್ಮಾನ ಯುಗದಲ್ಲಿ ಮಾಧ್ಯಮಗಳೇ ಮಾರಾಟವಾಗಿ‌ ಮಾರುಕಟ್ಟೆಯ ಜಾಹೀರಾತು ಜಗುಲಿಗಳಾಗಿಬಿಟ್ಟಿವೆ. ವ್ಯತ್ಯಾಸ ಎಂದರೆ ಮುಖ್ಯವಾಹಿನಿಯ ಮಾಧ್ಯಮಗಳೇ ರತಿವಿಜ್ಞಾನಕ್ಕಿಂತಲೂ ಕೀಳುಮಟ್ಟದ ‘ಮನರಂಜನೆ’ ಒದಗಿಸಲು ಸಜ್ಜಾಗಿಬಿಟ್ಟಿವೆ. ಇದನ್ನು ನೈತಿಕ ಅಧಃಪತನ ಎನ್ನುವುದಕ್ಕೂ ಮುಜುಗರವಾಗುತ್ತದೆ ಏಕೆಂದರೆ ಈ ವಾಹಿನಿಗಳಿಗೆ ನೈತಿಕತೆ, ಘನತೆ ಮುಂತಾದ ಪರಿಚಯವೇ ಇರಲಾರದಷ್ಟು ಮಾರಿಕೊಂಡುಬಿಟ್ಟಿವೆ. ಇನ್ನು ಇವುಗಳಿಂದ ಲಿಂಗ ಸೂಕ್ಷ್ಮತೆ, ಸ್ತ್ರೀ ಸಂವೇದನೆ , ಸಭ್ಯತೆ ಮುಂತಾದುವನ್ನು ನಿರೀಕ್ಷಿಸುವುದು ಸಾಧ್ಯವೇ ಇಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸಾಮಾಜಿಕ ಸೌಜನ್ಯ, ಮಾನವೀಯ ಘನತೆ, ಸಾರ್ವಜನಿಕ ಸಭ್ಯತೆ ಈ ಲಕ್ಷಣಗಳೇ ಇಲ್ಲದ ಇಂತಹ ಮಾಧ್ಯಮಗಳಿಂದ, ಸುದ್ದಿವಾಹಿನಿಗಳಿಂದ ಸ್ತ್ರೀ ಸಂವೇದನೆಯನ್ನು ಹೇಗೆ ನಿರೀಕ್ಷಿಸಲು ಸಾಧ್ಯ ! ನೈತಿಕ ಅಧಃಪತನಕ್ಕೂ ಒಂದು‌ಮಿತಿ ಇರುತ್ತದೆ. ತಮ್ಮನ್ನೇ ತಾವು ಮಾರಿಕೊಳ್ಳುವುದಕ್ಕೂ ಒಂದು ಮಿತಿ ಇರುತ್ತದೆ. ಹಣಕ್ಕಾಗಿ ಎಂತಹ ಕೀಳುಮಟ್ಟಕ್ಕಿಳಿಯುವುದಕ್ಕೂ ಒಂದು ಮಿತಿ ಇರುತ್ತದೆ. ಈ ಎಲ್ಲ ಮಿತಿಗಳನ್ನೂ ಮೀರಿ ಸುವರ್ಣ ವಾಹಿನಿ ಬೆತ್ತಲಾಗಿಬಿಟ್ಟಿದೆ. ನೈತಿಕ ಅಧಃಪತನದ ಪರಾಕಾಷ್ಠೆಗೆ ಸುವರ್ಣವಾಹಿನಿ ಸಮಾನಾಂತರ ಪದವಾಗಿ ಬಳಸಬಹುದು. ಇನ್ನೇನು ಹೇಳಲು ಸಾಧ್ಯ” ಎಂದಿದ್ದಾರೆ.

ಸುವರ್ಣ ವಾಹಿನಿಯ ಫೇಸ್‌ಬುಕ್‌ ಪೇಜ್‌ನಲ್ಲಿ ಹಾಕಿರುವ ಈ ಸುದ್ದಿಗೆ ಸುಮಾರು ಐದು ನೂರಕ್ಕೂ ಹೆಚ್ಚು ಮಂದಿ ಕಮೆಂಟ್ ಮಾಡಿದ್ದಾರೆ. ಅಲ್ಲಿ ಬಂದಿರುವ ಕೆಲವು ಕಮೆಂಟ್‌ಗಳನ್ನು ಓದಿದರೂ ಸಾಕು. ಸುವರ್ಣ ವಾಹಿನಿ ವಿರುದ್ಧ ಜನರ ಆಕ್ರೋಶ ಹೇಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಇದನ್ನೂ ಓದಿರಿ: ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

“ಹೆಣ್ಣು ಮಕ್ಕಳ ಬಗ್ಗೆ ಹೀಗೆಲ್ಲ ಬರೆಯೋದಕ್ಕೆ ನಾಚಿಕೆ ಆಗಲ್ವ? ನಿಮ್ಮ ಅಕ್ಕಾ ತಂಗೀರ ವಿಚಾರದಲ್ಲಿ ಕೂಡಾ ಹೀಗೇ ಆಡ್ತೀರಾ?” ಎಂದು ಸಮೀರ್‌ ಎಂಬವರು ಪ್ರಶ್ನಿಸಿದ್ದಾರೆ.

“ಯಾವಾಗ ನೋಡಿದ್ರೂ ನೆಟ್ಟಿಗರು ನೆಟ್ಟಿಗರು ಅಂತೀರಾ. ಯಾರ್ರಪ್ಪ ಅವ್ರು, ಅಷ್ಟೊಂದು ನೆಟ್ಟಗೆ ಇರೋವ್ರು? ನಿಮಗೆ ಬರ್ಯೋಕೆ ಬೇರೆ ವಿಷ್ಯ ಸಿಗ್ದೆ ಇದ್ರೆ ನಂಗ್ ಹೇಳಿ.. ನಮ್ಮ್ ಊರಲ್ಲಿ, ನಮ್ಮ್ ತಾಲೂಕ್ ಅಲ್ಲಿ ಬೇಕಾದಷ್ಟು ಸಮಸ್ಯೆಗಳಿವೆ. ದಿನ ಪಬ್ಲಿಶ್ ಮಾಡಿ. ಲಜ್ಜೆಗೇಡಿ ರಾಜಕೀಯ ನಾಯಕ್ರುಗಳಿಗೆ ತಿಳ್ಸಿದಾಗೆ ಆಗುತ್ತೆ” ಎಂದು ಎ.ಆರ್‌.ಅನಿತಾ ಎಂಬವರು ಕಮೆಂಟ್ ಮಾಡಿದ್ದಾರೆ.

“ಇದು ವೈಯಕ್ತಿಕವಾದ ವಿಚಾರ. ಇದನ್ನು ಮಾಧ್ಯಮದಲ್ಲಿ ತೋರಿಸುವುದು ನಿಮ್ಮ ನಾಚಿಕೆಗೇಡಿನ ಕೆಲಸ. ಮಹಿಳೆಯರ ಸಮಸ್ಯೆಗಳು ಇರುವುದರಿಂದ ಕೆಲವರು ಒಳಉಡುಪಿನಿಂದ ದೂರ ಸರಿಯುತ್ತಾರೆ ಅದರಲ್ಲಿ ತಪ್ಪೇನಿದೆ?” ಎಂದು ಉಷಾ ಎಂಬವರು ಪ್ರಶ್ನಿಸಿದ್ದಾರೆ.

“ಡಿಯರ್ ಸುವರ್ಣ ವೆಬ್, ಈಚೆಗಷ್ಟೇ ಸಂಜನಾ ಅವರಿಂದ ಮಂಗಳಾರತಿ ಮಾಡಿಸಿಕೊಂಡದ್ದು ಸಾಲಲಿಲ್ಲವೇ? ಅವರು ಯಾವ ಬಟ್ಟೆ ಹಾಕೊಂಡು ವಾಕಿಂಗ್ ಹೋದ್ರೆ ನಿಮಗೇನು? ನಿವೇನಾದರೂ ಕೊಡಿಸುತ್ತಿದ್ದಾರಾ? ಇಂತಹ ವಿಷಯಗಳಲ್ಲಿರುವ ಆಸಕ್ತಿಯನ್ನು ನೊಂದವರ ಪರವಾಗಿ ತೋರಿಸಿ, ಜನ ಕೈಮುಗಿಯುತ್ತಾರೆ…” ಎಂದು ಮೈಸೂರು ನಿವಾಸಿಯೊಬ್ಬರು ಕೋರಿದ್ದಾರೆ.

“ನಿಮ್ಮಂತ ಹಲ್ಕೆಟ್ ಮಾಧ್ಯಮಗಳಿಂದ ಎಲ್ಲಾ, ಮಾಧ್ಯಮಗಳಿಗೂ ಕೆಟ್ಟ ಹೆಸರು. ಸಮಾಜದ ಸ್ವಾಸ್ಥ್ಯವನ್ನು ಕಾಪಾಡ್ರಪ್ಪ ಅಂದ್ರೆ ನಿಮ್ಮಗಳ ಯೋಗ್ಯತೆ ತೋರ್ಸೋ ಪೋಸ್ಟ್ ಹಾಕ್ತಿರಲ್ಲ” ಎಂದು ಕವಯತ್ರಿ ಸೌಮ್ಯಾ ಹೆಗ್ಗಡಹಳ್ಳಿ ಬುದ್ಧಿ ಹೇಳಿದ್ದಾರೆ.


ಇದನ್ನೂ ಓದಿರಿ: ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...