Homeಕರ್ನಾಟಕನಟಿಯರ ವಿರುದ್ಧ ನಿಂದನಾತ್ಮಕ ಸುದ್ದಿ: ‘ಸುವರ್ಣ’ ಚಾನೆಲ್‌ ವಿರುದ್ಧ ಜನಾಕ್ರೋಶ

ನಟಿಯರ ವಿರುದ್ಧ ನಿಂದನಾತ್ಮಕ ಸುದ್ದಿ: ‘ಸುವರ್ಣ’ ಚಾನೆಲ್‌ ವಿರುದ್ಧ ಜನಾಕ್ರೋಶ

- Advertisement -
- Advertisement -

ಸುವರ್ಣ ಚಾನೆಲ್‌ನ ಸುದ್ದಿ ವೆಬ್‌ಸೈಟ್‌ನಲ್ಲಿ ಮಹಿಳೆಯರ ಕುರಿತು ಬರುತ್ತಿರುವ ನಿಂದನಾತ್ಮಕ ಸುದ್ದಿಗಳಿಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಟಿ ಸಂಜನಾ ಗಲ್ರಾನಿಯವರು ಸುವರ್ಣ ವಾಹಿನಿಗೆ ಕರೆ ಮಾಡಿ ಛೀ ಮಾರಿ ಹಾಕಿದ್ದರು. ಆಕ್ಷೇಪಾರ್ಹ ಸುದ್ದಿಗಳನ್ನು, ಊಹಾಪೋಹಗಳನ್ನು ಸುವರ್ಣ ಸುದ್ದಿ ವಾಹಿನಿ ಹರಡುತ್ತಿದೆ ಎಂದು ಆರೋಪಿಸಿದ್ದರು. ‘ಇನ್ನು ಮುಂದೆ ಸಂಜನಾ ಅವರಿಗೆ ಸಂಬಂಧಿಸಿದ ಸುದ್ದಿಗಳನ್ನು ಪ್ರಸಾರ ಮಾಡುವುದಿಲ್ಲ” ಎಂದು ಸವರ್ಣ ವಾಹಿನಿಯ ಸಿಬ್ಬಂದಿ ಸ್ಪಷ್ಟಪಡಿಸಿದ್ದರು. ಇಷ್ಟೆಲ್ಲ ಆದ ಮೇಲೂ ಸುವರ್ಣ ವೆಬ್‌ಸೈಟ್‌ನಲ್ಲಿ ನಟಿಯರ ಕುರಿತು, ಮಹಿಳೆಯರ ಕುರಿತು ಬರುತ್ತಿರುವ ತೃತೀಯ ದರ್ಜೆಯ ಸುದ್ದಿಗಳು ನಿಂತಿಲ್ಲ.

 ಇದನ್ನೂ ಓದಿರಿ:  ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

“ವಿಚ್ಛೇದನಾ ನಂತರ ಸಮಂತಾ ಗರ್ಭಿಣಿ; ಅಭಿಮಾನಿಗಳು ಶಾಕ್‌” ಎಂದು ಸವರ್ಣ ಇತ್ತೀಚೆಗೆ ವರದಿ ಮಾಡಿತ್ತು. ಅದಕ್ಕಿಂತ ಮತ್ತಷ್ಟು ವಿಕೃತವಾಗಿ ಮತ್ತೊಂದು ವರದಿ ಮಾಡಲಾಗಿದೆ. “ಬ್ರಾ ಧರಿಸದ ಮಲೈಕಾ ಮಾರ್ನಿಂಗ್ ವಾಕ್‌, ಕಾಲೆಳೆದ ನೆಟ್ಟಿಗರು” ಎಂದು ಹೆಲ್‌ಲೈನ್‌ನೊಂದಿಗೆ ಮಾಡಿರುವ ವರದಿ ಜನಾಕ್ರೊಶಕ್ಕೆ ಕಾರಣವಾಗಿದೆ.

ಚಿಂತಕ ನಾ.ದಿವಾಕರ್‌ ಅವರು ಈ ಕುರಿತು ಫೇಸ್‌ಬುಕ್‌ ಪೋಸ್ಟ್‌ ಮಾಡಿ, ಸುದ್ದಿ ವಾಹಿನಿಗಳ ನೈತಿಕ ಅಧಃಪಥನವನ್ನು ಪ್ರಶ್ನಿಸಿದ್ದಾರೆ.

“ಕೆಲವು ದಶಕಗಳ ಹಿಂದೆ ಪತ್ರಿಕಾ ರಂಗ ಇನ್ನೂ ತನ್ನ ಸ್ವಂತಿಕೆಯನ್ನು ಉಳಿಸಿಕೊಂಡಿದ್ದ ಕಾಲದಲ್ಲಿ, ಮಾಧ್ಯಮಗಳು ಮಾರುಕಟ್ಟೆಯ ಸರಕುಗಳನ್ನು ಮಾರಾಟ ಮಾಡುವ ಜಗುಲಿ ಕಟ್ಟೆಗಳಾಗಿಲ್ಲದಿದ್ದ ಕಾಲದಲ್ಲಿ, ಪತ್ರಿಕಾ ರಂಗ ಮತ್ತು ಮಾಧ್ಯಮಗಳಲ್ಲಿ ನೈತಿಕತೆ ಕೊಂಚ ಮಟ್ಟಿಗೆ ಕಾಣಬಹುದಾಗಿದ್ದ ಕಾಲದಲ್ಲಿ, ರತಿ ವಿಜ್ಞಾನ ಮುಂತಾದ ಅದೇ ತೆರನಾದ ಅಶ್ಲೀಲ ಪತ್ರಿಕೆಗಳು ಮಾರುಕಟ್ಟೆಗೆ ದಾಳಿ ಇಟ್ಟಿದ್ದವು. ಕೀಳು ಮಟ್ಟದ ಅಶ್ಲೀಲತೆ ಮತ್ತು ಅಸಭ್ಯ ಭಾಷೆಯ ಮೂಲಕ ಪಡ್ಡೆ ಹುಡುಗರನ್ನು ಆಕರ್ಷಿಸುತ್ತಿದ್ದ ಪತ್ರಿಕೆಗಳಿವು. ಅಯ್ಯೋ, ಪತ್ರಿಕಾರಂಗ ನೈತಿಕವಾಗಿ ಅಧೋಗತಿಗಿಳಿಯುತಿದೆ ಎಂಬ ಮಾತುಗಳು ಸಹಜವಾಗಿಯೇ ಕೇಳಿಬರುತ್ತಿದ್ದವು. ಆಗಲೂ ಸಹ ಮುಖ್ಯವಾಹಿನಿಯ ಪತ್ರಿಕೆಗಳು ತಮ್ಮ ಘನತೆ ಉಳಿಸಿಕೊಂಡು ಬಂದಿದ್ದವು” ಎಂದು ಅವರು ಹೇಳಿದ್ದಾರೆ.

ಮುಂದುವರಿದು, “ಈಗ, ಡಿಜಿಟಲ್ ವಿದ್ಯುನ್ಮಾನ ಯುಗದಲ್ಲಿ ಮಾಧ್ಯಮಗಳೇ ಮಾರಾಟವಾಗಿ‌ ಮಾರುಕಟ್ಟೆಯ ಜಾಹೀರಾತು ಜಗುಲಿಗಳಾಗಿಬಿಟ್ಟಿವೆ. ವ್ಯತ್ಯಾಸ ಎಂದರೆ ಮುಖ್ಯವಾಹಿನಿಯ ಮಾಧ್ಯಮಗಳೇ ರತಿವಿಜ್ಞಾನಕ್ಕಿಂತಲೂ ಕೀಳುಮಟ್ಟದ ‘ಮನರಂಜನೆ’ ಒದಗಿಸಲು ಸಜ್ಜಾಗಿಬಿಟ್ಟಿವೆ. ಇದನ್ನು ನೈತಿಕ ಅಧಃಪತನ ಎನ್ನುವುದಕ್ಕೂ ಮುಜುಗರವಾಗುತ್ತದೆ ಏಕೆಂದರೆ ಈ ವಾಹಿನಿಗಳಿಗೆ ನೈತಿಕತೆ, ಘನತೆ ಮುಂತಾದ ಪರಿಚಯವೇ ಇರಲಾರದಷ್ಟು ಮಾರಿಕೊಂಡುಬಿಟ್ಟಿವೆ. ಇನ್ನು ಇವುಗಳಿಂದ ಲಿಂಗ ಸೂಕ್ಷ್ಮತೆ, ಸ್ತ್ರೀ ಸಂವೇದನೆ , ಸಭ್ಯತೆ ಮುಂತಾದುವನ್ನು ನಿರೀಕ್ಷಿಸುವುದು ಸಾಧ್ಯವೇ ಇಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಸಾಮಾಜಿಕ ಸೌಜನ್ಯ, ಮಾನವೀಯ ಘನತೆ, ಸಾರ್ವಜನಿಕ ಸಭ್ಯತೆ ಈ ಲಕ್ಷಣಗಳೇ ಇಲ್ಲದ ಇಂತಹ ಮಾಧ್ಯಮಗಳಿಂದ, ಸುದ್ದಿವಾಹಿನಿಗಳಿಂದ ಸ್ತ್ರೀ ಸಂವೇದನೆಯನ್ನು ಹೇಗೆ ನಿರೀಕ್ಷಿಸಲು ಸಾಧ್ಯ ! ನೈತಿಕ ಅಧಃಪತನಕ್ಕೂ ಒಂದು‌ಮಿತಿ ಇರುತ್ತದೆ. ತಮ್ಮನ್ನೇ ತಾವು ಮಾರಿಕೊಳ್ಳುವುದಕ್ಕೂ ಒಂದು ಮಿತಿ ಇರುತ್ತದೆ. ಹಣಕ್ಕಾಗಿ ಎಂತಹ ಕೀಳುಮಟ್ಟಕ್ಕಿಳಿಯುವುದಕ್ಕೂ ಒಂದು ಮಿತಿ ಇರುತ್ತದೆ. ಈ ಎಲ್ಲ ಮಿತಿಗಳನ್ನೂ ಮೀರಿ ಸುವರ್ಣ ವಾಹಿನಿ ಬೆತ್ತಲಾಗಿಬಿಟ್ಟಿದೆ. ನೈತಿಕ ಅಧಃಪತನದ ಪರಾಕಾಷ್ಠೆಗೆ ಸುವರ್ಣವಾಹಿನಿ ಸಮಾನಾಂತರ ಪದವಾಗಿ ಬಳಸಬಹುದು. ಇನ್ನೇನು ಹೇಳಲು ಸಾಧ್ಯ” ಎಂದಿದ್ದಾರೆ.

ಸುವರ್ಣ ವಾಹಿನಿಯ ಫೇಸ್‌ಬುಕ್‌ ಪೇಜ್‌ನಲ್ಲಿ ಹಾಕಿರುವ ಈ ಸುದ್ದಿಗೆ ಸುಮಾರು ಐದು ನೂರಕ್ಕೂ ಹೆಚ್ಚು ಮಂದಿ ಕಮೆಂಟ್ ಮಾಡಿದ್ದಾರೆ. ಅಲ್ಲಿ ಬಂದಿರುವ ಕೆಲವು ಕಮೆಂಟ್‌ಗಳನ್ನು ಓದಿದರೂ ಸಾಕು. ಸುವರ್ಣ ವಾಹಿನಿ ವಿರುದ್ಧ ಜನರ ಆಕ್ರೋಶ ಹೇಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಇದನ್ನೂ ಓದಿರಿ: ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

“ಹೆಣ್ಣು ಮಕ್ಕಳ ಬಗ್ಗೆ ಹೀಗೆಲ್ಲ ಬರೆಯೋದಕ್ಕೆ ನಾಚಿಕೆ ಆಗಲ್ವ? ನಿಮ್ಮ ಅಕ್ಕಾ ತಂಗೀರ ವಿಚಾರದಲ್ಲಿ ಕೂಡಾ ಹೀಗೇ ಆಡ್ತೀರಾ?” ಎಂದು ಸಮೀರ್‌ ಎಂಬವರು ಪ್ರಶ್ನಿಸಿದ್ದಾರೆ.

“ಯಾವಾಗ ನೋಡಿದ್ರೂ ನೆಟ್ಟಿಗರು ನೆಟ್ಟಿಗರು ಅಂತೀರಾ. ಯಾರ್ರಪ್ಪ ಅವ್ರು, ಅಷ್ಟೊಂದು ನೆಟ್ಟಗೆ ಇರೋವ್ರು? ನಿಮಗೆ ಬರ್ಯೋಕೆ ಬೇರೆ ವಿಷ್ಯ ಸಿಗ್ದೆ ಇದ್ರೆ ನಂಗ್ ಹೇಳಿ.. ನಮ್ಮ್ ಊರಲ್ಲಿ, ನಮ್ಮ್ ತಾಲೂಕ್ ಅಲ್ಲಿ ಬೇಕಾದಷ್ಟು ಸಮಸ್ಯೆಗಳಿವೆ. ದಿನ ಪಬ್ಲಿಶ್ ಮಾಡಿ. ಲಜ್ಜೆಗೇಡಿ ರಾಜಕೀಯ ನಾಯಕ್ರುಗಳಿಗೆ ತಿಳ್ಸಿದಾಗೆ ಆಗುತ್ತೆ” ಎಂದು ಎ.ಆರ್‌.ಅನಿತಾ ಎಂಬವರು ಕಮೆಂಟ್ ಮಾಡಿದ್ದಾರೆ.

“ಇದು ವೈಯಕ್ತಿಕವಾದ ವಿಚಾರ. ಇದನ್ನು ಮಾಧ್ಯಮದಲ್ಲಿ ತೋರಿಸುವುದು ನಿಮ್ಮ ನಾಚಿಕೆಗೇಡಿನ ಕೆಲಸ. ಮಹಿಳೆಯರ ಸಮಸ್ಯೆಗಳು ಇರುವುದರಿಂದ ಕೆಲವರು ಒಳಉಡುಪಿನಿಂದ ದೂರ ಸರಿಯುತ್ತಾರೆ ಅದರಲ್ಲಿ ತಪ್ಪೇನಿದೆ?” ಎಂದು ಉಷಾ ಎಂಬವರು ಪ್ರಶ್ನಿಸಿದ್ದಾರೆ.

“ಡಿಯರ್ ಸುವರ್ಣ ವೆಬ್, ಈಚೆಗಷ್ಟೇ ಸಂಜನಾ ಅವರಿಂದ ಮಂಗಳಾರತಿ ಮಾಡಿಸಿಕೊಂಡದ್ದು ಸಾಲಲಿಲ್ಲವೇ? ಅವರು ಯಾವ ಬಟ್ಟೆ ಹಾಕೊಂಡು ವಾಕಿಂಗ್ ಹೋದ್ರೆ ನಿಮಗೇನು? ನಿವೇನಾದರೂ ಕೊಡಿಸುತ್ತಿದ್ದಾರಾ? ಇಂತಹ ವಿಷಯಗಳಲ್ಲಿರುವ ಆಸಕ್ತಿಯನ್ನು ನೊಂದವರ ಪರವಾಗಿ ತೋರಿಸಿ, ಜನ ಕೈಮುಗಿಯುತ್ತಾರೆ…” ಎಂದು ಮೈಸೂರು ನಿವಾಸಿಯೊಬ್ಬರು ಕೋರಿದ್ದಾರೆ.

“ನಿಮ್ಮಂತ ಹಲ್ಕೆಟ್ ಮಾಧ್ಯಮಗಳಿಂದ ಎಲ್ಲಾ, ಮಾಧ್ಯಮಗಳಿಗೂ ಕೆಟ್ಟ ಹೆಸರು. ಸಮಾಜದ ಸ್ವಾಸ್ಥ್ಯವನ್ನು ಕಾಪಾಡ್ರಪ್ಪ ಅಂದ್ರೆ ನಿಮ್ಮಗಳ ಯೋಗ್ಯತೆ ತೋರ್ಸೋ ಪೋಸ್ಟ್ ಹಾಕ್ತಿರಲ್ಲ” ಎಂದು ಕವಯತ್ರಿ ಸೌಮ್ಯಾ ಹೆಗ್ಗಡಹಳ್ಳಿ ಬುದ್ಧಿ ಹೇಳಿದ್ದಾರೆ.


ಇದನ್ನೂ ಓದಿರಿ: ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...