Homeಕರ್ನಾಟಕನಟಿಯರ ವಿರುದ್ಧ ನಿಂದನಾತ್ಮಕ ಸುದ್ದಿ: ‘ಸುವರ್ಣ’ ಚಾನೆಲ್‌ ವಿರುದ್ಧ ಜನಾಕ್ರೋಶ

ನಟಿಯರ ವಿರುದ್ಧ ನಿಂದನಾತ್ಮಕ ಸುದ್ದಿ: ‘ಸುವರ್ಣ’ ಚಾನೆಲ್‌ ವಿರುದ್ಧ ಜನಾಕ್ರೋಶ

- Advertisement -
- Advertisement -

ಸುವರ್ಣ ಚಾನೆಲ್‌ನ ಸುದ್ದಿ ವೆಬ್‌ಸೈಟ್‌ನಲ್ಲಿ ಮಹಿಳೆಯರ ಕುರಿತು ಬರುತ್ತಿರುವ ನಿಂದನಾತ್ಮಕ ಸುದ್ದಿಗಳಿಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಟಿ ಸಂಜನಾ ಗಲ್ರಾನಿಯವರು ಸುವರ್ಣ ವಾಹಿನಿಗೆ ಕರೆ ಮಾಡಿ ಛೀ ಮಾರಿ ಹಾಕಿದ್ದರು. ಆಕ್ಷೇಪಾರ್ಹ ಸುದ್ದಿಗಳನ್ನು, ಊಹಾಪೋಹಗಳನ್ನು ಸುವರ್ಣ ಸುದ್ದಿ ವಾಹಿನಿ ಹರಡುತ್ತಿದೆ ಎಂದು ಆರೋಪಿಸಿದ್ದರು. ‘ಇನ್ನು ಮುಂದೆ ಸಂಜನಾ ಅವರಿಗೆ ಸಂಬಂಧಿಸಿದ ಸುದ್ದಿಗಳನ್ನು ಪ್ರಸಾರ ಮಾಡುವುದಿಲ್ಲ” ಎಂದು ಸವರ್ಣ ವಾಹಿನಿಯ ಸಿಬ್ಬಂದಿ ಸ್ಪಷ್ಟಪಡಿಸಿದ್ದರು. ಇಷ್ಟೆಲ್ಲ ಆದ ಮೇಲೂ ಸುವರ್ಣ ವೆಬ್‌ಸೈಟ್‌ನಲ್ಲಿ ನಟಿಯರ ಕುರಿತು, ಮಹಿಳೆಯರ ಕುರಿತು ಬರುತ್ತಿರುವ ತೃತೀಯ ದರ್ಜೆಯ ಸುದ್ದಿಗಳು ನಿಂತಿಲ್ಲ.

 ಇದನ್ನೂ ಓದಿರಿ:  ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

“ವಿಚ್ಛೇದನಾ ನಂತರ ಸಮಂತಾ ಗರ್ಭಿಣಿ; ಅಭಿಮಾನಿಗಳು ಶಾಕ್‌” ಎಂದು ಸವರ್ಣ ಇತ್ತೀಚೆಗೆ ವರದಿ ಮಾಡಿತ್ತು. ಅದಕ್ಕಿಂತ ಮತ್ತಷ್ಟು ವಿಕೃತವಾಗಿ ಮತ್ತೊಂದು ವರದಿ ಮಾಡಲಾಗಿದೆ. “ಬ್ರಾ ಧರಿಸದ ಮಲೈಕಾ ಮಾರ್ನಿಂಗ್ ವಾಕ್‌, ಕಾಲೆಳೆದ ನೆಟ್ಟಿಗರು” ಎಂದು ಹೆಲ್‌ಲೈನ್‌ನೊಂದಿಗೆ ಮಾಡಿರುವ ವರದಿ ಜನಾಕ್ರೊಶಕ್ಕೆ ಕಾರಣವಾಗಿದೆ.

ಚಿಂತಕ ನಾ.ದಿವಾಕರ್‌ ಅವರು ಈ ಕುರಿತು ಫೇಸ್‌ಬುಕ್‌ ಪೋಸ್ಟ್‌ ಮಾಡಿ, ಸುದ್ದಿ ವಾಹಿನಿಗಳ ನೈತಿಕ ಅಧಃಪಥನವನ್ನು ಪ್ರಶ್ನಿಸಿದ್ದಾರೆ.

“ಕೆಲವು ದಶಕಗಳ ಹಿಂದೆ ಪತ್ರಿಕಾ ರಂಗ ಇನ್ನೂ ತನ್ನ ಸ್ವಂತಿಕೆಯನ್ನು ಉಳಿಸಿಕೊಂಡಿದ್ದ ಕಾಲದಲ್ಲಿ, ಮಾಧ್ಯಮಗಳು ಮಾರುಕಟ್ಟೆಯ ಸರಕುಗಳನ್ನು ಮಾರಾಟ ಮಾಡುವ ಜಗುಲಿ ಕಟ್ಟೆಗಳಾಗಿಲ್ಲದಿದ್ದ ಕಾಲದಲ್ಲಿ, ಪತ್ರಿಕಾ ರಂಗ ಮತ್ತು ಮಾಧ್ಯಮಗಳಲ್ಲಿ ನೈತಿಕತೆ ಕೊಂಚ ಮಟ್ಟಿಗೆ ಕಾಣಬಹುದಾಗಿದ್ದ ಕಾಲದಲ್ಲಿ, ರತಿ ವಿಜ್ಞಾನ ಮುಂತಾದ ಅದೇ ತೆರನಾದ ಅಶ್ಲೀಲ ಪತ್ರಿಕೆಗಳು ಮಾರುಕಟ್ಟೆಗೆ ದಾಳಿ ಇಟ್ಟಿದ್ದವು. ಕೀಳು ಮಟ್ಟದ ಅಶ್ಲೀಲತೆ ಮತ್ತು ಅಸಭ್ಯ ಭಾಷೆಯ ಮೂಲಕ ಪಡ್ಡೆ ಹುಡುಗರನ್ನು ಆಕರ್ಷಿಸುತ್ತಿದ್ದ ಪತ್ರಿಕೆಗಳಿವು. ಅಯ್ಯೋ, ಪತ್ರಿಕಾರಂಗ ನೈತಿಕವಾಗಿ ಅಧೋಗತಿಗಿಳಿಯುತಿದೆ ಎಂಬ ಮಾತುಗಳು ಸಹಜವಾಗಿಯೇ ಕೇಳಿಬರುತ್ತಿದ್ದವು. ಆಗಲೂ ಸಹ ಮುಖ್ಯವಾಹಿನಿಯ ಪತ್ರಿಕೆಗಳು ತಮ್ಮ ಘನತೆ ಉಳಿಸಿಕೊಂಡು ಬಂದಿದ್ದವು” ಎಂದು ಅವರು ಹೇಳಿದ್ದಾರೆ.

ಮುಂದುವರಿದು, “ಈಗ, ಡಿಜಿಟಲ್ ವಿದ್ಯುನ್ಮಾನ ಯುಗದಲ್ಲಿ ಮಾಧ್ಯಮಗಳೇ ಮಾರಾಟವಾಗಿ‌ ಮಾರುಕಟ್ಟೆಯ ಜಾಹೀರಾತು ಜಗುಲಿಗಳಾಗಿಬಿಟ್ಟಿವೆ. ವ್ಯತ್ಯಾಸ ಎಂದರೆ ಮುಖ್ಯವಾಹಿನಿಯ ಮಾಧ್ಯಮಗಳೇ ರತಿವಿಜ್ಞಾನಕ್ಕಿಂತಲೂ ಕೀಳುಮಟ್ಟದ ‘ಮನರಂಜನೆ’ ಒದಗಿಸಲು ಸಜ್ಜಾಗಿಬಿಟ್ಟಿವೆ. ಇದನ್ನು ನೈತಿಕ ಅಧಃಪತನ ಎನ್ನುವುದಕ್ಕೂ ಮುಜುಗರವಾಗುತ್ತದೆ ಏಕೆಂದರೆ ಈ ವಾಹಿನಿಗಳಿಗೆ ನೈತಿಕತೆ, ಘನತೆ ಮುಂತಾದ ಪರಿಚಯವೇ ಇರಲಾರದಷ್ಟು ಮಾರಿಕೊಂಡುಬಿಟ್ಟಿವೆ. ಇನ್ನು ಇವುಗಳಿಂದ ಲಿಂಗ ಸೂಕ್ಷ್ಮತೆ, ಸ್ತ್ರೀ ಸಂವೇದನೆ , ಸಭ್ಯತೆ ಮುಂತಾದುವನ್ನು ನಿರೀಕ್ಷಿಸುವುದು ಸಾಧ್ಯವೇ ಇಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸಾಮಾಜಿಕ ಸೌಜನ್ಯ, ಮಾನವೀಯ ಘನತೆ, ಸಾರ್ವಜನಿಕ ಸಭ್ಯತೆ ಈ ಲಕ್ಷಣಗಳೇ ಇಲ್ಲದ ಇಂತಹ ಮಾಧ್ಯಮಗಳಿಂದ, ಸುದ್ದಿವಾಹಿನಿಗಳಿಂದ ಸ್ತ್ರೀ ಸಂವೇದನೆಯನ್ನು ಹೇಗೆ ನಿರೀಕ್ಷಿಸಲು ಸಾಧ್ಯ ! ನೈತಿಕ ಅಧಃಪತನಕ್ಕೂ ಒಂದು‌ಮಿತಿ ಇರುತ್ತದೆ. ತಮ್ಮನ್ನೇ ತಾವು ಮಾರಿಕೊಳ್ಳುವುದಕ್ಕೂ ಒಂದು ಮಿತಿ ಇರುತ್ತದೆ. ಹಣಕ್ಕಾಗಿ ಎಂತಹ ಕೀಳುಮಟ್ಟಕ್ಕಿಳಿಯುವುದಕ್ಕೂ ಒಂದು ಮಿತಿ ಇರುತ್ತದೆ. ಈ ಎಲ್ಲ ಮಿತಿಗಳನ್ನೂ ಮೀರಿ ಸುವರ್ಣ ವಾಹಿನಿ ಬೆತ್ತಲಾಗಿಬಿಟ್ಟಿದೆ. ನೈತಿಕ ಅಧಃಪತನದ ಪರಾಕಾಷ್ಠೆಗೆ ಸುವರ್ಣವಾಹಿನಿ ಸಮಾನಾಂತರ ಪದವಾಗಿ ಬಳಸಬಹುದು. ಇನ್ನೇನು ಹೇಳಲು ಸಾಧ್ಯ” ಎಂದಿದ್ದಾರೆ.

ಸುವರ್ಣ ವಾಹಿನಿಯ ಫೇಸ್‌ಬುಕ್‌ ಪೇಜ್‌ನಲ್ಲಿ ಹಾಕಿರುವ ಈ ಸುದ್ದಿಗೆ ಸುಮಾರು ಐದು ನೂರಕ್ಕೂ ಹೆಚ್ಚು ಮಂದಿ ಕಮೆಂಟ್ ಮಾಡಿದ್ದಾರೆ. ಅಲ್ಲಿ ಬಂದಿರುವ ಕೆಲವು ಕಮೆಂಟ್‌ಗಳನ್ನು ಓದಿದರೂ ಸಾಕು. ಸುವರ್ಣ ವಾಹಿನಿ ವಿರುದ್ಧ ಜನರ ಆಕ್ರೋಶ ಹೇಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಇದನ್ನೂ ಓದಿರಿ: ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

“ಹೆಣ್ಣು ಮಕ್ಕಳ ಬಗ್ಗೆ ಹೀಗೆಲ್ಲ ಬರೆಯೋದಕ್ಕೆ ನಾಚಿಕೆ ಆಗಲ್ವ? ನಿಮ್ಮ ಅಕ್ಕಾ ತಂಗೀರ ವಿಚಾರದಲ್ಲಿ ಕೂಡಾ ಹೀಗೇ ಆಡ್ತೀರಾ?” ಎಂದು ಸಮೀರ್‌ ಎಂಬವರು ಪ್ರಶ್ನಿಸಿದ್ದಾರೆ.

“ಯಾವಾಗ ನೋಡಿದ್ರೂ ನೆಟ್ಟಿಗರು ನೆಟ್ಟಿಗರು ಅಂತೀರಾ. ಯಾರ್ರಪ್ಪ ಅವ್ರು, ಅಷ್ಟೊಂದು ನೆಟ್ಟಗೆ ಇರೋವ್ರು? ನಿಮಗೆ ಬರ್ಯೋಕೆ ಬೇರೆ ವಿಷ್ಯ ಸಿಗ್ದೆ ಇದ್ರೆ ನಂಗ್ ಹೇಳಿ.. ನಮ್ಮ್ ಊರಲ್ಲಿ, ನಮ್ಮ್ ತಾಲೂಕ್ ಅಲ್ಲಿ ಬೇಕಾದಷ್ಟು ಸಮಸ್ಯೆಗಳಿವೆ. ದಿನ ಪಬ್ಲಿಶ್ ಮಾಡಿ. ಲಜ್ಜೆಗೇಡಿ ರಾಜಕೀಯ ನಾಯಕ್ರುಗಳಿಗೆ ತಿಳ್ಸಿದಾಗೆ ಆಗುತ್ತೆ” ಎಂದು ಎ.ಆರ್‌.ಅನಿತಾ ಎಂಬವರು ಕಮೆಂಟ್ ಮಾಡಿದ್ದಾರೆ.

“ಇದು ವೈಯಕ್ತಿಕವಾದ ವಿಚಾರ. ಇದನ್ನು ಮಾಧ್ಯಮದಲ್ಲಿ ತೋರಿಸುವುದು ನಿಮ್ಮ ನಾಚಿಕೆಗೇಡಿನ ಕೆಲಸ. ಮಹಿಳೆಯರ ಸಮಸ್ಯೆಗಳು ಇರುವುದರಿಂದ ಕೆಲವರು ಒಳಉಡುಪಿನಿಂದ ದೂರ ಸರಿಯುತ್ತಾರೆ ಅದರಲ್ಲಿ ತಪ್ಪೇನಿದೆ?” ಎಂದು ಉಷಾ ಎಂಬವರು ಪ್ರಶ್ನಿಸಿದ್ದಾರೆ.

“ಡಿಯರ್ ಸುವರ್ಣ ವೆಬ್, ಈಚೆಗಷ್ಟೇ ಸಂಜನಾ ಅವರಿಂದ ಮಂಗಳಾರತಿ ಮಾಡಿಸಿಕೊಂಡದ್ದು ಸಾಲಲಿಲ್ಲವೇ? ಅವರು ಯಾವ ಬಟ್ಟೆ ಹಾಕೊಂಡು ವಾಕಿಂಗ್ ಹೋದ್ರೆ ನಿಮಗೇನು? ನಿವೇನಾದರೂ ಕೊಡಿಸುತ್ತಿದ್ದಾರಾ? ಇಂತಹ ವಿಷಯಗಳಲ್ಲಿರುವ ಆಸಕ್ತಿಯನ್ನು ನೊಂದವರ ಪರವಾಗಿ ತೋರಿಸಿ, ಜನ ಕೈಮುಗಿಯುತ್ತಾರೆ…” ಎಂದು ಮೈಸೂರು ನಿವಾಸಿಯೊಬ್ಬರು ಕೋರಿದ್ದಾರೆ.

“ನಿಮ್ಮಂತ ಹಲ್ಕೆಟ್ ಮಾಧ್ಯಮಗಳಿಂದ ಎಲ್ಲಾ, ಮಾಧ್ಯಮಗಳಿಗೂ ಕೆಟ್ಟ ಹೆಸರು. ಸಮಾಜದ ಸ್ವಾಸ್ಥ್ಯವನ್ನು ಕಾಪಾಡ್ರಪ್ಪ ಅಂದ್ರೆ ನಿಮ್ಮಗಳ ಯೋಗ್ಯತೆ ತೋರ್ಸೋ ಪೋಸ್ಟ್ ಹಾಕ್ತಿರಲ್ಲ” ಎಂದು ಕವಯತ್ರಿ ಸೌಮ್ಯಾ ಹೆಗ್ಗಡಹಳ್ಳಿ ಬುದ್ಧಿ ಹೇಳಿದ್ದಾರೆ.


ಇದನ್ನೂ ಓದಿರಿ: ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...