HomeUncategorizedರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

ರಾಮನವಮಿ ಮೆರವಣಿಗೆಯಲ್ಲಿ ನಿಂದನೀಯ ಘೋಷಣೆ: ಅಶ್ಲೀಲ ಹಾಡುಗಳ ನೃತ್ಯ: ವೀಡಿಯೋ

- Advertisement -
- Advertisement -

ಮುಂಬೈ: ಹಿಂದೂಗಳ ಹಬ್ಬವಾದ ರಾಮನವಮಿಯನ್ನು ಆಚರಿಸುವ ಸಲುವಾಗಿ ಇಲ್ಲಿ ನಡೆದ ಮೆರವಣಿಗೆಯ ಸಂದರ್ಭದಲ್ಲಿ ದ್ವೇಷ ಭಾಷಣ, ಪ್ರಚೋದನಕಾರಿ ಮತ್ತು ಅಶ್ಲೀಲ ಘೋಷಣೆಗಳನ್ನು ಕೂಗುವುದು ಮತ್ತು ಅಶ್ಲೀಲ ಹಾಡುಗಳನ್ನು ಹಾಡುವುದು ನಡೆದಿದೆ. ಸಾರ್ವಜನಿಕ ಹಬ್ಬಗಳಲ್ಲಿ ಮುಸ್ಲಿಮರ ಮೇಲಿನ ಅಶ್ಲೀಲತೆ ಮತ್ತು ದ್ವೇಷವು ಹೊಸ ಕಳವಳಗಳನ್ನು ಹುಟ್ಟುಹಾಕಿದೆ.

ಖ್ಯಾತ ಸ್ವತಂತ್ರ ಪತ್ರಕರ್ತ ಕುನಾಲ್ ಪುರೋಹಿತ್ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ಮೆರವಣಿಗೆಯಲ್ಲಿ ಕೆಲವು ಗಂಟೆಗಳ ಕಾಲ ಕಳೆದರು ಮತ್ತು ಈ ಸಂದರ್ಭ ಪ್ರದರ್ಶಿಸಲಾದ ರೌಡಿಸಂನ ಕೆಲವು ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಮೊಘಲ್ ದೊರೆ ಔರಂಗಜೇಬನ ವಿರುದ್ಧ ನಿಂದನೀಯ ಘೋಷಣೆಗಳನ್ನು ಕೂಗಿದರು ಮತ್ತು ಮುಸ್ಲಿಮರ ವಿರುದ್ಧ ಕ್ರೂರ ಹಿಂಸೆ ನಡೆಸುವ ಬೆದರಿಕೆ ಹಾಕುವ ಅಶ್ಲೀಲ ಹಾಡುಗಳನ್ನು ಹಾಡಿದರು ಎಂದು ಅವರು ವರದಿ ಮಾಡಿದ್ದಾರೆ.

ಈ ಮೆರವಣಿಗೆ ಸಂದರ್ಭದಲ್ಲಿ ಪ್ರತಿ ನಿಮಿಷಗಳಿಗೊಮ್ಮೆ, ಒಬ್ಬ ವ್ಯಕ್ತಿ ಬಂದು “ನಿಮಗೆ ಅಫ್ಜಲ್ ಖಾನ್ ಬೇಕಾದರೆ, ಅವನನ್ನು ಪಾಕಿಸ್ತಾನಕ್ಕೆ ಕಳುಹಿಸಿ,” ಔರಂಗಜೇಬನ ಸಮಾಧಿ ಖಾಲಿಯಾಗಿದೆ, ನೀವು ಮೂರ್ಖರು, ನೀವು ಮೂರ್ಖರು,”ಮುಂತಾದ ಘೋಷಣೆಗಳೊಂದಿಗೆ ಜನಸಮೂಹವನ್ನು ಹುರಿದುಂಬಿಸುತ್ತಿದ್ದನು ಎಂದು ಪುರೋಹಿತ್  ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಮೆರವಣಿಗೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.  ಆದರೆ ನಾನು ಅಲ್ಲಿ ಇದ್ದ ಸಮಯದಲ್ಲಿ ಈ ಪುಂಡರನ್ನು ನಿಯಂತ್ರಿಸಲು ಯಾವುದೇ ಪ್ರಯತ್ನವನ್ನು ನಾನು ನೋಡಲಿಲ್ಲ. ಸಾವಿರಾರು ಸಂಖ್ಯೆಯಲ್ಲಿದ್ದ ಜನಸಮೂಹದ್ದಲ್ಲಿ 20 ಮತ್ತು 30ರ ಹರೆಯದ ಯುವಕರನ್ನು ಸಾಕಷ್ಟು ಸಂಖ್ಯೆಯಲ್ಲಿ ಒಳಗೊಂಡಿತ್ತು. ಕೆಲವು ಮಹಿಳೆಯರು ಮತ್ತು ಕೆಲವು ವೃದ್ಧರನ್ನು ಸಹ  ಒಳಗೊಂಡಿತ್ತು. ಅಶ್ಲೀಲತೆಯನ್ನು ಒಳಗೊಂಡ ಈ ಹಾಡುಗಳು ಎಷ್ಟು ವ್ಯಾಪಕವಾಗಿ ಹರಡಿದವೆಂದರೆ, ಹೆಚ್ಚಿನವರು ನಿಖರವಾದ ಲಯಗಳಿಗೆ ನೃತ್ಯ ಮಾಡುತ್ತಾ ಹಾಡುತ್ತಿದ್ದರು. ಪ್ರತಿ ಬಾರಿ ಒಂದು ಹಾಡು ಮುಸ್ಲಿಮರನ್ನು ಗುರಿಯಾಗಿಸಿಕೊಂಡಾಗಲೆಲ್ಲಾ ಉದ್ವೇಗ ಹೆಚ್ಚಾಗುತ್ತಿತ್ತು ಎಂದು ಪುರೋಹಿತ್ ಹೇಳಿದ್ದಾರೆ.

ಮೆರವಣಿಗೆಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಂತೆಯೇ ಕಾಣುವ ವ್ಯಕ್ತಿಯೂ ಇದ್ದರು, ಯೋಗಿಯ ಪ್ರೇರಣೆಯನ್ನು ಸೂಚಿಸುತ್ತಿದ್ದರು. ಕಾರಿನ ಬಾಗಿಲಲ್ಲಿ ನಿಂತಿದ್ದ ವ್ಯಕ್ತಿ ಗ್ಯಾಲರಿಗೆ ಉತ್ಸಾಹದಿಂದ ಕೈ ಬೀಸುತ್ತಾ ಹಾಡಿದರು. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಸೂಚಿಸುವ ಪ್ರಚೋದನಕಾರಿ ಘೋಷಣೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗೆ ಗುರಿಯಾದವು, ಈ ಪುಂಡರನ್ನು ಬಂಧಿಸಬೇಕೆಂದು ಜನರು ಒತ್ತಾಯಿಸಿದರು.

ಪೊಲೀಸರು ಹಾಸ್ಯನಟರನ್ನು ಬೆನ್ನಟ್ಟುವ ಬದಲು ನೀವು ಇಂತಹ ವ್ಯಕ್ತಿಗಳನ್ನು ಬಂಧಿಸಬೇಕು. ಇದು ನಿಜಕ್ಕೂ ದೊಡ್ಡ ತಮಾಷೆ,” ಎಂದು ಪತ್ರಕರ್ತ ಪಾಲ್ವಿ ಮಿತ್ತಲ್ ಹೇಳುತ್ತಾರೆ.

ಹಿಂದೂ ಧರ್ಮವನ್ನು ಅತ್ಯಂತ ಕೆಳಮಟ್ಟಕ್ಕೆ ಕೊಂಡೊಯ್ದ ಕೀರ್ತೀ ಇಂತಹ ಪುಂಡರಿಗೆ ಸಲ್ಲುತ್ತದೆ. ಒಮ್ಮೆ ಕಣ್ಣು ಮುಚ್ಚಿ ರಾಮನವಮಿಯ ದಿನಗಳಂದು ಈ ಹಿಂದೆ ನೀವು ಹೇಗೆ ಆಚರಿಸುತ್ತಿದ್ದೀರಿ ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ.  ನನಗೆ, ಅದು ಅದ್ಭುತವಾದ ಹಬ್ಬ. ಈ ಗೂಂಡಾಗಳು ರಾಮನಿಗಿಂತ  ಔರಂಗಜೇಬನನ್ನು ಹೆಚ್ಚು ನೆನಪಿಸಿಕೊಳ್ಳುತ್ತಾರೆ” ಎಂದು ಲೇಖಕ ರಾಹುಲ್ ಪಂಡಿತ ನೆನಪಿಸಿದರು.

ಮುಸ್ಲಿಮರು ಶಾಂತಿಯುತವಾಗಿ ಪ್ರಾರ್ಥಿಸಲು ಮತ್ತು ಪ್ರತಿಭಟಿಸಲು ಅವಕಾಶವಿಲ್ಲ ಆದರೆ ಹಿಂದೂತ್ವ ಗುಂಪುಗಳಿಗೆ ನಿಂದನೀಯ ಘೋಷಣೆಗಳನ್ನು ಪಠಿಸಲು ಮುಕ್ತ ಹಸ್ತವನ್ನು ನೀಡಲಾಗಿದೆ ಎಂದು ಪ್ರಮುಖ ಪತ್ರಕರ್ತೆ ರಾಣಾ ಅಯ್ಯೂಬ್ ಹೇಳಿದರು.

“ಮುಸ್ಲಿಮರು ಶಾಂತಿಯುತವಾಗಿ ಪ್ರತಿಭಟಿಸಬಾರದು, ಅವರು ಪ್ರಾರ್ಥಿಸಬಾರದು, ಅವರನ್ನು ಬೆದರಿಸಲಾಗುತ್ತದೆ, ಸಾಧ್ಯವಿರುವ ಎಲ್ಲಾ ನೆಪಗಳನ್ನು ನೀಡಿ ಜೈಲಿಗೆ ಹಾಕಲಾಗುತ್ತದೆ. ಈ ಮಧ್ಯೆ ಬಲಪಂಥೀಯರು ಬೀದಿಗಳಲ್ಲಿ ದ್ವೇಷದ ಘೋಷಣೆಗಳನ್ನು ಕೂಗಬಹುದು ಮತ್ತು ಮಸೀದಿಗಳ ಮೇಲೆ ಹತ್ತಬಹುದು ಮತ್ತು ಇದನ್ನು ತಡೆಯಲು ಯಾವುದೇ ಕಾನೂನು ಇರುವುದಿಲ್ಲ. ನಮ್ಮ ಹಿತೈಷಿಗಳು ಕೂಡ ಮೌನವಾಗಿರಬೇಕು” ಎಂದು ಅವರು ಹೇಳಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...